Homeಮುಖಪುಟಚುನಾವಣಾ ಆಯೋಗ ಸದಾ ಮೋದಿ ಸರ್ಕಾರದ ಕೈಗೊಂಬೆಯಾಗಿದೆ: ಕಪಿಲ್ ಸಿಬಲ್

ಚುನಾವಣಾ ಆಯೋಗ ಸದಾ ಮೋದಿ ಸರ್ಕಾರದ ಕೈಗೊಂಬೆಯಾಗಿದೆ: ಕಪಿಲ್ ಸಿಬಲ್

- Advertisement -
- Advertisement -

ಚುನಾವಣಾ ಆಯೋಗ ಯಾವಾಗಲೂ ಮೋದಿ ಸರ್ಕಾರದ ಕೈಗೊಂಬೆಯಾಗಿದೆ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಆರೋಪಿಸಿದ್ದಾರೆ. ಬಿಹಾರದಲ್ಲಿ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಬಹುಸಂಖ್ಯಾತರ ಸರ್ಕಾರಗಳು ಅಧಿಕಾರದಲ್ಲಿ ಉಳಿಯುವಂತೆ ಮಾಡುವ ಗುರಿಯನ್ನು ಹೊಂದಿರುವ ‘ಅಸಂವಿಧಾನಿಕ’ ಕ್ರಮ ಎಂದು ಅವರು ಟೀಕಿಸಿದ್ದಾರೆ.

“ಪ್ರತಿಯೊಬ್ಬ ಚುನಾವಣಾ ಆಯುಕ್ತರೂ ಸರ್ಕಾರದೊಂದಿಗಿನ ಹೊಂದಾಣಿಕೆಯಲ್ಲಿ ಅವರ ಹಿಂದಿನವರನ್ನು ಮೀರಿಸುತ್ತಾರೆ” ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಸಿಬಲ್ ಹೇಳಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಟೀಕಿಸಿದ ಸಿಬಲ್, “ಚುನಾವಣಾ ಆಯೋಗ ಪೌರತ್ವದ ತಕರಾರುಗಳನ್ನು ನಿರ್ಧರಿಸುವ ಅಧಿಕಾರ ಹೊಂದಿಲ್ಲ”ಎಂದಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮೇಲೆ ಪ್ರತಿಪಕ್ಷಗಳು ನಡೆಸುತ್ತಿರುವ ವಾಗ್ವಾಳಿ ಬಗ್ಗೆ ಕೇಳಿದಾಗ “ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಚುನಾವಣಾ ಆಯೋಗ ಅದರ ಕೈಗೊಂಬೆಯಾಗಿದೆ. ಚುನಾವಣಾ ಆಯೋಗದ ನಡವಳಿಕೆ ಬಗ್ಗೆ ಕಡಿಮೆ ಮಾತನಾಡಿದಷ್ಟೂ ಒಳ್ಳೆಯದು” ಎಂದು ಹೇಳಿದ್ದಾರೆ.

“ಮತದಾರರ ಪಟ್ಟಿಯ ಪರಿಷ್ಕರಣೆಯು ಸಂಪೂರ್ಣವಾಗಿ ಸಂವಿಧಾನ ಬಾಹಿರವಾಗಿದೆ. ಚುನಾವಣಾ ಆಯೋಗಕ್ಕೆ, ಅದರಲ್ಲೂ ಒಬ್ಬ ಬ್ಲಾಕ್ ಮಟ್ಟದ ಅಧಿಕಾರಿಗೆ ಪೌರತ್ವದ ತಕರಾರುಗಳನ್ನು ನಿರ್ಧರಿಸುವ ಅಧಿಕಾರ ಇಲ್ಲ. ಅವರು (ಬಿಜೆಪಿ) ಚುನಾವಣೆ ಗೆಲ್ಲಲು ಸಾಧ್ಯವಿರುವ ಎಲ್ಲಾ ವಿಧಾನಗಳನ್ನು ಚುನಾವಣಾ ಆಯೋಗದವರು ಅಳವಡಿಸಿಕೊಳ್ಳುತ್ತಾರೆ. ವಾಸ್ತವವಾಗಿ, ವಿಶೇಷ ತೀವ್ರ ಪರಿಷ್ಕರಣೆಯು ಮುಂಬವರುವ ಎಲ್ಲಾ ಸಮಯದಲ್ಲೂ ಬಹು ಸಂಖ್ಯಾತರ ಸರ್ಕಾರಗಳನ್ನು ಉಳಿಸಿಕೊಳ್ಳುವ ಒಂದು ಪ್ರಕ್ರಿಯೆಯಾಗಿದೆ” ಕಪಿಲ್ ಸಿಬಲ್ ಆರೋಪಿಸಿದ್ದಾರೆ.

ಬಡವರು, ತಳಮಟ್ಟದ ಜನರು, ಆದಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿದರೆ, ಬಹುಸಂಖ್ಯಾತರ ಪಕ್ಷವು ಯಾವಾಗಲೂ ಗೆಲ್ಲುತ್ತದೆ. ಇದು ಉದ್ದೇಶವಾಗಿದೆ. ಆದ್ದರಿಂದ ಇದು ಕಳವಳಕಾರಿಯಾಗಿದೆ ಎಂದು ಸಿಬಲ್ ಹೇಳಿದ್ದಾರೆ.

ಚುನಾವಣಾ ಆಯೋಗದ ಸ್ವಾತಂತ್ರ್ಯದ ಮೇಲೆ ನಾನು ನಂಬಿಕೆ ಇಡುವುದಿಲ್ಲ. ಏಕೆಂದರೆ ಆ ಸಂಸ್ಥೆಯು ನಿರೀಕ್ಷಿಸಿದ ಸ್ವಾತಂತ್ರ್ಯವನ್ನು ಪ್ರತಿಬಿಂಬಿಸಿಲ್ಲ ಎಂದು ಸಿಬಲ್ ಹೇಳಿದ್ದು, ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶದ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ. ಈ ವಿಷಯದಲ್ಲಿ ನಾನು ವಕೀಲ ಎಂದಿದ್ದಾರೆ.

“ನ್ಯಾಯಾಲಯ ಏನು ಹೇಳಿದೆಯೋ ಅದನ್ನು ಚುನಾವಣಾ ಆಯೋಗವೇ ಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಆಶಿಸುತ್ತೇವೆ. ಆದ್ದರಿಂದ ಈ ವಿವಾದ ಮುಂದುವರಿಯದಂತೆ ನೋಡಿಕೊಳ್ಳೋಣ” ಎಂದು ಸಿಬಲ್ ಪ್ರತಿಕ್ರಿಯಿಸಿದ್ದಾರೆ.

ಸಂಸತ್ತಿನ ಮಳೆಗಾಲದ ಅಧಿವೇಶನ ಬರುತ್ತಿದೆ. ಈ ಅಧಿವೇಶನದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಚರ್ಚಿಸುವುದು ಎಲ್ಲದ್ದಕ್ಕಿಂತ ಹೆಚ್ಚು ಮಹತ್ವದ್ದಾಗಿದೆ. ಬಿಜೆಪಿ ಗೆದ್ದ ಕ್ಷೇತ್ರಗಳಲ್ಲಿ ಮಾತ್ರ ಮತದಾರರು ಹಠಾತ್ತನೆ ಹೇಗೆ ಹೆಚ್ಚಾದರು ಎಂಬುದನ್ನು ಚುನಾವಣಾ ಆಯೋಗ ಇನ್ನೂ ವಿವರಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಮಹಾರಾಷ್ಟ್ರ ವಿಷಯವೂ ಮುಖ್ಯವಾಗಿದೆ ಎಂದಿದ್ದಾರೆ.

ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆಗೆ ಮಾನ್ಯ ದಾಖಲೆಯಾಗಿ ಆಧಾರ್ ಕಾರ್ಡ್, ವೋಟರ್ ಐಡಿ ಮತ್ತು ಪಡಿತರ ಚೀಟಿಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದ ಬೆನ್ನಲ್ಲೇ ಕಪಿಲ್ ಸಿಬಲ್ ಮೇಲಿನ ಹೇಳಿಕೆ ನೀಡಿದ್ದಾರೆ.

ಸೌಜನ್ಯ : theprint.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...