Homeಮುಖಪುಟಚುನಾವಣಾ ಆಯೋಗ ಸದಾ ಮೋದಿ ಸರ್ಕಾರದ ಕೈಗೊಂಬೆಯಾಗಿದೆ: ಕಪಿಲ್ ಸಿಬಲ್

ಚುನಾವಣಾ ಆಯೋಗ ಸದಾ ಮೋದಿ ಸರ್ಕಾರದ ಕೈಗೊಂಬೆಯಾಗಿದೆ: ಕಪಿಲ್ ಸಿಬಲ್

- Advertisement -
- Advertisement -

ಚುನಾವಣಾ ಆಯೋಗ ಯಾವಾಗಲೂ ಮೋದಿ ಸರ್ಕಾರದ ಕೈಗೊಂಬೆಯಾಗಿದೆ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಆರೋಪಿಸಿದ್ದಾರೆ. ಬಿಹಾರದಲ್ಲಿ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಬಹುಸಂಖ್ಯಾತರ ಸರ್ಕಾರಗಳು ಅಧಿಕಾರದಲ್ಲಿ ಉಳಿಯುವಂತೆ ಮಾಡುವ ಗುರಿಯನ್ನು ಹೊಂದಿರುವ ‘ಅಸಂವಿಧಾನಿಕ’ ಕ್ರಮ ಎಂದು ಅವರು ಟೀಕಿಸಿದ್ದಾರೆ.

“ಪ್ರತಿಯೊಬ್ಬ ಚುನಾವಣಾ ಆಯುಕ್ತರೂ ಸರ್ಕಾರದೊಂದಿಗಿನ ಹೊಂದಾಣಿಕೆಯಲ್ಲಿ ಅವರ ಹಿಂದಿನವರನ್ನು ಮೀರಿಸುತ್ತಾರೆ” ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಸಿಬಲ್ ಹೇಳಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಟೀಕಿಸಿದ ಸಿಬಲ್, “ಚುನಾವಣಾ ಆಯೋಗ ಪೌರತ್ವದ ತಕರಾರುಗಳನ್ನು ನಿರ್ಧರಿಸುವ ಅಧಿಕಾರ ಹೊಂದಿಲ್ಲ”ಎಂದಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮೇಲೆ ಪ್ರತಿಪಕ್ಷಗಳು ನಡೆಸುತ್ತಿರುವ ವಾಗ್ವಾಳಿ ಬಗ್ಗೆ ಕೇಳಿದಾಗ “ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಚುನಾವಣಾ ಆಯೋಗ ಅದರ ಕೈಗೊಂಬೆಯಾಗಿದೆ. ಚುನಾವಣಾ ಆಯೋಗದ ನಡವಳಿಕೆ ಬಗ್ಗೆ ಕಡಿಮೆ ಮಾತನಾಡಿದಷ್ಟೂ ಒಳ್ಳೆಯದು” ಎಂದು ಹೇಳಿದ್ದಾರೆ.

“ಮತದಾರರ ಪಟ್ಟಿಯ ಪರಿಷ್ಕರಣೆಯು ಸಂಪೂರ್ಣವಾಗಿ ಸಂವಿಧಾನ ಬಾಹಿರವಾಗಿದೆ. ಚುನಾವಣಾ ಆಯೋಗಕ್ಕೆ, ಅದರಲ್ಲೂ ಒಬ್ಬ ಬ್ಲಾಕ್ ಮಟ್ಟದ ಅಧಿಕಾರಿಗೆ ಪೌರತ್ವದ ತಕರಾರುಗಳನ್ನು ನಿರ್ಧರಿಸುವ ಅಧಿಕಾರ ಇಲ್ಲ. ಅವರು (ಬಿಜೆಪಿ) ಚುನಾವಣೆ ಗೆಲ್ಲಲು ಸಾಧ್ಯವಿರುವ ಎಲ್ಲಾ ವಿಧಾನಗಳನ್ನು ಚುನಾವಣಾ ಆಯೋಗದವರು ಅಳವಡಿಸಿಕೊಳ್ಳುತ್ತಾರೆ. ವಾಸ್ತವವಾಗಿ, ವಿಶೇಷ ತೀವ್ರ ಪರಿಷ್ಕರಣೆಯು ಮುಂಬವರುವ ಎಲ್ಲಾ ಸಮಯದಲ್ಲೂ ಬಹು ಸಂಖ್ಯಾತರ ಸರ್ಕಾರಗಳನ್ನು ಉಳಿಸಿಕೊಳ್ಳುವ ಒಂದು ಪ್ರಕ್ರಿಯೆಯಾಗಿದೆ” ಕಪಿಲ್ ಸಿಬಲ್ ಆರೋಪಿಸಿದ್ದಾರೆ.

ಬಡವರು, ತಳಮಟ್ಟದ ಜನರು, ಆದಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿದರೆ, ಬಹುಸಂಖ್ಯಾತರ ಪಕ್ಷವು ಯಾವಾಗಲೂ ಗೆಲ್ಲುತ್ತದೆ. ಇದು ಉದ್ದೇಶವಾಗಿದೆ. ಆದ್ದರಿಂದ ಇದು ಕಳವಳಕಾರಿಯಾಗಿದೆ ಎಂದು ಸಿಬಲ್ ಹೇಳಿದ್ದಾರೆ.

ಚುನಾವಣಾ ಆಯೋಗದ ಸ್ವಾತಂತ್ರ್ಯದ ಮೇಲೆ ನಾನು ನಂಬಿಕೆ ಇಡುವುದಿಲ್ಲ. ಏಕೆಂದರೆ ಆ ಸಂಸ್ಥೆಯು ನಿರೀಕ್ಷಿಸಿದ ಸ್ವಾತಂತ್ರ್ಯವನ್ನು ಪ್ರತಿಬಿಂಬಿಸಿಲ್ಲ ಎಂದು ಸಿಬಲ್ ಹೇಳಿದ್ದು, ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶದ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ. ಈ ವಿಷಯದಲ್ಲಿ ನಾನು ವಕೀಲ ಎಂದಿದ್ದಾರೆ.

“ನ್ಯಾಯಾಲಯ ಏನು ಹೇಳಿದೆಯೋ ಅದನ್ನು ಚುನಾವಣಾ ಆಯೋಗವೇ ಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಆಶಿಸುತ್ತೇವೆ. ಆದ್ದರಿಂದ ಈ ವಿವಾದ ಮುಂದುವರಿಯದಂತೆ ನೋಡಿಕೊಳ್ಳೋಣ” ಎಂದು ಸಿಬಲ್ ಪ್ರತಿಕ್ರಿಯಿಸಿದ್ದಾರೆ.

ಸಂಸತ್ತಿನ ಮಳೆಗಾಲದ ಅಧಿವೇಶನ ಬರುತ್ತಿದೆ. ಈ ಅಧಿವೇಶನದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಚರ್ಚಿಸುವುದು ಎಲ್ಲದ್ದಕ್ಕಿಂತ ಹೆಚ್ಚು ಮಹತ್ವದ್ದಾಗಿದೆ. ಬಿಜೆಪಿ ಗೆದ್ದ ಕ್ಷೇತ್ರಗಳಲ್ಲಿ ಮಾತ್ರ ಮತದಾರರು ಹಠಾತ್ತನೆ ಹೇಗೆ ಹೆಚ್ಚಾದರು ಎಂಬುದನ್ನು ಚುನಾವಣಾ ಆಯೋಗ ಇನ್ನೂ ವಿವರಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಮಹಾರಾಷ್ಟ್ರ ವಿಷಯವೂ ಮುಖ್ಯವಾಗಿದೆ ಎಂದಿದ್ದಾರೆ.

ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆಗೆ ಮಾನ್ಯ ದಾಖಲೆಯಾಗಿ ಆಧಾರ್ ಕಾರ್ಡ್, ವೋಟರ್ ಐಡಿ ಮತ್ತು ಪಡಿತರ ಚೀಟಿಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದ ಬೆನ್ನಲ್ಲೇ ಕಪಿಲ್ ಸಿಬಲ್ ಮೇಲಿನ ಹೇಳಿಕೆ ನೀಡಿದ್ದಾರೆ.

ಸೌಜನ್ಯ : theprint.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...