Homeಮುಖಪುಟಚುನಾವಣಾ ಆಯೋಗ ಸದಾ ಮೋದಿ ಸರ್ಕಾರದ ಕೈಗೊಂಬೆಯಾಗಿದೆ: ಕಪಿಲ್ ಸಿಬಲ್

ಚುನಾವಣಾ ಆಯೋಗ ಸದಾ ಮೋದಿ ಸರ್ಕಾರದ ಕೈಗೊಂಬೆಯಾಗಿದೆ: ಕಪಿಲ್ ಸಿಬಲ್

- Advertisement -
- Advertisement -

ಚುನಾವಣಾ ಆಯೋಗ ಯಾವಾಗಲೂ ಮೋದಿ ಸರ್ಕಾರದ ಕೈಗೊಂಬೆಯಾಗಿದೆ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಆರೋಪಿಸಿದ್ದಾರೆ. ಬಿಹಾರದಲ್ಲಿ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಬಹುಸಂಖ್ಯಾತರ ಸರ್ಕಾರಗಳು ಅಧಿಕಾರದಲ್ಲಿ ಉಳಿಯುವಂತೆ ಮಾಡುವ ಗುರಿಯನ್ನು ಹೊಂದಿರುವ ‘ಅಸಂವಿಧಾನಿಕ’ ಕ್ರಮ ಎಂದು ಅವರು ಟೀಕಿಸಿದ್ದಾರೆ.

“ಪ್ರತಿಯೊಬ್ಬ ಚುನಾವಣಾ ಆಯುಕ್ತರೂ ಸರ್ಕಾರದೊಂದಿಗಿನ ಹೊಂದಾಣಿಕೆಯಲ್ಲಿ ಅವರ ಹಿಂದಿನವರನ್ನು ಮೀರಿಸುತ್ತಾರೆ” ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಸಿಬಲ್ ಹೇಳಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಟೀಕಿಸಿದ ಸಿಬಲ್, “ಚುನಾವಣಾ ಆಯೋಗ ಪೌರತ್ವದ ತಕರಾರುಗಳನ್ನು ನಿರ್ಧರಿಸುವ ಅಧಿಕಾರ ಹೊಂದಿಲ್ಲ”ಎಂದಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮೇಲೆ ಪ್ರತಿಪಕ್ಷಗಳು ನಡೆಸುತ್ತಿರುವ ವಾಗ್ವಾಳಿ ಬಗ್ಗೆ ಕೇಳಿದಾಗ “ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಚುನಾವಣಾ ಆಯೋಗ ಅದರ ಕೈಗೊಂಬೆಯಾಗಿದೆ. ಚುನಾವಣಾ ಆಯೋಗದ ನಡವಳಿಕೆ ಬಗ್ಗೆ ಕಡಿಮೆ ಮಾತನಾಡಿದಷ್ಟೂ ಒಳ್ಳೆಯದು” ಎಂದು ಹೇಳಿದ್ದಾರೆ.

“ಮತದಾರರ ಪಟ್ಟಿಯ ಪರಿಷ್ಕರಣೆಯು ಸಂಪೂರ್ಣವಾಗಿ ಸಂವಿಧಾನ ಬಾಹಿರವಾಗಿದೆ. ಚುನಾವಣಾ ಆಯೋಗಕ್ಕೆ, ಅದರಲ್ಲೂ ಒಬ್ಬ ಬ್ಲಾಕ್ ಮಟ್ಟದ ಅಧಿಕಾರಿಗೆ ಪೌರತ್ವದ ತಕರಾರುಗಳನ್ನು ನಿರ್ಧರಿಸುವ ಅಧಿಕಾರ ಇಲ್ಲ. ಅವರು (ಬಿಜೆಪಿ) ಚುನಾವಣೆ ಗೆಲ್ಲಲು ಸಾಧ್ಯವಿರುವ ಎಲ್ಲಾ ವಿಧಾನಗಳನ್ನು ಚುನಾವಣಾ ಆಯೋಗದವರು ಅಳವಡಿಸಿಕೊಳ್ಳುತ್ತಾರೆ. ವಾಸ್ತವವಾಗಿ, ವಿಶೇಷ ತೀವ್ರ ಪರಿಷ್ಕರಣೆಯು ಮುಂಬವರುವ ಎಲ್ಲಾ ಸಮಯದಲ್ಲೂ ಬಹು ಸಂಖ್ಯಾತರ ಸರ್ಕಾರಗಳನ್ನು ಉಳಿಸಿಕೊಳ್ಳುವ ಒಂದು ಪ್ರಕ್ರಿಯೆಯಾಗಿದೆ” ಕಪಿಲ್ ಸಿಬಲ್ ಆರೋಪಿಸಿದ್ದಾರೆ.

ಬಡವರು, ತಳಮಟ್ಟದ ಜನರು, ಆದಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿದರೆ, ಬಹುಸಂಖ್ಯಾತರ ಪಕ್ಷವು ಯಾವಾಗಲೂ ಗೆಲ್ಲುತ್ತದೆ. ಇದು ಉದ್ದೇಶವಾಗಿದೆ. ಆದ್ದರಿಂದ ಇದು ಕಳವಳಕಾರಿಯಾಗಿದೆ ಎಂದು ಸಿಬಲ್ ಹೇಳಿದ್ದಾರೆ.

ಚುನಾವಣಾ ಆಯೋಗದ ಸ್ವಾತಂತ್ರ್ಯದ ಮೇಲೆ ನಾನು ನಂಬಿಕೆ ಇಡುವುದಿಲ್ಲ. ಏಕೆಂದರೆ ಆ ಸಂಸ್ಥೆಯು ನಿರೀಕ್ಷಿಸಿದ ಸ್ವಾತಂತ್ರ್ಯವನ್ನು ಪ್ರತಿಬಿಂಬಿಸಿಲ್ಲ ಎಂದು ಸಿಬಲ್ ಹೇಳಿದ್ದು, ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶದ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ. ಈ ವಿಷಯದಲ್ಲಿ ನಾನು ವಕೀಲ ಎಂದಿದ್ದಾರೆ.

“ನ್ಯಾಯಾಲಯ ಏನು ಹೇಳಿದೆಯೋ ಅದನ್ನು ಚುನಾವಣಾ ಆಯೋಗವೇ ಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಆಶಿಸುತ್ತೇವೆ. ಆದ್ದರಿಂದ ಈ ವಿವಾದ ಮುಂದುವರಿಯದಂತೆ ನೋಡಿಕೊಳ್ಳೋಣ” ಎಂದು ಸಿಬಲ್ ಪ್ರತಿಕ್ರಿಯಿಸಿದ್ದಾರೆ.

ಸಂಸತ್ತಿನ ಮಳೆಗಾಲದ ಅಧಿವೇಶನ ಬರುತ್ತಿದೆ. ಈ ಅಧಿವೇಶನದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಚರ್ಚಿಸುವುದು ಎಲ್ಲದ್ದಕ್ಕಿಂತ ಹೆಚ್ಚು ಮಹತ್ವದ್ದಾಗಿದೆ. ಬಿಜೆಪಿ ಗೆದ್ದ ಕ್ಷೇತ್ರಗಳಲ್ಲಿ ಮಾತ್ರ ಮತದಾರರು ಹಠಾತ್ತನೆ ಹೇಗೆ ಹೆಚ್ಚಾದರು ಎಂಬುದನ್ನು ಚುನಾವಣಾ ಆಯೋಗ ಇನ್ನೂ ವಿವರಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಮಹಾರಾಷ್ಟ್ರ ವಿಷಯವೂ ಮುಖ್ಯವಾಗಿದೆ ಎಂದಿದ್ದಾರೆ.

ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆಗೆ ಮಾನ್ಯ ದಾಖಲೆಯಾಗಿ ಆಧಾರ್ ಕಾರ್ಡ್, ವೋಟರ್ ಐಡಿ ಮತ್ತು ಪಡಿತರ ಚೀಟಿಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದ ಬೆನ್ನಲ್ಲೇ ಕಪಿಲ್ ಸಿಬಲ್ ಮೇಲಿನ ಹೇಳಿಕೆ ನೀಡಿದ್ದಾರೆ.

ಸೌಜನ್ಯ : theprint.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...