Homeಮುಖಪುಟ'ವಿಕಸಿತ್‌ ಭಾರತ್' ಸಂದೇಶ ಕಳುಹಿಸುವುದನ್ನು ನಿಲ್ಲಿಸಿ: ಕೇಂದ್ರಕ್ಕೆ ಸೂಚಿಸಿದ ಚುನಾವಣಾ ಆಯೋಗ

‘ವಿಕಸಿತ್‌ ಭಾರತ್’ ಸಂದೇಶ ಕಳುಹಿಸುವುದನ್ನು ನಿಲ್ಲಿಸಿ: ಕೇಂದ್ರಕ್ಕೆ ಸೂಚಿಸಿದ ಚುನಾವಣಾ ಆಯೋಗ

- Advertisement -
- Advertisement -

‘ವಿಕಸಿತ್ ಭಾರತ್ ಸಂಪರ್ಕ್’ ಖಾತೆಯಿಂದ ಪ್ರಧಾನಿ ನರೇಂದ್ರ ಮೋದಿಯವರ ಪತ್ರವನ್ನು ವಾಟ್ಸಾಪ್ ಬಳಕೆದಾರರಿಗೆ ಕಳುಹಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಚುನಾವಣಾ ಆಯೋಗವು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಸೂಚನೆ ನೀಡಿದೆ.

ಚುನಾವಣಾ ಆಯೋಗವು, ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿಅನುಸರಣೆ ವರದಿಯನ್ನು ತಕ್ಷಣವೇ ಸಲ್ಲಿಸುವಂತೆ ಸಚಿವಾಲಯವನ್ನು ಕೇಳಿದೆ. ಮಾರ್ಚ್ 15ರಂದು ಚುನಾವಣೆ ಘೋಷಣೆಯಾಗುವ ಮೊದಲು ವಾಟ್ಸಾಪ್ ಸಂದೇಶಗಳನ್ನು ಕಳುಹಿಸಲಾಗಿದೆ ಎಂದು ಸಚಿವಾಲಯ ಮಾರ್ಚ್ 16ರಂದು ಚುನಾವಣಾ ಆಯೋಗಕ್ಕೆ ತಿಳಿಸಿತ್ತು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಕೆಲವರಿಗೆ ಸಂದೇಶ ತಡವಾಗಿ ರವಾನೆಯಾಗಿದೆ ಎಂದು ಚುನಾವಣಾ ಆಯೋಗಕ್ಕೆ ತಿಳಿಸಿದೆ.

ಇಂತಹ ಸಂದೇಶಗಳು ನಾಗರಿಕರಿಗೆ ಫೋನ್‌ ಮೂಲಕ ರವಾನೆಯಾಗುತ್ತಿದೆ ಎಂದು ಹಲವು ದೂರುಗಳನ್ನು ಸ್ವೀಕರಿಸಲಾಗಿದೆ. ಈ ಕುರಿತು ಅನುಸರಣೆ ವರದಿಯನ್ನು ತಕ್ಷಣವೇ ಕಳುಹಿಸಬೇಕು ಎಂದು ಚುನಾವಣಾ ಆಯೋಗ ತಿಳಿಸಿದೆ.

ಮಾರ್ಚ್ 18ರಂದು ತೃಣಮೂಲ ಕಾಂಗ್ರೆಸ್ ಈ ವಿಷಯವನ್ನು ಪ್ರಸ್ತಾಪಿಸಿದೆ, ಮಾರ್ಚ್ 16ರಂದು ಲೋಕಸಭೆ ಚುನಾವಣೆ ಘೋಷಣೆ ಬಳಿಕ ಮಾದರಿ ನೀತಿ ಸಂಹಿತೆಯ ಜಾರಿಗೆ ಬರಲಿದೆ. ಈ ಬಗ್ಗೆ ಟಿಎಂಸಿ ಸಂಸದ ಸಾಕೇತ್ ಗೋಖಲೆ ಮಾಹಿತಿ ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಎಸ್. ಕೃಷ್ಣನ್ ಅವರಿಗೆ ಪತ್ರ ಬರೆದಿದ್ದು, ಪತ್ರದಲ್ಲಿ “ವಿಕಸಿತ್ ಭಾರತ್ ಸಂಪರ್ಕ್” ಹೆಸರಿನ ಖಾತೆಯಿಂದ ಲಕ್ಷಾಂತರ ವಾಟ್ಸಾಪ್‌ ಬಳಕೆದಾರರು ಪತ್ರವನ್ನು ಸ್ವೀಕರಿಸಿದ್ದಾರೆ. ಪತ್ರವನ್ನು ಪ್ರಸಾರ ಮಾಡಲು ಯಾವ ಡೇಟಾಬೇಸ್‌ನ್ನು ಬಳಸಲಾಗಿದೆ ಎಂಬುವುದನ್ನು ತಿಳಿಸಲು ಅವರು ಕಾರ್ಯದರ್ಶಿಗೆ ಆಗ್ರಹಿಸಿದ್ದಾರೆ, ಏಕೆಂದರೆ ಭಾರತದ ಹೊರಗಿನ ಬಳಕೆದಾರರು ಸಹ ಪತ್ರವನ್ನು ಇದೇ ರೀತಿ ಸ್ವೀಕರಿಸಿದ್ದಾರೆಂದು ಉಲ್ಲೇಖಿಸಿದ್ದಾರೆ.

ಸಂದೇಶವು, ಪ್ರಧಾನಿ ಮೋದಿಯವರ ಪತ್ರವನ್ನು ಒಳಗೊಂಡಿದೆ ಮತ್ತು ಮೋದಿ ಮತ್ತು ಬಿಜೆಪಿಗೆ ಮುಕ್ತ ಮತ್ತು ನಿರ್ಲಜ್ಜ ಪ್ರಚಾರವನ್ನು ನೀಡುತ್ತದೆ. ಮಾರ್ಚ್ 16ರಂದು ಸಂಜೆ 4:30ರ ನಂತರ ಹೆಚ್ಚಿನ ಜನರು ಈ ರೀತಿ ಸಂದೇಶಗಳನ್ನು ಸ್ವೀಕರಿಸಿದ್ದಾರೆ. ಇದು ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಸಮಯ ಎಂದು ಗೋಖಲೆ ಹೇಳಿದ್ದಾರೆ.

ಇದನ್ನು ಓದಿ: ಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌ ತರಾಟೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...