Homeಮುಖಪುಟಕಾಂಗ್ರೆಸ್‌ ನಾಯಕ ಸುರ್ಜೇವಾಲಾಗೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿದ ಚುನಾವಣಾ ಆಯೋಗ

ಕಾಂಗ್ರೆಸ್‌ ನಾಯಕ ಸುರ್ಜೇವಾಲಾಗೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿದ ಚುನಾವಣಾ ಆಯೋಗ

- Advertisement -
- Advertisement -

ಬಿಜೆಪಿ ಸಂಸದೆಯ ವಿರುದ್ಧದ ಅವಹೇಳನಾಕಾರಿ ಹೇಳಿಕೆ ಆರೋಪದಲ್ಲಿ ಕಾಂಗ್ರೆಸ್‌ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ 48 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿ ಚುನಾವಣಾ ಆಯೋಗ ಆದೇಶವನ್ನು ಹೊರಡಿಸಿದೆ. ಚುನಾವಣಾ ಆಯೋಗದ ಈ ಕ್ರಮವು ಸಮರ್ಥನೀಯವೇ ಆಗಿದೆ, ಆದರೆ ದೇಶದ ಸಂವಿಧಾನದ ಬದಲಾವಣೆ ಬಗ್ಗೆ ಹೇಳಿಕೆಯನ್ನು ನೀಡಿರುವ ಬಿಜೆಪಿ ನಾಯಕರ ಬಗ್ಗೆ ಚುನಾವಣಾ ಆಯೋಗ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ.

ಲೋಕಸಭೆ ಚುನಾವಣೆ ಘೋಷಣೆ ಬಳಿಕ ನೀತಿ ಸಂಹಿತೆ ಜಾರಿ ಅವಧಿಯಲ್ಲೇ ಬಿಜೆಪಿ ನಾಯಕಿ ಜ್ಯೋತಿ ಮಿರ್ಧಾ ಮತ್ತು ಬಿಜೆಪಿಯ ಫೈಜಾಬಾದ್ ಸಂಸದ ಲಲ್ಲು ಸಿಂಗ್ ಸಂವಿಧಾನ ಬದಲಾವಣೆ ಬಗ್ಗೆ ಬಹಿರಂಗವಾಗಿ ಹೇಳಿಕೆಯನ್ನು ನೀಡಿದ್ದರು, ಅದರೆ ಚುನಾವಣಾ ಆಯೋಗ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಹರ್ಯಾಣದ ಕೈತಾಲ್‌ನ ಫರಾಲ್‌ ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವಾಗ ಬಿಜೆಪಿ ಸಂಸದೆ ಹೇಮಾ ಮಾಲಿನಿ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿ ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಮೇಲೆ ಚುನಾವಣಾ ಆಯೋಗ ಈ ರೀತಿ ಕ್ರಮವನ್ನು ಕೈಗೊಂಡಿದೆ.

ಮಥುರಾದ ಬಿಜೆಪಿ ಸಂಸದೆ ಹೇಮಾ ಮಾಲಿನಿ ವಿರುದ್ಧ ಸಂಸದರ ಹೇಳಿಕೆಗೆ ಸಂಬಂಧಿಸಿದಂತೆ ಸುರ್ಜೇವಾಲಾ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಬ್ಬರಿಗೂ ಈ ಮೊದಲು ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದ ಬಳಿಕ ಚುನಾವಣಾ ಸಮಿತಿ ಈ ನಿರ್ಧಾರ ಕೈಗೊಂಡಿದೆ.

ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಸುರ್ಜೇವಾಲಾ ಅವರು, ‘ಜನರು ತಮ್ಮ ಶಾಸಕರು/ಸಂಸದರನ್ನು ಏಕೆ ಆಯ್ಕೆ ಮಾಡುತ್ತಾರೆ? ಶಾಸಕರು/ಸಂಸದರು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಬೇಕೆಂದು, ಹೇಮಾ ಮಾಲಿನಿಯಂತೆ ‘ನೆಕ್ಕಲು’ ಅಲ್ಲ’ ಎಂದು ಹೇಳಿದ್ದರು. ಆಪಾದಿತ ಹೇಳಿಕೆಯು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಬಿಜೆಪಿ ಇದನ್ನು ಮಹಿಳೆಯರ ಘನತೆಗೆ ಅಗೌರವ ಉಂಟು ಮಾಡಿದೆ ಎಂದು ಆರೋಪಿಸಿತ್ತು. ಕಾರ್ಯಕ್ರಮವೊಂದರಲ್ಲಿ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸುರ್ಜೇವಾಲಾ ಅವರು ಹೇಮಾ ಮಾಲಿನಿ ಕುರಿತಾಗಿ ನೀಡಿರುವ ಹೇಳಿಕೆ ಕುರಿತಾದ ವಿಡಿಯೊವನ್ನು ಬಿಜೆಪಿ ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ, ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದರು. ಆ ಬಳಿಕ ಉಭಯ ಪಕ್ಷಗಳ ನಾಯಕರ ನಡುವೆ ಭಾರಿ ರಾಜಕೀಯ ಕೆಸರೆರಚಾಟ ನಡೆದಿತ್ತು.

ಸುರ್ಜೇವಾಲಾ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು. ಚುನಾವಣಾ ಆಯೋಗವು ಏಪ್ರಿಲ್ 9ರೊಳಗೆ ಸುರ್ಜೆವಾಲಾ ಅವರಿಂದ ಉತ್ತರವನ್ನು ಕೇಳಿತ್ತು.

ಇದನ್ನು ಓದಿ: ತೆಲಂಗಾಣದ ರೈತರಿಗೆ ಅಭಯ ನೀಡಿದ ಸಿಎಂ ರೇವಂತ್‌ ರೆಡ್ಡಿ: ಕಾಂಗ್ರೆಸ್‌ ಸರಕಾರದಿಂದ 2 ಲಕ್ಷದವರೆಗಿನ ರೈತರ ಕೃಷಿ ಸಾಲಮನ್ನಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...