Homeಮುಖಪುಟಲೋಕಸಭೆ ಚುನಾವಣೆ: ಎಕ್ಸಿಟ್ ಪೋಲ್ ಪ್ರಸಾರ ಮಾಡದಂತೆ ನಿಷೇಧ ವಿಧಿಸಿದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ: ಎಕ್ಸಿಟ್ ಪೋಲ್ ಪ್ರಸಾರ ಮಾಡದಂತೆ ನಿಷೇಧ ವಿಧಿಸಿದ ಚುನಾವಣಾ ಆಯೋಗ

- Advertisement -
- Advertisement -

ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಹಿನ್ನೆಲೆ ಏಪ್ರಿಲ್ 19ರಂದು ಬೆಳಿಗ್ಗೆ 7ರಿಂದ ಜೂನ್ 1ರ ಸಂಜೆ 6.30ರವರೆಗೆ ಸಮೀಕ್ಷೆಗಳನ್ನು ನಡೆಸುವುದು ಮತ್ತು ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ಪ್ರಕಟಿಸುವುದನ್ನು ನಿಷೇಧಿಸಿ ಚುನಾವಣಾ ಆಯೋಗ ಆದೇಶವನ್ನು ಹೊರಡಿಸಿದೆ.

ವಿಶೇಷ ಮುಖ್ಯ ಚುನಾವಣಾ ಅಧಿಕಾರಿ ರಾಜೇಶ್ ಕುಮಾರ್ ಅವರು ಈ ಕುರಿತು ಆದೇಶವನ್ನು ಹೊರಡಿಸಿದ್ದು,  ವಿದ್ಯುನ್ಮಾನ ಮಾದ್ಯಮ, ಪತ್ರಿಕಾ ಮಾದ್ಯಮ, ರೆಡಿಯೋ ಸೇರಿದಂತೆ ಯಾವುದೇ ಮಾದ್ಯಮಗಳು ಯಾವುದೇ ರೀತಿಯಲ್ಲಿ ಸಮೀಕ್ಷೆಗಳನ್ನು ನಡೆಸುವುದು ಮತ್ತು ಅವುಗಳ ಫಲಿತಾಂಶಗಳನ್ನು ಸಾರ್ವಜನಿಕರಿಗೆ ಪ್ರಕಟಿಸುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಮತ್ತು ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭೆ ಚುನಾವಣೆಗಳು (ಎಸ್‌ಎಲ್‌ಎ) ಮತ್ತು ಬಿಹಾರ, ಗುಜರಾತ್, ಹರಿಯಾಣ, ಜಾರ್ಖಂಡ್, ಮಹಾರಾಷ್ಟ್ರ, ತ್ರಿಪುರ, ಉತ್ತರಪ್ರದೇಶದ ಉಪ ಚುನಾವಣೆಗಳ ವೇಳಾಪಟ್ಟಿಯನ್ನು ಮಾರ್ಚ್ 16ರಂದು ಚುನಾವಣಾ ಆಯೋಗ ಘೋಷಿಸಿತ್ತು.

1951ರ ಜನತಾ ಪ್ರಾತಿನಿಧ್ಯ ಕಾಯಿದೆಯನ್ನು (ಆರ್.ಪಿ. ಆಕ್ಟ್) ಉಲ್ಲೇಖಿಸಿ ಚುನಾವಣಾ ಆಯೋಗವು,  ಏಪ್ರಿಲ್ 19ರಂದು ಬೆಳಿಗ್ಗೆ 7.00ರಿಂದ ಜೂನ್ 1ರಂದು ಸಂಜೆ 6:30ರ ನಡುವಿನ ಅವಧಿಯಲ್ಲಿ ಲೋಕಸಭೆ ಅಥವಾ ರಾಜ್ಯ ವಿಧಾನಸಭೆಗಳ ಚುನಾವಣೆಯ ಸಮೀಕ್ಷೆಯನ್ನು ನಡೆಸುವುದು ಮತ್ತು ಅವುಗಳನ್ನು ಯಾವುದೇ ಮಾದ್ಯಮಗಳ ಮೂಲಕ ಪ್ರಕಟಿಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾಪ್ರತಿನಿಧಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ, ಅಭಿಪ್ರಾಯ ಸಂಗ್ರಹ, ಫಲಿತಾಂಶಗಳು ಅಥವಾ ಇತರ ಸಮೀಕ್ಷೆಯ ಫಲಿತಾಂಶಗಳನ್ನು ಯಾವುದೇ ಮಾಧ್ಯಮಗಳಲ್ಲಿ ಪ್ರಕಟಿಸುವುದನ್ನು ನಿಷೇಧಿಸಿದೆ. ಲೋಕಸಭಾ ಚುನಾವಣೆಯು ಏಪ್ರಿಲ್ 19 ರಿಂದ ಜೂನ್ 1ರ ನಡುವೆ ಏಳು ಹಂತಗಳಲ್ಲಿ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಇದೇ ಅವಧಿಯಲ್ಲಿ ಕೆಲ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಗಳು ನಡೆಯಲಿದೆ.

ಇದನ್ನು ಓದಿ: ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....