Homeಮುಖಪುಟಮಮತಾ ಬ್ಯಾನರ್ಜಿಗೆ ಅವಹೇಳನ: ಅಭಿಜಿತ್ ಗಂಗೋಪಾಧ್ಯಾಯ ಚುನಾವಣಾ ಪ್ರಚಾರಕ್ಕೆ ನಿರ್ಬಂಧ

ಮಮತಾ ಬ್ಯಾನರ್ಜಿಗೆ ಅವಹೇಳನ: ಅಭಿಜಿತ್ ಗಂಗೋಪಾಧ್ಯಾಯ ಚುನಾವಣಾ ಪ್ರಚಾರಕ್ಕೆ ನಿರ್ಬಂಧ

- Advertisement -
- Advertisement -

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ದ ‘ಕೆಳಮಟ್ಟದ ವೈಯಕ್ತಿಕ ಟೀಕೆ’ಯ ಹಿನ್ನೆಲೆ ಬಿಜೆಪಿ ಅಭ್ಯರ್ಥಿ, ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ 24 ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ.

ಮಹಿಳೆಯರ ಘನತೆ ಮತ್ತು ಗೌರವವನ್ನು ಪ್ರಶ್ನಿಸುವ ಯಾವುದೇ ಟೀಕೆಗಳನ್ನು ಮಾಡಬಾರದು ಎಂದು ಅಭಿಜಿತ್ ಗಂಗೋಪಾಧ್ಯಾಯಗೆ ನಿರ್ದೇಶನವನ್ನು ನೀಡಲು ಬಿಜೆಪಿ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ವಿಫಲರಾಗಿದ್ದಾರೆ ಎಂದು ಚುನಾವಣಾ ಆಯೋಗ ಇದೇ ವೇಳೆ ಹೇಳಿದೆ. ಮೇ 15ರಂದು ಕೋಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರು ಮತ್ತು ಬಿಜೆಪಿಯ ತಮ್ಲುಕ್ ಕ್ಷೇತ್ರದ ಅಭ್ಯರ್ಥಿಯ ಟೀಕೆಗಳ ವಿರುದ್ಧ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ ದೂರಿನ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಚುನಾವಣಾ ಆಯೋಗವು ಸೋಮವಾರ ಸಂಜೆಯೊಳಗೆ ಗಂಗೋಪಾಧ್ಯಾಯ ಅವರ ಪ್ರತಿಕ್ರಿಯೆಯನ್ನು ಕೇಳಿತ್ತು. ಅವರ ಪ್ರತಿಕ್ರಿಯೆ ಪಡೆದ ಬಳಿಕ ಈ ಆದೇಶವನ್ನು ನೀಡಿದೆ.

ಅಭಿಜಿತ್ ಗಂಗೋಪಾಧ್ಯಾಯ ಅವರಂತಹ ಶೈಕ್ಷಣಿಕ ಮತ್ತು ವೃತ್ತಿಪರ ಹಿನ್ನೆಲೆಯ ವ್ಯಕ್ತಿಯಿಂದ ಅಸಹ್ಯಕರ ಮಾತುಗಳು ಬಂದಿವೆ ಎಂಬ ಅಂಶವನ್ನು ಆಯೋಗವು ನೋವಿನಿಂದ ಗಮನಿಸುತ್ತದೆ. ಮಹಿಳೆಯರಿಗೆ ಗೌರವ ನೀಡುವ ವಿಶಿಷ್ಟ ಸಂಪ್ರದಾಯವನ್ನು ಹೊಂದಿರುವ ಪ.ಬಂಗಾಳಕ್ಕೆ  ಅವರು ಅಪಖ್ಯಾತಿ ತಂದಿದ್ದಾರೆ ಎಂದು ಚುನಾವಣಾ ಅಯೋಗವು ಗಮನಿಸಿದೆ.

ಗಂಗೋಪಾಧ್ಯಾಯ ಅವರು ಕೋಲ್ಕತ್ತಾ ಹೈಕೋರ್ಟಿನಲ್ಲಿ ನ್ಯಾಯಾಧೀಶರಾಗಿದ್ದಾಗ ತೃಣಮೂಲ ಕಾಂಗ್ರೆಸ್ ಅವರನ್ನು ವ್ಯಾಪಕವಾಗಿ ಟೀಕಿಸಿತ್ತು. ಇತ್ತೀಚೆಗಷ್ಟೇ ನ್ಯಾಯಾಧೀಶರ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಮಹಿಳೆಯರ ಗೌರವ ಮತ್ತು ಘನತೆಗೆ ಚ್ಯುತಿ ತರುವಂತಹ ಯಾವುದೇ ಹೇಳಿಕೆಯನ್ನು ನೀಡದಂತೆ ಪಕ್ಷದ ಅಭ್ಯರ್ಥಿಗಳಿಗೆ ಮತ್ತು ಚುನಾವಣಾ ಪ್ರಚಾರಕರಿಗೆ ಸೂಚಿಸುವಂತೆ ಬಿಜೆಪಿ ಅಧ್ಯಕ್ಷರಿಗೆ ನಿರ್ದೇಶನ ನೀಡಿರುವ ಪತ್ರವನ್ನು ಚುನಾವಣಾ ಆಯೋಗವು ಆದೇಶದಲ್ಲಿ ಉಲ್ಲೇಖಿಸಿದೆ.

ಮೇ.16ರಂದು ತಮ್ಮ ದೂರಿನಲ್ಲಿ ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಡೆರೆಕ್ ಒಬ್ರೇನ್ ಗಂಗೋಪಾಧ್ಯಾಯ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕು ಮತ್ತು ಚುನಾವಣಾ ಪ್ರಚಾರ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದರು.

ಮೇ 21ರಂದು ಸಂಜೆ 5 ರಿಂದ 24 ಗಂಟೆಗಳ ಕಾಲ ಪ್ರಚಾರವನ್ನು ಮಾಡದಂತೆ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ ನಿಷೇಧ ವಿಧಿಸಲಾಗಿದೆ. ತಾಮ್ಲುಕ್ ಕ್ಷೇತ್ರಕ್ಕೆ ಮೇ 25ರಂದು ಚುನಾವಣೆ ನಡೆಯಲಿದ್ದು, ಗುರುವಾರ ಪ್ರಚಾರ ಕೊನೆಗೊಳ್ಳಲಿದೆ.

ಮೇ 15ರಂದು ಪಶ್ಚಿಮ ಬಂಗಾಳದ ಹಲ್ದಿಯಾದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಗಂಗೋಪಾಧ್ಯಾಯ, ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಗುರಿಯಾಗಿಸಿಕೊಂಡು ಅವಹೇಳನಾಕಾರಿ ಹೇಳಿಕೆ ನೀಡಿದ್ದರು. ಗಂಗೋಪಾಧ್ಯಾಯ ಅವರು ನೋಟಿಸ್‌ಗೆ ನೀಡಿದ ಉತ್ತರವನ್ನು ಎಚ್ಚರಿಕೆಯಿಂದ ಪರಿಶೀಲಿಸಲಾಗಿದೆ. ಅವರು ಮಮತಾ ವಿರುದ್ಧ ನೀಡಿದ್ದ ಹೇಳಿಕೆಯನ್ನು ಮತ್ತೊಮ್ಮೆ ಪರಿಶೀಲಿಸಿದ್ದೇವೆ. ಮುಖ್ಯಮಂತ್ರಿ ವಿರುದ್ಧ ‘ಕೀಳುಮಟ್ಟದ ವೈಯಕ್ತಿಕ ದಾಳಿ’ ನಡೆಸಿ, ನೀತಿ ಸಂಹಿತೆ ಉಲ್ಲಂಘಿಸಿರುವುದು ಸಾಬೀತಾಗಿದೆ’ ಎಂದು ಆಯೋಗ ತಿಳಿಸಿದೆ.

ಇದನ್ನು ಓದಿ: ‘ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು’: ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ತಂಡದ ನೇತೃತ್ವ ವಹಿಸಿದ್ದ ಅಧಿಕಾರಿ ಸ್ಪೋಟಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...