Homeಮುಖಪುಟಮಮತಾ ಬ್ಯಾನರ್ಜಿಗೆ ಅವಹೇಳನ: ಅಭಿಜಿತ್ ಗಂಗೋಪಾಧ್ಯಾಯ ಚುನಾವಣಾ ಪ್ರಚಾರಕ್ಕೆ ನಿರ್ಬಂಧ

ಮಮತಾ ಬ್ಯಾನರ್ಜಿಗೆ ಅವಹೇಳನ: ಅಭಿಜಿತ್ ಗಂಗೋಪಾಧ್ಯಾಯ ಚುನಾವಣಾ ಪ್ರಚಾರಕ್ಕೆ ನಿರ್ಬಂಧ

- Advertisement -
- Advertisement -

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ದ ‘ಕೆಳಮಟ್ಟದ ವೈಯಕ್ತಿಕ ಟೀಕೆ’ಯ ಹಿನ್ನೆಲೆ ಬಿಜೆಪಿ ಅಭ್ಯರ್ಥಿ, ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ 24 ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ.

ಮಹಿಳೆಯರ ಘನತೆ ಮತ್ತು ಗೌರವವನ್ನು ಪ್ರಶ್ನಿಸುವ ಯಾವುದೇ ಟೀಕೆಗಳನ್ನು ಮಾಡಬಾರದು ಎಂದು ಅಭಿಜಿತ್ ಗಂಗೋಪಾಧ್ಯಾಯಗೆ ನಿರ್ದೇಶನವನ್ನು ನೀಡಲು ಬಿಜೆಪಿ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ವಿಫಲರಾಗಿದ್ದಾರೆ ಎಂದು ಚುನಾವಣಾ ಆಯೋಗ ಇದೇ ವೇಳೆ ಹೇಳಿದೆ. ಮೇ 15ರಂದು ಕೋಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರು ಮತ್ತು ಬಿಜೆಪಿಯ ತಮ್ಲುಕ್ ಕ್ಷೇತ್ರದ ಅಭ್ಯರ್ಥಿಯ ಟೀಕೆಗಳ ವಿರುದ್ಧ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ ದೂರಿನ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಚುನಾವಣಾ ಆಯೋಗವು ಸೋಮವಾರ ಸಂಜೆಯೊಳಗೆ ಗಂಗೋಪಾಧ್ಯಾಯ ಅವರ ಪ್ರತಿಕ್ರಿಯೆಯನ್ನು ಕೇಳಿತ್ತು. ಅವರ ಪ್ರತಿಕ್ರಿಯೆ ಪಡೆದ ಬಳಿಕ ಈ ಆದೇಶವನ್ನು ನೀಡಿದೆ.

ಅಭಿಜಿತ್ ಗಂಗೋಪಾಧ್ಯಾಯ ಅವರಂತಹ ಶೈಕ್ಷಣಿಕ ಮತ್ತು ವೃತ್ತಿಪರ ಹಿನ್ನೆಲೆಯ ವ್ಯಕ್ತಿಯಿಂದ ಅಸಹ್ಯಕರ ಮಾತುಗಳು ಬಂದಿವೆ ಎಂಬ ಅಂಶವನ್ನು ಆಯೋಗವು ನೋವಿನಿಂದ ಗಮನಿಸುತ್ತದೆ. ಮಹಿಳೆಯರಿಗೆ ಗೌರವ ನೀಡುವ ವಿಶಿಷ್ಟ ಸಂಪ್ರದಾಯವನ್ನು ಹೊಂದಿರುವ ಪ.ಬಂಗಾಳಕ್ಕೆ  ಅವರು ಅಪಖ್ಯಾತಿ ತಂದಿದ್ದಾರೆ ಎಂದು ಚುನಾವಣಾ ಅಯೋಗವು ಗಮನಿಸಿದೆ.

ಗಂಗೋಪಾಧ್ಯಾಯ ಅವರು ಕೋಲ್ಕತ್ತಾ ಹೈಕೋರ್ಟಿನಲ್ಲಿ ನ್ಯಾಯಾಧೀಶರಾಗಿದ್ದಾಗ ತೃಣಮೂಲ ಕಾಂಗ್ರೆಸ್ ಅವರನ್ನು ವ್ಯಾಪಕವಾಗಿ ಟೀಕಿಸಿತ್ತು. ಇತ್ತೀಚೆಗಷ್ಟೇ ನ್ಯಾಯಾಧೀಶರ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಮಹಿಳೆಯರ ಗೌರವ ಮತ್ತು ಘನತೆಗೆ ಚ್ಯುತಿ ತರುವಂತಹ ಯಾವುದೇ ಹೇಳಿಕೆಯನ್ನು ನೀಡದಂತೆ ಪಕ್ಷದ ಅಭ್ಯರ್ಥಿಗಳಿಗೆ ಮತ್ತು ಚುನಾವಣಾ ಪ್ರಚಾರಕರಿಗೆ ಸೂಚಿಸುವಂತೆ ಬಿಜೆಪಿ ಅಧ್ಯಕ್ಷರಿಗೆ ನಿರ್ದೇಶನ ನೀಡಿರುವ ಪತ್ರವನ್ನು ಚುನಾವಣಾ ಆಯೋಗವು ಆದೇಶದಲ್ಲಿ ಉಲ್ಲೇಖಿಸಿದೆ.

ಮೇ.16ರಂದು ತಮ್ಮ ದೂರಿನಲ್ಲಿ ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಡೆರೆಕ್ ಒಬ್ರೇನ್ ಗಂಗೋಪಾಧ್ಯಾಯ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕು ಮತ್ತು ಚುನಾವಣಾ ಪ್ರಚಾರ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದರು.

ಮೇ 21ರಂದು ಸಂಜೆ 5 ರಿಂದ 24 ಗಂಟೆಗಳ ಕಾಲ ಪ್ರಚಾರವನ್ನು ಮಾಡದಂತೆ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ ನಿಷೇಧ ವಿಧಿಸಲಾಗಿದೆ. ತಾಮ್ಲುಕ್ ಕ್ಷೇತ್ರಕ್ಕೆ ಮೇ 25ರಂದು ಚುನಾವಣೆ ನಡೆಯಲಿದ್ದು, ಗುರುವಾರ ಪ್ರಚಾರ ಕೊನೆಗೊಳ್ಳಲಿದೆ.

ಮೇ 15ರಂದು ಪಶ್ಚಿಮ ಬಂಗಾಳದ ಹಲ್ದಿಯಾದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಗಂಗೋಪಾಧ್ಯಾಯ, ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಗುರಿಯಾಗಿಸಿಕೊಂಡು ಅವಹೇಳನಾಕಾರಿ ಹೇಳಿಕೆ ನೀಡಿದ್ದರು. ಗಂಗೋಪಾಧ್ಯಾಯ ಅವರು ನೋಟಿಸ್‌ಗೆ ನೀಡಿದ ಉತ್ತರವನ್ನು ಎಚ್ಚರಿಕೆಯಿಂದ ಪರಿಶೀಲಿಸಲಾಗಿದೆ. ಅವರು ಮಮತಾ ವಿರುದ್ಧ ನೀಡಿದ್ದ ಹೇಳಿಕೆಯನ್ನು ಮತ್ತೊಮ್ಮೆ ಪರಿಶೀಲಿಸಿದ್ದೇವೆ. ಮುಖ್ಯಮಂತ್ರಿ ವಿರುದ್ಧ ‘ಕೀಳುಮಟ್ಟದ ವೈಯಕ್ತಿಕ ದಾಳಿ’ ನಡೆಸಿ, ನೀತಿ ಸಂಹಿತೆ ಉಲ್ಲಂಘಿಸಿರುವುದು ಸಾಬೀತಾಗಿದೆ’ ಎಂದು ಆಯೋಗ ತಿಳಿಸಿದೆ.

ಇದನ್ನು ಓದಿ: ‘ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು’: ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ತಂಡದ ನೇತೃತ್ವ ವಹಿಸಿದ್ದ ಅಧಿಕಾರಿ ಸ್ಪೋಟಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...