Homeಮುಖಪುಟಚುನಾವಣಾ ಆಯೋಗ ಪಕ್ಷಾತೀತವಾಗಿ ನಡೆದುಕೊಳ್ಳುತ್ತಿಲ್ಲ: ಪಿಣರಾಯಿ ವಿಜಯನ್

ಚುನಾವಣಾ ಆಯೋಗ ಪಕ್ಷಾತೀತವಾಗಿ ನಡೆದುಕೊಳ್ಳುತ್ತಿಲ್ಲ: ಪಿಣರಾಯಿ ವಿಜಯನ್

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ಮುಸ್ಲಿಮರ ವಿರುದ್ಧ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳುವ ಮೂಲಕ ಚುನಾವಣಾ ಆಯೋಗವು ಪಕ್ಷಾತೀತವಾಗಿ ವರ್ತಿಸದಿರುವುದು ದುರದೃಷ್ಟಕರ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಮೋದಿಯ ದ್ವೇಷದ ಹೇಳಿಕೆ ಬಗ್ಗೆ ಚುನಾವಣಾ ಆಯೋಗವು ತಕ್ಷಣವೇ ಕ್ರಮಕೈಗೊಳ್ಳಬೇಕಾಗಿತ್ತು. ಆದರೆ ಇದುವರೆಗೂ ಈ ವಿಷಯದ ಬಗ್ಗೆ ಮೌನವಾಗಿದೆ. ಇದು ದುರದೃಷ್ಟಕರ. ಚುನಾವಣಾ ಆಯೋಗವು ಪಕ್ಷಾತೀತ ಎಂದು ತೋರಿಸಬೇಕಿತ್ತು. ಚುನಾವಣಾ ಅಯೋಗವು ತಕ್ಷಣವೇ ಕಾರ್ಯನಿರ್ವಹಿಸಬೇಕಿತ್ತು. ಇದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತಾಪವಾಗಬೇಕಾದ ವಿಷಯವಾಗಿದೆ ಎಂದು ಪಿಣರಾಯ್‌ ವಿಜಯನ್‌ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ಪ್ರಧಾನಿಯ ಇಂತಹ ಹೇಳಿಕೆಗಳಿಂದಾಗಿ ರಾಷ್ಟ್ರದಲ್ಲಿ ಬಿಜೆಪಿ ವಿರೋಧಿ ಭಾವನೆ ಬಲಗೊಳ್ಳುತ್ತಿದೆ ಮತ್ತು ಕೇಸರಿ ಪಕ್ಷವು ಮತ್ತಷ್ಟು ಪ್ರತ್ಯೇಕಗೊಳ್ಳುತ್ತದೆ. ಪ್ರಧಾನಿಯ ಹೇಳಿಕೆ ಬಿಜೆಪಿ ವಿರೋಧಿ ಶಕ್ತಿಯನ್ನು ಮತ್ತಷ್ಟು ಬಲಿಷ್ಠವಾಗಿಸಿದ್ದು, ಕೇಸರಿ ಪಕ್ಷವು ಹೀನಾಯ ಸೋಲು ಕಾಣಲಿದೆ ಎಂದು ಹೇಳಿದ್ದಾರೆ.

ಭಾನುವಾರ ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡುವುದಾಗಿ ಹೇಳಿದ್ದಾರೆ.
ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ನೀಡಲು ಕಾಂಗ್ರೆಸ್ ಯೋಜಿಸಿದೆ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಟೀಕಿಸಿದ ಪಿಣರಾಯ್‌ ವಿಜಯನ್, ಜನರಲ್ಲಿ ಮುಸ್ಲಿಂ ವಿರೋಧಿ ದ್ವೇಷವನ್ನು ಹುಟ್ಟುಹಾಕಲು ಕಾಲ್ಪನಿಕ ಕಥೆಗಳನ್ನು ಕಟ್ಟುವ ಮೂಲಕ ಪ್ರಧಾನಿಯವರು ಕೋಮು ಪ್ರಚಾರವನ್ನು ನಡೆಸುತ್ತಿದ್ದಾರೆ ಎಂದು ಹೇಳಿದ್ದರು.

ಮೋದಿಯ ಹೇಳಿಕೆಯಲ್ಲೇನಿತ್ತು?

ರಾಜಸ್ಥಾನದ ಬನ್ಸ್ವಾರದಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ನರೇಂದ್ರ ಮೋದಿ, ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಮುಸ್ಲಿಂ ಅಲ್ಪಸಂಖ್ಯಾತರನ್ನು “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದರು.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದರು.

ಇದನ್ನು ಓದಿ: ಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...