Homeಮುಖಪುಟಚುನಾವಣಾ ಆಯೋಗ ಪಕ್ಷಾತೀತವಾಗಿ ನಡೆದುಕೊಳ್ಳುತ್ತಿಲ್ಲ: ಪಿಣರಾಯಿ ವಿಜಯನ್

ಚುನಾವಣಾ ಆಯೋಗ ಪಕ್ಷಾತೀತವಾಗಿ ನಡೆದುಕೊಳ್ಳುತ್ತಿಲ್ಲ: ಪಿಣರಾಯಿ ವಿಜಯನ್

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ಮುಸ್ಲಿಮರ ವಿರುದ್ಧ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳುವ ಮೂಲಕ ಚುನಾವಣಾ ಆಯೋಗವು ಪಕ್ಷಾತೀತವಾಗಿ ವರ್ತಿಸದಿರುವುದು ದುರದೃಷ್ಟಕರ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಮೋದಿಯ ದ್ವೇಷದ ಹೇಳಿಕೆ ಬಗ್ಗೆ ಚುನಾವಣಾ ಆಯೋಗವು ತಕ್ಷಣವೇ ಕ್ರಮಕೈಗೊಳ್ಳಬೇಕಾಗಿತ್ತು. ಆದರೆ ಇದುವರೆಗೂ ಈ ವಿಷಯದ ಬಗ್ಗೆ ಮೌನವಾಗಿದೆ. ಇದು ದುರದೃಷ್ಟಕರ. ಚುನಾವಣಾ ಆಯೋಗವು ಪಕ್ಷಾತೀತ ಎಂದು ತೋರಿಸಬೇಕಿತ್ತು. ಚುನಾವಣಾ ಅಯೋಗವು ತಕ್ಷಣವೇ ಕಾರ್ಯನಿರ್ವಹಿಸಬೇಕಿತ್ತು. ಇದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತಾಪವಾಗಬೇಕಾದ ವಿಷಯವಾಗಿದೆ ಎಂದು ಪಿಣರಾಯ್‌ ವಿಜಯನ್‌ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ಪ್ರಧಾನಿಯ ಇಂತಹ ಹೇಳಿಕೆಗಳಿಂದಾಗಿ ರಾಷ್ಟ್ರದಲ್ಲಿ ಬಿಜೆಪಿ ವಿರೋಧಿ ಭಾವನೆ ಬಲಗೊಳ್ಳುತ್ತಿದೆ ಮತ್ತು ಕೇಸರಿ ಪಕ್ಷವು ಮತ್ತಷ್ಟು ಪ್ರತ್ಯೇಕಗೊಳ್ಳುತ್ತದೆ. ಪ್ರಧಾನಿಯ ಹೇಳಿಕೆ ಬಿಜೆಪಿ ವಿರೋಧಿ ಶಕ್ತಿಯನ್ನು ಮತ್ತಷ್ಟು ಬಲಿಷ್ಠವಾಗಿಸಿದ್ದು, ಕೇಸರಿ ಪಕ್ಷವು ಹೀನಾಯ ಸೋಲು ಕಾಣಲಿದೆ ಎಂದು ಹೇಳಿದ್ದಾರೆ.

ಭಾನುವಾರ ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡುವುದಾಗಿ ಹೇಳಿದ್ದಾರೆ.
ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ನೀಡಲು ಕಾಂಗ್ರೆಸ್ ಯೋಜಿಸಿದೆ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಟೀಕಿಸಿದ ಪಿಣರಾಯ್‌ ವಿಜಯನ್, ಜನರಲ್ಲಿ ಮುಸ್ಲಿಂ ವಿರೋಧಿ ದ್ವೇಷವನ್ನು ಹುಟ್ಟುಹಾಕಲು ಕಾಲ್ಪನಿಕ ಕಥೆಗಳನ್ನು ಕಟ್ಟುವ ಮೂಲಕ ಪ್ರಧಾನಿಯವರು ಕೋಮು ಪ್ರಚಾರವನ್ನು ನಡೆಸುತ್ತಿದ್ದಾರೆ ಎಂದು ಹೇಳಿದ್ದರು.

ಮೋದಿಯ ಹೇಳಿಕೆಯಲ್ಲೇನಿತ್ತು?

ರಾಜಸ್ಥಾನದ ಬನ್ಸ್ವಾರದಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ನರೇಂದ್ರ ಮೋದಿ, ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಮುಸ್ಲಿಂ ಅಲ್ಪಸಂಖ್ಯಾತರನ್ನು “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದರು.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದರು.

ಇದನ್ನು ಓದಿ: ಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...