Homeಮುಖಪುಟಪಶ್ಚಿಮ ಬಂಗಾಳದ ಡಿಜಿಪಿ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ಪಶ್ಚಿಮ ಬಂಗಾಳದ ಡಿಜಿಪಿ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

- Advertisement -
- Advertisement -

ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವೀರೇಂದ್ರ ಅವರನ್ನು ವರ್ಗಾವಣೆ ಮಾಡಿ, ಬದಲಿಗೆ ಪಿ.ನೀರಜ್‌ನಯನ್ ಅವರನ್ನು ನೇಮಕ ಮಾಡಲು ಚುನಾವಣಾ ಆಯೋಗ ಮಾರ್ಚ್ 9 ರ ಮಂಗಳವಾರ ಆದೇಶ ನೀಡಿದೆ.

1987 ರ ಐಪಿಎಸ್ ಬ್ಯಾಚ್‌ನ ಪಿ.ನೀರಜ್‌ನಯನ್ ಅವರು ಮಹಾನಿರ್ದೇಶಕರು ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಪಾತ್ರವನ್ನು ವಹಿಸಲಿದ್ದು, ರಾಜ್ಯ ಸರ್ಕಾರ ಆದೇಶ ಜಾರಿಗೊಳಿಸಿದ ಬಗ್ಗೆ ಬುಧವಾರ ಆಯೋಗಕ್ಕೆ ಮಾಹಿತಿ ನೀಡುವಂತೆ ಆದೇಶಿಸಿದೆ.

ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿಗೆ ಚುನಾವಣಾ ಆಯೋಗ ನೀಡಿರುವ ಆದೇಶದಲ್ಲಿ ’1985 ರ ಐಪಿಎಸ್ ಬ್ಯಾಚ್ ವೀರೇಂದ್ರ ಅವರಿಗೆ “ನೇರವಾಗಿ ಅಥವಾ ಪರೋಕ್ಷವಾಗಿ ಚುನಾವಣೆಗೆ ಸಂಬಂಧಿಸಿದ ಯಾವುದೇ ಕರ್ತವ್ಯ ವಹಿಸಬಾರದು ಎಂದು” ತಿಳಿಸಲಾಗಿದೆ.

ಇದನ್ನೂ ಓದಿ: ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್‌ ಪರ ಡಿಜಿಪಿ ವೀರೇಂದ್ರ ಪಕ್ಷಪಾತ ಧೋರಣೆ ಹೊಂದಿದ್ದಾರೆಂದು ರಾಜಕೀಯ ಪಕ್ಷಗಳು, ವಿಶೇಷವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಹಲವಾರು ಬಾರಿ ಆರೋಪಿಸಿದೆ.

ಇತ್ತೀಚೆಗೆ, ಜಾವೇದ್ ಶಮೀಮ್ ಅವರನ್ನು ಚುನಾವಣಾ ಆಯೋಗ ಹೆಚ್ಚುವರಿ ಡೈರೆಕ್ಟರ್ ಜನರಲ್ (ಕಾನೂನು ಮತ್ತು ಸುವ್ಯವಸ್ಥೆ) ಯಿಂದ ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕ ಹುದ್ದೆಗೆ ಫೆಬ್ರವರಿ 27 ರಂದು ವರ್ಗಾಯಿಸಿತ್ತು. ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕರಾಗಿದ್ದ, ಜಗ್ ಮೋಹನ್, ಶಮೀಮ್ ಅವರ ಸ್ಥಾನ (ಕಾನೂನು ಮತ್ತು ಸುವ್ಯವಸ್ಥೆ) ಎಡಿಜಿಯಾದರು.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಮಾರ್ಚ್ 27 ರಿಂದ ಏಪ್ರಿಲ್ 29 ರವರೆಗೆ ಸುಧೀರ್ಘ ಎಂಟು ಹಂತಗಳಲ್ಲಿ ನಡೆಯಲಿದ್ದು, ನಂತರ ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಚುನಾವಣಾ ಆಯೋಗದ ಸುನೀಲ್ ಅರೋರಾ , ಈ ಚುನಾವಣೆ ರಾಜ್ಯದಲ್ಲಿಯೇ ಮೊದಲ ಬಾರಿ ಇಷ್ಟು ಸುಧೀರ್ಘ ಸಮಯದ್ದಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಮೌಲ್ಯಮಾಪನಗಳನ್ನು ಆಧರಿಸಿ ಚುನಾವಣೆ ನಡೆಸುತ್ತೇವೆ ಎಂದಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಗೆ ಈಗಾಗಲೇ ಇಬ್ಬರು ವಿಶೇಷ ವೀಕ್ಷಕರನ್ನು ಆಯೋಗ ನೇಮಿಸಿದೆ, ಭದ್ರತಾ ಪರಿಸ್ಥಿತಿಗೆ ಅನುಗುಣವಾಗಿ ಮೂರನೇ ವೀಕ್ಷಕರನ್ನು ಅಗತ್ಯವಿದ್ದಾಗ ಕಳುಹಿಸಬಹುದು ಎಂದು ಅರೋರ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಪ.ಬಂಗಾಳ: ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ಬಂಧನದ ವಾರೆಂಟ್ ತಡೆ ಹಿಡಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...