Homeಮುಖಪುಟಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

- Advertisement -
- Advertisement -

ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ದಾಖಲಾದ ಮತಗಳ ದಾಖಲೆಯನ್ನು ಒಳಗೊಂಡಿರುವ ನಮೂನೆ 17ಸಿ ಯನ್ನು ಅಭ್ಯರ್ಥಿಗಳು ಅಥವಾ ಅವರ ಏಜೆಂಟರಿಗೆ ಮಾತ್ರ ನೀಡಬಹುದು ಹೊರತು ಅದನ್ನು ಸಾರ್ವಜನಿಕಗೊಳಿಸಲು ಯಾವುದೇ ಕಾನೂನು ನಿರ್ದೇಶನವಿಲ್ಲ ಎಂದು ಭಾರತೀಯ ಚುನಾವಣಾ ಆಯೋಗವು ಸುಪ್ರೀಂಕೋರ್ಟ್‌ಗೆ ಹೇಳಿದೆ.

ಸಂಪೂರ್ಣ ಮತದಾರರ ಸಂಖ್ಯೆಯನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ನಡೆಸುತ್ತಿದೆ. ಮೊದಲ ಎರಡು ಹಂತದ ಮತದಾನದ ಡೇಟಾವನ್ನು ಪ್ರಕಟಿಸಲು ವಿಳಂಬವಾದ ನಂತರ ಈ ಅರ್ಜಿ ಸಲ್ಲಿಸಲಾಗಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ 2024ರ ಸಾರ್ವತ್ರಿಕ ಚುನಾವಣೆಯ ಪ್ರತಿ ಹಂತದ ಮತದಾನದ ನಂತರ ಎಲ್ಲಾ ಮತಗಟ್ಟೆಗಳ ಫಾರ್ಮ್ 17Cಯ ಸ್ಕ್ಯಾನ್ ಮಾಡಿದ ಸ್ಪಷ್ಟವಾದ ಪ್ರತಿಗಳನ್ನು ಅಪ್‌ಲೋಡ್ ಮಾಡುವ ಮೂಲಕ ಚುನಾವಣಾ ಆಯೋಗ ಮತದಾನದ ಪ್ರಮಾಣೀಕೃತ ದಾಖಲೆಗಳನ್ನು ಬಹಿರಂಗಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿತ್ತು. ಆದರೆ ಚುನಾವಣಾ ಆಯೋಗ, ಅಭ್ಯರ್ಥಿ ಅಥವಾ ಏಜೆಂಟ್‌ಗಳನ್ನು ಹೊರತುಪಡಿಸಿ ಯಾವುದೇ ವ್ಯಕ್ತಿಗೆ ನಮೂನೆ 17Cನ್ನು ಒದಗಿಸಲು ಯಾವುದೇ ಕಾನೂನು ನಿರ್ದೇಶನವಿಲ್ಲ ಎಂದು ಹೇಳಿದೆ.

ಉತ್ತರಪ್ರದೇಶದ ರಾಂಪುರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಕೀಲ ಮೆಹಮೂದ್ ಪ್ರಾಚಾ ಚುನಾವಣಾಧಿಕಾರಿ ತಮ್ಮ ಕ್ಷೇತ್ರದ ಫಾರ್ಮ್ 17ಸಿ ನೀಡಲು ನಿರಾಕರಿಸಿದ ನಂತರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಏಪ್ರಿಲ್ 19ರಂದು ರಾಂಪುರದಲ್ಲಿ ಮತದಾನ ನಡೆದಿತ್ತು.

ಚುನಾವಣಾ ಆಯೋಗವು ತನ್ನ ಪ್ರತಿಕ್ರಿಯೆಯಲ್ಲಿ ನಮೂನೆ 17Cನ್ನು ಬಹಿರಂಗಪಡಿಸುವುದರಿಂದ ಮತದಾರರಲ್ಲಿ ಒಟ್ಟು ಮತಗಳ ಬಗ್ಗೆ ಗೊಂದಲ ಉಂಟಾಗಬಹುದು ಎಂದು ಹೇಳಿದೆ. ಒಟ್ಟು ಅಂಕಿ-ಅಂಶವನ್ನು ಲೆಕ್ಕಹಾಕಲು ಮತಗಳನ್ನು ಎಣಿಸಲಾಗುತ್ತದೆಯಾದರೂ, ಅಂಚೆ ಮತಪತ್ರಗಳ ಮೂಲಕ ಚಲಾಯಿಸಲಾದ ಮತಗಳನ್ನು ಫಾರ್ಮ್ ಒಳಗೊಂಡಿರುವುದಿಲ್ಲ ಎಂದು ಅದು ವಾದಿಸಿದೆ. ಆದರೆ ಅಂತಹ ವ್ಯತ್ಯಾಸವನ್ನು ಮತದಾರರು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ, ಚುನಾವಣಾ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಲು ಪ್ರೇರೇಪಿತ ಹಿತಾಸಕ್ತಿ ಹೊಂದಿರುವ ವ್ಯಕ್ತಿಗಳು ಇದನ್ನು ಬಳಸುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗವು ಹೇಳಿದೆ.

ಚುನಾವಣಾ ಆಯೋಗ ಮತ್ತು ಅದರ ಸಿಬ್ಬಂದಿ ಚುನಾವಣೆಗೆ ಸಂಬಂಧಿಸಿದ ಭೌತಿಕ ವಸ್ತುಗಳಾದ ಫಾರ್ಮ್‌ಗಳು ಎನ್ವಲಪ್‌ಗಳು, ಸೀಲ್‌ಗಳು, ಇವಿಎಂಗಳು ಮುಂತಾದ ವಿಚಾರಗಳಿಗೆ ಸಂಬಂಧಿಸಿ ಆದ್ಯತೆಯ ಮೇಲೆ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಯಾವುದೇ ಫಾರ್ಮ್‌ ಸ್ಕ್ಯಾನ್‌ ಮಾಡಿ ಒದಗಿಸುವ ಹೆಚ್ಚುವರಿ ಜವಾಬ್ದಾರಿ ನೀಡಿದಲ್ಲಿ ಮತ ಎಣಿಕೆಗಿಂತ ನಮ್ಮ ಇತರ ಆದ್ಯತೆಯ ವಿಷಯಗಳು ಅಪಾಯದಲ್ಲಿರಬಹುದು. ಆ್ಯಪ್‌ನಲ್ಲಿನ ಮತದಾರರ ಮತದಾನದ ಅಂಕಿ-ಅಂಶಗಳನ್ನು ಪೂರಕ ಮಾಹಿತಿ ಎಂದು ಅರ್ಜಿದಾರರು ಪ್ರಶಂಸಿಸಲು ವಿಫಲರಾಗಿದ್ದಾರೆ ಎಂದು ಚುನಾವಣಾ ಆಯೋಗವು ಹೇಳಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ನ ಮನವಿಯು, ಚುನಾವಣಾ ಆಯೋಗದ ವಿರುದ್ಧ ಎಲ್ಲಾ ಸಂಭವನೀಯ ತಪ್ಪುದಾರಿಗೆಳೆಯುವ ಆರೋಪಗಳ ಮೂಲಕ ಅನುಮಾನಗಳನ್ನು ಹುಟ್ಟುಹಾಕಲು ಮಾಡಿದ ದುರುದ್ದೇಶಪೂರಿತ ಅಭಿಯಾನದ ಭಾಗವಾಗಿದೆ ಎಂದು ಚುನಾವಣಾ ಆಯೋಗವು ಆರೋಪಿಸಿದೆ.

ಇದನ್ನು ಓದಿ: ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...