Homeಮುಖಪುಟಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

- Advertisement -
- Advertisement -

ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ದಾಖಲಾದ ಮತಗಳ ದಾಖಲೆಯನ್ನು ಒಳಗೊಂಡಿರುವ ನಮೂನೆ 17ಸಿ ಯನ್ನು ಅಭ್ಯರ್ಥಿಗಳು ಅಥವಾ ಅವರ ಏಜೆಂಟರಿಗೆ ಮಾತ್ರ ನೀಡಬಹುದು ಹೊರತು ಅದನ್ನು ಸಾರ್ವಜನಿಕಗೊಳಿಸಲು ಯಾವುದೇ ಕಾನೂನು ನಿರ್ದೇಶನವಿಲ್ಲ ಎಂದು ಭಾರತೀಯ ಚುನಾವಣಾ ಆಯೋಗವು ಸುಪ್ರೀಂಕೋರ್ಟ್‌ಗೆ ಹೇಳಿದೆ.

ಸಂಪೂರ್ಣ ಮತದಾರರ ಸಂಖ್ಯೆಯನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ನಡೆಸುತ್ತಿದೆ. ಮೊದಲ ಎರಡು ಹಂತದ ಮತದಾನದ ಡೇಟಾವನ್ನು ಪ್ರಕಟಿಸಲು ವಿಳಂಬವಾದ ನಂತರ ಈ ಅರ್ಜಿ ಸಲ್ಲಿಸಲಾಗಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ 2024ರ ಸಾರ್ವತ್ರಿಕ ಚುನಾವಣೆಯ ಪ್ರತಿ ಹಂತದ ಮತದಾನದ ನಂತರ ಎಲ್ಲಾ ಮತಗಟ್ಟೆಗಳ ಫಾರ್ಮ್ 17Cಯ ಸ್ಕ್ಯಾನ್ ಮಾಡಿದ ಸ್ಪಷ್ಟವಾದ ಪ್ರತಿಗಳನ್ನು ಅಪ್‌ಲೋಡ್ ಮಾಡುವ ಮೂಲಕ ಚುನಾವಣಾ ಆಯೋಗ ಮತದಾನದ ಪ್ರಮಾಣೀಕೃತ ದಾಖಲೆಗಳನ್ನು ಬಹಿರಂಗಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿತ್ತು. ಆದರೆ ಚುನಾವಣಾ ಆಯೋಗ, ಅಭ್ಯರ್ಥಿ ಅಥವಾ ಏಜೆಂಟ್‌ಗಳನ್ನು ಹೊರತುಪಡಿಸಿ ಯಾವುದೇ ವ್ಯಕ್ತಿಗೆ ನಮೂನೆ 17Cನ್ನು ಒದಗಿಸಲು ಯಾವುದೇ ಕಾನೂನು ನಿರ್ದೇಶನವಿಲ್ಲ ಎಂದು ಹೇಳಿದೆ.

ಉತ್ತರಪ್ರದೇಶದ ರಾಂಪುರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಕೀಲ ಮೆಹಮೂದ್ ಪ್ರಾಚಾ ಚುನಾವಣಾಧಿಕಾರಿ ತಮ್ಮ ಕ್ಷೇತ್ರದ ಫಾರ್ಮ್ 17ಸಿ ನೀಡಲು ನಿರಾಕರಿಸಿದ ನಂತರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಏಪ್ರಿಲ್ 19ರಂದು ರಾಂಪುರದಲ್ಲಿ ಮತದಾನ ನಡೆದಿತ್ತು.

ಚುನಾವಣಾ ಆಯೋಗವು ತನ್ನ ಪ್ರತಿಕ್ರಿಯೆಯಲ್ಲಿ ನಮೂನೆ 17Cನ್ನು ಬಹಿರಂಗಪಡಿಸುವುದರಿಂದ ಮತದಾರರಲ್ಲಿ ಒಟ್ಟು ಮತಗಳ ಬಗ್ಗೆ ಗೊಂದಲ ಉಂಟಾಗಬಹುದು ಎಂದು ಹೇಳಿದೆ. ಒಟ್ಟು ಅಂಕಿ-ಅಂಶವನ್ನು ಲೆಕ್ಕಹಾಕಲು ಮತಗಳನ್ನು ಎಣಿಸಲಾಗುತ್ತದೆಯಾದರೂ, ಅಂಚೆ ಮತಪತ್ರಗಳ ಮೂಲಕ ಚಲಾಯಿಸಲಾದ ಮತಗಳನ್ನು ಫಾರ್ಮ್ ಒಳಗೊಂಡಿರುವುದಿಲ್ಲ ಎಂದು ಅದು ವಾದಿಸಿದೆ. ಆದರೆ ಅಂತಹ ವ್ಯತ್ಯಾಸವನ್ನು ಮತದಾರರು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ, ಚುನಾವಣಾ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಲು ಪ್ರೇರೇಪಿತ ಹಿತಾಸಕ್ತಿ ಹೊಂದಿರುವ ವ್ಯಕ್ತಿಗಳು ಇದನ್ನು ಬಳಸುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗವು ಹೇಳಿದೆ.

ಚುನಾವಣಾ ಆಯೋಗ ಮತ್ತು ಅದರ ಸಿಬ್ಬಂದಿ ಚುನಾವಣೆಗೆ ಸಂಬಂಧಿಸಿದ ಭೌತಿಕ ವಸ್ತುಗಳಾದ ಫಾರ್ಮ್‌ಗಳು ಎನ್ವಲಪ್‌ಗಳು, ಸೀಲ್‌ಗಳು, ಇವಿಎಂಗಳು ಮುಂತಾದ ವಿಚಾರಗಳಿಗೆ ಸಂಬಂಧಿಸಿ ಆದ್ಯತೆಯ ಮೇಲೆ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಯಾವುದೇ ಫಾರ್ಮ್‌ ಸ್ಕ್ಯಾನ್‌ ಮಾಡಿ ಒದಗಿಸುವ ಹೆಚ್ಚುವರಿ ಜವಾಬ್ದಾರಿ ನೀಡಿದಲ್ಲಿ ಮತ ಎಣಿಕೆಗಿಂತ ನಮ್ಮ ಇತರ ಆದ್ಯತೆಯ ವಿಷಯಗಳು ಅಪಾಯದಲ್ಲಿರಬಹುದು. ಆ್ಯಪ್‌ನಲ್ಲಿನ ಮತದಾರರ ಮತದಾನದ ಅಂಕಿ-ಅಂಶಗಳನ್ನು ಪೂರಕ ಮಾಹಿತಿ ಎಂದು ಅರ್ಜಿದಾರರು ಪ್ರಶಂಸಿಸಲು ವಿಫಲರಾಗಿದ್ದಾರೆ ಎಂದು ಚುನಾವಣಾ ಆಯೋಗವು ಹೇಳಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ನ ಮನವಿಯು, ಚುನಾವಣಾ ಆಯೋಗದ ವಿರುದ್ಧ ಎಲ್ಲಾ ಸಂಭವನೀಯ ತಪ್ಪುದಾರಿಗೆಳೆಯುವ ಆರೋಪಗಳ ಮೂಲಕ ಅನುಮಾನಗಳನ್ನು ಹುಟ್ಟುಹಾಕಲು ಮಾಡಿದ ದುರುದ್ದೇಶಪೂರಿತ ಅಭಿಯಾನದ ಭಾಗವಾಗಿದೆ ಎಂದು ಚುನಾವಣಾ ಆಯೋಗವು ಆರೋಪಿಸಿದೆ.

ಇದನ್ನು ಓದಿ: ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...