Homeಮುಖಪುಟಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

- Advertisement -
- Advertisement -

ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ದಾಖಲಾದ ಮತಗಳ ದಾಖಲೆಯನ್ನು ಒಳಗೊಂಡಿರುವ ನಮೂನೆ 17ಸಿ ಯನ್ನು ಅಭ್ಯರ್ಥಿಗಳು ಅಥವಾ ಅವರ ಏಜೆಂಟರಿಗೆ ಮಾತ್ರ ನೀಡಬಹುದು ಹೊರತು ಅದನ್ನು ಸಾರ್ವಜನಿಕಗೊಳಿಸಲು ಯಾವುದೇ ಕಾನೂನು ನಿರ್ದೇಶನವಿಲ್ಲ ಎಂದು ಭಾರತೀಯ ಚುನಾವಣಾ ಆಯೋಗವು ಸುಪ್ರೀಂಕೋರ್ಟ್‌ಗೆ ಹೇಳಿದೆ.

ಸಂಪೂರ್ಣ ಮತದಾರರ ಸಂಖ್ಯೆಯನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ನಡೆಸುತ್ತಿದೆ. ಮೊದಲ ಎರಡು ಹಂತದ ಮತದಾನದ ಡೇಟಾವನ್ನು ಪ್ರಕಟಿಸಲು ವಿಳಂಬವಾದ ನಂತರ ಈ ಅರ್ಜಿ ಸಲ್ಲಿಸಲಾಗಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ 2024ರ ಸಾರ್ವತ್ರಿಕ ಚುನಾವಣೆಯ ಪ್ರತಿ ಹಂತದ ಮತದಾನದ ನಂತರ ಎಲ್ಲಾ ಮತಗಟ್ಟೆಗಳ ಫಾರ್ಮ್ 17Cಯ ಸ್ಕ್ಯಾನ್ ಮಾಡಿದ ಸ್ಪಷ್ಟವಾದ ಪ್ರತಿಗಳನ್ನು ಅಪ್‌ಲೋಡ್ ಮಾಡುವ ಮೂಲಕ ಚುನಾವಣಾ ಆಯೋಗ ಮತದಾನದ ಪ್ರಮಾಣೀಕೃತ ದಾಖಲೆಗಳನ್ನು ಬಹಿರಂಗಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿತ್ತು. ಆದರೆ ಚುನಾವಣಾ ಆಯೋಗ, ಅಭ್ಯರ್ಥಿ ಅಥವಾ ಏಜೆಂಟ್‌ಗಳನ್ನು ಹೊರತುಪಡಿಸಿ ಯಾವುದೇ ವ್ಯಕ್ತಿಗೆ ನಮೂನೆ 17Cನ್ನು ಒದಗಿಸಲು ಯಾವುದೇ ಕಾನೂನು ನಿರ್ದೇಶನವಿಲ್ಲ ಎಂದು ಹೇಳಿದೆ.

ಉತ್ತರಪ್ರದೇಶದ ರಾಂಪುರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಕೀಲ ಮೆಹಮೂದ್ ಪ್ರಾಚಾ ಚುನಾವಣಾಧಿಕಾರಿ ತಮ್ಮ ಕ್ಷೇತ್ರದ ಫಾರ್ಮ್ 17ಸಿ ನೀಡಲು ನಿರಾಕರಿಸಿದ ನಂತರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಏಪ್ರಿಲ್ 19ರಂದು ರಾಂಪುರದಲ್ಲಿ ಮತದಾನ ನಡೆದಿತ್ತು.

ಚುನಾವಣಾ ಆಯೋಗವು ತನ್ನ ಪ್ರತಿಕ್ರಿಯೆಯಲ್ಲಿ ನಮೂನೆ 17Cನ್ನು ಬಹಿರಂಗಪಡಿಸುವುದರಿಂದ ಮತದಾರರಲ್ಲಿ ಒಟ್ಟು ಮತಗಳ ಬಗ್ಗೆ ಗೊಂದಲ ಉಂಟಾಗಬಹುದು ಎಂದು ಹೇಳಿದೆ. ಒಟ್ಟು ಅಂಕಿ-ಅಂಶವನ್ನು ಲೆಕ್ಕಹಾಕಲು ಮತಗಳನ್ನು ಎಣಿಸಲಾಗುತ್ತದೆಯಾದರೂ, ಅಂಚೆ ಮತಪತ್ರಗಳ ಮೂಲಕ ಚಲಾಯಿಸಲಾದ ಮತಗಳನ್ನು ಫಾರ್ಮ್ ಒಳಗೊಂಡಿರುವುದಿಲ್ಲ ಎಂದು ಅದು ವಾದಿಸಿದೆ. ಆದರೆ ಅಂತಹ ವ್ಯತ್ಯಾಸವನ್ನು ಮತದಾರರು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ, ಚುನಾವಣಾ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಲು ಪ್ರೇರೇಪಿತ ಹಿತಾಸಕ್ತಿ ಹೊಂದಿರುವ ವ್ಯಕ್ತಿಗಳು ಇದನ್ನು ಬಳಸುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗವು ಹೇಳಿದೆ.

ಚುನಾವಣಾ ಆಯೋಗ ಮತ್ತು ಅದರ ಸಿಬ್ಬಂದಿ ಚುನಾವಣೆಗೆ ಸಂಬಂಧಿಸಿದ ಭೌತಿಕ ವಸ್ತುಗಳಾದ ಫಾರ್ಮ್‌ಗಳು ಎನ್ವಲಪ್‌ಗಳು, ಸೀಲ್‌ಗಳು, ಇವಿಎಂಗಳು ಮುಂತಾದ ವಿಚಾರಗಳಿಗೆ ಸಂಬಂಧಿಸಿ ಆದ್ಯತೆಯ ಮೇಲೆ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಯಾವುದೇ ಫಾರ್ಮ್‌ ಸ್ಕ್ಯಾನ್‌ ಮಾಡಿ ಒದಗಿಸುವ ಹೆಚ್ಚುವರಿ ಜವಾಬ್ದಾರಿ ನೀಡಿದಲ್ಲಿ ಮತ ಎಣಿಕೆಗಿಂತ ನಮ್ಮ ಇತರ ಆದ್ಯತೆಯ ವಿಷಯಗಳು ಅಪಾಯದಲ್ಲಿರಬಹುದು. ಆ್ಯಪ್‌ನಲ್ಲಿನ ಮತದಾರರ ಮತದಾನದ ಅಂಕಿ-ಅಂಶಗಳನ್ನು ಪೂರಕ ಮಾಹಿತಿ ಎಂದು ಅರ್ಜಿದಾರರು ಪ್ರಶಂಸಿಸಲು ವಿಫಲರಾಗಿದ್ದಾರೆ ಎಂದು ಚುನಾವಣಾ ಆಯೋಗವು ಹೇಳಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ನ ಮನವಿಯು, ಚುನಾವಣಾ ಆಯೋಗದ ವಿರುದ್ಧ ಎಲ್ಲಾ ಸಂಭವನೀಯ ತಪ್ಪುದಾರಿಗೆಳೆಯುವ ಆರೋಪಗಳ ಮೂಲಕ ಅನುಮಾನಗಳನ್ನು ಹುಟ್ಟುಹಾಕಲು ಮಾಡಿದ ದುರುದ್ದೇಶಪೂರಿತ ಅಭಿಯಾನದ ಭಾಗವಾಗಿದೆ ಎಂದು ಚುನಾವಣಾ ಆಯೋಗವು ಆರೋಪಿಸಿದೆ.

ಇದನ್ನು ಓದಿ: ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...