Homeಮುಖಪುಟಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

- Advertisement -
- Advertisement -

ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ದಾಖಲಾದ ಮತಗಳ ದಾಖಲೆಯನ್ನು ಒಳಗೊಂಡಿರುವ ನಮೂನೆ 17ಸಿ ಯನ್ನು ಅಭ್ಯರ್ಥಿಗಳು ಅಥವಾ ಅವರ ಏಜೆಂಟರಿಗೆ ಮಾತ್ರ ನೀಡಬಹುದು ಹೊರತು ಅದನ್ನು ಸಾರ್ವಜನಿಕಗೊಳಿಸಲು ಯಾವುದೇ ಕಾನೂನು ನಿರ್ದೇಶನವಿಲ್ಲ ಎಂದು ಭಾರತೀಯ ಚುನಾವಣಾ ಆಯೋಗವು ಸುಪ್ರೀಂಕೋರ್ಟ್‌ಗೆ ಹೇಳಿದೆ.

ಸಂಪೂರ್ಣ ಮತದಾರರ ಸಂಖ್ಯೆಯನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ನಡೆಸುತ್ತಿದೆ. ಮೊದಲ ಎರಡು ಹಂತದ ಮತದಾನದ ಡೇಟಾವನ್ನು ಪ್ರಕಟಿಸಲು ವಿಳಂಬವಾದ ನಂತರ ಈ ಅರ್ಜಿ ಸಲ್ಲಿಸಲಾಗಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ 2024ರ ಸಾರ್ವತ್ರಿಕ ಚುನಾವಣೆಯ ಪ್ರತಿ ಹಂತದ ಮತದಾನದ ನಂತರ ಎಲ್ಲಾ ಮತಗಟ್ಟೆಗಳ ಫಾರ್ಮ್ 17Cಯ ಸ್ಕ್ಯಾನ್ ಮಾಡಿದ ಸ್ಪಷ್ಟವಾದ ಪ್ರತಿಗಳನ್ನು ಅಪ್‌ಲೋಡ್ ಮಾಡುವ ಮೂಲಕ ಚುನಾವಣಾ ಆಯೋಗ ಮತದಾನದ ಪ್ರಮಾಣೀಕೃತ ದಾಖಲೆಗಳನ್ನು ಬಹಿರಂಗಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿತ್ತು. ಆದರೆ ಚುನಾವಣಾ ಆಯೋಗ, ಅಭ್ಯರ್ಥಿ ಅಥವಾ ಏಜೆಂಟ್‌ಗಳನ್ನು ಹೊರತುಪಡಿಸಿ ಯಾವುದೇ ವ್ಯಕ್ತಿಗೆ ನಮೂನೆ 17Cನ್ನು ಒದಗಿಸಲು ಯಾವುದೇ ಕಾನೂನು ನಿರ್ದೇಶನವಿಲ್ಲ ಎಂದು ಹೇಳಿದೆ.

ಉತ್ತರಪ್ರದೇಶದ ರಾಂಪುರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಕೀಲ ಮೆಹಮೂದ್ ಪ್ರಾಚಾ ಚುನಾವಣಾಧಿಕಾರಿ ತಮ್ಮ ಕ್ಷೇತ್ರದ ಫಾರ್ಮ್ 17ಸಿ ನೀಡಲು ನಿರಾಕರಿಸಿದ ನಂತರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಏಪ್ರಿಲ್ 19ರಂದು ರಾಂಪುರದಲ್ಲಿ ಮತದಾನ ನಡೆದಿತ್ತು.

ಚುನಾವಣಾ ಆಯೋಗವು ತನ್ನ ಪ್ರತಿಕ್ರಿಯೆಯಲ್ಲಿ ನಮೂನೆ 17Cನ್ನು ಬಹಿರಂಗಪಡಿಸುವುದರಿಂದ ಮತದಾರರಲ್ಲಿ ಒಟ್ಟು ಮತಗಳ ಬಗ್ಗೆ ಗೊಂದಲ ಉಂಟಾಗಬಹುದು ಎಂದು ಹೇಳಿದೆ. ಒಟ್ಟು ಅಂಕಿ-ಅಂಶವನ್ನು ಲೆಕ್ಕಹಾಕಲು ಮತಗಳನ್ನು ಎಣಿಸಲಾಗುತ್ತದೆಯಾದರೂ, ಅಂಚೆ ಮತಪತ್ರಗಳ ಮೂಲಕ ಚಲಾಯಿಸಲಾದ ಮತಗಳನ್ನು ಫಾರ್ಮ್ ಒಳಗೊಂಡಿರುವುದಿಲ್ಲ ಎಂದು ಅದು ವಾದಿಸಿದೆ. ಆದರೆ ಅಂತಹ ವ್ಯತ್ಯಾಸವನ್ನು ಮತದಾರರು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ, ಚುನಾವಣಾ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಲು ಪ್ರೇರೇಪಿತ ಹಿತಾಸಕ್ತಿ ಹೊಂದಿರುವ ವ್ಯಕ್ತಿಗಳು ಇದನ್ನು ಬಳಸುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗವು ಹೇಳಿದೆ.

ಚುನಾವಣಾ ಆಯೋಗ ಮತ್ತು ಅದರ ಸಿಬ್ಬಂದಿ ಚುನಾವಣೆಗೆ ಸಂಬಂಧಿಸಿದ ಭೌತಿಕ ವಸ್ತುಗಳಾದ ಫಾರ್ಮ್‌ಗಳು ಎನ್ವಲಪ್‌ಗಳು, ಸೀಲ್‌ಗಳು, ಇವಿಎಂಗಳು ಮುಂತಾದ ವಿಚಾರಗಳಿಗೆ ಸಂಬಂಧಿಸಿ ಆದ್ಯತೆಯ ಮೇಲೆ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಯಾವುದೇ ಫಾರ್ಮ್‌ ಸ್ಕ್ಯಾನ್‌ ಮಾಡಿ ಒದಗಿಸುವ ಹೆಚ್ಚುವರಿ ಜವಾಬ್ದಾರಿ ನೀಡಿದಲ್ಲಿ ಮತ ಎಣಿಕೆಗಿಂತ ನಮ್ಮ ಇತರ ಆದ್ಯತೆಯ ವಿಷಯಗಳು ಅಪಾಯದಲ್ಲಿರಬಹುದು. ಆ್ಯಪ್‌ನಲ್ಲಿನ ಮತದಾರರ ಮತದಾನದ ಅಂಕಿ-ಅಂಶಗಳನ್ನು ಪೂರಕ ಮಾಹಿತಿ ಎಂದು ಅರ್ಜಿದಾರರು ಪ್ರಶಂಸಿಸಲು ವಿಫಲರಾಗಿದ್ದಾರೆ ಎಂದು ಚುನಾವಣಾ ಆಯೋಗವು ಹೇಳಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ನ ಮನವಿಯು, ಚುನಾವಣಾ ಆಯೋಗದ ವಿರುದ್ಧ ಎಲ್ಲಾ ಸಂಭವನೀಯ ತಪ್ಪುದಾರಿಗೆಳೆಯುವ ಆರೋಪಗಳ ಮೂಲಕ ಅನುಮಾನಗಳನ್ನು ಹುಟ್ಟುಹಾಕಲು ಮಾಡಿದ ದುರುದ್ದೇಶಪೂರಿತ ಅಭಿಯಾನದ ಭಾಗವಾಗಿದೆ ಎಂದು ಚುನಾವಣಾ ಆಯೋಗವು ಆರೋಪಿಸಿದೆ.

ಇದನ್ನು ಓದಿ: ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...