Homeಮುಖಪುಟಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ...

ಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ ಚು. ಆಯುಕ್ತ ಎಸ್. ವೈ ಖುರೈಶಿ

- Advertisement -
- Advertisement -

‘ಮತಗಳ್ಳತನದ’ ಆರೋಪಗಳಿಗೆ ಚುನಾವಣಾ ಆಯೋಗ ನೀಡಿರುವ ಪ್ರತಿಕ್ರಿಯೆಯನ್ನು ಭಾನುವಾರ ತೀವ್ರವಾಗಿ ಟೀಕಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿ, “ಚುನಾವಣಾ ಆಯೋಗ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ‘ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿ’ ಭಾಷೆಯಲ್ಲಿ ಕಿರುಚಾಡುವ ಬದಲು, ಅವರ ಆರೋಪಗಳ ಕುರಿತು ತನಿಖೆಗೆ ಆದೇಶಿಸಬೇಕಾಗಿತ್ತು ಎಂದು ಹೇಳಿದ್ದಾರೆ.

ಮತಗಳ್ಳತನದ ಕುರಿತು ಹೈಡ್ರೋಜನ್ ಬಾಂಬ್ ಶೀಘ್ರದಲ್ಲೇ ಬರಲಿದೆ ಎಂಬ ರಾಹುಲ್ ಗಾಂಧಿಯ ಹೇಳಿಕೆ, ಅದೊಂದು ‘ರಾಜಕೀಯ ವಾಕ್ಚಾತುರ್ಯ’. ಆದರೆ, ಅವರು ಮಾಡಿರುವ ಆರೋಪಗಳು ಗಂಭೀರವಾದದ್ದು. ಅವುಗಳ ಬಗ್ಗೆ ಸೂಕ್ತವಾದ ತನಿಖೆಯ ನಡೆಯಬೇಕು ಎಂದು ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಖುರೈಶಿ ತಿಳಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ನಡೆಸಿದ ವಿಧಾನದ ಬಗ್ಗೆ ಖುರೈಶಿ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿದ್ದು, ಅದು (ಚು. ಆಯೋಗ) ‘ಪಂಡೋರಾ ಪೆಟ್ಟಿಗೆ’ಯನ್ನು ತೆರೆಯುತ್ತಿದೆ. ಮಾತ್ರವಲ್ಲದೆ, ‘ಕಣಜದ ಗೂಡಿಗೆ’ ಕೈ ಹಾಕಿದೆ. ಈ ಪ್ರಕ್ರಿಯೆ ಅದಕ್ಕೇ (ಚು. ಆಯೋಗಕ್ಕೆ) ಹಾನಿ ಮಾಡಲಿದೆ ಎಂದು ಹೇಳಿದ್ದಾರೆ.

“ಚುನಾವಣಾ ಆಯೋಗವನ್ನು ಟೀಕಿಸುವುದು ನೋಡುವಾಗ ನನಗೆ ತುಂಬಾ ನೋವುಂಟಾಗುತ್ತದೆ. ಏಕೆಂದರೆ, ನಾನೊಬ್ಬ ಭಾರತ ನಾಗರಿಕನಾಗಿ, ಮುಖ್ಯ ಚುನಾವಣಾ ಆಯುಕ್ತನಾಗಿ ಆ ಸಂಸ್ಥೆಯ ಉನ್ನತಿಗಾಗಿ ಒಂದೆರಡು ಇಟ್ಟಿಗೆಗಳನ್ನು ಇಟ್ಟಿದ್ದೇನೆ ಎಂದು ಜಗ್ಗರ್ನಾಟ್ ಬುಕ್ಸ್ ಪ್ರಕಟಿಸಿದ ತಮ್ಮ ಹೊಸ ಪುಸ್ತಕ ‘ಡೆಮಾಕ್ರಸೀಸ್ ಹಾರ್ಟ್‌ಲ್ಯಾಂಡ್’ ಬಿಡುಗಡೆಗೆ ಮುಂಚಿತವಾಗಿ ಖುರೈಶಿ ಪಿಟಿಐಗೆ ತಿಳಿಸಿದ್ದಾರೆ.

“ಚುನಾವಣಾ ಆಯೋಗ ದಾಳಿಗೆ ಒಳಗಾಗುವುದು ಅಥವಾ ಯಾವುದೇ ರೀತಿಯಲ್ಲಿ ದುರ್ಬಲಗೊಂಡಿರುವುದನ್ನು ನೋಡಿದಾಗ ನನಗೆ ಕಳವಳವಾಗುತ್ತದೆ. ಈ ಬಗ್ಗೆ ಆಯೋಗ ಸ್ವತಃ ಆತ್ಮಾವಲೋಕನ ಮಾಡಿಕೊಳ್ಳಬೇಕು. ತನ್ನ ನಿರ್ಧಾರಗಳ ಮೇಲೆ ಪ್ರಭಾವ ಬೀರುವ ಎಲ್ಲಾ ಶಕ್ತಿಗಳು ಮತ್ತು ಒತ್ತಡಗಳನ್ನು ಎದುರಿಸುವುದು ಆಯೋಗದ ಜವಾಬ್ದಾರಿಯಾಗಿದೆ” ಎಂದು 2010 ಮತ್ತು 2012 ರ ನಡುವೆ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಖುರೈಶಿ ಹೇಳಿದ್ದಾರೆ.

“ಆಯೋಗವು ಜನರ ವಿಶ್ವಾಸವನ್ನು ಗೆಲ್ಲಬೇಕು. ವಿರೋಧ ಪಕ್ಷಗಳ ವಿಶ್ವಾಸವೂ ಬೇಕು. ನಾನು ಯಾವಗಲೂ ವಿರೋಧ ಪಕ್ಷಗಳಿಗೆ ಆದ್ಯತೆ ನೀಡುತ್ತಿದ್ದೆ. ಏಕೆಂದರೆ, ಅವರು ದುರ್ಬಲರು. ವಿರೋಧ ಪಕ್ಷವು ಅಧಿಕಾರದಿಂದ ಹೊರಗುಳಿದಿರುವುದರಿಂದ ಅಧಿಕಾರದಲ್ಲಿರುವ ಪಕ್ಷಕ್ಕೆ ಅದರಷ್ಟು ಮುದ್ದು ಅಗತ್ಯವಿಲ್ಲ ಎಂದು ಖುರೈಶಿ ಅಭಿಪ್ರಾಯಪಟ್ಟಿದ್ದಾರೆ.

“ನಾನು ಮುಖ್ಯ ಚುನಾವಣಾ ಆಯುಕ್ತ ಆಗಿದ್ದಾಗ ವಿರೋಧ ಪಕ್ಷಗಳಿಗೆ ಆಯೋಗದ ಬಾಗಿಲು ತೆರೆದಿಡಿ. ಅವರಿಗೆ ತಕ್ಷಣ ಅಪಾಯಿಂಟ್‌ಮೆಂಟ್ ಕೊಡಿ. ಅವರ ಮಾತನ್ನು ಆಲಿಸಿ, ಅವರೊಂದಿಗೆ ಮಾತನಾಡಿ, ಅವರಿಗೆ ಏನಾದರು ಸಣ್ಣ ಸಹಾಯ ಬೇಕಾದರೆ, ಬೇರೆಯವರಿಗೆ ಹಾನಿಯಾಗದಿದ್ದರೆ ಅದನ್ನು ಮಾಡಿ” ಎಂದು ನನ್ನ ಸಿಬ್ಬಂದಿಗೆ ಸೂಚಿಸಿದ್ದೆ” ಎಂದು ಖುರೈಶಿ ಹೇಳಿದ್ದಾರೆ.

ಇಲ್ಲಿ ವಿರೋಧ ಪಕ್ಷಗಳು ಆಗಾಗ ಸುಪ್ರೀಂ ಕೋರ್ಟ್‌ಗೆ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ವಾಸ್ತವವಾಗಿ, 23 ಪಕ್ಷಗಳು ತಮಗೆ ಅಪಾಯಿಂಟ್‌ಮೆಂಟ್ ಸಿಗುತ್ತಿಲ್ಲ ಮತ್ತು ಯಾರೂ ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಹೇಳಬೇಕಾಗಿ ಬಂದಿದೆ. ರಾಹುಲ್ ಗಾಂಧಿಯವರ ಆರೋಪಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಕೇಳುವ ಬದಲು, ಚುನಾವಣಾ ಆಯೋಗ ತನಿಖೆಗೆ ಆದೇಶಿಸಬೇಕಿತ್ತು ಎಂದಿದ್ದಾರೆ.

“ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕ, ಬೀದಿಯಲ್ಲಿ ಹೋಗುವ ವ್ಯಕ್ತಿಯಲ್ಲ. ಅವರ ಆರೋಪಗಳ ಕುರಿತು ಚುನಾವಣಾ ಆಯೋಗ ತನಿಖೆ ನಡೆಸಬೇಕು. ಬದಲಾಗಿ, ಅವರ ವಿರುದ್ದವೇ ಕಿರುಚಾಡುವುದಲ್ಲ. ಚುನಾವಣಾ ಆಯೋಗ ನಡೆದುಕೊಳ್ಳುವ ರೀತಿ ಇದಲ್ಲ” ಎಂದು ಖುರೈಶಿ ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಲಕ್ಷಾಂತರ ಜನರನ್ನು ಪ್ರತಿನಿಧಿಸುತ್ತಿದ್ದಾರೆ. ಅವರು ಲಕ್ಷಾಂತರ ಜನರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ವ್ಯಕ್ತಿಗೆ ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗ ಸೂಚಿಸಿದ ರೀತಿ, ಬಳಸಿದ ಭಾಷೆ ‘ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿಯಾಗಿದೆ’ ಎಂದು ಖುರೈಶಿ ಹೇಳಿದ್ದಾರೆ.

ನೇಪಾಳದ ಪ್ರತಿಭಟನೆಗಳ ಕುರಿತು ವಿಡಿಯೋ: ಕಂಟೆಂಟ್ ಕ್ರಿಯೇಟರ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲಿಸಿದ ಯುಪಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...