Homeಮುಖಪುಟಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ...

ಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ ಚು. ಆಯುಕ್ತ ಎಸ್. ವೈ ಖುರೈಶಿ

- Advertisement -
- Advertisement -

‘ಮತಗಳ್ಳತನದ’ ಆರೋಪಗಳಿಗೆ ಚುನಾವಣಾ ಆಯೋಗ ನೀಡಿರುವ ಪ್ರತಿಕ್ರಿಯೆಯನ್ನು ಭಾನುವಾರ ತೀವ್ರವಾಗಿ ಟೀಕಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿ, “ಚುನಾವಣಾ ಆಯೋಗ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ‘ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿ’ ಭಾಷೆಯಲ್ಲಿ ಕಿರುಚಾಡುವ ಬದಲು, ಅವರ ಆರೋಪಗಳ ಕುರಿತು ತನಿಖೆಗೆ ಆದೇಶಿಸಬೇಕಾಗಿತ್ತು ಎಂದು ಹೇಳಿದ್ದಾರೆ.

ಮತಗಳ್ಳತನದ ಕುರಿತು ಹೈಡ್ರೋಜನ್ ಬಾಂಬ್ ಶೀಘ್ರದಲ್ಲೇ ಬರಲಿದೆ ಎಂಬ ರಾಹುಲ್ ಗಾಂಧಿಯ ಹೇಳಿಕೆ, ಅದೊಂದು ‘ರಾಜಕೀಯ ವಾಕ್ಚಾತುರ್ಯ’. ಆದರೆ, ಅವರು ಮಾಡಿರುವ ಆರೋಪಗಳು ಗಂಭೀರವಾದದ್ದು. ಅವುಗಳ ಬಗ್ಗೆ ಸೂಕ್ತವಾದ ತನಿಖೆಯ ನಡೆಯಬೇಕು ಎಂದು ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಖುರೈಶಿ ತಿಳಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ನಡೆಸಿದ ವಿಧಾನದ ಬಗ್ಗೆ ಖುರೈಶಿ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿದ್ದು, ಅದು (ಚು. ಆಯೋಗ) ‘ಪಂಡೋರಾ ಪೆಟ್ಟಿಗೆ’ಯನ್ನು ತೆರೆಯುತ್ತಿದೆ. ಮಾತ್ರವಲ್ಲದೆ, ‘ಕಣಜದ ಗೂಡಿಗೆ’ ಕೈ ಹಾಕಿದೆ. ಈ ಪ್ರಕ್ರಿಯೆ ಅದಕ್ಕೇ (ಚು. ಆಯೋಗಕ್ಕೆ) ಹಾನಿ ಮಾಡಲಿದೆ ಎಂದು ಹೇಳಿದ್ದಾರೆ.

“ಚುನಾವಣಾ ಆಯೋಗವನ್ನು ಟೀಕಿಸುವುದು ನೋಡುವಾಗ ನನಗೆ ತುಂಬಾ ನೋವುಂಟಾಗುತ್ತದೆ. ಏಕೆಂದರೆ, ನಾನೊಬ್ಬ ಭಾರತ ನಾಗರಿಕನಾಗಿ, ಮುಖ್ಯ ಚುನಾವಣಾ ಆಯುಕ್ತನಾಗಿ ಆ ಸಂಸ್ಥೆಯ ಉನ್ನತಿಗಾಗಿ ಒಂದೆರಡು ಇಟ್ಟಿಗೆಗಳನ್ನು ಇಟ್ಟಿದ್ದೇನೆ ಎಂದು ಜಗ್ಗರ್ನಾಟ್ ಬುಕ್ಸ್ ಪ್ರಕಟಿಸಿದ ತಮ್ಮ ಹೊಸ ಪುಸ್ತಕ ‘ಡೆಮಾಕ್ರಸೀಸ್ ಹಾರ್ಟ್‌ಲ್ಯಾಂಡ್’ ಬಿಡುಗಡೆಗೆ ಮುಂಚಿತವಾಗಿ ಖುರೈಶಿ ಪಿಟಿಐಗೆ ತಿಳಿಸಿದ್ದಾರೆ.

“ಚುನಾವಣಾ ಆಯೋಗ ದಾಳಿಗೆ ಒಳಗಾಗುವುದು ಅಥವಾ ಯಾವುದೇ ರೀತಿಯಲ್ಲಿ ದುರ್ಬಲಗೊಂಡಿರುವುದನ್ನು ನೋಡಿದಾಗ ನನಗೆ ಕಳವಳವಾಗುತ್ತದೆ. ಈ ಬಗ್ಗೆ ಆಯೋಗ ಸ್ವತಃ ಆತ್ಮಾವಲೋಕನ ಮಾಡಿಕೊಳ್ಳಬೇಕು. ತನ್ನ ನಿರ್ಧಾರಗಳ ಮೇಲೆ ಪ್ರಭಾವ ಬೀರುವ ಎಲ್ಲಾ ಶಕ್ತಿಗಳು ಮತ್ತು ಒತ್ತಡಗಳನ್ನು ಎದುರಿಸುವುದು ಆಯೋಗದ ಜವಾಬ್ದಾರಿಯಾಗಿದೆ” ಎಂದು 2010 ಮತ್ತು 2012 ರ ನಡುವೆ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಖುರೈಶಿ ಹೇಳಿದ್ದಾರೆ.

“ಆಯೋಗವು ಜನರ ವಿಶ್ವಾಸವನ್ನು ಗೆಲ್ಲಬೇಕು. ವಿರೋಧ ಪಕ್ಷಗಳ ವಿಶ್ವಾಸವೂ ಬೇಕು. ನಾನು ಯಾವಗಲೂ ವಿರೋಧ ಪಕ್ಷಗಳಿಗೆ ಆದ್ಯತೆ ನೀಡುತ್ತಿದ್ದೆ. ಏಕೆಂದರೆ, ಅವರು ದುರ್ಬಲರು. ವಿರೋಧ ಪಕ್ಷವು ಅಧಿಕಾರದಿಂದ ಹೊರಗುಳಿದಿರುವುದರಿಂದ ಅಧಿಕಾರದಲ್ಲಿರುವ ಪಕ್ಷಕ್ಕೆ ಅದರಷ್ಟು ಮುದ್ದು ಅಗತ್ಯವಿಲ್ಲ ಎಂದು ಖುರೈಶಿ ಅಭಿಪ್ರಾಯಪಟ್ಟಿದ್ದಾರೆ.

“ನಾನು ಮುಖ್ಯ ಚುನಾವಣಾ ಆಯುಕ್ತ ಆಗಿದ್ದಾಗ ವಿರೋಧ ಪಕ್ಷಗಳಿಗೆ ಆಯೋಗದ ಬಾಗಿಲು ತೆರೆದಿಡಿ. ಅವರಿಗೆ ತಕ್ಷಣ ಅಪಾಯಿಂಟ್‌ಮೆಂಟ್ ಕೊಡಿ. ಅವರ ಮಾತನ್ನು ಆಲಿಸಿ, ಅವರೊಂದಿಗೆ ಮಾತನಾಡಿ, ಅವರಿಗೆ ಏನಾದರು ಸಣ್ಣ ಸಹಾಯ ಬೇಕಾದರೆ, ಬೇರೆಯವರಿಗೆ ಹಾನಿಯಾಗದಿದ್ದರೆ ಅದನ್ನು ಮಾಡಿ” ಎಂದು ನನ್ನ ಸಿಬ್ಬಂದಿಗೆ ಸೂಚಿಸಿದ್ದೆ” ಎಂದು ಖುರೈಶಿ ಹೇಳಿದ್ದಾರೆ.

ಇಲ್ಲಿ ವಿರೋಧ ಪಕ್ಷಗಳು ಆಗಾಗ ಸುಪ್ರೀಂ ಕೋರ್ಟ್‌ಗೆ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ವಾಸ್ತವವಾಗಿ, 23 ಪಕ್ಷಗಳು ತಮಗೆ ಅಪಾಯಿಂಟ್‌ಮೆಂಟ್ ಸಿಗುತ್ತಿಲ್ಲ ಮತ್ತು ಯಾರೂ ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಹೇಳಬೇಕಾಗಿ ಬಂದಿದೆ. ರಾಹುಲ್ ಗಾಂಧಿಯವರ ಆರೋಪಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಕೇಳುವ ಬದಲು, ಚುನಾವಣಾ ಆಯೋಗ ತನಿಖೆಗೆ ಆದೇಶಿಸಬೇಕಿತ್ತು ಎಂದಿದ್ದಾರೆ.

“ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕ, ಬೀದಿಯಲ್ಲಿ ಹೋಗುವ ವ್ಯಕ್ತಿಯಲ್ಲ. ಅವರ ಆರೋಪಗಳ ಕುರಿತು ಚುನಾವಣಾ ಆಯೋಗ ತನಿಖೆ ನಡೆಸಬೇಕು. ಬದಲಾಗಿ, ಅವರ ವಿರುದ್ದವೇ ಕಿರುಚಾಡುವುದಲ್ಲ. ಚುನಾವಣಾ ಆಯೋಗ ನಡೆದುಕೊಳ್ಳುವ ರೀತಿ ಇದಲ್ಲ” ಎಂದು ಖುರೈಶಿ ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಲಕ್ಷಾಂತರ ಜನರನ್ನು ಪ್ರತಿನಿಧಿಸುತ್ತಿದ್ದಾರೆ. ಅವರು ಲಕ್ಷಾಂತರ ಜನರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ವ್ಯಕ್ತಿಗೆ ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗ ಸೂಚಿಸಿದ ರೀತಿ, ಬಳಸಿದ ಭಾಷೆ ‘ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿಯಾಗಿದೆ’ ಎಂದು ಖುರೈಶಿ ಹೇಳಿದ್ದಾರೆ.

ನೇಪಾಳದ ಪ್ರತಿಭಟನೆಗಳ ಕುರಿತು ವಿಡಿಯೋ: ಕಂಟೆಂಟ್ ಕ್ರಿಯೇಟರ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲಿಸಿದ ಯುಪಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...