Homeಮುಖಪುಟಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ...

ಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ ಚು. ಆಯುಕ್ತ ಎಸ್. ವೈ ಖುರೈಶಿ

- Advertisement -
- Advertisement -

‘ಮತಗಳ್ಳತನದ’ ಆರೋಪಗಳಿಗೆ ಚುನಾವಣಾ ಆಯೋಗ ನೀಡಿರುವ ಪ್ರತಿಕ್ರಿಯೆಯನ್ನು ಭಾನುವಾರ ತೀವ್ರವಾಗಿ ಟೀಕಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿ, “ಚುನಾವಣಾ ಆಯೋಗ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ‘ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿ’ ಭಾಷೆಯಲ್ಲಿ ಕಿರುಚಾಡುವ ಬದಲು, ಅವರ ಆರೋಪಗಳ ಕುರಿತು ತನಿಖೆಗೆ ಆದೇಶಿಸಬೇಕಾಗಿತ್ತು ಎಂದು ಹೇಳಿದ್ದಾರೆ.

ಮತಗಳ್ಳತನದ ಕುರಿತು ಹೈಡ್ರೋಜನ್ ಬಾಂಬ್ ಶೀಘ್ರದಲ್ಲೇ ಬರಲಿದೆ ಎಂಬ ರಾಹುಲ್ ಗಾಂಧಿಯ ಹೇಳಿಕೆ, ಅದೊಂದು ‘ರಾಜಕೀಯ ವಾಕ್ಚಾತುರ್ಯ’. ಆದರೆ, ಅವರು ಮಾಡಿರುವ ಆರೋಪಗಳು ಗಂಭೀರವಾದದ್ದು. ಅವುಗಳ ಬಗ್ಗೆ ಸೂಕ್ತವಾದ ತನಿಖೆಯ ನಡೆಯಬೇಕು ಎಂದು ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಖುರೈಶಿ ತಿಳಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ನಡೆಸಿದ ವಿಧಾನದ ಬಗ್ಗೆ ಖುರೈಶಿ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿದ್ದು, ಅದು (ಚು. ಆಯೋಗ) ‘ಪಂಡೋರಾ ಪೆಟ್ಟಿಗೆ’ಯನ್ನು ತೆರೆಯುತ್ತಿದೆ. ಮಾತ್ರವಲ್ಲದೆ, ‘ಕಣಜದ ಗೂಡಿಗೆ’ ಕೈ ಹಾಕಿದೆ. ಈ ಪ್ರಕ್ರಿಯೆ ಅದಕ್ಕೇ (ಚು. ಆಯೋಗಕ್ಕೆ) ಹಾನಿ ಮಾಡಲಿದೆ ಎಂದು ಹೇಳಿದ್ದಾರೆ.

“ಚುನಾವಣಾ ಆಯೋಗವನ್ನು ಟೀಕಿಸುವುದು ನೋಡುವಾಗ ನನಗೆ ತುಂಬಾ ನೋವುಂಟಾಗುತ್ತದೆ. ಏಕೆಂದರೆ, ನಾನೊಬ್ಬ ಭಾರತ ನಾಗರಿಕನಾಗಿ, ಮುಖ್ಯ ಚುನಾವಣಾ ಆಯುಕ್ತನಾಗಿ ಆ ಸಂಸ್ಥೆಯ ಉನ್ನತಿಗಾಗಿ ಒಂದೆರಡು ಇಟ್ಟಿಗೆಗಳನ್ನು ಇಟ್ಟಿದ್ದೇನೆ ಎಂದು ಜಗ್ಗರ್ನಾಟ್ ಬುಕ್ಸ್ ಪ್ರಕಟಿಸಿದ ತಮ್ಮ ಹೊಸ ಪುಸ್ತಕ ‘ಡೆಮಾಕ್ರಸೀಸ್ ಹಾರ್ಟ್‌ಲ್ಯಾಂಡ್’ ಬಿಡುಗಡೆಗೆ ಮುಂಚಿತವಾಗಿ ಖುರೈಶಿ ಪಿಟಿಐಗೆ ತಿಳಿಸಿದ್ದಾರೆ.

“ಚುನಾವಣಾ ಆಯೋಗ ದಾಳಿಗೆ ಒಳಗಾಗುವುದು ಅಥವಾ ಯಾವುದೇ ರೀತಿಯಲ್ಲಿ ದುರ್ಬಲಗೊಂಡಿರುವುದನ್ನು ನೋಡಿದಾಗ ನನಗೆ ಕಳವಳವಾಗುತ್ತದೆ. ಈ ಬಗ್ಗೆ ಆಯೋಗ ಸ್ವತಃ ಆತ್ಮಾವಲೋಕನ ಮಾಡಿಕೊಳ್ಳಬೇಕು. ತನ್ನ ನಿರ್ಧಾರಗಳ ಮೇಲೆ ಪ್ರಭಾವ ಬೀರುವ ಎಲ್ಲಾ ಶಕ್ತಿಗಳು ಮತ್ತು ಒತ್ತಡಗಳನ್ನು ಎದುರಿಸುವುದು ಆಯೋಗದ ಜವಾಬ್ದಾರಿಯಾಗಿದೆ” ಎಂದು 2010 ಮತ್ತು 2012 ರ ನಡುವೆ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಖುರೈಶಿ ಹೇಳಿದ್ದಾರೆ.

“ಆಯೋಗವು ಜನರ ವಿಶ್ವಾಸವನ್ನು ಗೆಲ್ಲಬೇಕು. ವಿರೋಧ ಪಕ್ಷಗಳ ವಿಶ್ವಾಸವೂ ಬೇಕು. ನಾನು ಯಾವಗಲೂ ವಿರೋಧ ಪಕ್ಷಗಳಿಗೆ ಆದ್ಯತೆ ನೀಡುತ್ತಿದ್ದೆ. ಏಕೆಂದರೆ, ಅವರು ದುರ್ಬಲರು. ವಿರೋಧ ಪಕ್ಷವು ಅಧಿಕಾರದಿಂದ ಹೊರಗುಳಿದಿರುವುದರಿಂದ ಅಧಿಕಾರದಲ್ಲಿರುವ ಪಕ್ಷಕ್ಕೆ ಅದರಷ್ಟು ಮುದ್ದು ಅಗತ್ಯವಿಲ್ಲ ಎಂದು ಖುರೈಶಿ ಅಭಿಪ್ರಾಯಪಟ್ಟಿದ್ದಾರೆ.

“ನಾನು ಮುಖ್ಯ ಚುನಾವಣಾ ಆಯುಕ್ತ ಆಗಿದ್ದಾಗ ವಿರೋಧ ಪಕ್ಷಗಳಿಗೆ ಆಯೋಗದ ಬಾಗಿಲು ತೆರೆದಿಡಿ. ಅವರಿಗೆ ತಕ್ಷಣ ಅಪಾಯಿಂಟ್‌ಮೆಂಟ್ ಕೊಡಿ. ಅವರ ಮಾತನ್ನು ಆಲಿಸಿ, ಅವರೊಂದಿಗೆ ಮಾತನಾಡಿ, ಅವರಿಗೆ ಏನಾದರು ಸಣ್ಣ ಸಹಾಯ ಬೇಕಾದರೆ, ಬೇರೆಯವರಿಗೆ ಹಾನಿಯಾಗದಿದ್ದರೆ ಅದನ್ನು ಮಾಡಿ” ಎಂದು ನನ್ನ ಸಿಬ್ಬಂದಿಗೆ ಸೂಚಿಸಿದ್ದೆ” ಎಂದು ಖುರೈಶಿ ಹೇಳಿದ್ದಾರೆ.

ಇಲ್ಲಿ ವಿರೋಧ ಪಕ್ಷಗಳು ಆಗಾಗ ಸುಪ್ರೀಂ ಕೋರ್ಟ್‌ಗೆ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ವಾಸ್ತವವಾಗಿ, 23 ಪಕ್ಷಗಳು ತಮಗೆ ಅಪಾಯಿಂಟ್‌ಮೆಂಟ್ ಸಿಗುತ್ತಿಲ್ಲ ಮತ್ತು ಯಾರೂ ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಹೇಳಬೇಕಾಗಿ ಬಂದಿದೆ. ರಾಹುಲ್ ಗಾಂಧಿಯವರ ಆರೋಪಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಕೇಳುವ ಬದಲು, ಚುನಾವಣಾ ಆಯೋಗ ತನಿಖೆಗೆ ಆದೇಶಿಸಬೇಕಿತ್ತು ಎಂದಿದ್ದಾರೆ.

“ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕ, ಬೀದಿಯಲ್ಲಿ ಹೋಗುವ ವ್ಯಕ್ತಿಯಲ್ಲ. ಅವರ ಆರೋಪಗಳ ಕುರಿತು ಚುನಾವಣಾ ಆಯೋಗ ತನಿಖೆ ನಡೆಸಬೇಕು. ಬದಲಾಗಿ, ಅವರ ವಿರುದ್ದವೇ ಕಿರುಚಾಡುವುದಲ್ಲ. ಚುನಾವಣಾ ಆಯೋಗ ನಡೆದುಕೊಳ್ಳುವ ರೀತಿ ಇದಲ್ಲ” ಎಂದು ಖುರೈಶಿ ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಲಕ್ಷಾಂತರ ಜನರನ್ನು ಪ್ರತಿನಿಧಿಸುತ್ತಿದ್ದಾರೆ. ಅವರು ಲಕ್ಷಾಂತರ ಜನರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ವ್ಯಕ್ತಿಗೆ ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗ ಸೂಚಿಸಿದ ರೀತಿ, ಬಳಸಿದ ಭಾಷೆ ‘ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿಯಾಗಿದೆ’ ಎಂದು ಖುರೈಶಿ ಹೇಳಿದ್ದಾರೆ.

ನೇಪಾಳದ ಪ್ರತಿಭಟನೆಗಳ ಕುರಿತು ವಿಡಿಯೋ: ಕಂಟೆಂಟ್ ಕ್ರಿಯೇಟರ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲಿಸಿದ ಯುಪಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...