Homeಮುಖಪುಟಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ...

ಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ ಚು. ಆಯುಕ್ತ ಎಸ್. ವೈ ಖುರೈಶಿ

- Advertisement -
- Advertisement -

‘ಮತಗಳ್ಳತನದ’ ಆರೋಪಗಳಿಗೆ ಚುನಾವಣಾ ಆಯೋಗ ನೀಡಿರುವ ಪ್ರತಿಕ್ರಿಯೆಯನ್ನು ಭಾನುವಾರ ತೀವ್ರವಾಗಿ ಟೀಕಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿ, “ಚುನಾವಣಾ ಆಯೋಗ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ‘ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿ’ ಭಾಷೆಯಲ್ಲಿ ಕಿರುಚಾಡುವ ಬದಲು, ಅವರ ಆರೋಪಗಳ ಕುರಿತು ತನಿಖೆಗೆ ಆದೇಶಿಸಬೇಕಾಗಿತ್ತು ಎಂದು ಹೇಳಿದ್ದಾರೆ.

ಮತಗಳ್ಳತನದ ಕುರಿತು ಹೈಡ್ರೋಜನ್ ಬಾಂಬ್ ಶೀಘ್ರದಲ್ಲೇ ಬರಲಿದೆ ಎಂಬ ರಾಹುಲ್ ಗಾಂಧಿಯ ಹೇಳಿಕೆ, ಅದೊಂದು ‘ರಾಜಕೀಯ ವಾಕ್ಚಾತುರ್ಯ’. ಆದರೆ, ಅವರು ಮಾಡಿರುವ ಆರೋಪಗಳು ಗಂಭೀರವಾದದ್ದು. ಅವುಗಳ ಬಗ್ಗೆ ಸೂಕ್ತವಾದ ತನಿಖೆಯ ನಡೆಯಬೇಕು ಎಂದು ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಖುರೈಶಿ ತಿಳಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ನಡೆಸಿದ ವಿಧಾನದ ಬಗ್ಗೆ ಖುರೈಶಿ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿದ್ದು, ಅದು (ಚು. ಆಯೋಗ) ‘ಪಂಡೋರಾ ಪೆಟ್ಟಿಗೆ’ಯನ್ನು ತೆರೆಯುತ್ತಿದೆ. ಮಾತ್ರವಲ್ಲದೆ, ‘ಕಣಜದ ಗೂಡಿಗೆ’ ಕೈ ಹಾಕಿದೆ. ಈ ಪ್ರಕ್ರಿಯೆ ಅದಕ್ಕೇ (ಚು. ಆಯೋಗಕ್ಕೆ) ಹಾನಿ ಮಾಡಲಿದೆ ಎಂದು ಹೇಳಿದ್ದಾರೆ.

“ಚುನಾವಣಾ ಆಯೋಗವನ್ನು ಟೀಕಿಸುವುದು ನೋಡುವಾಗ ನನಗೆ ತುಂಬಾ ನೋವುಂಟಾಗುತ್ತದೆ. ಏಕೆಂದರೆ, ನಾನೊಬ್ಬ ಭಾರತ ನಾಗರಿಕನಾಗಿ, ಮುಖ್ಯ ಚುನಾವಣಾ ಆಯುಕ್ತನಾಗಿ ಆ ಸಂಸ್ಥೆಯ ಉನ್ನತಿಗಾಗಿ ಒಂದೆರಡು ಇಟ್ಟಿಗೆಗಳನ್ನು ಇಟ್ಟಿದ್ದೇನೆ ಎಂದು ಜಗ್ಗರ್ನಾಟ್ ಬುಕ್ಸ್ ಪ್ರಕಟಿಸಿದ ತಮ್ಮ ಹೊಸ ಪುಸ್ತಕ ‘ಡೆಮಾಕ್ರಸೀಸ್ ಹಾರ್ಟ್‌ಲ್ಯಾಂಡ್’ ಬಿಡುಗಡೆಗೆ ಮುಂಚಿತವಾಗಿ ಖುರೈಶಿ ಪಿಟಿಐಗೆ ತಿಳಿಸಿದ್ದಾರೆ.

“ಚುನಾವಣಾ ಆಯೋಗ ದಾಳಿಗೆ ಒಳಗಾಗುವುದು ಅಥವಾ ಯಾವುದೇ ರೀತಿಯಲ್ಲಿ ದುರ್ಬಲಗೊಂಡಿರುವುದನ್ನು ನೋಡಿದಾಗ ನನಗೆ ಕಳವಳವಾಗುತ್ತದೆ. ಈ ಬಗ್ಗೆ ಆಯೋಗ ಸ್ವತಃ ಆತ್ಮಾವಲೋಕನ ಮಾಡಿಕೊಳ್ಳಬೇಕು. ತನ್ನ ನಿರ್ಧಾರಗಳ ಮೇಲೆ ಪ್ರಭಾವ ಬೀರುವ ಎಲ್ಲಾ ಶಕ್ತಿಗಳು ಮತ್ತು ಒತ್ತಡಗಳನ್ನು ಎದುರಿಸುವುದು ಆಯೋಗದ ಜವಾಬ್ದಾರಿಯಾಗಿದೆ” ಎಂದು 2010 ಮತ್ತು 2012 ರ ನಡುವೆ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಖುರೈಶಿ ಹೇಳಿದ್ದಾರೆ.

“ಆಯೋಗವು ಜನರ ವಿಶ್ವಾಸವನ್ನು ಗೆಲ್ಲಬೇಕು. ವಿರೋಧ ಪಕ್ಷಗಳ ವಿಶ್ವಾಸವೂ ಬೇಕು. ನಾನು ಯಾವಗಲೂ ವಿರೋಧ ಪಕ್ಷಗಳಿಗೆ ಆದ್ಯತೆ ನೀಡುತ್ತಿದ್ದೆ. ಏಕೆಂದರೆ, ಅವರು ದುರ್ಬಲರು. ವಿರೋಧ ಪಕ್ಷವು ಅಧಿಕಾರದಿಂದ ಹೊರಗುಳಿದಿರುವುದರಿಂದ ಅಧಿಕಾರದಲ್ಲಿರುವ ಪಕ್ಷಕ್ಕೆ ಅದರಷ್ಟು ಮುದ್ದು ಅಗತ್ಯವಿಲ್ಲ ಎಂದು ಖುರೈಶಿ ಅಭಿಪ್ರಾಯಪಟ್ಟಿದ್ದಾರೆ.

“ನಾನು ಮುಖ್ಯ ಚುನಾವಣಾ ಆಯುಕ್ತ ಆಗಿದ್ದಾಗ ವಿರೋಧ ಪಕ್ಷಗಳಿಗೆ ಆಯೋಗದ ಬಾಗಿಲು ತೆರೆದಿಡಿ. ಅವರಿಗೆ ತಕ್ಷಣ ಅಪಾಯಿಂಟ್‌ಮೆಂಟ್ ಕೊಡಿ. ಅವರ ಮಾತನ್ನು ಆಲಿಸಿ, ಅವರೊಂದಿಗೆ ಮಾತನಾಡಿ, ಅವರಿಗೆ ಏನಾದರು ಸಣ್ಣ ಸಹಾಯ ಬೇಕಾದರೆ, ಬೇರೆಯವರಿಗೆ ಹಾನಿಯಾಗದಿದ್ದರೆ ಅದನ್ನು ಮಾಡಿ” ಎಂದು ನನ್ನ ಸಿಬ್ಬಂದಿಗೆ ಸೂಚಿಸಿದ್ದೆ” ಎಂದು ಖುರೈಶಿ ಹೇಳಿದ್ದಾರೆ.

ಇಲ್ಲಿ ವಿರೋಧ ಪಕ್ಷಗಳು ಆಗಾಗ ಸುಪ್ರೀಂ ಕೋರ್ಟ್‌ಗೆ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ವಾಸ್ತವವಾಗಿ, 23 ಪಕ್ಷಗಳು ತಮಗೆ ಅಪಾಯಿಂಟ್‌ಮೆಂಟ್ ಸಿಗುತ್ತಿಲ್ಲ ಮತ್ತು ಯಾರೂ ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಹೇಳಬೇಕಾಗಿ ಬಂದಿದೆ. ರಾಹುಲ್ ಗಾಂಧಿಯವರ ಆರೋಪಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಕೇಳುವ ಬದಲು, ಚುನಾವಣಾ ಆಯೋಗ ತನಿಖೆಗೆ ಆದೇಶಿಸಬೇಕಿತ್ತು ಎಂದಿದ್ದಾರೆ.

“ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕ, ಬೀದಿಯಲ್ಲಿ ಹೋಗುವ ವ್ಯಕ್ತಿಯಲ್ಲ. ಅವರ ಆರೋಪಗಳ ಕುರಿತು ಚುನಾವಣಾ ಆಯೋಗ ತನಿಖೆ ನಡೆಸಬೇಕು. ಬದಲಾಗಿ, ಅವರ ವಿರುದ್ದವೇ ಕಿರುಚಾಡುವುದಲ್ಲ. ಚುನಾವಣಾ ಆಯೋಗ ನಡೆದುಕೊಳ್ಳುವ ರೀತಿ ಇದಲ್ಲ” ಎಂದು ಖುರೈಶಿ ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಲಕ್ಷಾಂತರ ಜನರನ್ನು ಪ್ರತಿನಿಧಿಸುತ್ತಿದ್ದಾರೆ. ಅವರು ಲಕ್ಷಾಂತರ ಜನರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ವ್ಯಕ್ತಿಗೆ ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗ ಸೂಚಿಸಿದ ರೀತಿ, ಬಳಸಿದ ಭಾಷೆ ‘ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿಯಾಗಿದೆ’ ಎಂದು ಖುರೈಶಿ ಹೇಳಿದ್ದಾರೆ.

ನೇಪಾಳದ ಪ್ರತಿಭಟನೆಗಳ ಕುರಿತು ವಿಡಿಯೋ: ಕಂಟೆಂಟ್ ಕ್ರಿಯೇಟರ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲಿಸಿದ ಯುಪಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...