Homeಮುಖಪುಟಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ...

ಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ ಚು. ಆಯುಕ್ತ ಎಸ್. ವೈ ಖುರೈಶಿ

- Advertisement -
- Advertisement -

‘ಮತಗಳ್ಳತನದ’ ಆರೋಪಗಳಿಗೆ ಚುನಾವಣಾ ಆಯೋಗ ನೀಡಿರುವ ಪ್ರತಿಕ್ರಿಯೆಯನ್ನು ಭಾನುವಾರ ತೀವ್ರವಾಗಿ ಟೀಕಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿ, “ಚುನಾವಣಾ ಆಯೋಗ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ‘ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿ’ ಭಾಷೆಯಲ್ಲಿ ಕಿರುಚಾಡುವ ಬದಲು, ಅವರ ಆರೋಪಗಳ ಕುರಿತು ತನಿಖೆಗೆ ಆದೇಶಿಸಬೇಕಾಗಿತ್ತು ಎಂದು ಹೇಳಿದ್ದಾರೆ.

ಮತಗಳ್ಳತನದ ಕುರಿತು ಹೈಡ್ರೋಜನ್ ಬಾಂಬ್ ಶೀಘ್ರದಲ್ಲೇ ಬರಲಿದೆ ಎಂಬ ರಾಹುಲ್ ಗಾಂಧಿಯ ಹೇಳಿಕೆ, ಅದೊಂದು ‘ರಾಜಕೀಯ ವಾಕ್ಚಾತುರ್ಯ’. ಆದರೆ, ಅವರು ಮಾಡಿರುವ ಆರೋಪಗಳು ಗಂಭೀರವಾದದ್ದು. ಅವುಗಳ ಬಗ್ಗೆ ಸೂಕ್ತವಾದ ತನಿಖೆಯ ನಡೆಯಬೇಕು ಎಂದು ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಖುರೈಶಿ ತಿಳಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ನಡೆಸಿದ ವಿಧಾನದ ಬಗ್ಗೆ ಖುರೈಶಿ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿದ್ದು, ಅದು (ಚು. ಆಯೋಗ) ‘ಪಂಡೋರಾ ಪೆಟ್ಟಿಗೆ’ಯನ್ನು ತೆರೆಯುತ್ತಿದೆ. ಮಾತ್ರವಲ್ಲದೆ, ‘ಕಣಜದ ಗೂಡಿಗೆ’ ಕೈ ಹಾಕಿದೆ. ಈ ಪ್ರಕ್ರಿಯೆ ಅದಕ್ಕೇ (ಚು. ಆಯೋಗಕ್ಕೆ) ಹಾನಿ ಮಾಡಲಿದೆ ಎಂದು ಹೇಳಿದ್ದಾರೆ.

“ಚುನಾವಣಾ ಆಯೋಗವನ್ನು ಟೀಕಿಸುವುದು ನೋಡುವಾಗ ನನಗೆ ತುಂಬಾ ನೋವುಂಟಾಗುತ್ತದೆ. ಏಕೆಂದರೆ, ನಾನೊಬ್ಬ ಭಾರತ ನಾಗರಿಕನಾಗಿ, ಮುಖ್ಯ ಚುನಾವಣಾ ಆಯುಕ್ತನಾಗಿ ಆ ಸಂಸ್ಥೆಯ ಉನ್ನತಿಗಾಗಿ ಒಂದೆರಡು ಇಟ್ಟಿಗೆಗಳನ್ನು ಇಟ್ಟಿದ್ದೇನೆ ಎಂದು ಜಗ್ಗರ್ನಾಟ್ ಬುಕ್ಸ್ ಪ್ರಕಟಿಸಿದ ತಮ್ಮ ಹೊಸ ಪುಸ್ತಕ ‘ಡೆಮಾಕ್ರಸೀಸ್ ಹಾರ್ಟ್‌ಲ್ಯಾಂಡ್’ ಬಿಡುಗಡೆಗೆ ಮುಂಚಿತವಾಗಿ ಖುರೈಶಿ ಪಿಟಿಐಗೆ ತಿಳಿಸಿದ್ದಾರೆ.

“ಚುನಾವಣಾ ಆಯೋಗ ದಾಳಿಗೆ ಒಳಗಾಗುವುದು ಅಥವಾ ಯಾವುದೇ ರೀತಿಯಲ್ಲಿ ದುರ್ಬಲಗೊಂಡಿರುವುದನ್ನು ನೋಡಿದಾಗ ನನಗೆ ಕಳವಳವಾಗುತ್ತದೆ. ಈ ಬಗ್ಗೆ ಆಯೋಗ ಸ್ವತಃ ಆತ್ಮಾವಲೋಕನ ಮಾಡಿಕೊಳ್ಳಬೇಕು. ತನ್ನ ನಿರ್ಧಾರಗಳ ಮೇಲೆ ಪ್ರಭಾವ ಬೀರುವ ಎಲ್ಲಾ ಶಕ್ತಿಗಳು ಮತ್ತು ಒತ್ತಡಗಳನ್ನು ಎದುರಿಸುವುದು ಆಯೋಗದ ಜವಾಬ್ದಾರಿಯಾಗಿದೆ” ಎಂದು 2010 ಮತ್ತು 2012 ರ ನಡುವೆ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಖುರೈಶಿ ಹೇಳಿದ್ದಾರೆ.

“ಆಯೋಗವು ಜನರ ವಿಶ್ವಾಸವನ್ನು ಗೆಲ್ಲಬೇಕು. ವಿರೋಧ ಪಕ್ಷಗಳ ವಿಶ್ವಾಸವೂ ಬೇಕು. ನಾನು ಯಾವಗಲೂ ವಿರೋಧ ಪಕ್ಷಗಳಿಗೆ ಆದ್ಯತೆ ನೀಡುತ್ತಿದ್ದೆ. ಏಕೆಂದರೆ, ಅವರು ದುರ್ಬಲರು. ವಿರೋಧ ಪಕ್ಷವು ಅಧಿಕಾರದಿಂದ ಹೊರಗುಳಿದಿರುವುದರಿಂದ ಅಧಿಕಾರದಲ್ಲಿರುವ ಪಕ್ಷಕ್ಕೆ ಅದರಷ್ಟು ಮುದ್ದು ಅಗತ್ಯವಿಲ್ಲ ಎಂದು ಖುರೈಶಿ ಅಭಿಪ್ರಾಯಪಟ್ಟಿದ್ದಾರೆ.

“ನಾನು ಮುಖ್ಯ ಚುನಾವಣಾ ಆಯುಕ್ತ ಆಗಿದ್ದಾಗ ವಿರೋಧ ಪಕ್ಷಗಳಿಗೆ ಆಯೋಗದ ಬಾಗಿಲು ತೆರೆದಿಡಿ. ಅವರಿಗೆ ತಕ್ಷಣ ಅಪಾಯಿಂಟ್‌ಮೆಂಟ್ ಕೊಡಿ. ಅವರ ಮಾತನ್ನು ಆಲಿಸಿ, ಅವರೊಂದಿಗೆ ಮಾತನಾಡಿ, ಅವರಿಗೆ ಏನಾದರು ಸಣ್ಣ ಸಹಾಯ ಬೇಕಾದರೆ, ಬೇರೆಯವರಿಗೆ ಹಾನಿಯಾಗದಿದ್ದರೆ ಅದನ್ನು ಮಾಡಿ” ಎಂದು ನನ್ನ ಸಿಬ್ಬಂದಿಗೆ ಸೂಚಿಸಿದ್ದೆ” ಎಂದು ಖುರೈಶಿ ಹೇಳಿದ್ದಾರೆ.

ಇಲ್ಲಿ ವಿರೋಧ ಪಕ್ಷಗಳು ಆಗಾಗ ಸುಪ್ರೀಂ ಕೋರ್ಟ್‌ಗೆ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ವಾಸ್ತವವಾಗಿ, 23 ಪಕ್ಷಗಳು ತಮಗೆ ಅಪಾಯಿಂಟ್‌ಮೆಂಟ್ ಸಿಗುತ್ತಿಲ್ಲ ಮತ್ತು ಯಾರೂ ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಹೇಳಬೇಕಾಗಿ ಬಂದಿದೆ. ರಾಹುಲ್ ಗಾಂಧಿಯವರ ಆರೋಪಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಕೇಳುವ ಬದಲು, ಚುನಾವಣಾ ಆಯೋಗ ತನಿಖೆಗೆ ಆದೇಶಿಸಬೇಕಿತ್ತು ಎಂದಿದ್ದಾರೆ.

“ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕ, ಬೀದಿಯಲ್ಲಿ ಹೋಗುವ ವ್ಯಕ್ತಿಯಲ್ಲ. ಅವರ ಆರೋಪಗಳ ಕುರಿತು ಚುನಾವಣಾ ಆಯೋಗ ತನಿಖೆ ನಡೆಸಬೇಕು. ಬದಲಾಗಿ, ಅವರ ವಿರುದ್ದವೇ ಕಿರುಚಾಡುವುದಲ್ಲ. ಚುನಾವಣಾ ಆಯೋಗ ನಡೆದುಕೊಳ್ಳುವ ರೀತಿ ಇದಲ್ಲ” ಎಂದು ಖುರೈಶಿ ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಲಕ್ಷಾಂತರ ಜನರನ್ನು ಪ್ರತಿನಿಧಿಸುತ್ತಿದ್ದಾರೆ. ಅವರು ಲಕ್ಷಾಂತರ ಜನರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ವ್ಯಕ್ತಿಗೆ ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗ ಸೂಚಿಸಿದ ರೀತಿ, ಬಳಸಿದ ಭಾಷೆ ‘ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿಯಾಗಿದೆ’ ಎಂದು ಖುರೈಶಿ ಹೇಳಿದ್ದಾರೆ.

ನೇಪಾಳದ ಪ್ರತಿಭಟನೆಗಳ ಕುರಿತು ವಿಡಿಯೋ: ಕಂಟೆಂಟ್ ಕ್ರಿಯೇಟರ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲಿಸಿದ ಯುಪಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...