Homeಮುಖಪುಟಬಿಜೆಪಿಗೆ ಅನುಕೂಲವಾಗಲು ಏಳು ಹಂತಗಳಲ್ಲಿ ಮತದಾನ: ಚುನಾವಣಾ ಆಯೋಗದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

ಬಿಜೆಪಿಗೆ ಅನುಕೂಲವಾಗಲು ಏಳು ಹಂತಗಳಲ್ಲಿ ಮತದಾನ: ಚುನಾವಣಾ ಆಯೋಗದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ರಾಷ್ಟ್ರದ ಸಂಪನ್ಮೂಲಗಳನ್ನು ಬಳಸಿಕೊಂಡು ಬಿಜೆಪಿ ಪರ ವ್ಯಾಪಕ ಪ್ರಚಾರ ನಡೆಸಲು ಅನುವು ಮಾಡಿಕೊಡುವ ಉದ್ದೇಶದಿಂದ ‘ಭಾರತದ ಚುನಾವಣಾ ಆಯೋಗವು ಏಳು ಹಂತಗಳಲ್ಲಿ ಚುನಾವಣೆ’ಗಳನ್ನು ನಡೆಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಮಾಲ್ಡಾದ ಉತ್ತರ ಟಿಎಂಸಿ ಅಭ್ಯರ್ಥಿ ಪ್ರಸೂನ್ ಬ್ಯಾನರ್ಜಿ ಅವರನ್ನು ಬೆಂಬಲಿಸಿ ಮಾಲ್ಡಾ ಜಿಲ್ಲೆಯ ಗಜೋಲ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಏಪ್ರಿಲ್ 19ರಿಂದ ಜೂ.1ರವರೆಗೆ ಚುನಾವಣೆಯನ್ನು ನಿಗದಿಪಡಿಸಲಾಗಿದೆ. ಆದ್ದರಿಂದ ಮೋದಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಪ್ರತಿ ಹಂತಕ್ಕೂ ಮೊದಲು ದೇಶಾದ್ಯಂತ ವಿಶೇಷ ಸಂಚರಿಸಬಹುದು. ಹಿಂದೆ, ಮೇ ತಿಂಗಳೊಳಗೆ ಚುನಾವಣೆಗಳು ಮುಗಿಯುತ್ತಿದ್ದವು ಆದರೆ ಈ ವರ್ಷ ಮೋದಿ ಮಿಲಿಟರಿ ವಿಮಾನಗಳಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಲು ಜೂನ್ 1ರವರೆಗೆ ಅವಕಾಶ ನೀಡಲಾಗಿದೆ.  ಪ್ರತಿಪಕ್ಷಗಳು ಹೆಲಿಕಾಪ್ಟರ್ಗಳು ಸೇರಿದಂತೆ ಸ್ವಂತ ಸಾರಿಗೆ ಸೌಲಭ್ಯಗಳ ಏರ್ಪಾಡನ್ನು ಮಾಡಿಕೊಳ್ಳಬೇಕಾಗಿದೆ. ಆದರೆ ಅವುಗಳನ್ನು ಕೂಡಾ ಬಿಜೆಪಿ ನಾಯಕರು ಮುಂಗಡವಾಗಿ ಕಾದಿರಿಸಿದ್ದಾರೆ. ಹೀಗಾಗಿ ನಮಗೆ ಸ್ಪಲ್ಪ ಅವಕಾಶ ಮಾತ್ರ ದೊರೆತಿದೆ ಎಂದು ಹೇಳಿದ್ದಾರೆ.

ಬಿಸಿಲಿನ ತಾಪದಿಂದ ಜನರು ತುಂಬಾ ತೊಂದರೆಗೀಡಾಗಿದ್ದಾರೆ. ಆದರೆ ಬಿಜೆಪಿ ನಾಯಕರು ಎಲ್ಲಾ ಸೌಲಭ್ಯಗಳೊಂದಿಗೆ ವಿವಿಐಪಿ ಸೌಲಭ್ಯದೊಂದಿಗೆ ಪ್ರಚಾರ ಮಾಡುತ್ತಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಚುನಾವಣೆ ಘೋಷಣೆಯ ನಂತರ ಉಸ್ತುವಾರಿ ಕ್ಯಾಬಿನೆಟ್ ಆಗಿದ್ದರೂ, ಚುನಾವಣಾ ಆಯೋಗವು ಆಡಳಿತ ಯಂತ್ರವನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದ್ದರೂ, ಚುನಾವಣಾ ಸಂಸ್ಥೆಯು ಮೋದಿ ಮತ್ತು ಅವರ ಪಕ್ಷದ ಸಹೋದ್ಯೋಗಿಗಳು ನಿರ್ದೇಶಿಸಿದಂತೆ ನಡೆಯುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿಜೆಪಿ ಮತ್ತು ಕಾಂಗ್ರೆಸ್ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದ ಬ್ಯಾನರ್ಜಿ, 2019ರಲ್ಲಿ ರಾಜ್ಯದಿಂದ ಚುನಾಯಿತರಾಗಿದ್ದರೂ, ಕೇಂದ್ರದಿಂದ MGNREGA ಯೋಜನೆಯ ಹಣವನ್ನು ಬಿಡುಗಡೆ ಮಾಡುವ ಬಗ್ಗೆ ಅಥವಾ ಪಿಎಂ ಆವಾಸ್ ಯೋಜನೆಯಡಿ ಬಡವರಿಗೆ ಮನೆಗಳನ್ನು ನಿರ್ಮಿಸುವ ಬಗ್ಗೆ ಅವರ್ಯಾರೂ ತಲೆಕೆಡಿಸಿಕೊಂಡಿಲ್ಲ. ನಮ್ಮ (ಟಿಎಂಸಿ) ಸಂಸದರು ಕಳೆದ ವರ್ಷ ನವೆಂಬರ್‌ನಲ್ಲಿ MGNREGA ಯೋಜನೆಯ ನಿಧಿ ಬಿಡುಗಡೆಗೆ ಒತ್ತಾಯಿಸಲು ದೆಹಲಿಗೆ ಹೋದಾಗ ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಬಂಧಿಸಲಾಯಿತು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರು ಬಡವರಿಗೆ ಏನು ಮಾಡಿದ್ದಾರೆ? ಮಾಲ್ಡಾದ ಉತ್ತರ ಬಿಜೆಪಿ ಸಂಸದ ಖಗೇನ್ ಮುರ್ಮು ರಾಜ್ಯದ ಜಾಬ್ ಕಾರ್ಡ್ ಹೊಂದಿರುವವರಿಗೆ ಏನು ಮಾಡಿದ್ದಾರೆ? ಸಿಪಿಐ(ಎಂ) ಮತ್ತು ಕಾಂಗ್ರೆಸ್ ರಾಜ್ಯದಲ್ಲಿ ಬಿಜೆಪಿಯನ್ನು ಬಲಪಡಿಸುತ್ತಿವೆ. ಆದ್ದರಿಂದ ಯಾವುದೇ ಟಿಎಂಸಿಯೇತರ ಅಭ್ಯರ್ಥಿಗೆ ಮತ ಹಾಕಬೇಡಿ ಎಂದು ಜನರಿಗೆ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ನಾನು ಇಂಡಿಯಾ ಬ್ಲಾಕ್ ಎಂಬ ಹೆಸರನ್ನು ಹುಟ್ಟು ಹಾಕಿದ್ದೆ. ಆದರೆ ಬಂಗಾಳದಲ್ಲಿ ಇಂಡಿಯಾ ಬ್ಲಾಕ್ ಅಸ್ತಿತ್ವದಲ್ಲಿಲ್ಲ. ಅದು ರಾಜ್ಯದ ಹೊರಗೆ ಅಸ್ತಿತ್ವದಲ್ಲಿದೆ. ನಮ್ಮ ಸಂಸದೆ ಮಹುವಾ ಮೊಯಿತ್ರಾ ಅವರು ಮೋದಿ ಸರ್ಕಾರದ ತಪ್ಪುಗಳನ್ನು ಮತ್ತು ದೊಡ್ಡ ವ್ಯಾಪಾರ ಸಂಸ್ಥೆಗಳಿಗೆ ಅದರ ಸಾಮೀಪ್ಯವನ್ನು ಬಿಚ್ಚಿಟ್ಟಿದ್ದಕ್ಕಾಗಿ ಸಂಸತ್ತಿನಿಂದ ಹೊರಹಾಕಲ್ಪಟ್ಟರು. TMC ಸಂಸದರನ್ನು ಈ ಪ್ರತೀಕಾರದ ಸರ್ಕಾರ ಗುರಿಯಾಗಿಸಿದೆ. ಎನ್‌ಆರ್‌ಸಿಯಿಂದ 19 ಲಕ್ಷ ಬೆಂಗಾಲಿಗಳ ಹೆಸರನ್ನು ಕೈಬಿಟ್ಟ ನಂತರ ಮಮತಾ ಬಾಲಾ ಠಾಕೂರ್ ಮತ್ತು ಡೆರೆಕ್ ಒ’ಬ್ರಿಯಾನ್ ಸೇರಿದಂತೆ ಟಿಎಂಸಿ ಸಂಸದರನ್ನು ಗುವಾಹಟಿ ವಿಮಾನ ನಿಲ್ದಾಣದಿಂದ ಅಸ್ಸಾಂಗೆ ವಾಪಸ್ ಕಳುಹಿಸಲಾಗಿದೆ ಬಿಜೆಪಿ ಸರ್ಕಾರದ ದುಷ್ಕೃತ್ಯಗಳ ವಿರುದ್ಧ ನಮ್ಮ ಸರಕಾರ ಯಾವಾಗಲು ಬಲವಾಗಿ ನಿಲ್ಲಲಿದೆ ಎಂದು ಅವರು ಹೇಳಿದ್ದಾರೆ.

ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲಿ ಮಣಿಪುರದಲ್ಲಿ ಚರ್ಚ್‌ಗಳು, ಮಸೀದಿಗಳು ಮತ್ತು ಇತರ ಪ್ರಾರ್ಥನಾ ಸ್ಥಳಗಳನ್ನು ಧ್ವಂಸಗೊಳಿಸಲಾಯಿತು ಮತ್ತು ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಬೇರೆಡೆ ನೋಡುತ್ತಿದ್ದರೂ, ಸಂತ್ರಸ್ತ ಜನರ ಪರವಾಗಿ ನಿಂತಿರುವುದು ಟಿಎಂಸಿ. ನಾವು ಪೂಜಾ ಸ್ಥಳಗಳನ್ನು ನಿರ್ಮಿಸುವಾಗ ಅವರು ಪೂಜಾ ಸ್ಥಳಗಳನ್ನು ನಾಶಪಡಿಸುತ್ತಾರೆ. ಬಿಜೆಪಿಯವರು ರಾಮ ಮಂದಿರದ ಬಗ್ಗೆ ಹೆಮ್ಮೆಪಡುತ್ತಾರೆ, ಆದರೆ ಕಳೆದ ಹಲವು ವರ್ಷಗಳಿಂದ ಅವರು ಎಷ್ಟು ದೇವಾಲಯಗಳನ್ನು ನಿರ್ಮಿಸಿದ್ದಾರೆ? ದುರ್ಗಾ, ಕಾಳಿ ಮತ್ತು ಜಗನ್ನಾಥ ದೇವಾಲಯಗಳನ್ನು ನಿರ್ಮಿಸಿದ್ದು ಟಿಎಂಸಿ ಎಂದು ಮಮತಾ ಬ್ಯಾನರ್ಜಿ  ಹೇಳಿದ್ದಾರೆ.

ಇದನ್ನು ಓದಿ: ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ತಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...