Homeಮುಖಪುಟಬಿಜೆಪಿಗೆ ಅನುಕೂಲವಾಗಲು ಏಳು ಹಂತಗಳಲ್ಲಿ ಮತದಾನ: ಚುನಾವಣಾ ಆಯೋಗದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

ಬಿಜೆಪಿಗೆ ಅನುಕೂಲವಾಗಲು ಏಳು ಹಂತಗಳಲ್ಲಿ ಮತದಾನ: ಚುನಾವಣಾ ಆಯೋಗದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ರಾಷ್ಟ್ರದ ಸಂಪನ್ಮೂಲಗಳನ್ನು ಬಳಸಿಕೊಂಡು ಬಿಜೆಪಿ ಪರ ವ್ಯಾಪಕ ಪ್ರಚಾರ ನಡೆಸಲು ಅನುವು ಮಾಡಿಕೊಡುವ ಉದ್ದೇಶದಿಂದ ‘ಭಾರತದ ಚುನಾವಣಾ ಆಯೋಗವು ಏಳು ಹಂತಗಳಲ್ಲಿ ಚುನಾವಣೆ’ಗಳನ್ನು ನಡೆಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಮಾಲ್ಡಾದ ಉತ್ತರ ಟಿಎಂಸಿ ಅಭ್ಯರ್ಥಿ ಪ್ರಸೂನ್ ಬ್ಯಾನರ್ಜಿ ಅವರನ್ನು ಬೆಂಬಲಿಸಿ ಮಾಲ್ಡಾ ಜಿಲ್ಲೆಯ ಗಜೋಲ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಏಪ್ರಿಲ್ 19ರಿಂದ ಜೂ.1ರವರೆಗೆ ಚುನಾವಣೆಯನ್ನು ನಿಗದಿಪಡಿಸಲಾಗಿದೆ. ಆದ್ದರಿಂದ ಮೋದಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಪ್ರತಿ ಹಂತಕ್ಕೂ ಮೊದಲು ದೇಶಾದ್ಯಂತ ವಿಶೇಷ ಸಂಚರಿಸಬಹುದು. ಹಿಂದೆ, ಮೇ ತಿಂಗಳೊಳಗೆ ಚುನಾವಣೆಗಳು ಮುಗಿಯುತ್ತಿದ್ದವು ಆದರೆ ಈ ವರ್ಷ ಮೋದಿ ಮಿಲಿಟರಿ ವಿಮಾನಗಳಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಲು ಜೂನ್ 1ರವರೆಗೆ ಅವಕಾಶ ನೀಡಲಾಗಿದೆ.  ಪ್ರತಿಪಕ್ಷಗಳು ಹೆಲಿಕಾಪ್ಟರ್ಗಳು ಸೇರಿದಂತೆ ಸ್ವಂತ ಸಾರಿಗೆ ಸೌಲಭ್ಯಗಳ ಏರ್ಪಾಡನ್ನು ಮಾಡಿಕೊಳ್ಳಬೇಕಾಗಿದೆ. ಆದರೆ ಅವುಗಳನ್ನು ಕೂಡಾ ಬಿಜೆಪಿ ನಾಯಕರು ಮುಂಗಡವಾಗಿ ಕಾದಿರಿಸಿದ್ದಾರೆ. ಹೀಗಾಗಿ ನಮಗೆ ಸ್ಪಲ್ಪ ಅವಕಾಶ ಮಾತ್ರ ದೊರೆತಿದೆ ಎಂದು ಹೇಳಿದ್ದಾರೆ.

ಬಿಸಿಲಿನ ತಾಪದಿಂದ ಜನರು ತುಂಬಾ ತೊಂದರೆಗೀಡಾಗಿದ್ದಾರೆ. ಆದರೆ ಬಿಜೆಪಿ ನಾಯಕರು ಎಲ್ಲಾ ಸೌಲಭ್ಯಗಳೊಂದಿಗೆ ವಿವಿಐಪಿ ಸೌಲಭ್ಯದೊಂದಿಗೆ ಪ್ರಚಾರ ಮಾಡುತ್ತಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಚುನಾವಣೆ ಘೋಷಣೆಯ ನಂತರ ಉಸ್ತುವಾರಿ ಕ್ಯಾಬಿನೆಟ್ ಆಗಿದ್ದರೂ, ಚುನಾವಣಾ ಆಯೋಗವು ಆಡಳಿತ ಯಂತ್ರವನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದ್ದರೂ, ಚುನಾವಣಾ ಸಂಸ್ಥೆಯು ಮೋದಿ ಮತ್ತು ಅವರ ಪಕ್ಷದ ಸಹೋದ್ಯೋಗಿಗಳು ನಿರ್ದೇಶಿಸಿದಂತೆ ನಡೆಯುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿಜೆಪಿ ಮತ್ತು ಕಾಂಗ್ರೆಸ್ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದ ಬ್ಯಾನರ್ಜಿ, 2019ರಲ್ಲಿ ರಾಜ್ಯದಿಂದ ಚುನಾಯಿತರಾಗಿದ್ದರೂ, ಕೇಂದ್ರದಿಂದ MGNREGA ಯೋಜನೆಯ ಹಣವನ್ನು ಬಿಡುಗಡೆ ಮಾಡುವ ಬಗ್ಗೆ ಅಥವಾ ಪಿಎಂ ಆವಾಸ್ ಯೋಜನೆಯಡಿ ಬಡವರಿಗೆ ಮನೆಗಳನ್ನು ನಿರ್ಮಿಸುವ ಬಗ್ಗೆ ಅವರ್ಯಾರೂ ತಲೆಕೆಡಿಸಿಕೊಂಡಿಲ್ಲ. ನಮ್ಮ (ಟಿಎಂಸಿ) ಸಂಸದರು ಕಳೆದ ವರ್ಷ ನವೆಂಬರ್‌ನಲ್ಲಿ MGNREGA ಯೋಜನೆಯ ನಿಧಿ ಬಿಡುಗಡೆಗೆ ಒತ್ತಾಯಿಸಲು ದೆಹಲಿಗೆ ಹೋದಾಗ ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಬಂಧಿಸಲಾಯಿತು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರು ಬಡವರಿಗೆ ಏನು ಮಾಡಿದ್ದಾರೆ? ಮಾಲ್ಡಾದ ಉತ್ತರ ಬಿಜೆಪಿ ಸಂಸದ ಖಗೇನ್ ಮುರ್ಮು ರಾಜ್ಯದ ಜಾಬ್ ಕಾರ್ಡ್ ಹೊಂದಿರುವವರಿಗೆ ಏನು ಮಾಡಿದ್ದಾರೆ? ಸಿಪಿಐ(ಎಂ) ಮತ್ತು ಕಾಂಗ್ರೆಸ್ ರಾಜ್ಯದಲ್ಲಿ ಬಿಜೆಪಿಯನ್ನು ಬಲಪಡಿಸುತ್ತಿವೆ. ಆದ್ದರಿಂದ ಯಾವುದೇ ಟಿಎಂಸಿಯೇತರ ಅಭ್ಯರ್ಥಿಗೆ ಮತ ಹಾಕಬೇಡಿ ಎಂದು ಜನರಿಗೆ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ನಾನು ಇಂಡಿಯಾ ಬ್ಲಾಕ್ ಎಂಬ ಹೆಸರನ್ನು ಹುಟ್ಟು ಹಾಕಿದ್ದೆ. ಆದರೆ ಬಂಗಾಳದಲ್ಲಿ ಇಂಡಿಯಾ ಬ್ಲಾಕ್ ಅಸ್ತಿತ್ವದಲ್ಲಿಲ್ಲ. ಅದು ರಾಜ್ಯದ ಹೊರಗೆ ಅಸ್ತಿತ್ವದಲ್ಲಿದೆ. ನಮ್ಮ ಸಂಸದೆ ಮಹುವಾ ಮೊಯಿತ್ರಾ ಅವರು ಮೋದಿ ಸರ್ಕಾರದ ತಪ್ಪುಗಳನ್ನು ಮತ್ತು ದೊಡ್ಡ ವ್ಯಾಪಾರ ಸಂಸ್ಥೆಗಳಿಗೆ ಅದರ ಸಾಮೀಪ್ಯವನ್ನು ಬಿಚ್ಚಿಟ್ಟಿದ್ದಕ್ಕಾಗಿ ಸಂಸತ್ತಿನಿಂದ ಹೊರಹಾಕಲ್ಪಟ್ಟರು. TMC ಸಂಸದರನ್ನು ಈ ಪ್ರತೀಕಾರದ ಸರ್ಕಾರ ಗುರಿಯಾಗಿಸಿದೆ. ಎನ್‌ಆರ್‌ಸಿಯಿಂದ 19 ಲಕ್ಷ ಬೆಂಗಾಲಿಗಳ ಹೆಸರನ್ನು ಕೈಬಿಟ್ಟ ನಂತರ ಮಮತಾ ಬಾಲಾ ಠಾಕೂರ್ ಮತ್ತು ಡೆರೆಕ್ ಒ’ಬ್ರಿಯಾನ್ ಸೇರಿದಂತೆ ಟಿಎಂಸಿ ಸಂಸದರನ್ನು ಗುವಾಹಟಿ ವಿಮಾನ ನಿಲ್ದಾಣದಿಂದ ಅಸ್ಸಾಂಗೆ ವಾಪಸ್ ಕಳುಹಿಸಲಾಗಿದೆ ಬಿಜೆಪಿ ಸರ್ಕಾರದ ದುಷ್ಕೃತ್ಯಗಳ ವಿರುದ್ಧ ನಮ್ಮ ಸರಕಾರ ಯಾವಾಗಲು ಬಲವಾಗಿ ನಿಲ್ಲಲಿದೆ ಎಂದು ಅವರು ಹೇಳಿದ್ದಾರೆ.

ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲಿ ಮಣಿಪುರದಲ್ಲಿ ಚರ್ಚ್‌ಗಳು, ಮಸೀದಿಗಳು ಮತ್ತು ಇತರ ಪ್ರಾರ್ಥನಾ ಸ್ಥಳಗಳನ್ನು ಧ್ವಂಸಗೊಳಿಸಲಾಯಿತು ಮತ್ತು ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಬೇರೆಡೆ ನೋಡುತ್ತಿದ್ದರೂ, ಸಂತ್ರಸ್ತ ಜನರ ಪರವಾಗಿ ನಿಂತಿರುವುದು ಟಿಎಂಸಿ. ನಾವು ಪೂಜಾ ಸ್ಥಳಗಳನ್ನು ನಿರ್ಮಿಸುವಾಗ ಅವರು ಪೂಜಾ ಸ್ಥಳಗಳನ್ನು ನಾಶಪಡಿಸುತ್ತಾರೆ. ಬಿಜೆಪಿಯವರು ರಾಮ ಮಂದಿರದ ಬಗ್ಗೆ ಹೆಮ್ಮೆಪಡುತ್ತಾರೆ, ಆದರೆ ಕಳೆದ ಹಲವು ವರ್ಷಗಳಿಂದ ಅವರು ಎಷ್ಟು ದೇವಾಲಯಗಳನ್ನು ನಿರ್ಮಿಸಿದ್ದಾರೆ? ದುರ್ಗಾ, ಕಾಳಿ ಮತ್ತು ಜಗನ್ನಾಥ ದೇವಾಲಯಗಳನ್ನು ನಿರ್ಮಿಸಿದ್ದು ಟಿಎಂಸಿ ಎಂದು ಮಮತಾ ಬ್ಯಾನರ್ಜಿ  ಹೇಳಿದ್ದಾರೆ.

ಇದನ್ನು ಓದಿ: ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ತಾಯಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...