Homeಮುಖಪುಟಬಿಜೆಪಿಗೆ ಅನುಕೂಲವಾಗಲು ಏಳು ಹಂತಗಳಲ್ಲಿ ಮತದಾನ: ಚುನಾವಣಾ ಆಯೋಗದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

ಬಿಜೆಪಿಗೆ ಅನುಕೂಲವಾಗಲು ಏಳು ಹಂತಗಳಲ್ಲಿ ಮತದಾನ: ಚುನಾವಣಾ ಆಯೋಗದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ರಾಷ್ಟ್ರದ ಸಂಪನ್ಮೂಲಗಳನ್ನು ಬಳಸಿಕೊಂಡು ಬಿಜೆಪಿ ಪರ ವ್ಯಾಪಕ ಪ್ರಚಾರ ನಡೆಸಲು ಅನುವು ಮಾಡಿಕೊಡುವ ಉದ್ದೇಶದಿಂದ ‘ಭಾರತದ ಚುನಾವಣಾ ಆಯೋಗವು ಏಳು ಹಂತಗಳಲ್ಲಿ ಚುನಾವಣೆ’ಗಳನ್ನು ನಡೆಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಮಾಲ್ಡಾದ ಉತ್ತರ ಟಿಎಂಸಿ ಅಭ್ಯರ್ಥಿ ಪ್ರಸೂನ್ ಬ್ಯಾನರ್ಜಿ ಅವರನ್ನು ಬೆಂಬಲಿಸಿ ಮಾಲ್ಡಾ ಜಿಲ್ಲೆಯ ಗಜೋಲ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಏಪ್ರಿಲ್ 19ರಿಂದ ಜೂ.1ರವರೆಗೆ ಚುನಾವಣೆಯನ್ನು ನಿಗದಿಪಡಿಸಲಾಗಿದೆ. ಆದ್ದರಿಂದ ಮೋದಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಪ್ರತಿ ಹಂತಕ್ಕೂ ಮೊದಲು ದೇಶಾದ್ಯಂತ ವಿಶೇಷ ಸಂಚರಿಸಬಹುದು. ಹಿಂದೆ, ಮೇ ತಿಂಗಳೊಳಗೆ ಚುನಾವಣೆಗಳು ಮುಗಿಯುತ್ತಿದ್ದವು ಆದರೆ ಈ ವರ್ಷ ಮೋದಿ ಮಿಲಿಟರಿ ವಿಮಾನಗಳಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಲು ಜೂನ್ 1ರವರೆಗೆ ಅವಕಾಶ ನೀಡಲಾಗಿದೆ.  ಪ್ರತಿಪಕ್ಷಗಳು ಹೆಲಿಕಾಪ್ಟರ್ಗಳು ಸೇರಿದಂತೆ ಸ್ವಂತ ಸಾರಿಗೆ ಸೌಲಭ್ಯಗಳ ಏರ್ಪಾಡನ್ನು ಮಾಡಿಕೊಳ್ಳಬೇಕಾಗಿದೆ. ಆದರೆ ಅವುಗಳನ್ನು ಕೂಡಾ ಬಿಜೆಪಿ ನಾಯಕರು ಮುಂಗಡವಾಗಿ ಕಾದಿರಿಸಿದ್ದಾರೆ. ಹೀಗಾಗಿ ನಮಗೆ ಸ್ಪಲ್ಪ ಅವಕಾಶ ಮಾತ್ರ ದೊರೆತಿದೆ ಎಂದು ಹೇಳಿದ್ದಾರೆ.

ಬಿಸಿಲಿನ ತಾಪದಿಂದ ಜನರು ತುಂಬಾ ತೊಂದರೆಗೀಡಾಗಿದ್ದಾರೆ. ಆದರೆ ಬಿಜೆಪಿ ನಾಯಕರು ಎಲ್ಲಾ ಸೌಲಭ್ಯಗಳೊಂದಿಗೆ ವಿವಿಐಪಿ ಸೌಲಭ್ಯದೊಂದಿಗೆ ಪ್ರಚಾರ ಮಾಡುತ್ತಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಚುನಾವಣೆ ಘೋಷಣೆಯ ನಂತರ ಉಸ್ತುವಾರಿ ಕ್ಯಾಬಿನೆಟ್ ಆಗಿದ್ದರೂ, ಚುನಾವಣಾ ಆಯೋಗವು ಆಡಳಿತ ಯಂತ್ರವನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದ್ದರೂ, ಚುನಾವಣಾ ಸಂಸ್ಥೆಯು ಮೋದಿ ಮತ್ತು ಅವರ ಪಕ್ಷದ ಸಹೋದ್ಯೋಗಿಗಳು ನಿರ್ದೇಶಿಸಿದಂತೆ ನಡೆಯುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿಜೆಪಿ ಮತ್ತು ಕಾಂಗ್ರೆಸ್ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದ ಬ್ಯಾನರ್ಜಿ, 2019ರಲ್ಲಿ ರಾಜ್ಯದಿಂದ ಚುನಾಯಿತರಾಗಿದ್ದರೂ, ಕೇಂದ್ರದಿಂದ MGNREGA ಯೋಜನೆಯ ಹಣವನ್ನು ಬಿಡುಗಡೆ ಮಾಡುವ ಬಗ್ಗೆ ಅಥವಾ ಪಿಎಂ ಆವಾಸ್ ಯೋಜನೆಯಡಿ ಬಡವರಿಗೆ ಮನೆಗಳನ್ನು ನಿರ್ಮಿಸುವ ಬಗ್ಗೆ ಅವರ್ಯಾರೂ ತಲೆಕೆಡಿಸಿಕೊಂಡಿಲ್ಲ. ನಮ್ಮ (ಟಿಎಂಸಿ) ಸಂಸದರು ಕಳೆದ ವರ್ಷ ನವೆಂಬರ್‌ನಲ್ಲಿ MGNREGA ಯೋಜನೆಯ ನಿಧಿ ಬಿಡುಗಡೆಗೆ ಒತ್ತಾಯಿಸಲು ದೆಹಲಿಗೆ ಹೋದಾಗ ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಬಂಧಿಸಲಾಯಿತು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರು ಬಡವರಿಗೆ ಏನು ಮಾಡಿದ್ದಾರೆ? ಮಾಲ್ಡಾದ ಉತ್ತರ ಬಿಜೆಪಿ ಸಂಸದ ಖಗೇನ್ ಮುರ್ಮು ರಾಜ್ಯದ ಜಾಬ್ ಕಾರ್ಡ್ ಹೊಂದಿರುವವರಿಗೆ ಏನು ಮಾಡಿದ್ದಾರೆ? ಸಿಪಿಐ(ಎಂ) ಮತ್ತು ಕಾಂಗ್ರೆಸ್ ರಾಜ್ಯದಲ್ಲಿ ಬಿಜೆಪಿಯನ್ನು ಬಲಪಡಿಸುತ್ತಿವೆ. ಆದ್ದರಿಂದ ಯಾವುದೇ ಟಿಎಂಸಿಯೇತರ ಅಭ್ಯರ್ಥಿಗೆ ಮತ ಹಾಕಬೇಡಿ ಎಂದು ಜನರಿಗೆ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ನಾನು ಇಂಡಿಯಾ ಬ್ಲಾಕ್ ಎಂಬ ಹೆಸರನ್ನು ಹುಟ್ಟು ಹಾಕಿದ್ದೆ. ಆದರೆ ಬಂಗಾಳದಲ್ಲಿ ಇಂಡಿಯಾ ಬ್ಲಾಕ್ ಅಸ್ತಿತ್ವದಲ್ಲಿಲ್ಲ. ಅದು ರಾಜ್ಯದ ಹೊರಗೆ ಅಸ್ತಿತ್ವದಲ್ಲಿದೆ. ನಮ್ಮ ಸಂಸದೆ ಮಹುವಾ ಮೊಯಿತ್ರಾ ಅವರು ಮೋದಿ ಸರ್ಕಾರದ ತಪ್ಪುಗಳನ್ನು ಮತ್ತು ದೊಡ್ಡ ವ್ಯಾಪಾರ ಸಂಸ್ಥೆಗಳಿಗೆ ಅದರ ಸಾಮೀಪ್ಯವನ್ನು ಬಿಚ್ಚಿಟ್ಟಿದ್ದಕ್ಕಾಗಿ ಸಂಸತ್ತಿನಿಂದ ಹೊರಹಾಕಲ್ಪಟ್ಟರು. TMC ಸಂಸದರನ್ನು ಈ ಪ್ರತೀಕಾರದ ಸರ್ಕಾರ ಗುರಿಯಾಗಿಸಿದೆ. ಎನ್‌ಆರ್‌ಸಿಯಿಂದ 19 ಲಕ್ಷ ಬೆಂಗಾಲಿಗಳ ಹೆಸರನ್ನು ಕೈಬಿಟ್ಟ ನಂತರ ಮಮತಾ ಬಾಲಾ ಠಾಕೂರ್ ಮತ್ತು ಡೆರೆಕ್ ಒ’ಬ್ರಿಯಾನ್ ಸೇರಿದಂತೆ ಟಿಎಂಸಿ ಸಂಸದರನ್ನು ಗುವಾಹಟಿ ವಿಮಾನ ನಿಲ್ದಾಣದಿಂದ ಅಸ್ಸಾಂಗೆ ವಾಪಸ್ ಕಳುಹಿಸಲಾಗಿದೆ ಬಿಜೆಪಿ ಸರ್ಕಾರದ ದುಷ್ಕೃತ್ಯಗಳ ವಿರುದ್ಧ ನಮ್ಮ ಸರಕಾರ ಯಾವಾಗಲು ಬಲವಾಗಿ ನಿಲ್ಲಲಿದೆ ಎಂದು ಅವರು ಹೇಳಿದ್ದಾರೆ.

ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲಿ ಮಣಿಪುರದಲ್ಲಿ ಚರ್ಚ್‌ಗಳು, ಮಸೀದಿಗಳು ಮತ್ತು ಇತರ ಪ್ರಾರ್ಥನಾ ಸ್ಥಳಗಳನ್ನು ಧ್ವಂಸಗೊಳಿಸಲಾಯಿತು ಮತ್ತು ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಬೇರೆಡೆ ನೋಡುತ್ತಿದ್ದರೂ, ಸಂತ್ರಸ್ತ ಜನರ ಪರವಾಗಿ ನಿಂತಿರುವುದು ಟಿಎಂಸಿ. ನಾವು ಪೂಜಾ ಸ್ಥಳಗಳನ್ನು ನಿರ್ಮಿಸುವಾಗ ಅವರು ಪೂಜಾ ಸ್ಥಳಗಳನ್ನು ನಾಶಪಡಿಸುತ್ತಾರೆ. ಬಿಜೆಪಿಯವರು ರಾಮ ಮಂದಿರದ ಬಗ್ಗೆ ಹೆಮ್ಮೆಪಡುತ್ತಾರೆ, ಆದರೆ ಕಳೆದ ಹಲವು ವರ್ಷಗಳಿಂದ ಅವರು ಎಷ್ಟು ದೇವಾಲಯಗಳನ್ನು ನಿರ್ಮಿಸಿದ್ದಾರೆ? ದುರ್ಗಾ, ಕಾಳಿ ಮತ್ತು ಜಗನ್ನಾಥ ದೇವಾಲಯಗಳನ್ನು ನಿರ್ಮಿಸಿದ್ದು ಟಿಎಂಸಿ ಎಂದು ಮಮತಾ ಬ್ಯಾನರ್ಜಿ  ಹೇಳಿದ್ದಾರೆ.

ಇದನ್ನು ಓದಿ: ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ತಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...