Homeಮುಖಪುಟ334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

- Advertisement -
- Advertisement -

ನೋಂದಣಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಥವಾ ಶಾಸನಬದ್ಧ ಬಾಧ್ಯತೆಗಳನ್ನು ಪೂರೈಸದ ಕಾರಣಕ್ಕಾಗಿ ಚುನಾವಣಾ ಆಯೋಗವು ಶನಿವಾರ (ಆ.9) 334 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು (ಆರ್‌ಯುಪಿಪಿ) ಪಟ್ಟಿಯಿಂದ ತೆಗೆದುಹಾಕಿದೆ.

ತನ್ನ ಕ್ರಮ ‘ರಾಜಕೀಯ ಕ್ಷೇತ್ರವನ್ನು ಶುದ್ಧೀಕರಿಸುವ ಸಮಗ್ರ ಮತ್ತು ನಿರಂತರ ಕಾರ್ಯತಂತ್ರದ ಒಂದು ಭಾಗ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಇತ್ತೀಚಿನ ಶುದ್ದೀಕರಣದ ಬಳಿಕ ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಸಂಖ್ಯೆ 2,854 ರಿಂದ 2,520ಕ್ಕೆ ಇಳಿದಿದೆ ಎಂದು ವರದಿಗಳು ಹೇಳಿವೆ.

ಪಟ್ಟಿಯಿಂದ ತೆಗೆದುಹಾಕಲಾದ ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳಿಗೆ ಇನ್ನು ಮುಂದೆ ಜನತಾ ಪ್ರಾತಿನಿಧ್ಯ ಕಾಯ್ದೆ, 1951ರ ಸೆಕ್ಷನ್ 29B ಮತ್ತು ಸೆಕ್ಷನ್ 29C,ಆದಾಯ ತೆರಿಗೆ ಕಾಯ್ದೆ, 1961ರ ಸಂಬಂಧಿತ ನಿಬಂಧನೆಗಳು ಮತ್ತು ಚುನಾವಣಾ ಚಿಹ್ನೆಗಳು (ಮೀಸಲಾತಿ ಮತ್ತು ಹಂಚಿಕೆ) ಆದೇಶ, 1968ರ ಅಡಿಯಲ್ಲಿ ಆದಾಯ ತೆರಿಗೆ ರಿಯಾಯಿತಿಗಳು ದೊರೆಯುವುದಿಲ್ಲ.

ಮಾರ್ಗಸೂಚಿಗಳ ಪ್ರಕಾರ, ಒಂದು ಪಕ್ಷವು ಆರು ವರ್ಷಗಳ ಕಾಲ ನಿರಂತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೆ, ಅದನ್ನು ನೋಂದಾಯಿತ ಪಕ್ಷಗಳ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.

ಚುನಾವಣಾ ಆಯೋಗ ತನ್ನ ಮಾರ್ಗಸೂಚಿಗಳು ಮತ್ತು ಜನ ಪ್ರತಿನಿಧಿಗಳ ಕಾಯ್ದೆಯಡಿಯಲ್ಲಿ ಸೂಚಿಸಲಾದ ಮೇಲಿನ ಷರತ್ತುಗಳ ಅನುಸರಣೆಗೆ ಸಂಬಂಧಿಸಿದಂತೆ 345 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಪರಿಶೀಲನಾ ವಿಚಾರಣೆಗಳನ್ನು ನಡೆಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ (ಸಿಇಒ) ನಿರ್ದೇಶನ ನೀಡಿತ್ತು.

ಸಿಇಒಗಳ ವರದಿಗಳ ಆಧಾರದ ಮೇಲೆ, 345 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಪೈಕಿ 334 ಪಕ್ಷಗಳು ಮೇಲಿನ ಷರತ್ತುಗಳನ್ನು ಪಾಲಿಸುತ್ತಿಲ್ಲ ಎಂದು ಕಂಡುಬಂದಿದೆ. ಉಳಿದ ಪ್ರಕರಣಗಳನ್ನು ಮರುಪರಿಶೀಲನೆಗಾಗಿ ಸಿಇಒಗಳಿಗೆ ಹಿಂತಿರುಗಿಸಲಾಗಿದೆ” ಎಂದು ಚುನಾವಣಾ ಆಯೋಗ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎನ್ನುವ ಷರತ್ತನ್ನು ಪಟ್ಟಿಯಿಂದ ಕೈಬಿಟ್ಟ ಪಕ್ಷಗಳು ಪಾಲಿಸಿಲ್ಲ. 2019ರಿಂದ ಇದುವರೆಗಿನ ಆರು ವರ್ಷಗಳ ಅವಧಿಯಲ್ಲಿ ಈ ಪಕ್ಷಗಳು ಒಂದೇ ಒಂದು ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಮತ್ತು ನೋಂದಾಯಿಸಿಕೊಂಡಿರುವ ವಿಳಾಸದಲ್ಲಿಯೂ ಈ ಪಕ್ಷಗಳ ಕಚೇರಿಯೂ ಪತ್ತೆಯಾಗಿಲ್ಲ ಎಂದು ಆಯೋಗ ಹೇಳಿದೆ.

ಉತ್ತರ ಪ್ರದೇಶದಲ್ಲಿನ 115 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ದೆಹಲಿ 27, ತಮಿಳುನಾಡು 22, ಹರಿಯಾಣ 21, ಮಧ್ಯಪ್ರದೇಶ 15, ತೆಲಂಗಾಣ 13 ಹಾಗೂ ಗುಜರಾತ್‌ನ 11 ಪಕ್ಷಗಳನ್ನು ಆಯೋಗವು ಪಟ್ಟಿಯಿಂದ ಕೈಬಿಟ್ಟಿದೆ ಎಂದು ವರದಿಯಾಗಿದೆ.

ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲೂ ಭಾರತೀಯ ಹಿಂದುಳಿದ ಪಕ್ಷ, ಬಿಹಾರ ಜನತಾ ಪಕ್ಷ ಮತ್ತು ಗಾಂಧಿ ಪ್ರಕಾಶ್‌ ಪಕ್ಷ ಸೇರಿದಂತೆ 17 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.

2022ರಲ್ಲಿ ನಡೆದ ಪರಿಷ್ಕರಣೆಯಲ್ಲಿ 537 ಪಕ್ಷಗಳ ಪೈಕಿ 284 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿತ್ತು.

ಪಟ್ಟಿಯಿಂದ ಕೈಬಿಟ್ಟ ಪಕ್ಷಗಳ ಪೈಕಿ ಕರ್ನಾಟಕದ 12 ಪಕ್ಷಗಳಿವೆ ಎಂದು ವರದಿಯಾಗಿದೆ.

ಅಂಬೇಡ್ಕರ್‌ ಜನತಾ ಪಕ್ಷ, ಭಾರತೀಯ ಪ್ರಜಾ ಪಕ್ಷ, ಜನ ಸ್ವರಾಜ್ಯ ಪಕ್ಷ,ಕಲ್ಯಾಣ ಕ್ರಾಂತಿ ಪಕ್ಷ,
ಕರ್ನಾಟಕ ಪ್ರಜಾ ವಿಕಾಸ್‌ ಪಕ್ಷ, ಕರ್ನಾಟಕ ಸ್ವರಾಜ್ಯ ಪಕ್ಷ, ಮಹಿಳಾ ಪ್ರಧಾನ ಪಕ್ಷ, ನಮ್ಮ ಕಾಂಗ್ರೆಸ್‌
ಪ್ರಜಾ ರೈತ ರಾಜ್ಯ ಪಕ್ಷ, ರಕ್ಷಕ ಸೇನಾ ಸಮನ್ಯಾ ಜನತಾ ಪಕ್ಷ (ಲೋಕ ತಾಂತ್ರಿಕ್‌) ಮತ್ತು ವಿಚಾರ ಜಾಗೃತಿ ಕಾಂಗ್ರೆಸ್‌ ಪಕ್ಷ ಪಟ್ಟಿಯಿಂದ ಕೈಬಿಟ್ಟ ಕರ್ನಾಟಕದ ಪಕ್ಷಗಳು ಎಂದು ತಿಳಿದು ಬಂದಿದೆ.

ಉತ್ತರಾಖಂಡ  ಮೇಘಸ್ಫೋಟಕ್ಕೆ ಧಾರ್ಮಿಕ ಅಸಹಿಷ್ಣುತೆಯೇ ಕಾರಣ?: ಮಾಜಿ ಸಂಸದ ಹಸನ್ ಹೇಳಿಕೆಗೆ ಭಾರಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...