Homeಮುಖಪುಟ334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

- Advertisement -
- Advertisement -

ನೋಂದಣಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಥವಾ ಶಾಸನಬದ್ಧ ಬಾಧ್ಯತೆಗಳನ್ನು ಪೂರೈಸದ ಕಾರಣಕ್ಕಾಗಿ ಚುನಾವಣಾ ಆಯೋಗವು ಶನಿವಾರ (ಆ.9) 334 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು (ಆರ್‌ಯುಪಿಪಿ) ಪಟ್ಟಿಯಿಂದ ತೆಗೆದುಹಾಕಿದೆ.

ತನ್ನ ಕ್ರಮ ‘ರಾಜಕೀಯ ಕ್ಷೇತ್ರವನ್ನು ಶುದ್ಧೀಕರಿಸುವ ಸಮಗ್ರ ಮತ್ತು ನಿರಂತರ ಕಾರ್ಯತಂತ್ರದ ಒಂದು ಭಾಗ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಇತ್ತೀಚಿನ ಶುದ್ದೀಕರಣದ ಬಳಿಕ ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಸಂಖ್ಯೆ 2,854 ರಿಂದ 2,520ಕ್ಕೆ ಇಳಿದಿದೆ ಎಂದು ವರದಿಗಳು ಹೇಳಿವೆ.

ಪಟ್ಟಿಯಿಂದ ತೆಗೆದುಹಾಕಲಾದ ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳಿಗೆ ಇನ್ನು ಮುಂದೆ ಜನತಾ ಪ್ರಾತಿನಿಧ್ಯ ಕಾಯ್ದೆ, 1951ರ ಸೆಕ್ಷನ್ 29B ಮತ್ತು ಸೆಕ್ಷನ್ 29C,ಆದಾಯ ತೆರಿಗೆ ಕಾಯ್ದೆ, 1961ರ ಸಂಬಂಧಿತ ನಿಬಂಧನೆಗಳು ಮತ್ತು ಚುನಾವಣಾ ಚಿಹ್ನೆಗಳು (ಮೀಸಲಾತಿ ಮತ್ತು ಹಂಚಿಕೆ) ಆದೇಶ, 1968ರ ಅಡಿಯಲ್ಲಿ ಆದಾಯ ತೆರಿಗೆ ರಿಯಾಯಿತಿಗಳು ದೊರೆಯುವುದಿಲ್ಲ.

ಮಾರ್ಗಸೂಚಿಗಳ ಪ್ರಕಾರ, ಒಂದು ಪಕ್ಷವು ಆರು ವರ್ಷಗಳ ಕಾಲ ನಿರಂತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೆ, ಅದನ್ನು ನೋಂದಾಯಿತ ಪಕ್ಷಗಳ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.

ಚುನಾವಣಾ ಆಯೋಗ ತನ್ನ ಮಾರ್ಗಸೂಚಿಗಳು ಮತ್ತು ಜನ ಪ್ರತಿನಿಧಿಗಳ ಕಾಯ್ದೆಯಡಿಯಲ್ಲಿ ಸೂಚಿಸಲಾದ ಮೇಲಿನ ಷರತ್ತುಗಳ ಅನುಸರಣೆಗೆ ಸಂಬಂಧಿಸಿದಂತೆ 345 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಪರಿಶೀಲನಾ ವಿಚಾರಣೆಗಳನ್ನು ನಡೆಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ (ಸಿಇಒ) ನಿರ್ದೇಶನ ನೀಡಿತ್ತು.

ಸಿಇಒಗಳ ವರದಿಗಳ ಆಧಾರದ ಮೇಲೆ, 345 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಪೈಕಿ 334 ಪಕ್ಷಗಳು ಮೇಲಿನ ಷರತ್ತುಗಳನ್ನು ಪಾಲಿಸುತ್ತಿಲ್ಲ ಎಂದು ಕಂಡುಬಂದಿದೆ. ಉಳಿದ ಪ್ರಕರಣಗಳನ್ನು ಮರುಪರಿಶೀಲನೆಗಾಗಿ ಸಿಇಒಗಳಿಗೆ ಹಿಂತಿರುಗಿಸಲಾಗಿದೆ” ಎಂದು ಚುನಾವಣಾ ಆಯೋಗ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎನ್ನುವ ಷರತ್ತನ್ನು ಪಟ್ಟಿಯಿಂದ ಕೈಬಿಟ್ಟ ಪಕ್ಷಗಳು ಪಾಲಿಸಿಲ್ಲ. 2019ರಿಂದ ಇದುವರೆಗಿನ ಆರು ವರ್ಷಗಳ ಅವಧಿಯಲ್ಲಿ ಈ ಪಕ್ಷಗಳು ಒಂದೇ ಒಂದು ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಮತ್ತು ನೋಂದಾಯಿಸಿಕೊಂಡಿರುವ ವಿಳಾಸದಲ್ಲಿಯೂ ಈ ಪಕ್ಷಗಳ ಕಚೇರಿಯೂ ಪತ್ತೆಯಾಗಿಲ್ಲ ಎಂದು ಆಯೋಗ ಹೇಳಿದೆ.

ಉತ್ತರ ಪ್ರದೇಶದಲ್ಲಿನ 115 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ದೆಹಲಿ 27, ತಮಿಳುನಾಡು 22, ಹರಿಯಾಣ 21, ಮಧ್ಯಪ್ರದೇಶ 15, ತೆಲಂಗಾಣ 13 ಹಾಗೂ ಗುಜರಾತ್‌ನ 11 ಪಕ್ಷಗಳನ್ನು ಆಯೋಗವು ಪಟ್ಟಿಯಿಂದ ಕೈಬಿಟ್ಟಿದೆ ಎಂದು ವರದಿಯಾಗಿದೆ.

ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲೂ ಭಾರತೀಯ ಹಿಂದುಳಿದ ಪಕ್ಷ, ಬಿಹಾರ ಜನತಾ ಪಕ್ಷ ಮತ್ತು ಗಾಂಧಿ ಪ್ರಕಾಶ್‌ ಪಕ್ಷ ಸೇರಿದಂತೆ 17 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.

2022ರಲ್ಲಿ ನಡೆದ ಪರಿಷ್ಕರಣೆಯಲ್ಲಿ 537 ಪಕ್ಷಗಳ ಪೈಕಿ 284 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿತ್ತು.

ಪಟ್ಟಿಯಿಂದ ಕೈಬಿಟ್ಟ ಪಕ್ಷಗಳ ಪೈಕಿ ಕರ್ನಾಟಕದ 12 ಪಕ್ಷಗಳಿವೆ ಎಂದು ವರದಿಯಾಗಿದೆ.

ಅಂಬೇಡ್ಕರ್‌ ಜನತಾ ಪಕ್ಷ, ಭಾರತೀಯ ಪ್ರಜಾ ಪಕ್ಷ, ಜನ ಸ್ವರಾಜ್ಯ ಪಕ್ಷ,ಕಲ್ಯಾಣ ಕ್ರಾಂತಿ ಪಕ್ಷ,
ಕರ್ನಾಟಕ ಪ್ರಜಾ ವಿಕಾಸ್‌ ಪಕ್ಷ, ಕರ್ನಾಟಕ ಸ್ವರಾಜ್ಯ ಪಕ್ಷ, ಮಹಿಳಾ ಪ್ರಧಾನ ಪಕ್ಷ, ನಮ್ಮ ಕಾಂಗ್ರೆಸ್‌
ಪ್ರಜಾ ರೈತ ರಾಜ್ಯ ಪಕ್ಷ, ರಕ್ಷಕ ಸೇನಾ ಸಮನ್ಯಾ ಜನತಾ ಪಕ್ಷ (ಲೋಕ ತಾಂತ್ರಿಕ್‌) ಮತ್ತು ವಿಚಾರ ಜಾಗೃತಿ ಕಾಂಗ್ರೆಸ್‌ ಪಕ್ಷ ಪಟ್ಟಿಯಿಂದ ಕೈಬಿಟ್ಟ ಕರ್ನಾಟಕದ ಪಕ್ಷಗಳು ಎಂದು ತಿಳಿದು ಬಂದಿದೆ.

ಉತ್ತರಾಖಂಡ  ಮೇಘಸ್ಫೋಟಕ್ಕೆ ಧಾರ್ಮಿಕ ಅಸಹಿಷ್ಣುತೆಯೇ ಕಾರಣ?: ಮಾಜಿ ಸಂಸದ ಹಸನ್ ಹೇಳಿಕೆಗೆ ಭಾರಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...