Homeಮುಖಪುಟ334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

- Advertisement -
- Advertisement -

ನೋಂದಣಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಥವಾ ಶಾಸನಬದ್ಧ ಬಾಧ್ಯತೆಗಳನ್ನು ಪೂರೈಸದ ಕಾರಣಕ್ಕಾಗಿ ಚುನಾವಣಾ ಆಯೋಗವು ಶನಿವಾರ (ಆ.9) 334 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು (ಆರ್‌ಯುಪಿಪಿ) ಪಟ್ಟಿಯಿಂದ ತೆಗೆದುಹಾಕಿದೆ.

ತನ್ನ ಕ್ರಮ ‘ರಾಜಕೀಯ ಕ್ಷೇತ್ರವನ್ನು ಶುದ್ಧೀಕರಿಸುವ ಸಮಗ್ರ ಮತ್ತು ನಿರಂತರ ಕಾರ್ಯತಂತ್ರದ ಒಂದು ಭಾಗ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಇತ್ತೀಚಿನ ಶುದ್ದೀಕರಣದ ಬಳಿಕ ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಸಂಖ್ಯೆ 2,854 ರಿಂದ 2,520ಕ್ಕೆ ಇಳಿದಿದೆ ಎಂದು ವರದಿಗಳು ಹೇಳಿವೆ.

ಪಟ್ಟಿಯಿಂದ ತೆಗೆದುಹಾಕಲಾದ ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳಿಗೆ ಇನ್ನು ಮುಂದೆ ಜನತಾ ಪ್ರಾತಿನಿಧ್ಯ ಕಾಯ್ದೆ, 1951ರ ಸೆಕ್ಷನ್ 29B ಮತ್ತು ಸೆಕ್ಷನ್ 29C,ಆದಾಯ ತೆರಿಗೆ ಕಾಯ್ದೆ, 1961ರ ಸಂಬಂಧಿತ ನಿಬಂಧನೆಗಳು ಮತ್ತು ಚುನಾವಣಾ ಚಿಹ್ನೆಗಳು (ಮೀಸಲಾತಿ ಮತ್ತು ಹಂಚಿಕೆ) ಆದೇಶ, 1968ರ ಅಡಿಯಲ್ಲಿ ಆದಾಯ ತೆರಿಗೆ ರಿಯಾಯಿತಿಗಳು ದೊರೆಯುವುದಿಲ್ಲ.

ಮಾರ್ಗಸೂಚಿಗಳ ಪ್ರಕಾರ, ಒಂದು ಪಕ್ಷವು ಆರು ವರ್ಷಗಳ ಕಾಲ ನಿರಂತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೆ, ಅದನ್ನು ನೋಂದಾಯಿತ ಪಕ್ಷಗಳ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.

ಚುನಾವಣಾ ಆಯೋಗ ತನ್ನ ಮಾರ್ಗಸೂಚಿಗಳು ಮತ್ತು ಜನ ಪ್ರತಿನಿಧಿಗಳ ಕಾಯ್ದೆಯಡಿಯಲ್ಲಿ ಸೂಚಿಸಲಾದ ಮೇಲಿನ ಷರತ್ತುಗಳ ಅನುಸರಣೆಗೆ ಸಂಬಂಧಿಸಿದಂತೆ 345 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಪರಿಶೀಲನಾ ವಿಚಾರಣೆಗಳನ್ನು ನಡೆಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ (ಸಿಇಒ) ನಿರ್ದೇಶನ ನೀಡಿತ್ತು.

ಸಿಇಒಗಳ ವರದಿಗಳ ಆಧಾರದ ಮೇಲೆ, 345 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಪೈಕಿ 334 ಪಕ್ಷಗಳು ಮೇಲಿನ ಷರತ್ತುಗಳನ್ನು ಪಾಲಿಸುತ್ತಿಲ್ಲ ಎಂದು ಕಂಡುಬಂದಿದೆ. ಉಳಿದ ಪ್ರಕರಣಗಳನ್ನು ಮರುಪರಿಶೀಲನೆಗಾಗಿ ಸಿಇಒಗಳಿಗೆ ಹಿಂತಿರುಗಿಸಲಾಗಿದೆ” ಎಂದು ಚುನಾವಣಾ ಆಯೋಗ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎನ್ನುವ ಷರತ್ತನ್ನು ಪಟ್ಟಿಯಿಂದ ಕೈಬಿಟ್ಟ ಪಕ್ಷಗಳು ಪಾಲಿಸಿಲ್ಲ. 2019ರಿಂದ ಇದುವರೆಗಿನ ಆರು ವರ್ಷಗಳ ಅವಧಿಯಲ್ಲಿ ಈ ಪಕ್ಷಗಳು ಒಂದೇ ಒಂದು ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಮತ್ತು ನೋಂದಾಯಿಸಿಕೊಂಡಿರುವ ವಿಳಾಸದಲ್ಲಿಯೂ ಈ ಪಕ್ಷಗಳ ಕಚೇರಿಯೂ ಪತ್ತೆಯಾಗಿಲ್ಲ ಎಂದು ಆಯೋಗ ಹೇಳಿದೆ.

ಉತ್ತರ ಪ್ರದೇಶದಲ್ಲಿನ 115 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ದೆಹಲಿ 27, ತಮಿಳುನಾಡು 22, ಹರಿಯಾಣ 21, ಮಧ್ಯಪ್ರದೇಶ 15, ತೆಲಂಗಾಣ 13 ಹಾಗೂ ಗುಜರಾತ್‌ನ 11 ಪಕ್ಷಗಳನ್ನು ಆಯೋಗವು ಪಟ್ಟಿಯಿಂದ ಕೈಬಿಟ್ಟಿದೆ ಎಂದು ವರದಿಯಾಗಿದೆ.

ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲೂ ಭಾರತೀಯ ಹಿಂದುಳಿದ ಪಕ್ಷ, ಬಿಹಾರ ಜನತಾ ಪಕ್ಷ ಮತ್ತು ಗಾಂಧಿ ಪ್ರಕಾಶ್‌ ಪಕ್ಷ ಸೇರಿದಂತೆ 17 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.

2022ರಲ್ಲಿ ನಡೆದ ಪರಿಷ್ಕರಣೆಯಲ್ಲಿ 537 ಪಕ್ಷಗಳ ಪೈಕಿ 284 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿತ್ತು.

ಪಟ್ಟಿಯಿಂದ ಕೈಬಿಟ್ಟ ಪಕ್ಷಗಳ ಪೈಕಿ ಕರ್ನಾಟಕದ 12 ಪಕ್ಷಗಳಿವೆ ಎಂದು ವರದಿಯಾಗಿದೆ.

ಅಂಬೇಡ್ಕರ್‌ ಜನತಾ ಪಕ್ಷ, ಭಾರತೀಯ ಪ್ರಜಾ ಪಕ್ಷ, ಜನ ಸ್ವರಾಜ್ಯ ಪಕ್ಷ,ಕಲ್ಯಾಣ ಕ್ರಾಂತಿ ಪಕ್ಷ,
ಕರ್ನಾಟಕ ಪ್ರಜಾ ವಿಕಾಸ್‌ ಪಕ್ಷ, ಕರ್ನಾಟಕ ಸ್ವರಾಜ್ಯ ಪಕ್ಷ, ಮಹಿಳಾ ಪ್ರಧಾನ ಪಕ್ಷ, ನಮ್ಮ ಕಾಂಗ್ರೆಸ್‌
ಪ್ರಜಾ ರೈತ ರಾಜ್ಯ ಪಕ್ಷ, ರಕ್ಷಕ ಸೇನಾ ಸಮನ್ಯಾ ಜನತಾ ಪಕ್ಷ (ಲೋಕ ತಾಂತ್ರಿಕ್‌) ಮತ್ತು ವಿಚಾರ ಜಾಗೃತಿ ಕಾಂಗ್ರೆಸ್‌ ಪಕ್ಷ ಪಟ್ಟಿಯಿಂದ ಕೈಬಿಟ್ಟ ಕರ್ನಾಟಕದ ಪಕ್ಷಗಳು ಎಂದು ತಿಳಿದು ಬಂದಿದೆ.

ಉತ್ತರಾಖಂಡ  ಮೇಘಸ್ಫೋಟಕ್ಕೆ ಧಾರ್ಮಿಕ ಅಸಹಿಷ್ಣುತೆಯೇ ಕಾರಣ?: ಮಾಜಿ ಸಂಸದ ಹಸನ್ ಹೇಳಿಕೆಗೆ ಭಾರಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...