Homeಮುಖಪುಟ334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

- Advertisement -
- Advertisement -

ನೋಂದಣಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಥವಾ ಶಾಸನಬದ್ಧ ಬಾಧ್ಯತೆಗಳನ್ನು ಪೂರೈಸದ ಕಾರಣಕ್ಕಾಗಿ ಚುನಾವಣಾ ಆಯೋಗವು ಶನಿವಾರ (ಆ.9) 334 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು (ಆರ್‌ಯುಪಿಪಿ) ಪಟ್ಟಿಯಿಂದ ತೆಗೆದುಹಾಕಿದೆ.

ತನ್ನ ಕ್ರಮ ‘ರಾಜಕೀಯ ಕ್ಷೇತ್ರವನ್ನು ಶುದ್ಧೀಕರಿಸುವ ಸಮಗ್ರ ಮತ್ತು ನಿರಂತರ ಕಾರ್ಯತಂತ್ರದ ಒಂದು ಭಾಗ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಇತ್ತೀಚಿನ ಶುದ್ದೀಕರಣದ ಬಳಿಕ ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಸಂಖ್ಯೆ 2,854 ರಿಂದ 2,520ಕ್ಕೆ ಇಳಿದಿದೆ ಎಂದು ವರದಿಗಳು ಹೇಳಿವೆ.

ಪಟ್ಟಿಯಿಂದ ತೆಗೆದುಹಾಕಲಾದ ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳಿಗೆ ಇನ್ನು ಮುಂದೆ ಜನತಾ ಪ್ರಾತಿನಿಧ್ಯ ಕಾಯ್ದೆ, 1951ರ ಸೆಕ್ಷನ್ 29B ಮತ್ತು ಸೆಕ್ಷನ್ 29C,ಆದಾಯ ತೆರಿಗೆ ಕಾಯ್ದೆ, 1961ರ ಸಂಬಂಧಿತ ನಿಬಂಧನೆಗಳು ಮತ್ತು ಚುನಾವಣಾ ಚಿಹ್ನೆಗಳು (ಮೀಸಲಾತಿ ಮತ್ತು ಹಂಚಿಕೆ) ಆದೇಶ, 1968ರ ಅಡಿಯಲ್ಲಿ ಆದಾಯ ತೆರಿಗೆ ರಿಯಾಯಿತಿಗಳು ದೊರೆಯುವುದಿಲ್ಲ.

ಮಾರ್ಗಸೂಚಿಗಳ ಪ್ರಕಾರ, ಒಂದು ಪಕ್ಷವು ಆರು ವರ್ಷಗಳ ಕಾಲ ನಿರಂತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೆ, ಅದನ್ನು ನೋಂದಾಯಿತ ಪಕ್ಷಗಳ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.

ಚುನಾವಣಾ ಆಯೋಗ ತನ್ನ ಮಾರ್ಗಸೂಚಿಗಳು ಮತ್ತು ಜನ ಪ್ರತಿನಿಧಿಗಳ ಕಾಯ್ದೆಯಡಿಯಲ್ಲಿ ಸೂಚಿಸಲಾದ ಮೇಲಿನ ಷರತ್ತುಗಳ ಅನುಸರಣೆಗೆ ಸಂಬಂಧಿಸಿದಂತೆ 345 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಪರಿಶೀಲನಾ ವಿಚಾರಣೆಗಳನ್ನು ನಡೆಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ (ಸಿಇಒ) ನಿರ್ದೇಶನ ನೀಡಿತ್ತು.

ಸಿಇಒಗಳ ವರದಿಗಳ ಆಧಾರದ ಮೇಲೆ, 345 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಪೈಕಿ 334 ಪಕ್ಷಗಳು ಮೇಲಿನ ಷರತ್ತುಗಳನ್ನು ಪಾಲಿಸುತ್ತಿಲ್ಲ ಎಂದು ಕಂಡುಬಂದಿದೆ. ಉಳಿದ ಪ್ರಕರಣಗಳನ್ನು ಮರುಪರಿಶೀಲನೆಗಾಗಿ ಸಿಇಒಗಳಿಗೆ ಹಿಂತಿರುಗಿಸಲಾಗಿದೆ” ಎಂದು ಚುನಾವಣಾ ಆಯೋಗ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎನ್ನುವ ಷರತ್ತನ್ನು ಪಟ್ಟಿಯಿಂದ ಕೈಬಿಟ್ಟ ಪಕ್ಷಗಳು ಪಾಲಿಸಿಲ್ಲ. 2019ರಿಂದ ಇದುವರೆಗಿನ ಆರು ವರ್ಷಗಳ ಅವಧಿಯಲ್ಲಿ ಈ ಪಕ್ಷಗಳು ಒಂದೇ ಒಂದು ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಮತ್ತು ನೋಂದಾಯಿಸಿಕೊಂಡಿರುವ ವಿಳಾಸದಲ್ಲಿಯೂ ಈ ಪಕ್ಷಗಳ ಕಚೇರಿಯೂ ಪತ್ತೆಯಾಗಿಲ್ಲ ಎಂದು ಆಯೋಗ ಹೇಳಿದೆ.

ಉತ್ತರ ಪ್ರದೇಶದಲ್ಲಿನ 115 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ದೆಹಲಿ 27, ತಮಿಳುನಾಡು 22, ಹರಿಯಾಣ 21, ಮಧ್ಯಪ್ರದೇಶ 15, ತೆಲಂಗಾಣ 13 ಹಾಗೂ ಗುಜರಾತ್‌ನ 11 ಪಕ್ಷಗಳನ್ನು ಆಯೋಗವು ಪಟ್ಟಿಯಿಂದ ಕೈಬಿಟ್ಟಿದೆ ಎಂದು ವರದಿಯಾಗಿದೆ.

ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲೂ ಭಾರತೀಯ ಹಿಂದುಳಿದ ಪಕ್ಷ, ಬಿಹಾರ ಜನತಾ ಪಕ್ಷ ಮತ್ತು ಗಾಂಧಿ ಪ್ರಕಾಶ್‌ ಪಕ್ಷ ಸೇರಿದಂತೆ 17 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.

2022ರಲ್ಲಿ ನಡೆದ ಪರಿಷ್ಕರಣೆಯಲ್ಲಿ 537 ಪಕ್ಷಗಳ ಪೈಕಿ 284 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿತ್ತು.

ಪಟ್ಟಿಯಿಂದ ಕೈಬಿಟ್ಟ ಪಕ್ಷಗಳ ಪೈಕಿ ಕರ್ನಾಟಕದ 12 ಪಕ್ಷಗಳಿವೆ ಎಂದು ವರದಿಯಾಗಿದೆ.

ಅಂಬೇಡ್ಕರ್‌ ಜನತಾ ಪಕ್ಷ, ಭಾರತೀಯ ಪ್ರಜಾ ಪಕ್ಷ, ಜನ ಸ್ವರಾಜ್ಯ ಪಕ್ಷ,ಕಲ್ಯಾಣ ಕ್ರಾಂತಿ ಪಕ್ಷ,
ಕರ್ನಾಟಕ ಪ್ರಜಾ ವಿಕಾಸ್‌ ಪಕ್ಷ, ಕರ್ನಾಟಕ ಸ್ವರಾಜ್ಯ ಪಕ್ಷ, ಮಹಿಳಾ ಪ್ರಧಾನ ಪಕ್ಷ, ನಮ್ಮ ಕಾಂಗ್ರೆಸ್‌
ಪ್ರಜಾ ರೈತ ರಾಜ್ಯ ಪಕ್ಷ, ರಕ್ಷಕ ಸೇನಾ ಸಮನ್ಯಾ ಜನತಾ ಪಕ್ಷ (ಲೋಕ ತಾಂತ್ರಿಕ್‌) ಮತ್ತು ವಿಚಾರ ಜಾಗೃತಿ ಕಾಂಗ್ರೆಸ್‌ ಪಕ್ಷ ಪಟ್ಟಿಯಿಂದ ಕೈಬಿಟ್ಟ ಕರ್ನಾಟಕದ ಪಕ್ಷಗಳು ಎಂದು ತಿಳಿದು ಬಂದಿದೆ.

ಉತ್ತರಾಖಂಡ  ಮೇಘಸ್ಫೋಟಕ್ಕೆ ಧಾರ್ಮಿಕ ಅಸಹಿಷ್ಣುತೆಯೇ ಕಾರಣ?: ಮಾಜಿ ಸಂಸದ ಹಸನ್ ಹೇಳಿಕೆಗೆ ಭಾರಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...