Homeಮುಖಪುಟ334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

- Advertisement -
- Advertisement -

ನೋಂದಣಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಥವಾ ಶಾಸನಬದ್ಧ ಬಾಧ್ಯತೆಗಳನ್ನು ಪೂರೈಸದ ಕಾರಣಕ್ಕಾಗಿ ಚುನಾವಣಾ ಆಯೋಗವು ಶನಿವಾರ (ಆ.9) 334 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು (ಆರ್‌ಯುಪಿಪಿ) ಪಟ್ಟಿಯಿಂದ ತೆಗೆದುಹಾಕಿದೆ.

ತನ್ನ ಕ್ರಮ ‘ರಾಜಕೀಯ ಕ್ಷೇತ್ರವನ್ನು ಶುದ್ಧೀಕರಿಸುವ ಸಮಗ್ರ ಮತ್ತು ನಿರಂತರ ಕಾರ್ಯತಂತ್ರದ ಒಂದು ಭಾಗ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಇತ್ತೀಚಿನ ಶುದ್ದೀಕರಣದ ಬಳಿಕ ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಸಂಖ್ಯೆ 2,854 ರಿಂದ 2,520ಕ್ಕೆ ಇಳಿದಿದೆ ಎಂದು ವರದಿಗಳು ಹೇಳಿವೆ.

ಪಟ್ಟಿಯಿಂದ ತೆಗೆದುಹಾಕಲಾದ ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳಿಗೆ ಇನ್ನು ಮುಂದೆ ಜನತಾ ಪ್ರಾತಿನಿಧ್ಯ ಕಾಯ್ದೆ, 1951ರ ಸೆಕ್ಷನ್ 29B ಮತ್ತು ಸೆಕ್ಷನ್ 29C,ಆದಾಯ ತೆರಿಗೆ ಕಾಯ್ದೆ, 1961ರ ಸಂಬಂಧಿತ ನಿಬಂಧನೆಗಳು ಮತ್ತು ಚುನಾವಣಾ ಚಿಹ್ನೆಗಳು (ಮೀಸಲಾತಿ ಮತ್ತು ಹಂಚಿಕೆ) ಆದೇಶ, 1968ರ ಅಡಿಯಲ್ಲಿ ಆದಾಯ ತೆರಿಗೆ ರಿಯಾಯಿತಿಗಳು ದೊರೆಯುವುದಿಲ್ಲ.

ಮಾರ್ಗಸೂಚಿಗಳ ಪ್ರಕಾರ, ಒಂದು ಪಕ್ಷವು ಆರು ವರ್ಷಗಳ ಕಾಲ ನಿರಂತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೆ, ಅದನ್ನು ನೋಂದಾಯಿತ ಪಕ್ಷಗಳ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.

ಚುನಾವಣಾ ಆಯೋಗ ತನ್ನ ಮಾರ್ಗಸೂಚಿಗಳು ಮತ್ತು ಜನ ಪ್ರತಿನಿಧಿಗಳ ಕಾಯ್ದೆಯಡಿಯಲ್ಲಿ ಸೂಚಿಸಲಾದ ಮೇಲಿನ ಷರತ್ತುಗಳ ಅನುಸರಣೆಗೆ ಸಂಬಂಧಿಸಿದಂತೆ 345 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಪರಿಶೀಲನಾ ವಿಚಾರಣೆಗಳನ್ನು ನಡೆಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ (ಸಿಇಒ) ನಿರ್ದೇಶನ ನೀಡಿತ್ತು.

ಸಿಇಒಗಳ ವರದಿಗಳ ಆಧಾರದ ಮೇಲೆ, 345 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಪೈಕಿ 334 ಪಕ್ಷಗಳು ಮೇಲಿನ ಷರತ್ತುಗಳನ್ನು ಪಾಲಿಸುತ್ತಿಲ್ಲ ಎಂದು ಕಂಡುಬಂದಿದೆ. ಉಳಿದ ಪ್ರಕರಣಗಳನ್ನು ಮರುಪರಿಶೀಲನೆಗಾಗಿ ಸಿಇಒಗಳಿಗೆ ಹಿಂತಿರುಗಿಸಲಾಗಿದೆ” ಎಂದು ಚುನಾವಣಾ ಆಯೋಗ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎನ್ನುವ ಷರತ್ತನ್ನು ಪಟ್ಟಿಯಿಂದ ಕೈಬಿಟ್ಟ ಪಕ್ಷಗಳು ಪಾಲಿಸಿಲ್ಲ. 2019ರಿಂದ ಇದುವರೆಗಿನ ಆರು ವರ್ಷಗಳ ಅವಧಿಯಲ್ಲಿ ಈ ಪಕ್ಷಗಳು ಒಂದೇ ಒಂದು ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಮತ್ತು ನೋಂದಾಯಿಸಿಕೊಂಡಿರುವ ವಿಳಾಸದಲ್ಲಿಯೂ ಈ ಪಕ್ಷಗಳ ಕಚೇರಿಯೂ ಪತ್ತೆಯಾಗಿಲ್ಲ ಎಂದು ಆಯೋಗ ಹೇಳಿದೆ.

ಉತ್ತರ ಪ್ರದೇಶದಲ್ಲಿನ 115 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ದೆಹಲಿ 27, ತಮಿಳುನಾಡು 22, ಹರಿಯಾಣ 21, ಮಧ್ಯಪ್ರದೇಶ 15, ತೆಲಂಗಾಣ 13 ಹಾಗೂ ಗುಜರಾತ್‌ನ 11 ಪಕ್ಷಗಳನ್ನು ಆಯೋಗವು ಪಟ್ಟಿಯಿಂದ ಕೈಬಿಟ್ಟಿದೆ ಎಂದು ವರದಿಯಾಗಿದೆ.

ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲೂ ಭಾರತೀಯ ಹಿಂದುಳಿದ ಪಕ್ಷ, ಬಿಹಾರ ಜನತಾ ಪಕ್ಷ ಮತ್ತು ಗಾಂಧಿ ಪ್ರಕಾಶ್‌ ಪಕ್ಷ ಸೇರಿದಂತೆ 17 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.

2022ರಲ್ಲಿ ನಡೆದ ಪರಿಷ್ಕರಣೆಯಲ್ಲಿ 537 ಪಕ್ಷಗಳ ಪೈಕಿ 284 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿತ್ತು.

ಪಟ್ಟಿಯಿಂದ ಕೈಬಿಟ್ಟ ಪಕ್ಷಗಳ ಪೈಕಿ ಕರ್ನಾಟಕದ 12 ಪಕ್ಷಗಳಿವೆ ಎಂದು ವರದಿಯಾಗಿದೆ.

ಅಂಬೇಡ್ಕರ್‌ ಜನತಾ ಪಕ್ಷ, ಭಾರತೀಯ ಪ್ರಜಾ ಪಕ್ಷ, ಜನ ಸ್ವರಾಜ್ಯ ಪಕ್ಷ,ಕಲ್ಯಾಣ ಕ್ರಾಂತಿ ಪಕ್ಷ,
ಕರ್ನಾಟಕ ಪ್ರಜಾ ವಿಕಾಸ್‌ ಪಕ್ಷ, ಕರ್ನಾಟಕ ಸ್ವರಾಜ್ಯ ಪಕ್ಷ, ಮಹಿಳಾ ಪ್ರಧಾನ ಪಕ್ಷ, ನಮ್ಮ ಕಾಂಗ್ರೆಸ್‌
ಪ್ರಜಾ ರೈತ ರಾಜ್ಯ ಪಕ್ಷ, ರಕ್ಷಕ ಸೇನಾ ಸಮನ್ಯಾ ಜನತಾ ಪಕ್ಷ (ಲೋಕ ತಾಂತ್ರಿಕ್‌) ಮತ್ತು ವಿಚಾರ ಜಾಗೃತಿ ಕಾಂಗ್ರೆಸ್‌ ಪಕ್ಷ ಪಟ್ಟಿಯಿಂದ ಕೈಬಿಟ್ಟ ಕರ್ನಾಟಕದ ಪಕ್ಷಗಳು ಎಂದು ತಿಳಿದು ಬಂದಿದೆ.

ಉತ್ತರಾಖಂಡ  ಮೇಘಸ್ಫೋಟಕ್ಕೆ ಧಾರ್ಮಿಕ ಅಸಹಿಷ್ಣುತೆಯೇ ಕಾರಣ?: ಮಾಜಿ ಸಂಸದ ಹಸನ್ ಹೇಳಿಕೆಗೆ ಭಾರಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...