Homeಮುಖಪುಟಲೋಕಸಭೆ ಚುನಾವಣೆ: ಐದು ಹಂತದ ಮತದಾನದ ಅಂಕಿ-ಅಂಶ ಪ್ರಕಟಿಸಿದ ಚು. ಆಯೋಗ

ಲೋಕಸಭೆ ಚುನಾವಣೆ: ಐದು ಹಂತದ ಮತದಾನದ ಅಂಕಿ-ಅಂಶ ಪ್ರಕಟಿಸಿದ ಚು. ಆಯೋಗ

- Advertisement -
- Advertisement -

ಹಲವೆಡೆಗಳಿಂದ ಒತ್ತಡ ಹೆಚ್ಚಾಗುತ್ತಿದ್ದಂತೆ, ಲೋಕಸಭೆ ಚುನಾವಣೆಯ ಐದು ಹಂತಗಳಲ್ಲಿ ಚಲಾವಣೆಯಾದ ಮತಗಳ ಕ್ಷೇತ್ರವಾರು ಅಂಕಿ-ಅಂಶಗಳನ್ನು ಭಾರತೀಯ ಚುನಾವಣಾ ಆಯೋಗ ಇಂದು (ಮೇ 25) ಪ್ರಕಟಿಸಿದೆ.

ಒಟ್ಟು ಏಳು ಹಂತಗಳ ಮತದಾನದಲ್ಲಿ ಇಂದಿಗೆ (ಮೇ 25) 6 ಹಂತಗಳು ಪೂರ್ಣಗೊಂಡಿವೆ. ಈ ನಡುವೆ ಚುನಾವಣಾ ಆಯೋಗ ಐದು ಹಂತಗಳ ಅಂಕಿ-ಅಂಶ ಬಿಡುಗಡೆಗೊಳಿಸಿದ್ದು,”ಆಯೋಗವು ಚುನಾವಣಾ ಪ್ರಜಾಪ್ರಭುತ್ವದ ಉದ್ದೇಶಗಳನ್ನು ಅನಿರ್ಬಂಧಿತ ಗುರಿಯೊಂದಿಗೆ ಸಾಧಿಸುವ ಮಹತ್ವದ ಜವಾಬ್ದಾರಿ ಹೊಂದಿದೆ” ಎಂದು ಹೇಳಿದೆ.

ಐದು ಹಂತದ ಮತದಾದನ ಒಟ್ಟು ಅಂಕಿ-ಅಂಶಗಳು ಕೆಳಗಿದೆ

ಸಂಪೂರ್ಣ ಅಂಕಿ-ಅಂಶ ಇಲ್ಲಿದೆ 

ಚುನಾವಣಾ ಆಯೋಗ ಮತದಾನದ ಅಂಕಿ-ಅಂಶಗಳನ್ನು ಬಿಡುಗಡೆ ಮಾಡುವ ಒಂದು ದಿನ ಮುನ್ನ, ಅಂದರೆ, ಶುಕ್ರವಾರ, ಈ ಕುರಿತು ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶಗಳನ್ನ ಬಿಡುಗಡೆ ಮಾಡುವಂತೆ ಹಾಗೂ ಮತದಾನದ ನಡೆದ 48 ಗಂಟೆಗಳ ಒಳಗೆ ನಮೂನೆ 17 ಸಿ ಅಪ್ಲೋಡ್ ಮಾಡುವಂತೆ ಚುನಾವಣಾ ಆಯೋಗಕ್ಕೆ ಸೂಚಿಸುವುದಿಲ್ಲ ಎಂದಿತ್ತು. ಚುನಾವಣೆ ಮುಗಿಯುವವರೆಗೆ ಅರ್ಜಿ ವಿಚಾರಣೆ ಮುಂದೂಡಿರುವ ಕೋರ್ಟ್, ಚುನಾವಣೆಯ ನಡುವೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತುತ ವಿಚಾರಣೆಯಲ್ಲಿರುವ ಅರ್ಜಿಯು 2019ರಲ್ಲಿ ಸಲ್ಲಿಸಿರುವ ರಿಟ್‌ ಅರ್ಜಿಯ ಮಧ್ಯಂತರ ಅರ್ಜಿಯಾಗಿದೆ. 2019ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಚಲಾವಣೆಯಾದ ಮತ್ತು ಎಣಿಸಿದ ಮತಗಳ ನಡುವೆ ವ್ಯತ್ಯಾಸ ಕಂಡು ಬಂದಿತ್ತು. ಇದನ್ನು ಪ್ರಶ್ನಿಸಿ ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಸೇರಿದಂತೆ ಹಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಈ ಬಾರಿಯ ಸಾರ್ವತ್ರಿಕ ಚುನಾವಣೆಯ ಮೊದಲ ಎರಡು ಹಂತಗಳ ಮತದಾನದ ಅಧಿಕೃತ ಅಂಕಿ-ಅಂಶಗಳನ್ನು ಪ್ರಕಟಿಸಲು ಚುನಾವಣಾ ಆಯೋಗ 11 ದಿನಗಳ ಕಾಲ ವಿಳಂಬ ಮಾಡಿತ್ತು. ಇದು ಮತ ಎಣಿಕೆಯ ಸಂದರ್ಭದಲ್ಲಿ ಹೆಚ್ಚು ಅಥವಾ ಕಡಿಮೆ ಮತ ಬರುವ ಕಳವಳಕ್ಕೆ ಕಾರಣವಾಗಿತ್ತು. ಪ್ರತಿಪಕ್ಷಗಳು ಮತ್ತು ಅನೇಕ ಸಂಘ, ಸಂಸ್ಥೆಗಳು ಈ ಹಿಂದಿನಂತೆ ಮತದಾನದ ನಡೆದ 24 ಗಂಟೆಯೊಳಗೆ ಅಂಕಿ- ಅಂಶ ಪ್ರಕಟಿಸಲು ಆಗ್ರಹಿಸಿದ್ದವು

ಇದನ್ನೂ ಓದಿ : ದ್ವೇಷ ಭಾಷಣ: ಪ್ರಧಾನಿ ಮೋದಿ ವಿರುದ್ದ ಬೆಂಗಳೂರಿನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...