Homeಮುಖಪುಟಲೋಕಸಭೆ ಚುನಾವಣೆ : 1 ಮತ್ತು 2ನೇ ಹಂತದ ಮತದಾನದ ಅಂತಿಮ ಅಂಕಿ ಅಂಶ ಇನ್ನೂ...

ಲೋಕಸಭೆ ಚುನಾವಣೆ : 1 ಮತ್ತು 2ನೇ ಹಂತದ ಮತದಾನದ ಅಂತಿಮ ಅಂಕಿ ಅಂಶ ಇನ್ನೂ ಪ್ರಕಟಿಸದ ಚು. ಆಯೋಗ

- Advertisement -
- Advertisement -

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ಮತ್ತು ಎರಡನೇ ಹಂತದ ಮತದಾನ ಏಪ್ರಿಲ್ 26 ರಂದು ನಡೆದಿದೆ. ಆದರೆ, ಭಾರತೀಯ ಚುನಾವಣಾ ಆಯೋಗ (ಇಸಿಐ) ಎರಡೂ ಹಂತದ ಮತದಾನದ ಅಂತಿಮ ಅಂಕಿ ಅಂಶಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ.

ಎರಡೂ ಬಾರಿಯೂ ಸಂಜೆ 7 ಗಂಟೆಯ ಹೊತ್ತಿಗೆ ಮತದಾನದ ಅಂದಾಜು ಟ್ರೆಂಡ್ ಬಗ್ಗೆ ಮಾತ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಏಪ್ರಿಲ್ 19 ರಂದು ಅಂದಾಜು 60 ಶೇ. ಮತ್ತು ಏಪ್ರಿಲ್ 26 ರಂದು 60.96 ಶೇ. ಮತದಾನವಾಗಿದೆ ಎಂದಿದೆ.

thehindubusinessline.com ಪ್ರಕಟಿಸಿದ ವರದಿಯಲ್ಲಿ ಚುನಾವಣಾ ಆಯೋಗದ ಉನ್ನತ ಅಧಿಕಾರಿಯೊಬ್ಬರು ಮೊದಲ ಹಂತದಲ್ಲಿ ಅಂದಾಜು ಶೇ. 66.14 ಮತ್ತು ಎರಡನೇ ಹಂತದಲ್ಲಿ ಶೇ. 66.7 ರಷ್ಟು ಅಂತಿಮ ಮತದಾನವಾಗಿದೆ ಎಂದು ತಿಳಿಸಿದ್ದಾರೆ. ಅಂತಿಮ ಅಂಕಿ ಅಂಶಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸುತ್ತೇವೆ ಎಂದಿದ್ದಾರೆ. ಆದರೆ, ಇದುವರೆಗೆ ಅಂತಿಮ ಅಂಕಿ ಅಂಶ ಬಿಡುಗಡೆ ಮಾಡಿಲ್ಲ ಎಂದಿದೆ.

ಮತದಾನದ ಅಂಕಿ ಅಂಶಗಳ ಕುರಿತಾಗಿ ಮಾತ್ರ ನಾವು ಹೇಳುತ್ತಿಲ್ಲ. ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ನೋಂದಾಯಿತ ಮತದಾರರ ಸಂಖ್ಯೆಯೂ ಕಾಣೆಯಾಗಿದೆ ಎಂದು thehindubusinessline.com ವರದಿಯಲ್ಲಿ ತಿಳಿಸಿದೆ.

ವಿವಿಧ ಕ್ಷೇತ್ರಗಳ ಮತದಾರರ ಸಂಖ್ಯೆಯನ್ನು ತಿಳಿದುಕೊಳ್ಳಲು ಮುಂದಾದಾಗ, ಉತ್ತರ ಪ್ರದೇಶದಂತಹ ಕೆಲ ಆಯ್ದ ರಾಜ್ಯಗಳ ಬೂತ್‌ವಾರು ಮತದಾರರ ಪಟ್ಟಿಗಳು ಮಾತ್ರ ನಮಗೆ ದೊರೆತಿದೆ. ಒಡಿಶಾ, ಬಿಹಾರ, ದೆಹಲಿಯಂತಹ ರಾಜ್ಯಗಳ ದತ್ತಾಂಶಗಳು ವೆಬ್‌ಸೈಟ್‌ನಲ್ಲಿ ಲಭ್ಯವಿಲ್ಲ. ಬಿಹಾರ, ಒಡಿಶಾ ರಾಜ್ಯಗಳ ಮತದಾರರ ಸಂಖ್ಯೆ ತಿಳಿದುಕೊಳ್ಳಲು ಪ್ರಯತ್ನಿಸಿದಾಗ ಮಾಹಿತಿ ಒದಗಿಸಬೇಕಾದ ವೆಬ್‌ಸೈಟ್‌ನ ಪುಟದಲ್ಲಿ ದೋಷದ ಸಂದೇಶ ಕಾಣಿಸಿಕೊಂಡಿದೆ ಎಂದು ವರದಿ ಹೇಳಿದೆ.

ಇದುವರೆಗಿನ ಅಂದಾಜು ಮತದಾನದ ಪ್ರಮಾಣವು 2019ರ ಲೋಕಸಭೆ ಚುನಾವಣೆಯಲ್ಲಿ ಕಂಡುಬಂದಕ್ಕಿಂತ ಕಡಿಮೆಯಾಗಿದೆ ಎಂದು ದಿ ವೈರ್ ವರದಿ ತಿಳಿಸಿದೆ.

ಈ ಕುಸಿತವನ್ನು ಹೇಗೆ ಅರ್ಥ ಮಾಡಿಕೊಳ್ಳಬೇಕು? ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ ಅವರಂತಹ ಮೋದಿ ಸರ್ಕಾರದ ಟೀಕಾಕಾರರು ಎನ್‌ಡಿಎಯೇತರ ಪಕ್ಷಗಳಿಗಿಂತ ಬಿಜೆಪಿ ನೇತೃತ್ವದ ಎನ್‌ಡಿಎ ತೆಕ್ಕೆಯಲ್ಲಿರುವ ಕ್ಷೇತ್ರಗಳಲ್ಲಿ ಮತದಾನದ ಕುಸಿತವು ಹೆಚ್ಚಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಆದರೆ, ಸುಡುಬಿಸಿಲು ಮತದಾನದ ಪ್ರಮಾಣ ಕುಸಿಯಲು ಕಾರಣವಾಗಿದೆ ಎಂದು ನಂಬಿಕೊಂಡಿರುವ ಬಿಜೆಪಿ ಬೆಂಬಲಿಗರು, ಮೋದಿಯವರ ಪುನರಾಯ್ಕೆ ಪೂರ್ವ ನಿಗದಿತವಾಗಿರುವುದರಿಂದ ಹತಾಶರಾಗಿರುವ ಮೋದಿ ಸರ್ಕಾರದ ವಿರೋಧಿಗಳು ಮತದಾನ ಮಾಡಿರಲಿಕ್ಕಿಲ್ಲ ಎಂದು ಭಾವಿಸಿದ್ದಾರೆ ಎಂದು ವರದಿಯು ಹೇಳಿದೆ.

ಲೋಕಸಭಾ ಚುನಾವಣೆಯನ್ನು ಸಾಮಾನ್ಯ ವಹಿವಾಟು, ಮಾಮೂಲು ವ್ಯವಹಾರದಂತೆ ನಡೆಸಲಾಗುತ್ತಿದೆ. ಖುದ್ದು ಪ್ರಧಾನಿಯವರ ನೇತೃತ್ವದಲ್ಲಿ ಬಿಜೆಪಿ ನಾಯಕರು ನಿರ್ಭೀತಿಯಿಂದ ಅಲ್ಪಸಂಖ್ಯಾತರ ವಿರುದ್ಧ ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ ಮತ್ತು ಈ ಬಗ್ಗೆ ಚುನಾವಣಾ ಆಯೋಗವು ನಿರ್ಲಿಪ್ತವಾಗಿದೆ. ಕೆಲವು ಪ್ರಾದೇಶಿಕ ನಾಯಕರನ್ನು ಹೊರತುಪಡಿಸಿ ಪ್ರತಿಪಕ್ಷಗಳು ತಮ್ಮ ಕಾರ್ಯಕರ್ತರನ್ನು ಕ್ರೋಡೀಕರಿಸಲು ಮತ್ತು ಸಂಪನ್ಮೂಲಗಳನ್ನು ಸಂಗ್ರಹಿಸಲು ಹೆಣಗಾಡುತ್ತಿವೆ. ಇದು ಮೋದಿ ಆಡಳಿತವು ಎಸಗಿರುವ ಅತಿರೇಕಗಳಿಗೆ ವಿಶ್ವಾಸಾರ್ಹವಾದ ಸವಾಲು ಇಲ್ಲ ಎಂಬ ಭಾವನೆಯನ್ನು ಹುಟ್ಟು ಹಾಕಿದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

ಸಮಾನ ಸ್ಪರ್ಧಾಕಣದ ಕೊರತೆ ಎದ್ದು ಕಾಣುತ್ತಿದೆ. ಅದು ರಹಸ್ಯವಾಗಿ ಉಳಿದಿಲ್ಲ. 18ನೇ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ವಿಷಯಗಳು ಪ್ರಾಬಲ್ಯ ಪಡೆದಿವೆ ಮತ್ತು ಪುನರಾವರ್ತಿತ ಪ್ರಚಾರದೊಂದಿಗೆ ಹತಾಶೆ ಕಂಡು ಬರುತ್ತಿದೆ. ಇದು ಮೋದಿ ಸರ್ಕಾರದ ಬೆಂಬಲಿಗರು ಮತ್ತು ವಿರೋಧಿಗಳಲ್ಲಿ ಮತದಾನದ ಪ್ರಮಾಣ ಕುಸಿಯಲು ನಿಜವಾದ ಕಾರಣವಾಗಿರಬಹುದು ಎಂದು ದಿ ವೈರ್ ಅಂದಾಜಿಸಿದೆ.

ಇದನ್ನೂ ಓದಿ : ಅರವಿಂದ್ ಕೇಜ್ರಿವಾಲ್‌ನ್ನು ಚುನಾವಣೆಗೆ ಮುನ್ನ ಬಂಧಿಸಿದ್ದು ಏಕೆ? EDಗೆ ಉತ್ತರಿಸುವಂತೆ ಸೂಚಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...