Homeಮುಖಪುಟಲೋಕಸಭೆ ಚುನಾವಣೆ : 1 ಮತ್ತು 2ನೇ ಹಂತದ ಮತದಾನದ ಅಂತಿಮ ಅಂಕಿ ಅಂಶ ಇನ್ನೂ...

ಲೋಕಸಭೆ ಚುನಾವಣೆ : 1 ಮತ್ತು 2ನೇ ಹಂತದ ಮತದಾನದ ಅಂತಿಮ ಅಂಕಿ ಅಂಶ ಇನ್ನೂ ಪ್ರಕಟಿಸದ ಚು. ಆಯೋಗ

- Advertisement -
- Advertisement -

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ಮತ್ತು ಎರಡನೇ ಹಂತದ ಮತದಾನ ಏಪ್ರಿಲ್ 26 ರಂದು ನಡೆದಿದೆ. ಆದರೆ, ಭಾರತೀಯ ಚುನಾವಣಾ ಆಯೋಗ (ಇಸಿಐ) ಎರಡೂ ಹಂತದ ಮತದಾನದ ಅಂತಿಮ ಅಂಕಿ ಅಂಶಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ.

ಎರಡೂ ಬಾರಿಯೂ ಸಂಜೆ 7 ಗಂಟೆಯ ಹೊತ್ತಿಗೆ ಮತದಾನದ ಅಂದಾಜು ಟ್ರೆಂಡ್ ಬಗ್ಗೆ ಮಾತ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಏಪ್ರಿಲ್ 19 ರಂದು ಅಂದಾಜು 60 ಶೇ. ಮತ್ತು ಏಪ್ರಿಲ್ 26 ರಂದು 60.96 ಶೇ. ಮತದಾನವಾಗಿದೆ ಎಂದಿದೆ.

thehindubusinessline.com ಪ್ರಕಟಿಸಿದ ವರದಿಯಲ್ಲಿ ಚುನಾವಣಾ ಆಯೋಗದ ಉನ್ನತ ಅಧಿಕಾರಿಯೊಬ್ಬರು ಮೊದಲ ಹಂತದಲ್ಲಿ ಅಂದಾಜು ಶೇ. 66.14 ಮತ್ತು ಎರಡನೇ ಹಂತದಲ್ಲಿ ಶೇ. 66.7 ರಷ್ಟು ಅಂತಿಮ ಮತದಾನವಾಗಿದೆ ಎಂದು ತಿಳಿಸಿದ್ದಾರೆ. ಅಂತಿಮ ಅಂಕಿ ಅಂಶಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸುತ್ತೇವೆ ಎಂದಿದ್ದಾರೆ. ಆದರೆ, ಇದುವರೆಗೆ ಅಂತಿಮ ಅಂಕಿ ಅಂಶ ಬಿಡುಗಡೆ ಮಾಡಿಲ್ಲ ಎಂದಿದೆ.

ಮತದಾನದ ಅಂಕಿ ಅಂಶಗಳ ಕುರಿತಾಗಿ ಮಾತ್ರ ನಾವು ಹೇಳುತ್ತಿಲ್ಲ. ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ನೋಂದಾಯಿತ ಮತದಾರರ ಸಂಖ್ಯೆಯೂ ಕಾಣೆಯಾಗಿದೆ ಎಂದು thehindubusinessline.com ವರದಿಯಲ್ಲಿ ತಿಳಿಸಿದೆ.

ವಿವಿಧ ಕ್ಷೇತ್ರಗಳ ಮತದಾರರ ಸಂಖ್ಯೆಯನ್ನು ತಿಳಿದುಕೊಳ್ಳಲು ಮುಂದಾದಾಗ, ಉತ್ತರ ಪ್ರದೇಶದಂತಹ ಕೆಲ ಆಯ್ದ ರಾಜ್ಯಗಳ ಬೂತ್‌ವಾರು ಮತದಾರರ ಪಟ್ಟಿಗಳು ಮಾತ್ರ ನಮಗೆ ದೊರೆತಿದೆ. ಒಡಿಶಾ, ಬಿಹಾರ, ದೆಹಲಿಯಂತಹ ರಾಜ್ಯಗಳ ದತ್ತಾಂಶಗಳು ವೆಬ್‌ಸೈಟ್‌ನಲ್ಲಿ ಲಭ್ಯವಿಲ್ಲ. ಬಿಹಾರ, ಒಡಿಶಾ ರಾಜ್ಯಗಳ ಮತದಾರರ ಸಂಖ್ಯೆ ತಿಳಿದುಕೊಳ್ಳಲು ಪ್ರಯತ್ನಿಸಿದಾಗ ಮಾಹಿತಿ ಒದಗಿಸಬೇಕಾದ ವೆಬ್‌ಸೈಟ್‌ನ ಪುಟದಲ್ಲಿ ದೋಷದ ಸಂದೇಶ ಕಾಣಿಸಿಕೊಂಡಿದೆ ಎಂದು ವರದಿ ಹೇಳಿದೆ.

ಇದುವರೆಗಿನ ಅಂದಾಜು ಮತದಾನದ ಪ್ರಮಾಣವು 2019ರ ಲೋಕಸಭೆ ಚುನಾವಣೆಯಲ್ಲಿ ಕಂಡುಬಂದಕ್ಕಿಂತ ಕಡಿಮೆಯಾಗಿದೆ ಎಂದು ದಿ ವೈರ್ ವರದಿ ತಿಳಿಸಿದೆ.

ಈ ಕುಸಿತವನ್ನು ಹೇಗೆ ಅರ್ಥ ಮಾಡಿಕೊಳ್ಳಬೇಕು? ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ ಅವರಂತಹ ಮೋದಿ ಸರ್ಕಾರದ ಟೀಕಾಕಾರರು ಎನ್‌ಡಿಎಯೇತರ ಪಕ್ಷಗಳಿಗಿಂತ ಬಿಜೆಪಿ ನೇತೃತ್ವದ ಎನ್‌ಡಿಎ ತೆಕ್ಕೆಯಲ್ಲಿರುವ ಕ್ಷೇತ್ರಗಳಲ್ಲಿ ಮತದಾನದ ಕುಸಿತವು ಹೆಚ್ಚಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಆದರೆ, ಸುಡುಬಿಸಿಲು ಮತದಾನದ ಪ್ರಮಾಣ ಕುಸಿಯಲು ಕಾರಣವಾಗಿದೆ ಎಂದು ನಂಬಿಕೊಂಡಿರುವ ಬಿಜೆಪಿ ಬೆಂಬಲಿಗರು, ಮೋದಿಯವರ ಪುನರಾಯ್ಕೆ ಪೂರ್ವ ನಿಗದಿತವಾಗಿರುವುದರಿಂದ ಹತಾಶರಾಗಿರುವ ಮೋದಿ ಸರ್ಕಾರದ ವಿರೋಧಿಗಳು ಮತದಾನ ಮಾಡಿರಲಿಕ್ಕಿಲ್ಲ ಎಂದು ಭಾವಿಸಿದ್ದಾರೆ ಎಂದು ವರದಿಯು ಹೇಳಿದೆ.

ಲೋಕಸಭಾ ಚುನಾವಣೆಯನ್ನು ಸಾಮಾನ್ಯ ವಹಿವಾಟು, ಮಾಮೂಲು ವ್ಯವಹಾರದಂತೆ ನಡೆಸಲಾಗುತ್ತಿದೆ. ಖುದ್ದು ಪ್ರಧಾನಿಯವರ ನೇತೃತ್ವದಲ್ಲಿ ಬಿಜೆಪಿ ನಾಯಕರು ನಿರ್ಭೀತಿಯಿಂದ ಅಲ್ಪಸಂಖ್ಯಾತರ ವಿರುದ್ಧ ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ ಮತ್ತು ಈ ಬಗ್ಗೆ ಚುನಾವಣಾ ಆಯೋಗವು ನಿರ್ಲಿಪ್ತವಾಗಿದೆ. ಕೆಲವು ಪ್ರಾದೇಶಿಕ ನಾಯಕರನ್ನು ಹೊರತುಪಡಿಸಿ ಪ್ರತಿಪಕ್ಷಗಳು ತಮ್ಮ ಕಾರ್ಯಕರ್ತರನ್ನು ಕ್ರೋಡೀಕರಿಸಲು ಮತ್ತು ಸಂಪನ್ಮೂಲಗಳನ್ನು ಸಂಗ್ರಹಿಸಲು ಹೆಣಗಾಡುತ್ತಿವೆ. ಇದು ಮೋದಿ ಆಡಳಿತವು ಎಸಗಿರುವ ಅತಿರೇಕಗಳಿಗೆ ವಿಶ್ವಾಸಾರ್ಹವಾದ ಸವಾಲು ಇಲ್ಲ ಎಂಬ ಭಾವನೆಯನ್ನು ಹುಟ್ಟು ಹಾಕಿದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

ಸಮಾನ ಸ್ಪರ್ಧಾಕಣದ ಕೊರತೆ ಎದ್ದು ಕಾಣುತ್ತಿದೆ. ಅದು ರಹಸ್ಯವಾಗಿ ಉಳಿದಿಲ್ಲ. 18ನೇ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ವಿಷಯಗಳು ಪ್ರಾಬಲ್ಯ ಪಡೆದಿವೆ ಮತ್ತು ಪುನರಾವರ್ತಿತ ಪ್ರಚಾರದೊಂದಿಗೆ ಹತಾಶೆ ಕಂಡು ಬರುತ್ತಿದೆ. ಇದು ಮೋದಿ ಸರ್ಕಾರದ ಬೆಂಬಲಿಗರು ಮತ್ತು ವಿರೋಧಿಗಳಲ್ಲಿ ಮತದಾನದ ಪ್ರಮಾಣ ಕುಸಿಯಲು ನಿಜವಾದ ಕಾರಣವಾಗಿರಬಹುದು ಎಂದು ದಿ ವೈರ್ ಅಂದಾಜಿಸಿದೆ.

ಇದನ್ನೂ ಓದಿ : ಅರವಿಂದ್ ಕೇಜ್ರಿವಾಲ್‌ನ್ನು ಚುನಾವಣೆಗೆ ಮುನ್ನ ಬಂಧಿಸಿದ್ದು ಏಕೆ? EDಗೆ ಉತ್ತರಿಸುವಂತೆ ಸೂಚಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...