Homeಮುಖಪುಟಲೋಕಸಭೆ ಚುನಾವಣೆ : 1 ಮತ್ತು 2ನೇ ಹಂತದ ಮತದಾನದ ಅಂತಿಮ ಅಂಕಿ ಅಂಶ ಇನ್ನೂ...

ಲೋಕಸಭೆ ಚುನಾವಣೆ : 1 ಮತ್ತು 2ನೇ ಹಂತದ ಮತದಾನದ ಅಂತಿಮ ಅಂಕಿ ಅಂಶ ಇನ್ನೂ ಪ್ರಕಟಿಸದ ಚು. ಆಯೋಗ

- Advertisement -
- Advertisement -

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ಮತ್ತು ಎರಡನೇ ಹಂತದ ಮತದಾನ ಏಪ್ರಿಲ್ 26 ರಂದು ನಡೆದಿದೆ. ಆದರೆ, ಭಾರತೀಯ ಚುನಾವಣಾ ಆಯೋಗ (ಇಸಿಐ) ಎರಡೂ ಹಂತದ ಮತದಾನದ ಅಂತಿಮ ಅಂಕಿ ಅಂಶಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ.

ಎರಡೂ ಬಾರಿಯೂ ಸಂಜೆ 7 ಗಂಟೆಯ ಹೊತ್ತಿಗೆ ಮತದಾನದ ಅಂದಾಜು ಟ್ರೆಂಡ್ ಬಗ್ಗೆ ಮಾತ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಏಪ್ರಿಲ್ 19 ರಂದು ಅಂದಾಜು 60 ಶೇ. ಮತ್ತು ಏಪ್ರಿಲ್ 26 ರಂದು 60.96 ಶೇ. ಮತದಾನವಾಗಿದೆ ಎಂದಿದೆ.

thehindubusinessline.com ಪ್ರಕಟಿಸಿದ ವರದಿಯಲ್ಲಿ ಚುನಾವಣಾ ಆಯೋಗದ ಉನ್ನತ ಅಧಿಕಾರಿಯೊಬ್ಬರು ಮೊದಲ ಹಂತದಲ್ಲಿ ಅಂದಾಜು ಶೇ. 66.14 ಮತ್ತು ಎರಡನೇ ಹಂತದಲ್ಲಿ ಶೇ. 66.7 ರಷ್ಟು ಅಂತಿಮ ಮತದಾನವಾಗಿದೆ ಎಂದು ತಿಳಿಸಿದ್ದಾರೆ. ಅಂತಿಮ ಅಂಕಿ ಅಂಶಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸುತ್ತೇವೆ ಎಂದಿದ್ದಾರೆ. ಆದರೆ, ಇದುವರೆಗೆ ಅಂತಿಮ ಅಂಕಿ ಅಂಶ ಬಿಡುಗಡೆ ಮಾಡಿಲ್ಲ ಎಂದಿದೆ.

ಮತದಾನದ ಅಂಕಿ ಅಂಶಗಳ ಕುರಿತಾಗಿ ಮಾತ್ರ ನಾವು ಹೇಳುತ್ತಿಲ್ಲ. ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ನೋಂದಾಯಿತ ಮತದಾರರ ಸಂಖ್ಯೆಯೂ ಕಾಣೆಯಾಗಿದೆ ಎಂದು thehindubusinessline.com ವರದಿಯಲ್ಲಿ ತಿಳಿಸಿದೆ.

ವಿವಿಧ ಕ್ಷೇತ್ರಗಳ ಮತದಾರರ ಸಂಖ್ಯೆಯನ್ನು ತಿಳಿದುಕೊಳ್ಳಲು ಮುಂದಾದಾಗ, ಉತ್ತರ ಪ್ರದೇಶದಂತಹ ಕೆಲ ಆಯ್ದ ರಾಜ್ಯಗಳ ಬೂತ್‌ವಾರು ಮತದಾರರ ಪಟ್ಟಿಗಳು ಮಾತ್ರ ನಮಗೆ ದೊರೆತಿದೆ. ಒಡಿಶಾ, ಬಿಹಾರ, ದೆಹಲಿಯಂತಹ ರಾಜ್ಯಗಳ ದತ್ತಾಂಶಗಳು ವೆಬ್‌ಸೈಟ್‌ನಲ್ಲಿ ಲಭ್ಯವಿಲ್ಲ. ಬಿಹಾರ, ಒಡಿಶಾ ರಾಜ್ಯಗಳ ಮತದಾರರ ಸಂಖ್ಯೆ ತಿಳಿದುಕೊಳ್ಳಲು ಪ್ರಯತ್ನಿಸಿದಾಗ ಮಾಹಿತಿ ಒದಗಿಸಬೇಕಾದ ವೆಬ್‌ಸೈಟ್‌ನ ಪುಟದಲ್ಲಿ ದೋಷದ ಸಂದೇಶ ಕಾಣಿಸಿಕೊಂಡಿದೆ ಎಂದು ವರದಿ ಹೇಳಿದೆ.

ಇದುವರೆಗಿನ ಅಂದಾಜು ಮತದಾನದ ಪ್ರಮಾಣವು 2019ರ ಲೋಕಸಭೆ ಚುನಾವಣೆಯಲ್ಲಿ ಕಂಡುಬಂದಕ್ಕಿಂತ ಕಡಿಮೆಯಾಗಿದೆ ಎಂದು ದಿ ವೈರ್ ವರದಿ ತಿಳಿಸಿದೆ.

ಈ ಕುಸಿತವನ್ನು ಹೇಗೆ ಅರ್ಥ ಮಾಡಿಕೊಳ್ಳಬೇಕು? ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ ಅವರಂತಹ ಮೋದಿ ಸರ್ಕಾರದ ಟೀಕಾಕಾರರು ಎನ್‌ಡಿಎಯೇತರ ಪಕ್ಷಗಳಿಗಿಂತ ಬಿಜೆಪಿ ನೇತೃತ್ವದ ಎನ್‌ಡಿಎ ತೆಕ್ಕೆಯಲ್ಲಿರುವ ಕ್ಷೇತ್ರಗಳಲ್ಲಿ ಮತದಾನದ ಕುಸಿತವು ಹೆಚ್ಚಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಆದರೆ, ಸುಡುಬಿಸಿಲು ಮತದಾನದ ಪ್ರಮಾಣ ಕುಸಿಯಲು ಕಾರಣವಾಗಿದೆ ಎಂದು ನಂಬಿಕೊಂಡಿರುವ ಬಿಜೆಪಿ ಬೆಂಬಲಿಗರು, ಮೋದಿಯವರ ಪುನರಾಯ್ಕೆ ಪೂರ್ವ ನಿಗದಿತವಾಗಿರುವುದರಿಂದ ಹತಾಶರಾಗಿರುವ ಮೋದಿ ಸರ್ಕಾರದ ವಿರೋಧಿಗಳು ಮತದಾನ ಮಾಡಿರಲಿಕ್ಕಿಲ್ಲ ಎಂದು ಭಾವಿಸಿದ್ದಾರೆ ಎಂದು ವರದಿಯು ಹೇಳಿದೆ.

ಲೋಕಸಭಾ ಚುನಾವಣೆಯನ್ನು ಸಾಮಾನ್ಯ ವಹಿವಾಟು, ಮಾಮೂಲು ವ್ಯವಹಾರದಂತೆ ನಡೆಸಲಾಗುತ್ತಿದೆ. ಖುದ್ದು ಪ್ರಧಾನಿಯವರ ನೇತೃತ್ವದಲ್ಲಿ ಬಿಜೆಪಿ ನಾಯಕರು ನಿರ್ಭೀತಿಯಿಂದ ಅಲ್ಪಸಂಖ್ಯಾತರ ವಿರುದ್ಧ ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ ಮತ್ತು ಈ ಬಗ್ಗೆ ಚುನಾವಣಾ ಆಯೋಗವು ನಿರ್ಲಿಪ್ತವಾಗಿದೆ. ಕೆಲವು ಪ್ರಾದೇಶಿಕ ನಾಯಕರನ್ನು ಹೊರತುಪಡಿಸಿ ಪ್ರತಿಪಕ್ಷಗಳು ತಮ್ಮ ಕಾರ್ಯಕರ್ತರನ್ನು ಕ್ರೋಡೀಕರಿಸಲು ಮತ್ತು ಸಂಪನ್ಮೂಲಗಳನ್ನು ಸಂಗ್ರಹಿಸಲು ಹೆಣಗಾಡುತ್ತಿವೆ. ಇದು ಮೋದಿ ಆಡಳಿತವು ಎಸಗಿರುವ ಅತಿರೇಕಗಳಿಗೆ ವಿಶ್ವಾಸಾರ್ಹವಾದ ಸವಾಲು ಇಲ್ಲ ಎಂಬ ಭಾವನೆಯನ್ನು ಹುಟ್ಟು ಹಾಕಿದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

ಸಮಾನ ಸ್ಪರ್ಧಾಕಣದ ಕೊರತೆ ಎದ್ದು ಕಾಣುತ್ತಿದೆ. ಅದು ರಹಸ್ಯವಾಗಿ ಉಳಿದಿಲ್ಲ. 18ನೇ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ವಿಷಯಗಳು ಪ್ರಾಬಲ್ಯ ಪಡೆದಿವೆ ಮತ್ತು ಪುನರಾವರ್ತಿತ ಪ್ರಚಾರದೊಂದಿಗೆ ಹತಾಶೆ ಕಂಡು ಬರುತ್ತಿದೆ. ಇದು ಮೋದಿ ಸರ್ಕಾರದ ಬೆಂಬಲಿಗರು ಮತ್ತು ವಿರೋಧಿಗಳಲ್ಲಿ ಮತದಾನದ ಪ್ರಮಾಣ ಕುಸಿಯಲು ನಿಜವಾದ ಕಾರಣವಾಗಿರಬಹುದು ಎಂದು ದಿ ವೈರ್ ಅಂದಾಜಿಸಿದೆ.

ಇದನ್ನೂ ಓದಿ : ಅರವಿಂದ್ ಕೇಜ್ರಿವಾಲ್‌ನ್ನು ಚುನಾವಣೆಗೆ ಮುನ್ನ ಬಂಧಿಸಿದ್ದು ಏಕೆ? EDಗೆ ಉತ್ತರಿಸುವಂತೆ ಸೂಚಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...