Homeಮುಖಪುಟಲೋಕಸಭೆ ಚುನಾವಣೆ : 1 ಮತ್ತು 2ನೇ ಹಂತದ ಮತದಾನದ ಅಂತಿಮ ಅಂಕಿ ಅಂಶ ಇನ್ನೂ...

ಲೋಕಸಭೆ ಚುನಾವಣೆ : 1 ಮತ್ತು 2ನೇ ಹಂತದ ಮತದಾನದ ಅಂತಿಮ ಅಂಕಿ ಅಂಶ ಇನ್ನೂ ಪ್ರಕಟಿಸದ ಚು. ಆಯೋಗ

- Advertisement -
- Advertisement -

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ಮತ್ತು ಎರಡನೇ ಹಂತದ ಮತದಾನ ಏಪ್ರಿಲ್ 26 ರಂದು ನಡೆದಿದೆ. ಆದರೆ, ಭಾರತೀಯ ಚುನಾವಣಾ ಆಯೋಗ (ಇಸಿಐ) ಎರಡೂ ಹಂತದ ಮತದಾನದ ಅಂತಿಮ ಅಂಕಿ ಅಂಶಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ.

ಎರಡೂ ಬಾರಿಯೂ ಸಂಜೆ 7 ಗಂಟೆಯ ಹೊತ್ತಿಗೆ ಮತದಾನದ ಅಂದಾಜು ಟ್ರೆಂಡ್ ಬಗ್ಗೆ ಮಾತ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಏಪ್ರಿಲ್ 19 ರಂದು ಅಂದಾಜು 60 ಶೇ. ಮತ್ತು ಏಪ್ರಿಲ್ 26 ರಂದು 60.96 ಶೇ. ಮತದಾನವಾಗಿದೆ ಎಂದಿದೆ.

thehindubusinessline.com ಪ್ರಕಟಿಸಿದ ವರದಿಯಲ್ಲಿ ಚುನಾವಣಾ ಆಯೋಗದ ಉನ್ನತ ಅಧಿಕಾರಿಯೊಬ್ಬರು ಮೊದಲ ಹಂತದಲ್ಲಿ ಅಂದಾಜು ಶೇ. 66.14 ಮತ್ತು ಎರಡನೇ ಹಂತದಲ್ಲಿ ಶೇ. 66.7 ರಷ್ಟು ಅಂತಿಮ ಮತದಾನವಾಗಿದೆ ಎಂದು ತಿಳಿಸಿದ್ದಾರೆ. ಅಂತಿಮ ಅಂಕಿ ಅಂಶಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸುತ್ತೇವೆ ಎಂದಿದ್ದಾರೆ. ಆದರೆ, ಇದುವರೆಗೆ ಅಂತಿಮ ಅಂಕಿ ಅಂಶ ಬಿಡುಗಡೆ ಮಾಡಿಲ್ಲ ಎಂದಿದೆ.

ಮತದಾನದ ಅಂಕಿ ಅಂಶಗಳ ಕುರಿತಾಗಿ ಮಾತ್ರ ನಾವು ಹೇಳುತ್ತಿಲ್ಲ. ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ನೋಂದಾಯಿತ ಮತದಾರರ ಸಂಖ್ಯೆಯೂ ಕಾಣೆಯಾಗಿದೆ ಎಂದು thehindubusinessline.com ವರದಿಯಲ್ಲಿ ತಿಳಿಸಿದೆ.

ವಿವಿಧ ಕ್ಷೇತ್ರಗಳ ಮತದಾರರ ಸಂಖ್ಯೆಯನ್ನು ತಿಳಿದುಕೊಳ್ಳಲು ಮುಂದಾದಾಗ, ಉತ್ತರ ಪ್ರದೇಶದಂತಹ ಕೆಲ ಆಯ್ದ ರಾಜ್ಯಗಳ ಬೂತ್‌ವಾರು ಮತದಾರರ ಪಟ್ಟಿಗಳು ಮಾತ್ರ ನಮಗೆ ದೊರೆತಿದೆ. ಒಡಿಶಾ, ಬಿಹಾರ, ದೆಹಲಿಯಂತಹ ರಾಜ್ಯಗಳ ದತ್ತಾಂಶಗಳು ವೆಬ್‌ಸೈಟ್‌ನಲ್ಲಿ ಲಭ್ಯವಿಲ್ಲ. ಬಿಹಾರ, ಒಡಿಶಾ ರಾಜ್ಯಗಳ ಮತದಾರರ ಸಂಖ್ಯೆ ತಿಳಿದುಕೊಳ್ಳಲು ಪ್ರಯತ್ನಿಸಿದಾಗ ಮಾಹಿತಿ ಒದಗಿಸಬೇಕಾದ ವೆಬ್‌ಸೈಟ್‌ನ ಪುಟದಲ್ಲಿ ದೋಷದ ಸಂದೇಶ ಕಾಣಿಸಿಕೊಂಡಿದೆ ಎಂದು ವರದಿ ಹೇಳಿದೆ.

ಇದುವರೆಗಿನ ಅಂದಾಜು ಮತದಾನದ ಪ್ರಮಾಣವು 2019ರ ಲೋಕಸಭೆ ಚುನಾವಣೆಯಲ್ಲಿ ಕಂಡುಬಂದಕ್ಕಿಂತ ಕಡಿಮೆಯಾಗಿದೆ ಎಂದು ದಿ ವೈರ್ ವರದಿ ತಿಳಿಸಿದೆ.

ಈ ಕುಸಿತವನ್ನು ಹೇಗೆ ಅರ್ಥ ಮಾಡಿಕೊಳ್ಳಬೇಕು? ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ ಅವರಂತಹ ಮೋದಿ ಸರ್ಕಾರದ ಟೀಕಾಕಾರರು ಎನ್‌ಡಿಎಯೇತರ ಪಕ್ಷಗಳಿಗಿಂತ ಬಿಜೆಪಿ ನೇತೃತ್ವದ ಎನ್‌ಡಿಎ ತೆಕ್ಕೆಯಲ್ಲಿರುವ ಕ್ಷೇತ್ರಗಳಲ್ಲಿ ಮತದಾನದ ಕುಸಿತವು ಹೆಚ್ಚಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಆದರೆ, ಸುಡುಬಿಸಿಲು ಮತದಾನದ ಪ್ರಮಾಣ ಕುಸಿಯಲು ಕಾರಣವಾಗಿದೆ ಎಂದು ನಂಬಿಕೊಂಡಿರುವ ಬಿಜೆಪಿ ಬೆಂಬಲಿಗರು, ಮೋದಿಯವರ ಪುನರಾಯ್ಕೆ ಪೂರ್ವ ನಿಗದಿತವಾಗಿರುವುದರಿಂದ ಹತಾಶರಾಗಿರುವ ಮೋದಿ ಸರ್ಕಾರದ ವಿರೋಧಿಗಳು ಮತದಾನ ಮಾಡಿರಲಿಕ್ಕಿಲ್ಲ ಎಂದು ಭಾವಿಸಿದ್ದಾರೆ ಎಂದು ವರದಿಯು ಹೇಳಿದೆ.

ಲೋಕಸಭಾ ಚುನಾವಣೆಯನ್ನು ಸಾಮಾನ್ಯ ವಹಿವಾಟು, ಮಾಮೂಲು ವ್ಯವಹಾರದಂತೆ ನಡೆಸಲಾಗುತ್ತಿದೆ. ಖುದ್ದು ಪ್ರಧಾನಿಯವರ ನೇತೃತ್ವದಲ್ಲಿ ಬಿಜೆಪಿ ನಾಯಕರು ನಿರ್ಭೀತಿಯಿಂದ ಅಲ್ಪಸಂಖ್ಯಾತರ ವಿರುದ್ಧ ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ ಮತ್ತು ಈ ಬಗ್ಗೆ ಚುನಾವಣಾ ಆಯೋಗವು ನಿರ್ಲಿಪ್ತವಾಗಿದೆ. ಕೆಲವು ಪ್ರಾದೇಶಿಕ ನಾಯಕರನ್ನು ಹೊರತುಪಡಿಸಿ ಪ್ರತಿಪಕ್ಷಗಳು ತಮ್ಮ ಕಾರ್ಯಕರ್ತರನ್ನು ಕ್ರೋಡೀಕರಿಸಲು ಮತ್ತು ಸಂಪನ್ಮೂಲಗಳನ್ನು ಸಂಗ್ರಹಿಸಲು ಹೆಣಗಾಡುತ್ತಿವೆ. ಇದು ಮೋದಿ ಆಡಳಿತವು ಎಸಗಿರುವ ಅತಿರೇಕಗಳಿಗೆ ವಿಶ್ವಾಸಾರ್ಹವಾದ ಸವಾಲು ಇಲ್ಲ ಎಂಬ ಭಾವನೆಯನ್ನು ಹುಟ್ಟು ಹಾಕಿದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

ಸಮಾನ ಸ್ಪರ್ಧಾಕಣದ ಕೊರತೆ ಎದ್ದು ಕಾಣುತ್ತಿದೆ. ಅದು ರಹಸ್ಯವಾಗಿ ಉಳಿದಿಲ್ಲ. 18ನೇ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ವಿಷಯಗಳು ಪ್ರಾಬಲ್ಯ ಪಡೆದಿವೆ ಮತ್ತು ಪುನರಾವರ್ತಿತ ಪ್ರಚಾರದೊಂದಿಗೆ ಹತಾಶೆ ಕಂಡು ಬರುತ್ತಿದೆ. ಇದು ಮೋದಿ ಸರ್ಕಾರದ ಬೆಂಬಲಿಗರು ಮತ್ತು ವಿರೋಧಿಗಳಲ್ಲಿ ಮತದಾನದ ಪ್ರಮಾಣ ಕುಸಿಯಲು ನಿಜವಾದ ಕಾರಣವಾಗಿರಬಹುದು ಎಂದು ದಿ ವೈರ್ ಅಂದಾಜಿಸಿದೆ.

ಇದನ್ನೂ ಓದಿ : ಅರವಿಂದ್ ಕೇಜ್ರಿವಾಲ್‌ನ್ನು ಚುನಾವಣೆಗೆ ಮುನ್ನ ಬಂಧಿಸಿದ್ದು ಏಕೆ? EDಗೆ ಉತ್ತರಿಸುವಂತೆ ಸೂಚಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...