Homeಮುಖಪುಟಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಟ್ರಸ್ಟ್‌ಗಳ ತನಿಖೆಗೆ ಸರ್ಕಾರಿ ಸಮಿತಿ ರಚನೆ

ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಟ್ರಸ್ಟ್‌ಗಳ ತನಿಖೆಗೆ ಸರ್ಕಾರಿ ಸಮಿತಿ ರಚನೆ

ಗಾಂಧಿ ಕುಟುಂಬ ನಡೆಸುವ ಟ್ರಸ್ಟ್‌ಗಳಿಂದ ಹಣ ವರ್ಗಾವಣೆ ತಡೆ ಕಾಯ್ದೆ (PMLA), ಆದಾಯ ತೆರಿಗೆ ಕಾಯ್ದೆ, ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಕಾನೂನು ಉಲ್ಲಂಘನೆಯ ಬಗ್ಗೆ ತನಿಖೆ ನಡೆಯಲಿದೆ.

- Advertisement -
- Advertisement -

ಗಾಂಧಿ ಕುಟುಂಬದೊಂದಿಗೆ ಸಂಬಂಧ ಹೊಂದಿರುವ ಮೂರು ಟ್ರಸ್ಟ್‌ಗಳ ಆರ್ಥಿಕ ಪ್ರಮಾದಗಳಿಗಾಗಿ ತನಿಖೆ ನಡೆಸಲಾಗುವುದು ಎಂದು ಸರ್ಕಾರ ಇಂದು ತಿಳಿಸಿದೆ. ರಾಜೀವ್ ಗಾಂಧಿ ಫೌಂಡೇಶನ್, ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಮತ್ತು ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ ಗಳು ಆದಾಯ ತೆರಿಗೆ ಮತ್ತು ವಿದೇಶಿ ದೇಣಿಗೆ ನಿಯಮಗಳ ಉಲ್ಲಂಘನೆ ಮಾಡಿದೆ. ಅದರ ಕುರಿತು ತನಿಖೆಯನ್ನು ನಡೆಸಲು ಕೇಂದ್ರ ಗೃಹ ಸಚಿವಾಲಯವು ಒಂದು ಸಮಿತಿಯನ್ನು ರಚಿಸಿದೆ ಎಂದು ಸಚಿವಾಲಯದ ವಕ್ತಾರರು ಟ್ವೀಟ್ ಮಾಡಿದ್ದಾರೆ.

ಗಾಂಧಿ ಕುಟುಂಬ ನಡೆಸುವ ಟ್ರಸ್ಟ್‌ಗಳಿಂದ ಹಣ ವರ್ಗಾವಣೆ ತಡೆ ಕಾಯ್ದೆ (PMLA), ಆದಾಯ ತೆರಿಗೆ ಕಾಯ್ದೆ, ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಕಾನೂನು ಉಲ್ಲಂಘನೆಯ ಬಗ್ಗೆ ತನಿಖೆ ನಡೆಯಲಿದೆ. ಜಾರಿ ನಿರ್ದೇಶನಾಲಯದ ವಿಶೇಷ ನಿರ್ದೇಶಕರು ಸಮಿತಿಯ ನೇತೃತ್ವ ವಹಿಸಲಿದ್ದಾರೆ ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ರಾಜೀವ್ ಗಾಂಧಿ ಪ್ರತಿಷ್ಠಾನವನ್ನು ಜೂನ್ 1991 ರಲ್ಲಿ ಮತ್ತು ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಅನ್ನು 2002 ರಲ್ಲಿ ಸ್ಥಾಪಿಸಲಾಯಿತು; 1991 ರಲ್ಲಿ ಹತ್ಯೆಗೀಡಾದ ಮಾಜಿ ರಾಜೀವ್‌ ಗಾಂಧಿಯವರ ಪತ್ನಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇದರ ನೇತೃತ್ವ ವಹಿಸಿದ್ದಾರೆ.

ಎಲ್ಲಾ ಹಣಕಾಸಿನ ನಿರ್ವಹಣೆಯ ಕುರಿತು ಲೆಕ್ಕಪರಿಶೋಧನೆ ನಡೆಸಲಾಗಿದೆ. ಇಲ್ಲಿ ಯಾವುದೇ ತಪ್ಪುಗಳಾಗಿಲ್ಲ. ತಮ್ಮ ವಿರುದ್ಧದ ಇತ್ತೀಚಿಗೆ ಕೆಲವು ಸಂಚುಗಳನ್ನು ನಡೆಸುತ್ತಿದ್ದು, ಇವೆಲ್ಲಾ ರಾಜಕೀಯ ಕಾರಣಗಳಿಗಾಗಿ ಹೆಣೆಯಲ್ಪಟ್ಟ ತನಿಖೆಗಳಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

“RGF ವಹಿವಾಟಿನ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದ ಆರೋಪಗಳ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಪಾರದರ್ಶಕತೆಗೆ ಬದ್ಧವಾಗಿದೆ” ಎಂದು ಆಡಳಿತಾರೂಢ BJP ಬಿಜೆಪಿ ಹೇಳಿದೆ.

ಕಳೆದ ತಿಂಗಳು ಬಿಜೆಪಿ, “ಇದು ಕಾಂಗ್ರೆಸ್ ಟ್ರಸ್ಟ್‌ಗಳಿಗೆ ಸಂಬಂಧಿಸಿರುವ ಲಜ್ಜೆಗೆಟ್ಟ ವಂಚನೆ ಎಂದು ಆರೋಪಿಸಿತ್ತು. ತಾನು ಅಧಿಕಾರದಲ್ಲಿದ್ದಾಗ, ಮನಮೋಹನ್ ಸಿಂಗ್ ಸರ್ಕಾರದ ಪ್ರಧಾನ ಮಂತ್ರಿಯ ರಾಷ್ಟ್ರೀಯ ಪರಿಹಾರ ನಿಧಿಯಿಂದ ಹಣವನ್ನು ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ನೀಡಿತ್ತು ಎಂದು ಆರೋಪಿಸಿದರು.

“ಯುಪಿಎ ತನ್ನ ಆಡಳಿತದಲ್ಲಿ ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ಹಣವನ್ನು ದಾನ ಮಾಡುತ್ತಿತ್ತು. PMNRF ಮಂಡಳಿಯಲ್ಲಿ ಕುಳಿತಿದ್ದವರು ಶ್ರೀಮತಿ ಸೋನಿಯಾ ಗಾಂಧಿ. RGF ಅಧ್ಯಕ್ಷರು ಶ್ರೀಮತಿ ಸೋನಿಯಾ ಗಾಂಧಿಯಾಗಿದ್ದರು. ಇದು ಸಂಪೂರ್ಣವಾಗಿ ಖಂಡನೀಯ” ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಜೂನ್ 15 ರಂದು ಚೀನಾ ಜೊತೆಗಿನ ಗಡಿ ಘರ್ಷಣೆಯ ಕುರಿತ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ದೈನಂದಿನ ದಾಳಿಗೆ ಪ್ರತಿಯಾಗಿ 2005 ರಲ್ಲಿ ಚೀನಾದ ರಾಯಭಾರ ಕಚೇರಿಯಿಂದ ರಾಜೀವ್ ಗಾಂಧಿ ಪ್ರತಿಷ್ಠಾನವು ಹಣವನ್ನು ಪಡೆದುಕೊಂಡಿದೆ ಎಂದು ಆಡಳಿತ ಪಕ್ಷ ಆರೋಪಿಸಿದೆ.

“ಆಗಿನ ಯುಪಿಎ ಸರ್ಕಾರ ಚೀನಿಯರಿಂದ ಲಂಚ ಪಡೆದಿದೆಯೇ? ಈ ದೇಣಿಗೆಯನ್ನು ತೆಗೆದುಕೊಂಡ ನಂತರ, ಪ್ರತಿಷ್ಠಾನವು ಚೀನಾದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದವನ್ನು ಶಿಫಾರಸು ಮಾಡಿತು, ಅದು ಚೀನೀಯರ ಪರವಾಗಿ ಹೆಚ್ಚು ಒಲವು ತೋರಿತು” ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದರು.

1991 ರಲ್ಲಿ ಹಣಕಾಸು ಸಚಿವರಾಗಿ ತಮ್ಮ ಬಜೆಟ್ ಭಾಷಣದಲ್ಲಿ ಮನಮೋಹನ್ ಸಿಂಗ್ ಅವರು ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ 100 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದರು ಎಂದು ಬಿಜೆಪಿ ಆರೋಪಿಸಿದೆ.

ಸೋನಿಯಾ ಗಾಂಧಿಯವರಲ್ಲದೆ, ರಾಜೀವ್ ಗಾಂಧಿ ಪ್ರತಿಷ್ಠಾನದ ಮಂಡಳಿಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಪಿ ಚಿದಂಬರಂ ಮತ್ತು ಮನಮೋಹನ್ ಸಿಂಗ್ ಸೇರಿದ್ದಾರೆ.

ಈ ಆರೋಪಗಳನ್ನೆಲ್ಲಾ ಅಲ್ಲಗಳೆದ ಕಾಂಗ್ರೇಸ್, ಚೀನಾ ಬಿಕ್ಕಟ್ಟನ್ನು ಸರ್ಕಾರ ಸರಿಯಾಗಿ ನಿಭಾಯಿಸುವುದರಿಂದ ಎಡವಿದೆ. ಹಾಗಾಗಿ ಈ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಇದು ಎಂದು ಕಾಂಗ್ರೆಸ್ ಹೇಳಿದೆ.


ಇದನ್ನೂ ಓದಿ: ಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ ಚೀನಾದ ಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...