Homeಮುಖಪುಟಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಟ್ರಸ್ಟ್‌ಗಳ ತನಿಖೆಗೆ ಸರ್ಕಾರಿ ಸಮಿತಿ ರಚನೆ

ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಟ್ರಸ್ಟ್‌ಗಳ ತನಿಖೆಗೆ ಸರ್ಕಾರಿ ಸಮಿತಿ ರಚನೆ

ಗಾಂಧಿ ಕುಟುಂಬ ನಡೆಸುವ ಟ್ರಸ್ಟ್‌ಗಳಿಂದ ಹಣ ವರ್ಗಾವಣೆ ತಡೆ ಕಾಯ್ದೆ (PMLA), ಆದಾಯ ತೆರಿಗೆ ಕಾಯ್ದೆ, ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಕಾನೂನು ಉಲ್ಲಂಘನೆಯ ಬಗ್ಗೆ ತನಿಖೆ ನಡೆಯಲಿದೆ.

- Advertisement -
- Advertisement -

ಗಾಂಧಿ ಕುಟುಂಬದೊಂದಿಗೆ ಸಂಬಂಧ ಹೊಂದಿರುವ ಮೂರು ಟ್ರಸ್ಟ್‌ಗಳ ಆರ್ಥಿಕ ಪ್ರಮಾದಗಳಿಗಾಗಿ ತನಿಖೆ ನಡೆಸಲಾಗುವುದು ಎಂದು ಸರ್ಕಾರ ಇಂದು ತಿಳಿಸಿದೆ. ರಾಜೀವ್ ಗಾಂಧಿ ಫೌಂಡೇಶನ್, ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಮತ್ತು ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ ಗಳು ಆದಾಯ ತೆರಿಗೆ ಮತ್ತು ವಿದೇಶಿ ದೇಣಿಗೆ ನಿಯಮಗಳ ಉಲ್ಲಂಘನೆ ಮಾಡಿದೆ. ಅದರ ಕುರಿತು ತನಿಖೆಯನ್ನು ನಡೆಸಲು ಕೇಂದ್ರ ಗೃಹ ಸಚಿವಾಲಯವು ಒಂದು ಸಮಿತಿಯನ್ನು ರಚಿಸಿದೆ ಎಂದು ಸಚಿವಾಲಯದ ವಕ್ತಾರರು ಟ್ವೀಟ್ ಮಾಡಿದ್ದಾರೆ.

ಗಾಂಧಿ ಕುಟುಂಬ ನಡೆಸುವ ಟ್ರಸ್ಟ್‌ಗಳಿಂದ ಹಣ ವರ್ಗಾವಣೆ ತಡೆ ಕಾಯ್ದೆ (PMLA), ಆದಾಯ ತೆರಿಗೆ ಕಾಯ್ದೆ, ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಕಾನೂನು ಉಲ್ಲಂಘನೆಯ ಬಗ್ಗೆ ತನಿಖೆ ನಡೆಯಲಿದೆ. ಜಾರಿ ನಿರ್ದೇಶನಾಲಯದ ವಿಶೇಷ ನಿರ್ದೇಶಕರು ಸಮಿತಿಯ ನೇತೃತ್ವ ವಹಿಸಲಿದ್ದಾರೆ ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ರಾಜೀವ್ ಗಾಂಧಿ ಪ್ರತಿಷ್ಠಾನವನ್ನು ಜೂನ್ 1991 ರಲ್ಲಿ ಮತ್ತು ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಅನ್ನು 2002 ರಲ್ಲಿ ಸ್ಥಾಪಿಸಲಾಯಿತು; 1991 ರಲ್ಲಿ ಹತ್ಯೆಗೀಡಾದ ಮಾಜಿ ರಾಜೀವ್‌ ಗಾಂಧಿಯವರ ಪತ್ನಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇದರ ನೇತೃತ್ವ ವಹಿಸಿದ್ದಾರೆ.

ಎಲ್ಲಾ ಹಣಕಾಸಿನ ನಿರ್ವಹಣೆಯ ಕುರಿತು ಲೆಕ್ಕಪರಿಶೋಧನೆ ನಡೆಸಲಾಗಿದೆ. ಇಲ್ಲಿ ಯಾವುದೇ ತಪ್ಪುಗಳಾಗಿಲ್ಲ. ತಮ್ಮ ವಿರುದ್ಧದ ಇತ್ತೀಚಿಗೆ ಕೆಲವು ಸಂಚುಗಳನ್ನು ನಡೆಸುತ್ತಿದ್ದು, ಇವೆಲ್ಲಾ ರಾಜಕೀಯ ಕಾರಣಗಳಿಗಾಗಿ ಹೆಣೆಯಲ್ಪಟ್ಟ ತನಿಖೆಗಳಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

“RGF ವಹಿವಾಟಿನ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದ ಆರೋಪಗಳ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಪಾರದರ್ಶಕತೆಗೆ ಬದ್ಧವಾಗಿದೆ” ಎಂದು ಆಡಳಿತಾರೂಢ BJP ಬಿಜೆಪಿ ಹೇಳಿದೆ.

ಕಳೆದ ತಿಂಗಳು ಬಿಜೆಪಿ, “ಇದು ಕಾಂಗ್ರೆಸ್ ಟ್ರಸ್ಟ್‌ಗಳಿಗೆ ಸಂಬಂಧಿಸಿರುವ ಲಜ್ಜೆಗೆಟ್ಟ ವಂಚನೆ ಎಂದು ಆರೋಪಿಸಿತ್ತು. ತಾನು ಅಧಿಕಾರದಲ್ಲಿದ್ದಾಗ, ಮನಮೋಹನ್ ಸಿಂಗ್ ಸರ್ಕಾರದ ಪ್ರಧಾನ ಮಂತ್ರಿಯ ರಾಷ್ಟ್ರೀಯ ಪರಿಹಾರ ನಿಧಿಯಿಂದ ಹಣವನ್ನು ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ನೀಡಿತ್ತು ಎಂದು ಆರೋಪಿಸಿದರು.

“ಯುಪಿಎ ತನ್ನ ಆಡಳಿತದಲ್ಲಿ ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ಹಣವನ್ನು ದಾನ ಮಾಡುತ್ತಿತ್ತು. PMNRF ಮಂಡಳಿಯಲ್ಲಿ ಕುಳಿತಿದ್ದವರು ಶ್ರೀಮತಿ ಸೋನಿಯಾ ಗಾಂಧಿ. RGF ಅಧ್ಯಕ್ಷರು ಶ್ರೀಮತಿ ಸೋನಿಯಾ ಗಾಂಧಿಯಾಗಿದ್ದರು. ಇದು ಸಂಪೂರ್ಣವಾಗಿ ಖಂಡನೀಯ” ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಜೂನ್ 15 ರಂದು ಚೀನಾ ಜೊತೆಗಿನ ಗಡಿ ಘರ್ಷಣೆಯ ಕುರಿತ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ದೈನಂದಿನ ದಾಳಿಗೆ ಪ್ರತಿಯಾಗಿ 2005 ರಲ್ಲಿ ಚೀನಾದ ರಾಯಭಾರ ಕಚೇರಿಯಿಂದ ರಾಜೀವ್ ಗಾಂಧಿ ಪ್ರತಿಷ್ಠಾನವು ಹಣವನ್ನು ಪಡೆದುಕೊಂಡಿದೆ ಎಂದು ಆಡಳಿತ ಪಕ್ಷ ಆರೋಪಿಸಿದೆ.

“ಆಗಿನ ಯುಪಿಎ ಸರ್ಕಾರ ಚೀನಿಯರಿಂದ ಲಂಚ ಪಡೆದಿದೆಯೇ? ಈ ದೇಣಿಗೆಯನ್ನು ತೆಗೆದುಕೊಂಡ ನಂತರ, ಪ್ರತಿಷ್ಠಾನವು ಚೀನಾದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದವನ್ನು ಶಿಫಾರಸು ಮಾಡಿತು, ಅದು ಚೀನೀಯರ ಪರವಾಗಿ ಹೆಚ್ಚು ಒಲವು ತೋರಿತು” ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದರು.

1991 ರಲ್ಲಿ ಹಣಕಾಸು ಸಚಿವರಾಗಿ ತಮ್ಮ ಬಜೆಟ್ ಭಾಷಣದಲ್ಲಿ ಮನಮೋಹನ್ ಸಿಂಗ್ ಅವರು ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ 100 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದರು ಎಂದು ಬಿಜೆಪಿ ಆರೋಪಿಸಿದೆ.

ಸೋನಿಯಾ ಗಾಂಧಿಯವರಲ್ಲದೆ, ರಾಜೀವ್ ಗಾಂಧಿ ಪ್ರತಿಷ್ಠಾನದ ಮಂಡಳಿಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಪಿ ಚಿದಂಬರಂ ಮತ್ತು ಮನಮೋಹನ್ ಸಿಂಗ್ ಸೇರಿದ್ದಾರೆ.

ಈ ಆರೋಪಗಳನ್ನೆಲ್ಲಾ ಅಲ್ಲಗಳೆದ ಕಾಂಗ್ರೇಸ್, ಚೀನಾ ಬಿಕ್ಕಟ್ಟನ್ನು ಸರ್ಕಾರ ಸರಿಯಾಗಿ ನಿಭಾಯಿಸುವುದರಿಂದ ಎಡವಿದೆ. ಹಾಗಾಗಿ ಈ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಇದು ಎಂದು ಕಾಂಗ್ರೆಸ್ ಹೇಳಿದೆ.


ಇದನ್ನೂ ಓದಿ: ಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ ಚೀನಾದ ಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...