Homeಮುಖಪುಟಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಟ್ರಸ್ಟ್‌ಗಳ ತನಿಖೆಗೆ ಸರ್ಕಾರಿ ಸಮಿತಿ ರಚನೆ

ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಟ್ರಸ್ಟ್‌ಗಳ ತನಿಖೆಗೆ ಸರ್ಕಾರಿ ಸಮಿತಿ ರಚನೆ

ಗಾಂಧಿ ಕುಟುಂಬ ನಡೆಸುವ ಟ್ರಸ್ಟ್‌ಗಳಿಂದ ಹಣ ವರ್ಗಾವಣೆ ತಡೆ ಕಾಯ್ದೆ (PMLA), ಆದಾಯ ತೆರಿಗೆ ಕಾಯ್ದೆ, ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಕಾನೂನು ಉಲ್ಲಂಘನೆಯ ಬಗ್ಗೆ ತನಿಖೆ ನಡೆಯಲಿದೆ.

- Advertisement -
- Advertisement -

ಗಾಂಧಿ ಕುಟುಂಬದೊಂದಿಗೆ ಸಂಬಂಧ ಹೊಂದಿರುವ ಮೂರು ಟ್ರಸ್ಟ್‌ಗಳ ಆರ್ಥಿಕ ಪ್ರಮಾದಗಳಿಗಾಗಿ ತನಿಖೆ ನಡೆಸಲಾಗುವುದು ಎಂದು ಸರ್ಕಾರ ಇಂದು ತಿಳಿಸಿದೆ. ರಾಜೀವ್ ಗಾಂಧಿ ಫೌಂಡೇಶನ್, ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಮತ್ತು ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ ಗಳು ಆದಾಯ ತೆರಿಗೆ ಮತ್ತು ವಿದೇಶಿ ದೇಣಿಗೆ ನಿಯಮಗಳ ಉಲ್ಲಂಘನೆ ಮಾಡಿದೆ. ಅದರ ಕುರಿತು ತನಿಖೆಯನ್ನು ನಡೆಸಲು ಕೇಂದ್ರ ಗೃಹ ಸಚಿವಾಲಯವು ಒಂದು ಸಮಿತಿಯನ್ನು ರಚಿಸಿದೆ ಎಂದು ಸಚಿವಾಲಯದ ವಕ್ತಾರರು ಟ್ವೀಟ್ ಮಾಡಿದ್ದಾರೆ.

ಗಾಂಧಿ ಕುಟುಂಬ ನಡೆಸುವ ಟ್ರಸ್ಟ್‌ಗಳಿಂದ ಹಣ ವರ್ಗಾವಣೆ ತಡೆ ಕಾಯ್ದೆ (PMLA), ಆದಾಯ ತೆರಿಗೆ ಕಾಯ್ದೆ, ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಕಾನೂನು ಉಲ್ಲಂಘನೆಯ ಬಗ್ಗೆ ತನಿಖೆ ನಡೆಯಲಿದೆ. ಜಾರಿ ನಿರ್ದೇಶನಾಲಯದ ವಿಶೇಷ ನಿರ್ದೇಶಕರು ಸಮಿತಿಯ ನೇತೃತ್ವ ವಹಿಸಲಿದ್ದಾರೆ ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ರಾಜೀವ್ ಗಾಂಧಿ ಪ್ರತಿಷ್ಠಾನವನ್ನು ಜೂನ್ 1991 ರಲ್ಲಿ ಮತ್ತು ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಅನ್ನು 2002 ರಲ್ಲಿ ಸ್ಥಾಪಿಸಲಾಯಿತು; 1991 ರಲ್ಲಿ ಹತ್ಯೆಗೀಡಾದ ಮಾಜಿ ರಾಜೀವ್‌ ಗಾಂಧಿಯವರ ಪತ್ನಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇದರ ನೇತೃತ್ವ ವಹಿಸಿದ್ದಾರೆ.

ಎಲ್ಲಾ ಹಣಕಾಸಿನ ನಿರ್ವಹಣೆಯ ಕುರಿತು ಲೆಕ್ಕಪರಿಶೋಧನೆ ನಡೆಸಲಾಗಿದೆ. ಇಲ್ಲಿ ಯಾವುದೇ ತಪ್ಪುಗಳಾಗಿಲ್ಲ. ತಮ್ಮ ವಿರುದ್ಧದ ಇತ್ತೀಚಿಗೆ ಕೆಲವು ಸಂಚುಗಳನ್ನು ನಡೆಸುತ್ತಿದ್ದು, ಇವೆಲ್ಲಾ ರಾಜಕೀಯ ಕಾರಣಗಳಿಗಾಗಿ ಹೆಣೆಯಲ್ಪಟ್ಟ ತನಿಖೆಗಳಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

“RGF ವಹಿವಾಟಿನ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದ ಆರೋಪಗಳ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಪಾರದರ್ಶಕತೆಗೆ ಬದ್ಧವಾಗಿದೆ” ಎಂದು ಆಡಳಿತಾರೂಢ BJP ಬಿಜೆಪಿ ಹೇಳಿದೆ.

ಕಳೆದ ತಿಂಗಳು ಬಿಜೆಪಿ, “ಇದು ಕಾಂಗ್ರೆಸ್ ಟ್ರಸ್ಟ್‌ಗಳಿಗೆ ಸಂಬಂಧಿಸಿರುವ ಲಜ್ಜೆಗೆಟ್ಟ ವಂಚನೆ ಎಂದು ಆರೋಪಿಸಿತ್ತು. ತಾನು ಅಧಿಕಾರದಲ್ಲಿದ್ದಾಗ, ಮನಮೋಹನ್ ಸಿಂಗ್ ಸರ್ಕಾರದ ಪ್ರಧಾನ ಮಂತ್ರಿಯ ರಾಷ್ಟ್ರೀಯ ಪರಿಹಾರ ನಿಧಿಯಿಂದ ಹಣವನ್ನು ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ನೀಡಿತ್ತು ಎಂದು ಆರೋಪಿಸಿದರು.

“ಯುಪಿಎ ತನ್ನ ಆಡಳಿತದಲ್ಲಿ ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ಹಣವನ್ನು ದಾನ ಮಾಡುತ್ತಿತ್ತು. PMNRF ಮಂಡಳಿಯಲ್ಲಿ ಕುಳಿತಿದ್ದವರು ಶ್ರೀಮತಿ ಸೋನಿಯಾ ಗಾಂಧಿ. RGF ಅಧ್ಯಕ್ಷರು ಶ್ರೀಮತಿ ಸೋನಿಯಾ ಗಾಂಧಿಯಾಗಿದ್ದರು. ಇದು ಸಂಪೂರ್ಣವಾಗಿ ಖಂಡನೀಯ” ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಜೂನ್ 15 ರಂದು ಚೀನಾ ಜೊತೆಗಿನ ಗಡಿ ಘರ್ಷಣೆಯ ಕುರಿತ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ದೈನಂದಿನ ದಾಳಿಗೆ ಪ್ರತಿಯಾಗಿ 2005 ರಲ್ಲಿ ಚೀನಾದ ರಾಯಭಾರ ಕಚೇರಿಯಿಂದ ರಾಜೀವ್ ಗಾಂಧಿ ಪ್ರತಿಷ್ಠಾನವು ಹಣವನ್ನು ಪಡೆದುಕೊಂಡಿದೆ ಎಂದು ಆಡಳಿತ ಪಕ್ಷ ಆರೋಪಿಸಿದೆ.

“ಆಗಿನ ಯುಪಿಎ ಸರ್ಕಾರ ಚೀನಿಯರಿಂದ ಲಂಚ ಪಡೆದಿದೆಯೇ? ಈ ದೇಣಿಗೆಯನ್ನು ತೆಗೆದುಕೊಂಡ ನಂತರ, ಪ್ರತಿಷ್ಠಾನವು ಚೀನಾದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದವನ್ನು ಶಿಫಾರಸು ಮಾಡಿತು, ಅದು ಚೀನೀಯರ ಪರವಾಗಿ ಹೆಚ್ಚು ಒಲವು ತೋರಿತು” ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದರು.

1991 ರಲ್ಲಿ ಹಣಕಾಸು ಸಚಿವರಾಗಿ ತಮ್ಮ ಬಜೆಟ್ ಭಾಷಣದಲ್ಲಿ ಮನಮೋಹನ್ ಸಿಂಗ್ ಅವರು ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ 100 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದರು ಎಂದು ಬಿಜೆಪಿ ಆರೋಪಿಸಿದೆ.

ಸೋನಿಯಾ ಗಾಂಧಿಯವರಲ್ಲದೆ, ರಾಜೀವ್ ಗಾಂಧಿ ಪ್ರತಿಷ್ಠಾನದ ಮಂಡಳಿಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಪಿ ಚಿದಂಬರಂ ಮತ್ತು ಮನಮೋಹನ್ ಸಿಂಗ್ ಸೇರಿದ್ದಾರೆ.

ಈ ಆರೋಪಗಳನ್ನೆಲ್ಲಾ ಅಲ್ಲಗಳೆದ ಕಾಂಗ್ರೇಸ್, ಚೀನಾ ಬಿಕ್ಕಟ್ಟನ್ನು ಸರ್ಕಾರ ಸರಿಯಾಗಿ ನಿಭಾಯಿಸುವುದರಿಂದ ಎಡವಿದೆ. ಹಾಗಾಗಿ ಈ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಇದು ಎಂದು ಕಾಂಗ್ರೆಸ್ ಹೇಳಿದೆ.


ಇದನ್ನೂ ಓದಿ: ಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ ಚೀನಾದ ಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...