Homeಅಂತರಾಷ್ಟ್ರೀಯರಷ್ಯಾ ಮೇಲೆ ಆರ್ಥಿಕ ನಿರ್ಬಂಧ: ಗೂಗಲ್ ಪೇ, ಆಪಲ್ ಪೇ ಸ್ಥಗಿತದಿಂದ ಪರದಾಡಿದ ನಾಗರಿಕರು

ರಷ್ಯಾ ಮೇಲೆ ಆರ್ಥಿಕ ನಿರ್ಬಂಧ: ಗೂಗಲ್ ಪೇ, ಆಪಲ್ ಪೇ ಸ್ಥಗಿತದಿಂದ ಪರದಾಡಿದ ನಾಗರಿಕರು

ಅಂಕಿಅಂಶಗಳ ಪ್ರಕಾರ, 29% ರಷ್ಯನ್ನರು ಗೂಗಲ್ ಪೇ ಬಳಸುತ್ತಾರೆ ಮತ್ತು 20% ಜನರು ಆಪಲ್ ಪೇ ಬಳಸುತ್ತಾರೆ..

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಿಸಿದ ನಂತರ, ಅಮೆರಿಕ, ಇಂಗ್ಲೆಂಡ್ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ರಷ್ಯಾ ಮೇಲೆ ಹಲವಾರು ನಿರ್ಬಂಧಗಳನ್ನು ಹೇರಿವೆ. ಅಂತರರಾಷ್ಟ್ರೀಯ ಹಣಕಾಸು ವಹಿವಾಟುಗಳಿಗೆ ಬಳಸಲಾಗುತ್ತಿರುವ ಸ್ವಿಫ್ಟ್‌ (Society for Worldwide Interbank Financial Telecommunications) ಪಾವತಿ ವ್ಯವಸ್ಥೆಯನ್ನೂ ರಷ್ಯಾದ ಕೆಲವು ಬ್ಯಾಂಕುಗಳಲ್ಲಿ ಬಳಕೆ ಮಾಡಲಾಗದಂತೆ ನಿರ್ಬಂಧಿಸಲಾಗಿದೆ. ಇದರಿಂದಾಗಿ, ಸೋಮವಾರ ಅಮೆರಿಕನ್ ಡಾಲರ್ ವಿರುದ್ಧ ರಷ್ಯಾದ ಕರೆನ್ಸಿ ಸುಮಾರು 30% ರಷ್ಟು ಕುಸಿತ ಕಂಡಿದೆ.

ಈ ಎಲ್ಲಾ ಕಾರಣಗಳಿಂದಾಗಿ ರಷ್ಯಾ ಜನರ ದೈನಂದಿನ ವಹಿವಾಟಿನ ಮೇಲೆ ಅಪಾರ ಪರಿಣಾಮ ಬೀರಿದ್ದು, ಜನರು ಹಣಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಷ್ಯಾದಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗುವ ಸಾಧ್ಯತೆಯನ್ನು ಅರಿತವರು, ನಗದು ಹಣ ಪಡೆಯಲು ಹಲವಾರು ದಿನಗಳಿಂದ ಬ್ಯಾಂಕ್‌ಗಳು ಮತ್ತು ಎಟಿಎಂಗಳಿಗೆ ಅಲೆದಾಡುತ್ತಿದ್ದಾರೆ. ಬ್ಯಾಂಕ್-ಎಟಿಎಂಗಳ ಮುಂದೆ ದೀರ್ಘ ಸಾಲುಗಳಲ್ಲಿ ನಿಂತಿದ್ದಾರೆ.

ಅಮೆರಿಕ ರಷ್ಯಾದ ಮೇಲೆ ಆರ್ಥಿಕ ನಿರ್ಬಂಧಗಳನ್ನು ಮುಂದುವರಿಸಿದ್ದು, ರಷ್ಯಾದಲ್ಲಿ ಆಪಲ್ ಪೇ ಮತ್ತು ಗೂಗಲ್ ಪೇ ಸೇವೆಗಳನ್ನು ನಿರ್ಬಂಧಿಸಲಾಗಿದೆ. ಇದು ರಷ್ಯಾ ಜನರ ಆನ್‌ಲೈನ್ ವಹಿವಾಟಿನ ಮೇಲೆ ಪರಿಣಾಮ ಬೀರಿದೆ.

ರಷ್ಯಾದ ಹಲವಾರು ಬ್ಯಾಂಕ್‌ಗಳಲ್ಲಿನ ಗ್ರಾಹಕರು ತಮ್ಮ ಬ್ಯಾಂಕ್ ಕಾರ್ಡ್‌ಗಳನ್ನು ಆಪಲ್ ಪೇ ಮತ್ತು ಗೂಗಲ್ ಪೇ ಜೊತೆಗೆ ಬಳಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. “ನಿರ್ಬಂಧಕ್ಕೆ ಸಿಲುಕಿರುವ ಬ್ಯಾಂಕುಗಳ ಗ್ರಾಹಕರು (ವಿಟಿಬಿ ಗ್ರೂಪ್, ಸೋವ್ಕಾಂ ಬ್ಯಾಂಕ್, ನೋವಿಕೊಂ ಬ್ಯಾಂಕ್, ಪ್ರಾಮ್ಸ್ವ್ಯಾಜ್ ಬ್ಯಾಂಕ್, ಒಟ್ಕ್ರಿಟಿ) ತಮ್ಮ ಬ್ಯಾಂಕಿಂಗ್ ಕಾರ್ಡ್‌ಗಳನ್ನು ಆಪಲ್ ಪೇ ಮತ್ತು ಗೂಗಲ್ ಪೇ ಸೇವೆಗಳೊಂದಿಗೆ ಬಳಸಲು ಸಾಧ್ಯವಾಗುತ್ತಿಲ್ಲ. ಆದರೆ, ಈ ಕಾರ್ಡ್‌ಗಳ ಮೂಲಕ ಸ್ಥಳೀಯ ಪಾವತಿಗಳನ್ನು ಮಾಡಲು ರಷ್ಯಾದ್ಯಂತ ಸಾಧ್ಯವಿದೆ” ಎಂದು ರಷ್ಯನ್ ಸೆಂಟ್ರಲ್ ಬ್ಯಾಂಕ್ ತಿಳಿಸಿದೆ.

ಗೂಗಲ್ ಪೇ ಮತ್ತು ಆಪಲ್ ಪೇಗಳು ಅಮೆರಿಕ ರೀತಿಯಲ್ಲಿ ರಷ್ಯಾದಲ್ಲಿ ಜನಪ್ರಿಯವಾಗಿಲ್ಲ. ರಷ್ಯಾದ ಜನರು ಅಲ್ಲಿನ ಅತ್ಯಂತ ಜನಪ್ರಿಯ ಮೊಬೈಲ್ ಪಾವತಿ ಸೇವೆಯಾಗಿರುವ, ರಷ್ಯಾದ ಒಡೆತನದ್ದೇ ಆದ ಸ್ಬರ್‌ ಬ್ಯಾಂಕ್ ಆನ್ಲೈನ್ ಪೇ, ಯೂಮನಿ (ಹಿಂದೆ ಯಾಂಡೆಕ್ಸ್ ಮನಿ) ಮತ್ತು ಕ್ಯುವಿಗಳನ್ನು ಬಳಸುತ್ತಿದ್ದಾರೆ ಎಂದು ದಿ ವೆರ್ಜ್ ವರದಿ ಮಾಡಿದೆ.

ಅಂಕಿಅಂಶಗಳ ಪ್ರಕಾರ, 29% ರಷ್ಯನ್ನರು ಗೂಗಲ್ ಪೇ ಬಳಸುತ್ತಾರೆ ಮತ್ತು 20% ಜನರು ಆಪಲ್ ಪೇ ಬಳಸುತ್ತಾರೆ ಎಂದು ವರದಿ ಹೇಳಿದೆ.

ರಷ್ಯಾದ ಎರಡು ದೊಡ್ಡ ಹಣಕಾಸು ಸಂಸ್ಥೆಗಳಾದ ಸ್ಬರ್‌ ಬ್ಯಾಂಕ್ ಮತ್ತು ವಿಟಿಬಿ ಬ್ಯಾಂಕ್‌ಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ಹೇರಿದೆ. ಆದೇ ರೀತಿಯಲ್ಲಿ ಯುನೈಟೆಡ್ ಕಿಂಗ್‌ಡಂ ರಷ್ಯಾದ ಐದು ಬ್ಯಾಂಕ್‌ಗಳ ವಹಿವಾಟು ಮತ್ತು ಆಸ್ತಿಗಳನ್ನು ಸ್ಥಗಿತಗೊಳಿಸಿದೆ.


ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಬಿಕ್ಕಟ್ಟು: ಕ್ಷಿಪಣಿ ದಾಳಿ; ಕರ್ನಾಟಕ ಮೂಲದ ವಿದ್ಯಾರ್ಥಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...