Homeಅಂತರಾಷ್ಟ್ರೀಯರಷ್ಯಾ ಮೇಲೆ ಆರ್ಥಿಕ ನಿರ್ಬಂಧ: ಗೂಗಲ್ ಪೇ, ಆಪಲ್ ಪೇ ಸ್ಥಗಿತದಿಂದ ಪರದಾಡಿದ ನಾಗರಿಕರು

ರಷ್ಯಾ ಮೇಲೆ ಆರ್ಥಿಕ ನಿರ್ಬಂಧ: ಗೂಗಲ್ ಪೇ, ಆಪಲ್ ಪೇ ಸ್ಥಗಿತದಿಂದ ಪರದಾಡಿದ ನಾಗರಿಕರು

ಅಂಕಿಅಂಶಗಳ ಪ್ರಕಾರ, 29% ರಷ್ಯನ್ನರು ಗೂಗಲ್ ಪೇ ಬಳಸುತ್ತಾರೆ ಮತ್ತು 20% ಜನರು ಆಪಲ್ ಪೇ ಬಳಸುತ್ತಾರೆ..

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಿಸಿದ ನಂತರ, ಅಮೆರಿಕ, ಇಂಗ್ಲೆಂಡ್ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ರಷ್ಯಾ ಮೇಲೆ ಹಲವಾರು ನಿರ್ಬಂಧಗಳನ್ನು ಹೇರಿವೆ. ಅಂತರರಾಷ್ಟ್ರೀಯ ಹಣಕಾಸು ವಹಿವಾಟುಗಳಿಗೆ ಬಳಸಲಾಗುತ್ತಿರುವ ಸ್ವಿಫ್ಟ್‌ (Society for Worldwide Interbank Financial Telecommunications) ಪಾವತಿ ವ್ಯವಸ್ಥೆಯನ್ನೂ ರಷ್ಯಾದ ಕೆಲವು ಬ್ಯಾಂಕುಗಳಲ್ಲಿ ಬಳಕೆ ಮಾಡಲಾಗದಂತೆ ನಿರ್ಬಂಧಿಸಲಾಗಿದೆ. ಇದರಿಂದಾಗಿ, ಸೋಮವಾರ ಅಮೆರಿಕನ್ ಡಾಲರ್ ವಿರುದ್ಧ ರಷ್ಯಾದ ಕರೆನ್ಸಿ ಸುಮಾರು 30% ರಷ್ಟು ಕುಸಿತ ಕಂಡಿದೆ.

ಈ ಎಲ್ಲಾ ಕಾರಣಗಳಿಂದಾಗಿ ರಷ್ಯಾ ಜನರ ದೈನಂದಿನ ವಹಿವಾಟಿನ ಮೇಲೆ ಅಪಾರ ಪರಿಣಾಮ ಬೀರಿದ್ದು, ಜನರು ಹಣಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಷ್ಯಾದಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗುವ ಸಾಧ್ಯತೆಯನ್ನು ಅರಿತವರು, ನಗದು ಹಣ ಪಡೆಯಲು ಹಲವಾರು ದಿನಗಳಿಂದ ಬ್ಯಾಂಕ್‌ಗಳು ಮತ್ತು ಎಟಿಎಂಗಳಿಗೆ ಅಲೆದಾಡುತ್ತಿದ್ದಾರೆ. ಬ್ಯಾಂಕ್-ಎಟಿಎಂಗಳ ಮುಂದೆ ದೀರ್ಘ ಸಾಲುಗಳಲ್ಲಿ ನಿಂತಿದ್ದಾರೆ.

ಅಮೆರಿಕ ರಷ್ಯಾದ ಮೇಲೆ ಆರ್ಥಿಕ ನಿರ್ಬಂಧಗಳನ್ನು ಮುಂದುವರಿಸಿದ್ದು, ರಷ್ಯಾದಲ್ಲಿ ಆಪಲ್ ಪೇ ಮತ್ತು ಗೂಗಲ್ ಪೇ ಸೇವೆಗಳನ್ನು ನಿರ್ಬಂಧಿಸಲಾಗಿದೆ. ಇದು ರಷ್ಯಾ ಜನರ ಆನ್‌ಲೈನ್ ವಹಿವಾಟಿನ ಮೇಲೆ ಪರಿಣಾಮ ಬೀರಿದೆ.

ರಷ್ಯಾದ ಹಲವಾರು ಬ್ಯಾಂಕ್‌ಗಳಲ್ಲಿನ ಗ್ರಾಹಕರು ತಮ್ಮ ಬ್ಯಾಂಕ್ ಕಾರ್ಡ್‌ಗಳನ್ನು ಆಪಲ್ ಪೇ ಮತ್ತು ಗೂಗಲ್ ಪೇ ಜೊತೆಗೆ ಬಳಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. “ನಿರ್ಬಂಧಕ್ಕೆ ಸಿಲುಕಿರುವ ಬ್ಯಾಂಕುಗಳ ಗ್ರಾಹಕರು (ವಿಟಿಬಿ ಗ್ರೂಪ್, ಸೋವ್ಕಾಂ ಬ್ಯಾಂಕ್, ನೋವಿಕೊಂ ಬ್ಯಾಂಕ್, ಪ್ರಾಮ್ಸ್ವ್ಯಾಜ್ ಬ್ಯಾಂಕ್, ಒಟ್ಕ್ರಿಟಿ) ತಮ್ಮ ಬ್ಯಾಂಕಿಂಗ್ ಕಾರ್ಡ್‌ಗಳನ್ನು ಆಪಲ್ ಪೇ ಮತ್ತು ಗೂಗಲ್ ಪೇ ಸೇವೆಗಳೊಂದಿಗೆ ಬಳಸಲು ಸಾಧ್ಯವಾಗುತ್ತಿಲ್ಲ. ಆದರೆ, ಈ ಕಾರ್ಡ್‌ಗಳ ಮೂಲಕ ಸ್ಥಳೀಯ ಪಾವತಿಗಳನ್ನು ಮಾಡಲು ರಷ್ಯಾದ್ಯಂತ ಸಾಧ್ಯವಿದೆ” ಎಂದು ರಷ್ಯನ್ ಸೆಂಟ್ರಲ್ ಬ್ಯಾಂಕ್ ತಿಳಿಸಿದೆ.

ಗೂಗಲ್ ಪೇ ಮತ್ತು ಆಪಲ್ ಪೇಗಳು ಅಮೆರಿಕ ರೀತಿಯಲ್ಲಿ ರಷ್ಯಾದಲ್ಲಿ ಜನಪ್ರಿಯವಾಗಿಲ್ಲ. ರಷ್ಯಾದ ಜನರು ಅಲ್ಲಿನ ಅತ್ಯಂತ ಜನಪ್ರಿಯ ಮೊಬೈಲ್ ಪಾವತಿ ಸೇವೆಯಾಗಿರುವ, ರಷ್ಯಾದ ಒಡೆತನದ್ದೇ ಆದ ಸ್ಬರ್‌ ಬ್ಯಾಂಕ್ ಆನ್ಲೈನ್ ಪೇ, ಯೂಮನಿ (ಹಿಂದೆ ಯಾಂಡೆಕ್ಸ್ ಮನಿ) ಮತ್ತು ಕ್ಯುವಿಗಳನ್ನು ಬಳಸುತ್ತಿದ್ದಾರೆ ಎಂದು ದಿ ವೆರ್ಜ್ ವರದಿ ಮಾಡಿದೆ.

ಅಂಕಿಅಂಶಗಳ ಪ್ರಕಾರ, 29% ರಷ್ಯನ್ನರು ಗೂಗಲ್ ಪೇ ಬಳಸುತ್ತಾರೆ ಮತ್ತು 20% ಜನರು ಆಪಲ್ ಪೇ ಬಳಸುತ್ತಾರೆ ಎಂದು ವರದಿ ಹೇಳಿದೆ.

ರಷ್ಯಾದ ಎರಡು ದೊಡ್ಡ ಹಣಕಾಸು ಸಂಸ್ಥೆಗಳಾದ ಸ್ಬರ್‌ ಬ್ಯಾಂಕ್ ಮತ್ತು ವಿಟಿಬಿ ಬ್ಯಾಂಕ್‌ಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ಹೇರಿದೆ. ಆದೇ ರೀತಿಯಲ್ಲಿ ಯುನೈಟೆಡ್ ಕಿಂಗ್‌ಡಂ ರಷ್ಯಾದ ಐದು ಬ್ಯಾಂಕ್‌ಗಳ ವಹಿವಾಟು ಮತ್ತು ಆಸ್ತಿಗಳನ್ನು ಸ್ಥಗಿತಗೊಳಿಸಿದೆ.


ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಬಿಕ್ಕಟ್ಟು: ಕ್ಷಿಪಣಿ ದಾಳಿ; ಕರ್ನಾಟಕ ಮೂಲದ ವಿದ್ಯಾರ್ಥಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...