Homeಅಂತರಾಷ್ಟ್ರೀಯರಷ್ಯಾ ಮೇಲೆ ಆರ್ಥಿಕ ನಿರ್ಬಂಧ: ಗೂಗಲ್ ಪೇ, ಆಪಲ್ ಪೇ ಸ್ಥಗಿತದಿಂದ ಪರದಾಡಿದ ನಾಗರಿಕರು

ರಷ್ಯಾ ಮೇಲೆ ಆರ್ಥಿಕ ನಿರ್ಬಂಧ: ಗೂಗಲ್ ಪೇ, ಆಪಲ್ ಪೇ ಸ್ಥಗಿತದಿಂದ ಪರದಾಡಿದ ನಾಗರಿಕರು

ಅಂಕಿಅಂಶಗಳ ಪ್ರಕಾರ, 29% ರಷ್ಯನ್ನರು ಗೂಗಲ್ ಪೇ ಬಳಸುತ್ತಾರೆ ಮತ್ತು 20% ಜನರು ಆಪಲ್ ಪೇ ಬಳಸುತ್ತಾರೆ..

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಿಸಿದ ನಂತರ, ಅಮೆರಿಕ, ಇಂಗ್ಲೆಂಡ್ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ರಷ್ಯಾ ಮೇಲೆ ಹಲವಾರು ನಿರ್ಬಂಧಗಳನ್ನು ಹೇರಿವೆ. ಅಂತರರಾಷ್ಟ್ರೀಯ ಹಣಕಾಸು ವಹಿವಾಟುಗಳಿಗೆ ಬಳಸಲಾಗುತ್ತಿರುವ ಸ್ವಿಫ್ಟ್‌ (Society for Worldwide Interbank Financial Telecommunications) ಪಾವತಿ ವ್ಯವಸ್ಥೆಯನ್ನೂ ರಷ್ಯಾದ ಕೆಲವು ಬ್ಯಾಂಕುಗಳಲ್ಲಿ ಬಳಕೆ ಮಾಡಲಾಗದಂತೆ ನಿರ್ಬಂಧಿಸಲಾಗಿದೆ. ಇದರಿಂದಾಗಿ, ಸೋಮವಾರ ಅಮೆರಿಕನ್ ಡಾಲರ್ ವಿರುದ್ಧ ರಷ್ಯಾದ ಕರೆನ್ಸಿ ಸುಮಾರು 30% ರಷ್ಟು ಕುಸಿತ ಕಂಡಿದೆ.

ಈ ಎಲ್ಲಾ ಕಾರಣಗಳಿಂದಾಗಿ ರಷ್ಯಾ ಜನರ ದೈನಂದಿನ ವಹಿವಾಟಿನ ಮೇಲೆ ಅಪಾರ ಪರಿಣಾಮ ಬೀರಿದ್ದು, ಜನರು ಹಣಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಷ್ಯಾದಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗುವ ಸಾಧ್ಯತೆಯನ್ನು ಅರಿತವರು, ನಗದು ಹಣ ಪಡೆಯಲು ಹಲವಾರು ದಿನಗಳಿಂದ ಬ್ಯಾಂಕ್‌ಗಳು ಮತ್ತು ಎಟಿಎಂಗಳಿಗೆ ಅಲೆದಾಡುತ್ತಿದ್ದಾರೆ. ಬ್ಯಾಂಕ್-ಎಟಿಎಂಗಳ ಮುಂದೆ ದೀರ್ಘ ಸಾಲುಗಳಲ್ಲಿ ನಿಂತಿದ್ದಾರೆ.

ಅಮೆರಿಕ ರಷ್ಯಾದ ಮೇಲೆ ಆರ್ಥಿಕ ನಿರ್ಬಂಧಗಳನ್ನು ಮುಂದುವರಿಸಿದ್ದು, ರಷ್ಯಾದಲ್ಲಿ ಆಪಲ್ ಪೇ ಮತ್ತು ಗೂಗಲ್ ಪೇ ಸೇವೆಗಳನ್ನು ನಿರ್ಬಂಧಿಸಲಾಗಿದೆ. ಇದು ರಷ್ಯಾ ಜನರ ಆನ್‌ಲೈನ್ ವಹಿವಾಟಿನ ಮೇಲೆ ಪರಿಣಾಮ ಬೀರಿದೆ.

ರಷ್ಯಾದ ಹಲವಾರು ಬ್ಯಾಂಕ್‌ಗಳಲ್ಲಿನ ಗ್ರಾಹಕರು ತಮ್ಮ ಬ್ಯಾಂಕ್ ಕಾರ್ಡ್‌ಗಳನ್ನು ಆಪಲ್ ಪೇ ಮತ್ತು ಗೂಗಲ್ ಪೇ ಜೊತೆಗೆ ಬಳಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. “ನಿರ್ಬಂಧಕ್ಕೆ ಸಿಲುಕಿರುವ ಬ್ಯಾಂಕುಗಳ ಗ್ರಾಹಕರು (ವಿಟಿಬಿ ಗ್ರೂಪ್, ಸೋವ್ಕಾಂ ಬ್ಯಾಂಕ್, ನೋವಿಕೊಂ ಬ್ಯಾಂಕ್, ಪ್ರಾಮ್ಸ್ವ್ಯಾಜ್ ಬ್ಯಾಂಕ್, ಒಟ್ಕ್ರಿಟಿ) ತಮ್ಮ ಬ್ಯಾಂಕಿಂಗ್ ಕಾರ್ಡ್‌ಗಳನ್ನು ಆಪಲ್ ಪೇ ಮತ್ತು ಗೂಗಲ್ ಪೇ ಸೇವೆಗಳೊಂದಿಗೆ ಬಳಸಲು ಸಾಧ್ಯವಾಗುತ್ತಿಲ್ಲ. ಆದರೆ, ಈ ಕಾರ್ಡ್‌ಗಳ ಮೂಲಕ ಸ್ಥಳೀಯ ಪಾವತಿಗಳನ್ನು ಮಾಡಲು ರಷ್ಯಾದ್ಯಂತ ಸಾಧ್ಯವಿದೆ” ಎಂದು ರಷ್ಯನ್ ಸೆಂಟ್ರಲ್ ಬ್ಯಾಂಕ್ ತಿಳಿಸಿದೆ.

ಗೂಗಲ್ ಪೇ ಮತ್ತು ಆಪಲ್ ಪೇಗಳು ಅಮೆರಿಕ ರೀತಿಯಲ್ಲಿ ರಷ್ಯಾದಲ್ಲಿ ಜನಪ್ರಿಯವಾಗಿಲ್ಲ. ರಷ್ಯಾದ ಜನರು ಅಲ್ಲಿನ ಅತ್ಯಂತ ಜನಪ್ರಿಯ ಮೊಬೈಲ್ ಪಾವತಿ ಸೇವೆಯಾಗಿರುವ, ರಷ್ಯಾದ ಒಡೆತನದ್ದೇ ಆದ ಸ್ಬರ್‌ ಬ್ಯಾಂಕ್ ಆನ್ಲೈನ್ ಪೇ, ಯೂಮನಿ (ಹಿಂದೆ ಯಾಂಡೆಕ್ಸ್ ಮನಿ) ಮತ್ತು ಕ್ಯುವಿಗಳನ್ನು ಬಳಸುತ್ತಿದ್ದಾರೆ ಎಂದು ದಿ ವೆರ್ಜ್ ವರದಿ ಮಾಡಿದೆ.

ಅಂಕಿಅಂಶಗಳ ಪ್ರಕಾರ, 29% ರಷ್ಯನ್ನರು ಗೂಗಲ್ ಪೇ ಬಳಸುತ್ತಾರೆ ಮತ್ತು 20% ಜನರು ಆಪಲ್ ಪೇ ಬಳಸುತ್ತಾರೆ ಎಂದು ವರದಿ ಹೇಳಿದೆ.

ರಷ್ಯಾದ ಎರಡು ದೊಡ್ಡ ಹಣಕಾಸು ಸಂಸ್ಥೆಗಳಾದ ಸ್ಬರ್‌ ಬ್ಯಾಂಕ್ ಮತ್ತು ವಿಟಿಬಿ ಬ್ಯಾಂಕ್‌ಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ಹೇರಿದೆ. ಆದೇ ರೀತಿಯಲ್ಲಿ ಯುನೈಟೆಡ್ ಕಿಂಗ್‌ಡಂ ರಷ್ಯಾದ ಐದು ಬ್ಯಾಂಕ್‌ಗಳ ವಹಿವಾಟು ಮತ್ತು ಆಸ್ತಿಗಳನ್ನು ಸ್ಥಗಿತಗೊಳಿಸಿದೆ.


ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಬಿಕ್ಕಟ್ಟು: ಕ್ಷಿಪಣಿ ದಾಳಿ; ಕರ್ನಾಟಕ ಮೂಲದ ವಿದ್ಯಾರ್ಥಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...