Homeಅಂತರಾಷ್ಟ್ರೀಯರಷ್ಯಾ ಮೇಲೆ ಆರ್ಥಿಕ ನಿರ್ಬಂಧ: ಗೂಗಲ್ ಪೇ, ಆಪಲ್ ಪೇ ಸ್ಥಗಿತದಿಂದ ಪರದಾಡಿದ ನಾಗರಿಕರು

ರಷ್ಯಾ ಮೇಲೆ ಆರ್ಥಿಕ ನಿರ್ಬಂಧ: ಗೂಗಲ್ ಪೇ, ಆಪಲ್ ಪೇ ಸ್ಥಗಿತದಿಂದ ಪರದಾಡಿದ ನಾಗರಿಕರು

ಅಂಕಿಅಂಶಗಳ ಪ್ರಕಾರ, 29% ರಷ್ಯನ್ನರು ಗೂಗಲ್ ಪೇ ಬಳಸುತ್ತಾರೆ ಮತ್ತು 20% ಜನರು ಆಪಲ್ ಪೇ ಬಳಸುತ್ತಾರೆ..

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಿಸಿದ ನಂತರ, ಅಮೆರಿಕ, ಇಂಗ್ಲೆಂಡ್ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ರಷ್ಯಾ ಮೇಲೆ ಹಲವಾರು ನಿರ್ಬಂಧಗಳನ್ನು ಹೇರಿವೆ. ಅಂತರರಾಷ್ಟ್ರೀಯ ಹಣಕಾಸು ವಹಿವಾಟುಗಳಿಗೆ ಬಳಸಲಾಗುತ್ತಿರುವ ಸ್ವಿಫ್ಟ್‌ (Society for Worldwide Interbank Financial Telecommunications) ಪಾವತಿ ವ್ಯವಸ್ಥೆಯನ್ನೂ ರಷ್ಯಾದ ಕೆಲವು ಬ್ಯಾಂಕುಗಳಲ್ಲಿ ಬಳಕೆ ಮಾಡಲಾಗದಂತೆ ನಿರ್ಬಂಧಿಸಲಾಗಿದೆ. ಇದರಿಂದಾಗಿ, ಸೋಮವಾರ ಅಮೆರಿಕನ್ ಡಾಲರ್ ವಿರುದ್ಧ ರಷ್ಯಾದ ಕರೆನ್ಸಿ ಸುಮಾರು 30% ರಷ್ಟು ಕುಸಿತ ಕಂಡಿದೆ.

ಈ ಎಲ್ಲಾ ಕಾರಣಗಳಿಂದಾಗಿ ರಷ್ಯಾ ಜನರ ದೈನಂದಿನ ವಹಿವಾಟಿನ ಮೇಲೆ ಅಪಾರ ಪರಿಣಾಮ ಬೀರಿದ್ದು, ಜನರು ಹಣಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಷ್ಯಾದಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗುವ ಸಾಧ್ಯತೆಯನ್ನು ಅರಿತವರು, ನಗದು ಹಣ ಪಡೆಯಲು ಹಲವಾರು ದಿನಗಳಿಂದ ಬ್ಯಾಂಕ್‌ಗಳು ಮತ್ತು ಎಟಿಎಂಗಳಿಗೆ ಅಲೆದಾಡುತ್ತಿದ್ದಾರೆ. ಬ್ಯಾಂಕ್-ಎಟಿಎಂಗಳ ಮುಂದೆ ದೀರ್ಘ ಸಾಲುಗಳಲ್ಲಿ ನಿಂತಿದ್ದಾರೆ.

ಅಮೆರಿಕ ರಷ್ಯಾದ ಮೇಲೆ ಆರ್ಥಿಕ ನಿರ್ಬಂಧಗಳನ್ನು ಮುಂದುವರಿಸಿದ್ದು, ರಷ್ಯಾದಲ್ಲಿ ಆಪಲ್ ಪೇ ಮತ್ತು ಗೂಗಲ್ ಪೇ ಸೇವೆಗಳನ್ನು ನಿರ್ಬಂಧಿಸಲಾಗಿದೆ. ಇದು ರಷ್ಯಾ ಜನರ ಆನ್‌ಲೈನ್ ವಹಿವಾಟಿನ ಮೇಲೆ ಪರಿಣಾಮ ಬೀರಿದೆ.

ರಷ್ಯಾದ ಹಲವಾರು ಬ್ಯಾಂಕ್‌ಗಳಲ್ಲಿನ ಗ್ರಾಹಕರು ತಮ್ಮ ಬ್ಯಾಂಕ್ ಕಾರ್ಡ್‌ಗಳನ್ನು ಆಪಲ್ ಪೇ ಮತ್ತು ಗೂಗಲ್ ಪೇ ಜೊತೆಗೆ ಬಳಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. “ನಿರ್ಬಂಧಕ್ಕೆ ಸಿಲುಕಿರುವ ಬ್ಯಾಂಕುಗಳ ಗ್ರಾಹಕರು (ವಿಟಿಬಿ ಗ್ರೂಪ್, ಸೋವ್ಕಾಂ ಬ್ಯಾಂಕ್, ನೋವಿಕೊಂ ಬ್ಯಾಂಕ್, ಪ್ರಾಮ್ಸ್ವ್ಯಾಜ್ ಬ್ಯಾಂಕ್, ಒಟ್ಕ್ರಿಟಿ) ತಮ್ಮ ಬ್ಯಾಂಕಿಂಗ್ ಕಾರ್ಡ್‌ಗಳನ್ನು ಆಪಲ್ ಪೇ ಮತ್ತು ಗೂಗಲ್ ಪೇ ಸೇವೆಗಳೊಂದಿಗೆ ಬಳಸಲು ಸಾಧ್ಯವಾಗುತ್ತಿಲ್ಲ. ಆದರೆ, ಈ ಕಾರ್ಡ್‌ಗಳ ಮೂಲಕ ಸ್ಥಳೀಯ ಪಾವತಿಗಳನ್ನು ಮಾಡಲು ರಷ್ಯಾದ್ಯಂತ ಸಾಧ್ಯವಿದೆ” ಎಂದು ರಷ್ಯನ್ ಸೆಂಟ್ರಲ್ ಬ್ಯಾಂಕ್ ತಿಳಿಸಿದೆ.

ಗೂಗಲ್ ಪೇ ಮತ್ತು ಆಪಲ್ ಪೇಗಳು ಅಮೆರಿಕ ರೀತಿಯಲ್ಲಿ ರಷ್ಯಾದಲ್ಲಿ ಜನಪ್ರಿಯವಾಗಿಲ್ಲ. ರಷ್ಯಾದ ಜನರು ಅಲ್ಲಿನ ಅತ್ಯಂತ ಜನಪ್ರಿಯ ಮೊಬೈಲ್ ಪಾವತಿ ಸೇವೆಯಾಗಿರುವ, ರಷ್ಯಾದ ಒಡೆತನದ್ದೇ ಆದ ಸ್ಬರ್‌ ಬ್ಯಾಂಕ್ ಆನ್ಲೈನ್ ಪೇ, ಯೂಮನಿ (ಹಿಂದೆ ಯಾಂಡೆಕ್ಸ್ ಮನಿ) ಮತ್ತು ಕ್ಯುವಿಗಳನ್ನು ಬಳಸುತ್ತಿದ್ದಾರೆ ಎಂದು ದಿ ವೆರ್ಜ್ ವರದಿ ಮಾಡಿದೆ.

ಅಂಕಿಅಂಶಗಳ ಪ್ರಕಾರ, 29% ರಷ್ಯನ್ನರು ಗೂಗಲ್ ಪೇ ಬಳಸುತ್ತಾರೆ ಮತ್ತು 20% ಜನರು ಆಪಲ್ ಪೇ ಬಳಸುತ್ತಾರೆ ಎಂದು ವರದಿ ಹೇಳಿದೆ.

ರಷ್ಯಾದ ಎರಡು ದೊಡ್ಡ ಹಣಕಾಸು ಸಂಸ್ಥೆಗಳಾದ ಸ್ಬರ್‌ ಬ್ಯಾಂಕ್ ಮತ್ತು ವಿಟಿಬಿ ಬ್ಯಾಂಕ್‌ಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ಹೇರಿದೆ. ಆದೇ ರೀತಿಯಲ್ಲಿ ಯುನೈಟೆಡ್ ಕಿಂಗ್‌ಡಂ ರಷ್ಯಾದ ಐದು ಬ್ಯಾಂಕ್‌ಗಳ ವಹಿವಾಟು ಮತ್ತು ಆಸ್ತಿಗಳನ್ನು ಸ್ಥಗಿತಗೊಳಿಸಿದೆ.


ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಬಿಕ್ಕಟ್ಟು: ಕ್ಷಿಪಣಿ ದಾಳಿ; ಕರ್ನಾಟಕ ಮೂಲದ ವಿದ್ಯಾರ್ಥಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...