Homeಎಕಾನಮಿಪ್ರಯಾಣಿಕರ ವಾಹನ ಮಾರಾಟದಲ್ಲಿ ಶೇ.23.7 ರಷ್ಟು ಕುಸಿತ: ನೌಕರರು ಉದ್ಯೋಗದಿಂದ ವಿಮುಖ

ಪ್ರಯಾಣಿಕರ ವಾಹನ ಮಾರಾಟದಲ್ಲಿ ಶೇ.23.7 ರಷ್ಟು ಕುಸಿತ: ನೌಕರರು ಉದ್ಯೋಗದಿಂದ ವಿಮುಖ

- Advertisement -
- Advertisement -

ದೇಶದ ಆರ್ಥಿಕತೆ ಕುಸಿತ ಕಂಡಿರುವುದು ಗೊತ್ತಿರುವ ವಿಷಯ. ಅದರಲ್ಲೂ ಆಟೋಮೊಬೈಲ್ ಕ್ಷೇತ್ರ ಸಂಪೂರ್ಣವಾಗಿ ನೆಲಕಚ್ಚಿದೆ. ಅದೆಷ್ಟೋ ಮಂದಿ ನೌಕರರು ಉದ್ಯೋಗ ಕಳೆದುಕೊಂಡು ದಿಕ್ಕು ಕಾಣದೇ ಕುಳಿತಿದ್ದಾರೆ. ಹೀಗಿರುವಾಗ ಆಟೋಮೊಬೈಲ್ ಕ್ಷೇತ್ರದಲ್ಲಿ ಮತ್ತೊಂದು ಕುಸಿತ ಕಂಡು ಬಂದಿದೆ. ದೇಶದಲ್ಲಿ ಪ್ರಯಾಣಿಕರ ವಾಹನ ಮಾರಾಟ ಸೆಪ್ಟಂಬರ್ ವೇಳೆಗೆ ಶೇ. 23.7ರಷ್ಟು ಕುಸಿತ ಕಂಡಿದೆ ಎಂದು ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರ್ಸ್ ಬಿಡುಗಡೆ ಮಾಡಿದ ವರದಿಯಲ್ಲಿ ಈ ವಿಷಯ ಬಹಿರಂಗವಾಗಿದೆ.

ಆಟೋಮೊಬೈಲ್ ಕ್ಷೇತ್ರದಲ್ಲಿ ಕಾಣುತ್ತಿರುವ ಭಾರೀ ಕುಸಿತ ನೌಕರರಿಗೆ ಹಾನಿಯುಂಟು ಮಾಡಿದೆ. ಉದ್ಯೋಗವಿಲ್ಲದೇ ನೌಕರರು ಚಿಂತಾಕ್ರಾಂತರಾಗಿದ್ದಾರೆ. ದೇಶೀಯ ಆಟೋಮೊಬೈಲ್ ಉತ್ಪಾದನಾ ಕ್ಷೇತ್ರ ಮಂದಗತಿಯಲ್ಲಿ ಸಾಗುತ್ತಿದೆ. ಸುಮಾರು 2,23,317 ಯುನಿಟ್ ನಷ್ಟು ಪ್ರಯಾಣಿಕರ ವಾಹನ ಮಾರಾಟ ಕಡಿಮೆಯಾಗಿದೆ. ಅದರಲ್ಲೂ ಕಾರು ಮಾರಾಟ ಶೇ. 33.4 ರಷ್ಟು ಅಂದರೆ 131, 281 ಯುನಿಟ್ ನಷ್ಟು ಕಡಿಮೆಯಾಗಿದೆ ಎಂದು ಸಿಐಎಎಂ ಹೇಳಿದೆ.

ಸಿಐಎಎಂ ಅಧ್ಯಕ್ಷ ರಂಜನ್ ವಡೇರಾ ಮಾತನಾಡಿ, ನಾವು ಎರಡು ರೀತಿಯ ವಿಭಾಗಗಳನ್ನು ಮಾಡಿದ್ದೇವೆ. ಒಂದು ಉತ್ತಮ ಹಂತ ಮತ್ತೊಂದು ಅತ್ಯಂತ ಕೆಟ್ಟ ಹಂತ. ಕೆಟ್ಟ ಹಂತದಲ್ಲಿ ಉತ್ಪಾದಕತೆ ಮತ್ತು ಮಾರಾಟ ಹೆಚ್ಚು ಕೆಳಮಟ್ಟದಲ್ಲಿದೆ. ನೌಕರರು ಉದ್ಯೋಗ ರಹಿತರಾಗಿದ್ದಾರೆ ಎಂದು ಹೇಳಿದರು. ಕಾರು ಮತ್ತು ಆಟೋ ತಯಾರಕರು ಸಾವಿರಾರು ಉದ್ಯೋಗಿಗಳನ್ನು ತೆಗೆದು ಹಾಕಿದ್ದಾರೆ. ಆರ್ಥಿಕತೆ ಕುಸಿತ ಮತ್ತು ಕಂಪನಿ ಚಟುವಟಿಕೆಗಳಲ್ಲಿ ಎದುರಾಗುತ್ತಿರುವ ಸವಾಲುಗಳು ಕಾರಣವಾಗಿವೆ. ಅದಾಗ್ಯೂ ಕೇಂದ್ರ ಸರ್ಕಾರ ಕಳೆದ ತಿಂಗಳು ಕಾರ್ಪೋರೇಟ್ ಟ್ಯಾಕ್ಸ್ ಕಡಿಮೆ ಮಾಡಿ, ಉತ್ಪಾದನೆಗೆ ಬೂಸ್ಟ್ ನೀಡುವ ಪ್ರಯತ್ನ ಮಾಡಿದ್ದಾರೆ. ಇದರಿಂದ ಸದ್ಯದ ಹಬ್ಬದ ದಿನಗಳಾಗಿದ್ದರಿಂದ ಸ್ವಲ್ಪ ಮಟ್ಟಿನ ಚೇತರಿಕೆ ಕಾಣುತ್ತಿದೆ ಎಂದು ರಂಜನ್ ವಡೇರಾ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...