Homeಚಳವಳಿದೇಶದಲ್ಲಿ ಆವರಿಸಿರುವ ಆರ್ಥಿಕ ಕತ್ತಲೆಗೆ ಟಾರ್ಚು ಬಿಡುವವರು ಯಾರು?

ದೇಶದಲ್ಲಿ ಆವರಿಸಿರುವ ಆರ್ಥಿಕ ಕತ್ತಲೆಗೆ ಟಾರ್ಚು ಬಿಡುವವರು ಯಾರು?

- Advertisement -
- Advertisement -

ಉದ್ಯೋಗ ಸೃಷ್ಟಿ ಅನ್ನೋದು ಉಂಟಾಗುವುದು ನಗರ ಪ್ರದೇಶಗಳಲ್ಲಿ ಕಾರ್ಖಾನೆಗಳ ಕೆಲಸ ಹೆಚ್ಚುವುದು ಹಾಗೂ ಸೇವಾ ಕ್ಷೇತ್ರ ಬೆಳೆಯುವುದರಿಂದ ಆಗುವುದಾದರೆ, ಹಳ್ಳಿಗಳಲ್ಲಿ ಉದ್ಯೋಗ ಖಾತ್ರಿಯಂತಹ ಯೋಜನೆಗಳಿಂದ. ಆ ಎರಡೂ ಕ್ಷೇತ್ರಗಳಲ್ಲಿ ಕೆಲಸ ಆಗೊಲ್ಲದು. ನಗರಗಳ ಕಾರಖಾನೆಗಳು ಮುಚ್ಚಲಿಕ್ಕೆ ಹತ್ಯಾವು. ಉಳಿದಿದ್ದವು ಲೇ ಆಫು, ವಿ.ಆರ್.ಎಸ್ಸು, ಡಿಸ್ಸ ಮಿಸ್ಸಲ್ಲು ಅಂತ ಶುರು ಹಚ್ಚಿಕೊಂಡಾವು. ಮನಮೋಹನಾನಂತರ ಸರಕಾರದೊಳಗ ಉದ್ಯೋಗ ಖಾತ್ರಿ ಯೋಜನೆ ನಿಂತು ಹೋಗೇದ.

ಜವಾಹರ ಲಾಲ್ ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ಪ್ರಾಧ್ಯಾಪಕಿ ಪ್ರೊ. ಜಯಂತಿ ಘೋಷ್ ಅವರು ಒಂದು ಮಾತು ಹೇಳ್ಯಾರ.

“ನಮ್ಮ ಅರ್ಥ ವ್ಯವಸ್ಥೆಯನ್ನು ಸುಧಾರಿಸಲಿಕ್ಕೆ ಏನು ಮಾಡಬೇಕೋ, ಅದರ ಯಥಾವತ್ತು ಉಲ್ಟಾ ಕೆಲಸಗಳನ್ನ ಸರಕಾರ ಮಾಡುತ್ತಿದೆ,” ಅಂತ.

ಹಂಗಾರ ಏನು ಮಾಡಬಹುದಿತ್ತು, ಇವರು ಏನು ಮಾಡಲಿಕ್ಕೆ ಹತ್ಯಾರ?

ಮೊದಲನೆಯದಾಗಿ ಈಗ ನಾವು ಎದುರಿಸುತ್ತಿರುವ ಸಮಸ್ಯೆಯ ಹೆಸರು `ಸ್ಟಾಗಫ್ಲೇಷನ್’ ಅಂದರ ‘ಜಡ ಹಣದುಬ್ಬರ’. ಬೇಡಿಕೆ ಕಡಿಮೆಯಾಗಿ, ನಿರುದ್ಯೋಗ ಜಾಸ್ತಿಯಾಗಿ, ಉಬ್ಬರ ಹೆಚ್ಚಾದಾಗ ಉಂಟಾಗುವುದು ಜಡ ಹಣದುಬ್ಬರ. ಇದಕ್ಕೂ ಹಣದುಬ್ಬರಕ್ಕೂ ಏನು ವ್ಯತ್ಯಾಸಪಾ ಅಂದರ ಇದು ಹಣ ದುಬ್ಬರಕ್ಕಿಂತಲೂ ಹೆಚ್ಚು ಅಪಾಯಕಾರಿ.

ಡಯಾಗ್ನೋಸಿಸ್ ಆತು ಅಂದಮ್ಯಾಲೆ ಗುಳಿಗೆ – ಇಂಜಕ್ಷನ್ ಕೊಡಬೇಕಲ್ಲಾ, ಅದನ್ನು ಬಿಟ್ಟು ರೋಗ ಹೆಚ್ಚು ಮಾಡೋ ಮೈಗೆ ಬ್ಯಾಕ್ಟೀರಿಯಾ -ವೈರಸ್ಸು ಗಳನ್ನು ಚುಚ್ಚಿದರೆ ಹೆಂಗೆ? ಆಗ ನಾವು `ಆವ ರೋಗವು ಎನಗೆ ದೇವ ಧನ್ವಂತ್ರಿ’ ಅಂತ ಭೈರವಿ ರಾಗದಾಗ ಹಾಡಿ ಹೋಗಬೇಕು ಅಷ್ಟ.

ಈ ಜಡ ಹಣದುಬ್ಬರಕ್ಕೆ ಏನು ಮಾಡಬೇಕು? ಮೊದಲನೆಯದಾಗಿ ಬೇಡಿಕೆ ಹೆಚ್ಚು ಮಾಡಬೇಕು. ಇದಕ್ಕೊಂದು ಪೂರ್ವಾಪರ ಸಂದರ್ಭ ಕೊಡತೇನಿ. ಹೋದವರ್ಷ ಭಾರತದ ‍ಮಧ್ಯಮ ವರ್ಗದ ಕಣ್ ಕೂಸಾಗಬೇಕಾಗಿದ್ದ ಟಾಟಾ ನ್ಯಾನೋ ಕಾರು ಎಷ್ಟು ಖರ್ಚಾಗಿದ್ದು ಗೊತ್ತ? ಕೇವಲ ಒಂದು. ಒಂದು ನೂರಲ್ಲಾ, ಸಾವಿರಲ್ಲ. ಬರೇ ಒಂದು. ಇದು ಕುಸಿದ ಬೇಡಿಕೆಯ ಉದಾಹರಣೆ.

ಇನ್ನು ನಿರುದ್ಯೋಗದ ಸಮಸ್ಯೆ ಎಷ್ಟು ಭೀಕರವಾದದ್ದು ಅಂದರ ಈಗಿನ ಪರಿಸ್ಥಿತಿ ಕಳೆದ 43 ವರ್ಷಗಳಲ್ಲಿ ಇರಲಿಲ್ಲ. ಭಾರತೀಯ ಸಂಖ್ಯಾಶಾಸ್ತ್ರ ಸಂಸ್ಥೆಯ ಮುಖ್ಯಸ್ಥರು ಇದೇ ಮಾತನ್ನು ಆಳುವವರು ಅವರಿಗೆ ಕಾಡಿ ಕಾಡಿ ರಾಜಿನಾಮೆ ಕೊಡಿಸಿದರು. ಚುನಾವಣೆ ಆದ ಮೇಲೆ ಅದೇ ವರದಿಯನ್ನ ಇದೇ ಸರಕಾರ ಯಾವುದೇ ಭಿಡೆ ಇಲ್ಲದೇ ಬಿಡುಗಡೆ ಮಾಡಿತು. ಇವತ್ತಿನ ಲೆಕ್ಕಕ್ಕೆ ಸುಮಾರು ಎಂಟು ಕೋಟಿ ಭಾರತೀಯರಿಗೆ ಯಾವುದೇ ಕೆಲಸ ಇಲ್ಲ. ಸೂಕ್ತ ಉದ್ಯೋಗ ಸೂಚಿ ನೋಡಿದರೆ ಇದು ಸುಮಾರು 40 ಕೋಟಿ.

ಇದನ್ನ ನಮ್ಮ ಸರಕಾರ ಲೆಕ್ಕಕ್ಕೇ ತೊಗೊಳ್ಳವಲ್ಲದು. ಅವರಿಗೆ ಇದು ಕಾಣುತ್ತಿಲ್ಲ. ಅರ್ಜುನಾ ನಿನಗೇನು ಕಾಣುತ್ತಿದೆ ಎಂದರೆ ಬರೀ ಅಚ್ಚೆ ದಿನಗಳು ಹಾಗೂ ಅವು ಬಂದಿಲ್ಲ ಅಂತ ಹೇಳುವ ಸುಳ್ಳುಗಾರರು ಅಂತ ನಮ್ಮ ನಾಯಕರು ಹೇಳುತ್ತಿದ್ದಾರೆ. ಅವರಿಗೆ ಏನು ಕಮ್ಮಿ ಆಗಿದೆ? ಏನೂ ಇಲ್ಲ. ಕೇವಲ ಒಂದು `ಲಾ’ ಕಮ್ಮಿ ಆಗಿದೆ ಅಂತ ಅನಸ್ತದ.

ಕೇಂದ್ರ ರೇಲ್ವೆ ಸಚಿವರೊಬ್ಬರು ಹುಡುಗ- ಹುಡುಗಿಯರು ಮದುವೆ ಆಗುತ್ತಿದ್ದಾರೆ. ಎಲ್ಲ ಸರಿಯಾಗಿದೆ. ಎಲ್ಲಿದೆ ಕುಸಿತ? ಅಂತ ನಚಿಕೇತ ಸಂಹಿತೆಯ ಪ್ರಶ್ನೆ ಕೇಳಿದ್ದರು. ಈ ದೇಶದಾಗ ಯಾರು ಯಾವಾಗ ಮದುವೆ ಮಾಡಿಕೊಳ್ಳುತ್ತಾರೆ ಅಂತ ಕೇಳಬಾರದು. ಅದಕ್ಕೂ ಅರ್ಥ ವ್ಯವಸ್ಥೆಗೂ ಸಂಬಂಧ ಇಲ್ಲ ಅಂತ ಆವಾಗ ತಿಳೀತದ.

ಬೇಡಿಕೆ ಹೆಚ್ಚಾಗಲಿಕ್ಕೆ ಏನು ಮಾಡಬೇಕು? ಉದ್ಯೋಗ ಸೃಷ್ಟಿ ಆಗಬೇಕು, ಮಾಡಿದ ಉದ್ಯೋಗಕ್ಕೆ ಸರಿಯಾದ ಸಂಬಳ ಸಿಗಬೇಕು. ಅಲ್ಲವೇ? ಸಿಂಪಲ್.

ಅತ್ಯಂತ ಗಹನವಾದ ಸಿದ್ಧಾಂತ ಯಶಸ್ಸು ಆಗುವುದು ಯಾವಾಗ ಅಂದರೆ ಅದನ್ನು ಸರಳವಾದ ಭಾಷೆಯಲ್ಲಿ ಹೇಳಿ ಅದನ್ನು ಸಾಮಾನ್ಯ ಜ್ಞಾನದ ಲೆವಲ್ಲಿಗೆ ಏರಿಸಿದಾಗ ಅಂತ ಈ ಶತಮಾನದ ಅತ್ಯದ್ಭುತ ವಿಜ್ಞಾನಿ ರಿಚರ್ಡ್ ಫೆಯನ್ ಮನ್ ಹೇಳಿದ. ಅಂತೆಯೇ ಅಮೆರಿಕೆ- ಇಂಗ್ಲಂಡಿನಲ್ಲಿ ಎಂ.ಎ, ಪಿಎಚ್‍ಡಿಗಳಿಗೆ ಇಂತಹ ಸಿಂಪಲ್ ವಿಷಯಗಳು ಹೊಳೆಯುವುದಿಲ್ಲವೇ?

ಬೇಡಿಕೆ ಹೆಚ್ಚುವುದು- ಖರ್ಚು ಹೆಚ್ಚುವುದು, ಅಭಿವೃದ್ಧಿ ಆಗುವುದು ಎಲ್ಲವೂ ಕೋಳಿ ಮತ್ತು ಮೊಟ್ಟೆಯ ಸಮಸ್ಯೆ ಅಂತ ಹೇಳೋರು ಇದ್ದಾರ. ಆದರ ಪರಿಹಾರ ಅನ್ನೋದು ಮೊಟ್ಟೆಯಿಂದ ಅಥವಾ ಕೋಳಿಯಿಂದ ಶುರು ಆಗಬೇಕು. ಎರಡೂ ಬಿಟ್ಟು ಇರೋ ಮೊಟ್ಟೆಗಳನ್ನ ಆಮಲೇಟು ಮಾಡಿ ತಿಂದು ಆಮ್ಯಾಲೆ ಕೈ ತಿರುವಿದಿರ ಹೆಂಗ?

ಉದ್ಯೋಗ ಸೃಷ್ಟಿ ಅನ್ನೋದು ಉಂಟಾಗುವುದು ನಗರ ಪ್ರದೇಶಗಳಲ್ಲಿ ಕಾರ್ಖಾನೆ ಗಳ ಕೆಲಸ ಹೆಚ್ಚುವುದು ಹಾಗೂ ಸೇವಾ ಕ್ಷೇತ್ರ ಬೆಳೆಯುವುದರಿಂದ ಆಗುವುದಾದರೆ, ಹಳ್ಳಿಗಳಲ್ಲಿ ಉದ್ಯೋಗ ಖಾತ್ರಿಯಂತಹ ಯೋಜನೆಗಳಿಂದ. ಆ ಎರಡೂ ಕ್ಷೇತ್ರಗಳಲ್ಲಿ ಕೆಲಸ ಆಗೊಲ್ಲದು. ನಗರಗಳ ಕಾರಖಾನೆಗಳು ಮುಚ್ಚಲಿಕ್ಕೆ ಹತ್ಯಾವು. ಉಳಿದಿದ್ದವು ಲೇ ಆಫು, ವಿ ಆರ್ ಎಸ್ಸು, ಡಿಸ್ಸ ಮಿಸ್ಸಲ್ಲು ಅಂತ ಶುರು ಹಚ್ಚಿಕೊಂಡಾವು. ಮನಮೋಹನಾನಂತರ ಸರಕಾರದೊಳಗ ಉದ್ಯೋಗ ಖಾತ್ರಿ ಯೋಜನೆ ನಿಂತು ಹೋಗೇದ. ಅದಕ್ಕ ಮಹಾತ್ಮಾ ಗಾಂಧಿ ಹೆಸರು ಇಟ್ಟದ್ದನ ತಪ್ಪಾತೋ ಏನೋ. ಈ ಸರಕಾರದವರು ಅದನ್ನ ಮುಟ್ಟಲಿಕ್ಕೆ ಒಲ್ಲರು.

ಇನ್ನು ಸೂಕ್ಷ್ಮ ಅರ್ಥವ್ಯವಸ್ಥೆಯ ನಿರ್ವಹಣೆಯನ್ನು ಇವರು ಮರತುಬಿಟ್ಟಾರ. ಹಣದುಬ್ಬರವನ್ನು ನೋಟು ಪ್ರಿಂಟು ಮಾಡುವ ಪ್ರಮಾಣವನ್ನು ಕಡಿಮೆ ಮಾಡೋದು, ಇತರ ನೀತಿಗಳ ನಿರೂಪಣೆ ಹಾಗೂ ಜಾರಿಯಿಂದಾಗಿ ನಿಯಂತ್ರಿಸಲಿಕ್ಕೆ ಸಾಧ್ಯ ಅದ. ಆದರ ಇವರು ಇವನ್ನೆಲ್ಲ ಮಾಡವಲ್ಲರು. ಅವರಿಗೆ ಇವೆಲ್ಲ ಚಿಲ್ಲರಾ ಸಮಸ್ಯೆ. ಅವರಿಗೆ ಪಾಕಿಸ್ತಾನ, ಬಾಂಗ್ಲಾದೇಶ, ಅಫಘಾನಿಸ್ತಾನದ ಇರೋ ಹಿಂದುಗಳ ಸಮಸ್ಯೆಯೇ ಮುಖ್ಯ. ಅದಕ್ಕೆ ಇಸ್ರೇಲು ಮಾದರಿಯ ಪರಿಹಾರ ಹುಡುಕತಾರ. ಅದೇ ಇಸ್ರೇಲಿನ ಅರ್ಥ ಪರಿಣಿತಿ ಇವರಿಗೆ ಕಾಣಂಗಿಲ್ಲ. ಭಾರಿ ಭಯಂಕರ ದೇಶ ಪ್ರೇಮದ ಭಾಷಣ ಮಾಡೋ ಇವರಿಗೆ ಭಾರತೀಯರ ಸಮಸ್ಯೆ ಅವರಿಗೆ ಕಾಣಂಗಿಲ್ಲ. ಅದನ್ನ ಸ್ಕ್ಯಾಂಡಿನೇವಿಯಾ ಮಾದರಿಯೊಳಗ ಪರಿಹರಿಸಬಹುದು ಅಂತ ಅವರಿಗೆ ಅನ್ನಿಸೋದಿಲ್ಲ.

ಅಪರೂಪದ ಆರ್ಥಿಕ ತಜ್ಞ ಡಾ. ಡಿ. ಎಂ ನಂಜುಂಡಪ್ಪ ಈ ದೇಶದ ಆರ್ಥಿಕ ಸಮಸ್ಯೆಗಳಿಗೆ ನೀಡಿದ ಪರಿಹಾರದ ಮಾತುಗಳನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

1. ನಮ್ಮ ದೇಶಕ್ಕೆ ಬೇಕಾಗಿರುವುದು ಆದಾಯ ತೆರಿಗೆ ಅಲ್ಲ. ಖರ್ಚಿನ ತೆರಿಗೆ. (ಅಯ್ಯೋ ಬಿಡಿ ಸಾ. ಅದಿಲ್ಲದಿದ್ದರೆ ನಾವು ವಿರೋಧ ಪಕ್ಷಗಳ ಜನಪ್ರಿಯ ನಾಯಕರನ್ನು ಹೆದರಿಸೋದು ಹೇಗೆ?)

2. ಗಳಿಕೆಯನ್ನು ಉತ್ತೇಜಿಸಿದಂತೆಯೇ ಉಳಿಕೆಯನ್ನು ಉತ್ತೇಜಿಸಬೇಕು. ಬರೀ ಗಳಿಸಿ, ಉಳಿಸದೇ ಹೋದ ದೇಶಕ್ಕೆ ಭವಿಷ್ಯವಿಲ್ಲ. (ಕೊಳ್ಳುಬಾಕನೆಂಬೋ ಬೀಜಾಸುರನು ರಾರಾಜಿಸುತ್ತಿರುವಾಗ ಉಳಿಸುವವರು ಯಾರು ಸಾ?)

3. ಎಲ್ಲ ರೀತಿಯ ಆದಾಯ ತೆರಿಗೆ ವಿನಾಯಿತಿಗಳನ್ನು ರದ್ದು ಮಾಡಬೇಕು. ಸುಂಕದ ಮಟ್ಟವನ್ನು ಕಮ್ಮಿ ಮಾಡಬೇಕು. (ವಿನಾಯಿತಿಗೆಂದೇ ಸ್ವಯಂಸೇವಾ ಸಂಸ್ಥೆ ತೆರೆದವರು ಏನು ಮಾಡಬೇಕು ಸಾ?)

4. ಬಡವರ ಕೈಯಲ್ಲಿ ಹಣ ಓಡಾಡುವಂತೆ ಮಾಡಬೇಕು (ಅಯ್ಯೋ ಸಾ, ಹೀಗೆ ಮಾಡುತ್ತೇವೆ ಎನ್ನುವ ಆಶ್ವಾಸನೆಯಿಂದ ನಾವು ಅಧಿಕಾರಕ್ಕೆ ಬರೋದು. ಅದನ್ನು ಪೂರೈಸಿ ಬಿಟ್ಟರೆ ಮುಂದಿನ ಚುನಾವಣೆಯಲ್ಲಿ ನಾವು ಏನು ಮಾತಾಡಬೇಕು?)

ಆ ಶಾರದಾ ಪುತ್ರನ ಶಿಫಾರಸುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವ ವ್ಯವಧಾನವಂತೂ ನಮಗೆ ಇಲ್ಲ.

ಸುಮ್ಮನೆ ಒಂದು ಜೋಕು ಕೇಳಿ ನಗೋಣ. ಕೆಲವೊಮ್ಮೆ ಜೋಕುಗಳೇ ನಮ್ಮ ಜೀವನ ಸಂಕಷ್ಟಗಳನ್ನು ಸರಿಯಾಗಿ ವಿವರಿಸತಾವ ಅಂತ ಅನ್ನಿಸತದ.

ಅಂಥಾದು ಇಲ್ಲೊಂದು ಅದ ನೋಡ್ರಿ. ಸರದಾರಜೀ ಜೋಕು.

“ನನಗೆ ಹಣದುಬ್ಬರದ ಸಮಸ್ಯೆ ಇಲ್ಲ. ನಾನು ಯಾವಾಗಲೂ ನನ್ನ ಬೈಕಿಗೆ ಕೇವಲ ನೂರು ರೂಪಾಯಿಯ ಪೆಟ್ರೋಲ್ ಹಾಕಿಸೋದು”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...