Homeಮುಖಪುಟಶೇ.0.04ರಷ್ಟಿರುವ ಕುಬೇರರಿಗೆ ಸಂಪತ್ತು ತೆರಿಗೆ ವಿಧಿಸುವ ಮೂಲಕ ಭಾರತದಲ್ಲಿ ಆರ್ಥಿಕ ಅಸಮಾನತೆ ನಿವಾರಿಸಬಹುದು: ವರದಿ

ಶೇ.0.04ರಷ್ಟಿರುವ ಕುಬೇರರಿಗೆ ಸಂಪತ್ತು ತೆರಿಗೆ ವಿಧಿಸುವ ಮೂಲಕ ಭಾರತದಲ್ಲಿ ಆರ್ಥಿಕ ಅಸಮಾನತೆ ನಿವಾರಿಸಬಹುದು: ವರದಿ

- Advertisement -
- Advertisement -

ಭಾರತದಲ್ಲಿ ಹೆಚ್ಚುತ್ತಿರುವ ಆದಾಯ ಮತ್ತು ಸಂಪತ್ತು ಅಸಮಾನತೆಯನ್ನು ಅತ್ಯಂತ ಶ್ರೀಮಂತರಿಗೆ ಸಮಗ್ರ ಮತ್ತು ಪ್ರಗತಿಪರ ಸಂಪತ್ತು ತೆರಿಗೆಯನ್ನು ವಿಧಿಸುವ ಮೂಲಕ ನಿವಾರಿಸಬಹುದು ಎಂದು ‘World Inequality Lab’ (ಡಬ್ಲ್ಯುಐಎಲ್) ಶುಕ್ರವಾರ ಪ್ರಕಟಿಸಿರುವ ವರದಿಯು ಸಲಹೆ ನೀಡಿದೆ.

ವರದಿಯು ಮಾ.19ರಂದು ಪ್ರಕಟಗೊಂಡಿದ್ದ ಡಬ್ಲ್ಯುಐಎಲ್‌ನ ‘ಭಾರತದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆ 1922-2023: ಬಿಲಿಯನೇರ್ ರಾಜ್‌ನ ಹೆಚ್ಚಳ’ ಅಧ್ಯಯನದ ಮುಂದುವರೆದ ಭಾಗವಾಗಿದೆ.
ಅರ್ಥಶಾಸ್ತ್ರಜ್ಞರಾದ ನಿತಿನ್ ಕುಮಾರ್ ಭಾರ್ತಿ,‌ ಲುಕಾಸ್ ಚಾನ್ಸೆಲ್, ಥಾಮಸ್ ಪಿಕೆಟಿ ಮತ್ತು ಅನ್ಮೋಲ್ ಸೋಮಾಂಚಿ ಅವರು ಬರೆದಿದ್ದ ಅಧ್ಯಯನ ವರದಿಯು ಭಾರತದ ಜನಸಂಖ್ಯೆಯ ಶೇ.1ರಷ್ಟು ಅತ್ಯಂತ ಶ್ರೀಮಂತರ ಆದಾಯ ಮತ್ತು ಸಂಪತ್ತಿನ ಪಾಲು ದೇಶದ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ ಎನ್ನುವುದನ್ನು ತೋರಿಸಿತ್ತು.

ಭಾರತದ ಜನಸಂಖ್ಯೆಯ ಶೇ. 1ರಷ್ಟಿರುವ ಅತೀ ಶ್ರೀಮಂತರು 2022-23ರಲ್ಲಿ ದೇಶದ ಆದಾಯದ ಶೇ. 22.6ರಷ್ಟು ಮತ್ತು ಸಂಪತ್ತಿನ ಶೇ. 40.1ರಷ್ಟು ಹೊಂದಿದ್ದಾರೆ ಎಂದಿದ್ದ ಅಧ್ಯಯನವು, 2014-15 ಮತ್ತು 2022-23ರ ನಡುವೆ ಉನ್ನತ ಮಟ್ಟದ ಅಸಮಾನತೆಯ ಏರಿಕೆಯು ಸಂಪತ್ತಿನ ಕೇಂದ್ರೀಕರಣದ ವಿಷಯದಲ್ಲಿ ಎದ್ದು ಕಾಣುತ್ತಿದೆ ಹೇಳಿದೆ.

ತಮ್ಮ ಅಧ್ಯಯನದಲ್ಲಿ ಕಂಡು ಕೊಂಡಿದ್ದ ಅಂಶಗಳನ್ನು ಆಧರಿಸಿ ಅದೇ ಲೇಖಕರು ಈಗ ತಮ್ಮ ನೂತನ ವರದಿಯಲ್ಲಿ ‘ಕೋಟ್ಯಧಿಪತಿ ತೆರಿಗೆ’ಯನ್ನು ಪ್ರಸ್ತಾಪಿಸಿದ್ದಾರೆ. 2022-23ರಲ್ಲಿ 10 ಕೋಟಿ ರೂ.ಗೂ ಹೆಚ್ಚಿನ ನಿವ್ವಳ ಸಂಪತ್ತನ್ನು ಹೊಂದಿದವರಿಗೆ ಮಾತ್ರ ಈ ತೆರಿಗೆಯನ್ನು ವಿಧಿಸುವಂತೆಯೂ ಅವರು ಪ್ರಸ್ತಾಪಿಸಿದ್ದಾರೆ.

“ನಮ್ಮ ಇತ್ತೀಚಿನ ಅಂದಾಜಿನ ಪ್ರಕಾರ, ದೇಶದ ಜನಸಂಖ್ಯೆ ಕೇವಲ 0.04 ಶೇ. ವಯಸ್ಕರು ಮಾತ್ರ ಈ ಮಿತಿಗಿಂತ ಮೇಲೆ ಇದ್ದಾರೆ” ಎಂದು ವರದಿ ಹೇಳಿದೆ.

ಲೇಖಕರು ತೆರಿಗೆ ಪ್ಯಾಕೇಜ್‌ನ ಮೂರು ಪರ್ಯಾಯ ರೂಪಗಳನ್ನು ಪ್ರಸ್ತಾಪಿಸಿದ್ದಾರೆ

  • 10 ಕೋಟಿರೂ.ಗೂ ಹೆಚ್ಚಿನ ನಿವ್ವಳ ಮೌಲ್ಯವನ್ನು ಹೊಂದಿರುವ ವ್ಯಕ್ತಿಗಳಿಗೆ ಶೇ.2ರಷ್ಟು ವಾರ್ಷಿಕ ತೆರಿಗೆ ಮತ್ತು 10 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳ ಮೇಲೆ ಶೇ.33ರಷ್ಟು ಪಿತ್ರಾರ್ಜಿತ ತೆರಿಗೆಯನ್ನು ವಿಧಿಸುವುದನ್ನು ಪ್ರಸ್ತಾವಿಸಲಾಗಿದೆ. ನಮ್ಮ ಅಂದಾಜಿನಂತೆ ಇದೊಂದೇ ಜಿಡಿಪಿಯ ಶೇ.2.7ರಷ್ಟು ಆದಾಯವನ್ನು ಸೃಷ್ಟಿಸುತ್ತದೆ ಎಂದು ವರದಿಯು ಹೇಳಿದೆ.
  • 100 ಕೋಟಿ ರೂ.ಗೂ ಹೆಚ್ಚಿನ ನಿವ್ವಳ ಮೌಲ್ಯವನ್ನು ಹೊಂದಿರುವ ವ್ಯಕ್ತಿಗಳಿಗೆ ತೆರಿಗೆ ಶೇ.4ಕ್ಕೆ ಏರಿಕೆ ಮತ್ತು 10 ಕೋಟಿ ರೂ.ಗಳಿಂದ 100 ಕೋಟಿ ರೂ.ವರೆಗಿನ ಮೌಲ್ಯದ ಆಸ್ತಿಗಳ ಮೇಲೆ ಶೇ.33ರಷ್ಟು ಪಿತ್ರಾರ್ಜಿತ ತೆರಿಗೆಯನ್ನು ವಿಧಿಸುವುದು. 100 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳಿಗೆ ಪಿತ್ರಾರ್ಜಿತ ತೆರಿಗೆಯನ್ನು ಶೇ.45ಕ್ಕೆ ಹೆಚ್ಚಿಸುವುದು. ವರದಿಯ ಪ್ರಕಾರ ಈ ತೆರಿಗೆಯಿಂದ ಆದಾಯವು ಭಾರತದ ಜಿಡಿಪಿಯ ಶೇ.4.6ರಷ್ಟಾಗುತ್ತದೆ.
  • ಇಲ್ಲಿ ಸಂಪತ್ತಿನ ಮಿತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ, ಸಂಪತ್ತು ತೆರಿಗೆಯನ್ನು ಶೇ.3ರಿಂದ ಶೇ.5ರವರೆಗೆ ಮತ್ತು ಪಿತ್ರಾರ್ಜಿತ ತೆರಿಗೆಯನ್ನು ಶೇ.45ರಿಂದ ಶೇ.55ರವರೆಗೆ ಹೆಚ್ಚಿಸುವುದನ್ನು ಪ್ರಸ್ತಾಪಿಸಲಾಗಿದೆ. ಇದರಿಂದ ತೆರಿಗೆ ಆದಾಯವು ಜಿಡಿಪಿಯ ಶೇ.6.1ಕ್ಕೆ ಹೆಚ್ಚಬಹುದು ಎಂದು ಲೇಖಕರು ವರದಿಯಲ್ಲಿ ಹೇಳಿದ್ದಾರೆ.

ಹೀಗೆ, ಸಂಗ್ರಹವಾಗುವ ಆದಾಯವನ್ನು ಬಡವರಿಗೆ ನೇರ ನಗದು ವರ್ಗಾವಣೆ, ಆರೋಗ್ಯ, ಶಿಕ್ಷಣ ಮತ್ತು ಇತರ ಸಾಮಾಜಿಕ ಕ್ಷೇತ್ರಗಳಲ್ಲಿ “ಮರು-ವಿತರಣಾ ನೀತಿಗಳಲ್ಲಿ” ಹೂಡಿಕೆ ಮಾಡಬಹುದು.

ಸರ್ಕಾರಿ ವೆಚ್ಚಗಳ ಅಂದಾಜುಗಳೊಂದಿಗೆ ಸಂಭಾವ್ಯ ತೆರಿಗೆ ಆದಾಯದ ನಮ್ಮ ಅಂದಾಜುಗಳನ್ನು ಒಟ್ಟುಗೂಡಿಸಿ, ಇಲ್ಲಿ ಪ್ರಸ್ತಾಪಿಸಲಾದ ರೀತಿಯ ಸಂಪತ್ತು ತೆರಿಗೆ ಪ್ಯಾಕೇಜ್‌ಗಳು ಸಾಮಾಜಿಕ ವಲಯದ ವೆಚ್ಚವನ್ನು ವಿಸ್ತರಿಸಲು ಗಮನಾರ್ಹವಾದ ಹಣಕಾಸಿನ ಸ್ಥಳವನ್ನು ಸೃಷ್ಟಿಸುತ್ತವೆ ಎಂದು ನಾವು ಕಂಡುಕೊಂಡಿದ್ದೇವೆ ಎಂದು ವರದಿ ಹೇಳಿದೆ.

Courtesy: scroll.in

ಇದನ್ನೂ ಓದಿ : ಅದಾನಿ ಕಲ್ಲಿದ್ದಲು ವಿವಾದ: 21 ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಸಿಜೆಐ ಡಿವೈ ಚಂದ್ರಚೂಡ್‌ಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...