Homeಮುಖಪುಟಶೇ.0.04ರಷ್ಟಿರುವ ಕುಬೇರರಿಗೆ ಸಂಪತ್ತು ತೆರಿಗೆ ವಿಧಿಸುವ ಮೂಲಕ ಭಾರತದಲ್ಲಿ ಆರ್ಥಿಕ ಅಸಮಾನತೆ ನಿವಾರಿಸಬಹುದು: ವರದಿ

ಶೇ.0.04ರಷ್ಟಿರುವ ಕುಬೇರರಿಗೆ ಸಂಪತ್ತು ತೆರಿಗೆ ವಿಧಿಸುವ ಮೂಲಕ ಭಾರತದಲ್ಲಿ ಆರ್ಥಿಕ ಅಸಮಾನತೆ ನಿವಾರಿಸಬಹುದು: ವರದಿ

- Advertisement -
- Advertisement -

ಭಾರತದಲ್ಲಿ ಹೆಚ್ಚುತ್ತಿರುವ ಆದಾಯ ಮತ್ತು ಸಂಪತ್ತು ಅಸಮಾನತೆಯನ್ನು ಅತ್ಯಂತ ಶ್ರೀಮಂತರಿಗೆ ಸಮಗ್ರ ಮತ್ತು ಪ್ರಗತಿಪರ ಸಂಪತ್ತು ತೆರಿಗೆಯನ್ನು ವಿಧಿಸುವ ಮೂಲಕ ನಿವಾರಿಸಬಹುದು ಎಂದು ‘World Inequality Lab’ (ಡಬ್ಲ್ಯುಐಎಲ್) ಶುಕ್ರವಾರ ಪ್ರಕಟಿಸಿರುವ ವರದಿಯು ಸಲಹೆ ನೀಡಿದೆ.

ವರದಿಯು ಮಾ.19ರಂದು ಪ್ರಕಟಗೊಂಡಿದ್ದ ಡಬ್ಲ್ಯುಐಎಲ್‌ನ ‘ಭಾರತದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆ 1922-2023: ಬಿಲಿಯನೇರ್ ರಾಜ್‌ನ ಹೆಚ್ಚಳ’ ಅಧ್ಯಯನದ ಮುಂದುವರೆದ ಭಾಗವಾಗಿದೆ.
ಅರ್ಥಶಾಸ್ತ್ರಜ್ಞರಾದ ನಿತಿನ್ ಕುಮಾರ್ ಭಾರ್ತಿ,‌ ಲುಕಾಸ್ ಚಾನ್ಸೆಲ್, ಥಾಮಸ್ ಪಿಕೆಟಿ ಮತ್ತು ಅನ್ಮೋಲ್ ಸೋಮಾಂಚಿ ಅವರು ಬರೆದಿದ್ದ ಅಧ್ಯಯನ ವರದಿಯು ಭಾರತದ ಜನಸಂಖ್ಯೆಯ ಶೇ.1ರಷ್ಟು ಅತ್ಯಂತ ಶ್ರೀಮಂತರ ಆದಾಯ ಮತ್ತು ಸಂಪತ್ತಿನ ಪಾಲು ದೇಶದ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ ಎನ್ನುವುದನ್ನು ತೋರಿಸಿತ್ತು.

ಭಾರತದ ಜನಸಂಖ್ಯೆಯ ಶೇ. 1ರಷ್ಟಿರುವ ಅತೀ ಶ್ರೀಮಂತರು 2022-23ರಲ್ಲಿ ದೇಶದ ಆದಾಯದ ಶೇ. 22.6ರಷ್ಟು ಮತ್ತು ಸಂಪತ್ತಿನ ಶೇ. 40.1ರಷ್ಟು ಹೊಂದಿದ್ದಾರೆ ಎಂದಿದ್ದ ಅಧ್ಯಯನವು, 2014-15 ಮತ್ತು 2022-23ರ ನಡುವೆ ಉನ್ನತ ಮಟ್ಟದ ಅಸಮಾನತೆಯ ಏರಿಕೆಯು ಸಂಪತ್ತಿನ ಕೇಂದ್ರೀಕರಣದ ವಿಷಯದಲ್ಲಿ ಎದ್ದು ಕಾಣುತ್ತಿದೆ ಹೇಳಿದೆ.

ತಮ್ಮ ಅಧ್ಯಯನದಲ್ಲಿ ಕಂಡು ಕೊಂಡಿದ್ದ ಅಂಶಗಳನ್ನು ಆಧರಿಸಿ ಅದೇ ಲೇಖಕರು ಈಗ ತಮ್ಮ ನೂತನ ವರದಿಯಲ್ಲಿ ‘ಕೋಟ್ಯಧಿಪತಿ ತೆರಿಗೆ’ಯನ್ನು ಪ್ರಸ್ತಾಪಿಸಿದ್ದಾರೆ. 2022-23ರಲ್ಲಿ 10 ಕೋಟಿ ರೂ.ಗೂ ಹೆಚ್ಚಿನ ನಿವ್ವಳ ಸಂಪತ್ತನ್ನು ಹೊಂದಿದವರಿಗೆ ಮಾತ್ರ ಈ ತೆರಿಗೆಯನ್ನು ವಿಧಿಸುವಂತೆಯೂ ಅವರು ಪ್ರಸ್ತಾಪಿಸಿದ್ದಾರೆ.

“ನಮ್ಮ ಇತ್ತೀಚಿನ ಅಂದಾಜಿನ ಪ್ರಕಾರ, ದೇಶದ ಜನಸಂಖ್ಯೆ ಕೇವಲ 0.04 ಶೇ. ವಯಸ್ಕರು ಮಾತ್ರ ಈ ಮಿತಿಗಿಂತ ಮೇಲೆ ಇದ್ದಾರೆ” ಎಂದು ವರದಿ ಹೇಳಿದೆ.

ಲೇಖಕರು ತೆರಿಗೆ ಪ್ಯಾಕೇಜ್‌ನ ಮೂರು ಪರ್ಯಾಯ ರೂಪಗಳನ್ನು ಪ್ರಸ್ತಾಪಿಸಿದ್ದಾರೆ

  • 10 ಕೋಟಿರೂ.ಗೂ ಹೆಚ್ಚಿನ ನಿವ್ವಳ ಮೌಲ್ಯವನ್ನು ಹೊಂದಿರುವ ವ್ಯಕ್ತಿಗಳಿಗೆ ಶೇ.2ರಷ್ಟು ವಾರ್ಷಿಕ ತೆರಿಗೆ ಮತ್ತು 10 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳ ಮೇಲೆ ಶೇ.33ರಷ್ಟು ಪಿತ್ರಾರ್ಜಿತ ತೆರಿಗೆಯನ್ನು ವಿಧಿಸುವುದನ್ನು ಪ್ರಸ್ತಾವಿಸಲಾಗಿದೆ. ನಮ್ಮ ಅಂದಾಜಿನಂತೆ ಇದೊಂದೇ ಜಿಡಿಪಿಯ ಶೇ.2.7ರಷ್ಟು ಆದಾಯವನ್ನು ಸೃಷ್ಟಿಸುತ್ತದೆ ಎಂದು ವರದಿಯು ಹೇಳಿದೆ.
  • 100 ಕೋಟಿ ರೂ.ಗೂ ಹೆಚ್ಚಿನ ನಿವ್ವಳ ಮೌಲ್ಯವನ್ನು ಹೊಂದಿರುವ ವ್ಯಕ್ತಿಗಳಿಗೆ ತೆರಿಗೆ ಶೇ.4ಕ್ಕೆ ಏರಿಕೆ ಮತ್ತು 10 ಕೋಟಿ ರೂ.ಗಳಿಂದ 100 ಕೋಟಿ ರೂ.ವರೆಗಿನ ಮೌಲ್ಯದ ಆಸ್ತಿಗಳ ಮೇಲೆ ಶೇ.33ರಷ್ಟು ಪಿತ್ರಾರ್ಜಿತ ತೆರಿಗೆಯನ್ನು ವಿಧಿಸುವುದು. 100 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳಿಗೆ ಪಿತ್ರಾರ್ಜಿತ ತೆರಿಗೆಯನ್ನು ಶೇ.45ಕ್ಕೆ ಹೆಚ್ಚಿಸುವುದು. ವರದಿಯ ಪ್ರಕಾರ ಈ ತೆರಿಗೆಯಿಂದ ಆದಾಯವು ಭಾರತದ ಜಿಡಿಪಿಯ ಶೇ.4.6ರಷ್ಟಾಗುತ್ತದೆ.
  • ಇಲ್ಲಿ ಸಂಪತ್ತಿನ ಮಿತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ, ಸಂಪತ್ತು ತೆರಿಗೆಯನ್ನು ಶೇ.3ರಿಂದ ಶೇ.5ರವರೆಗೆ ಮತ್ತು ಪಿತ್ರಾರ್ಜಿತ ತೆರಿಗೆಯನ್ನು ಶೇ.45ರಿಂದ ಶೇ.55ರವರೆಗೆ ಹೆಚ್ಚಿಸುವುದನ್ನು ಪ್ರಸ್ತಾಪಿಸಲಾಗಿದೆ. ಇದರಿಂದ ತೆರಿಗೆ ಆದಾಯವು ಜಿಡಿಪಿಯ ಶೇ.6.1ಕ್ಕೆ ಹೆಚ್ಚಬಹುದು ಎಂದು ಲೇಖಕರು ವರದಿಯಲ್ಲಿ ಹೇಳಿದ್ದಾರೆ.

ಹೀಗೆ, ಸಂಗ್ರಹವಾಗುವ ಆದಾಯವನ್ನು ಬಡವರಿಗೆ ನೇರ ನಗದು ವರ್ಗಾವಣೆ, ಆರೋಗ್ಯ, ಶಿಕ್ಷಣ ಮತ್ತು ಇತರ ಸಾಮಾಜಿಕ ಕ್ಷೇತ್ರಗಳಲ್ಲಿ “ಮರು-ವಿತರಣಾ ನೀತಿಗಳಲ್ಲಿ” ಹೂಡಿಕೆ ಮಾಡಬಹುದು.

ಸರ್ಕಾರಿ ವೆಚ್ಚಗಳ ಅಂದಾಜುಗಳೊಂದಿಗೆ ಸಂಭಾವ್ಯ ತೆರಿಗೆ ಆದಾಯದ ನಮ್ಮ ಅಂದಾಜುಗಳನ್ನು ಒಟ್ಟುಗೂಡಿಸಿ, ಇಲ್ಲಿ ಪ್ರಸ್ತಾಪಿಸಲಾದ ರೀತಿಯ ಸಂಪತ್ತು ತೆರಿಗೆ ಪ್ಯಾಕೇಜ್‌ಗಳು ಸಾಮಾಜಿಕ ವಲಯದ ವೆಚ್ಚವನ್ನು ವಿಸ್ತರಿಸಲು ಗಮನಾರ್ಹವಾದ ಹಣಕಾಸಿನ ಸ್ಥಳವನ್ನು ಸೃಷ್ಟಿಸುತ್ತವೆ ಎಂದು ನಾವು ಕಂಡುಕೊಂಡಿದ್ದೇವೆ ಎಂದು ವರದಿ ಹೇಳಿದೆ.

Courtesy: scroll.in

ಇದನ್ನೂ ಓದಿ : ಅದಾನಿ ಕಲ್ಲಿದ್ದಲು ವಿವಾದ: 21 ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಸಿಜೆಐ ಡಿವೈ ಚಂದ್ರಚೂಡ್‌ಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...