Homeಮುಖಪುಟಶೇ.0.04ರಷ್ಟಿರುವ ಕುಬೇರರಿಗೆ ಸಂಪತ್ತು ತೆರಿಗೆ ವಿಧಿಸುವ ಮೂಲಕ ಭಾರತದಲ್ಲಿ ಆರ್ಥಿಕ ಅಸಮಾನತೆ ನಿವಾರಿಸಬಹುದು: ವರದಿ

ಶೇ.0.04ರಷ್ಟಿರುವ ಕುಬೇರರಿಗೆ ಸಂಪತ್ತು ತೆರಿಗೆ ವಿಧಿಸುವ ಮೂಲಕ ಭಾರತದಲ್ಲಿ ಆರ್ಥಿಕ ಅಸಮಾನತೆ ನಿವಾರಿಸಬಹುದು: ವರದಿ

- Advertisement -
- Advertisement -

ಭಾರತದಲ್ಲಿ ಹೆಚ್ಚುತ್ತಿರುವ ಆದಾಯ ಮತ್ತು ಸಂಪತ್ತು ಅಸಮಾನತೆಯನ್ನು ಅತ್ಯಂತ ಶ್ರೀಮಂತರಿಗೆ ಸಮಗ್ರ ಮತ್ತು ಪ್ರಗತಿಪರ ಸಂಪತ್ತು ತೆರಿಗೆಯನ್ನು ವಿಧಿಸುವ ಮೂಲಕ ನಿವಾರಿಸಬಹುದು ಎಂದು ‘World Inequality Lab’ (ಡಬ್ಲ್ಯುಐಎಲ್) ಶುಕ್ರವಾರ ಪ್ರಕಟಿಸಿರುವ ವರದಿಯು ಸಲಹೆ ನೀಡಿದೆ.

ವರದಿಯು ಮಾ.19ರಂದು ಪ್ರಕಟಗೊಂಡಿದ್ದ ಡಬ್ಲ್ಯುಐಎಲ್‌ನ ‘ಭಾರತದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆ 1922-2023: ಬಿಲಿಯನೇರ್ ರಾಜ್‌ನ ಹೆಚ್ಚಳ’ ಅಧ್ಯಯನದ ಮುಂದುವರೆದ ಭಾಗವಾಗಿದೆ.
ಅರ್ಥಶಾಸ್ತ್ರಜ್ಞರಾದ ನಿತಿನ್ ಕುಮಾರ್ ಭಾರ್ತಿ,‌ ಲುಕಾಸ್ ಚಾನ್ಸೆಲ್, ಥಾಮಸ್ ಪಿಕೆಟಿ ಮತ್ತು ಅನ್ಮೋಲ್ ಸೋಮಾಂಚಿ ಅವರು ಬರೆದಿದ್ದ ಅಧ್ಯಯನ ವರದಿಯು ಭಾರತದ ಜನಸಂಖ್ಯೆಯ ಶೇ.1ರಷ್ಟು ಅತ್ಯಂತ ಶ್ರೀಮಂತರ ಆದಾಯ ಮತ್ತು ಸಂಪತ್ತಿನ ಪಾಲು ದೇಶದ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ ಎನ್ನುವುದನ್ನು ತೋರಿಸಿತ್ತು.

ಭಾರತದ ಜನಸಂಖ್ಯೆಯ ಶೇ. 1ರಷ್ಟಿರುವ ಅತೀ ಶ್ರೀಮಂತರು 2022-23ರಲ್ಲಿ ದೇಶದ ಆದಾಯದ ಶೇ. 22.6ರಷ್ಟು ಮತ್ತು ಸಂಪತ್ತಿನ ಶೇ. 40.1ರಷ್ಟು ಹೊಂದಿದ್ದಾರೆ ಎಂದಿದ್ದ ಅಧ್ಯಯನವು, 2014-15 ಮತ್ತು 2022-23ರ ನಡುವೆ ಉನ್ನತ ಮಟ್ಟದ ಅಸಮಾನತೆಯ ಏರಿಕೆಯು ಸಂಪತ್ತಿನ ಕೇಂದ್ರೀಕರಣದ ವಿಷಯದಲ್ಲಿ ಎದ್ದು ಕಾಣುತ್ತಿದೆ ಹೇಳಿದೆ.

ತಮ್ಮ ಅಧ್ಯಯನದಲ್ಲಿ ಕಂಡು ಕೊಂಡಿದ್ದ ಅಂಶಗಳನ್ನು ಆಧರಿಸಿ ಅದೇ ಲೇಖಕರು ಈಗ ತಮ್ಮ ನೂತನ ವರದಿಯಲ್ಲಿ ‘ಕೋಟ್ಯಧಿಪತಿ ತೆರಿಗೆ’ಯನ್ನು ಪ್ರಸ್ತಾಪಿಸಿದ್ದಾರೆ. 2022-23ರಲ್ಲಿ 10 ಕೋಟಿ ರೂ.ಗೂ ಹೆಚ್ಚಿನ ನಿವ್ವಳ ಸಂಪತ್ತನ್ನು ಹೊಂದಿದವರಿಗೆ ಮಾತ್ರ ಈ ತೆರಿಗೆಯನ್ನು ವಿಧಿಸುವಂತೆಯೂ ಅವರು ಪ್ರಸ್ತಾಪಿಸಿದ್ದಾರೆ.

“ನಮ್ಮ ಇತ್ತೀಚಿನ ಅಂದಾಜಿನ ಪ್ರಕಾರ, ದೇಶದ ಜನಸಂಖ್ಯೆ ಕೇವಲ 0.04 ಶೇ. ವಯಸ್ಕರು ಮಾತ್ರ ಈ ಮಿತಿಗಿಂತ ಮೇಲೆ ಇದ್ದಾರೆ” ಎಂದು ವರದಿ ಹೇಳಿದೆ.

ಲೇಖಕರು ತೆರಿಗೆ ಪ್ಯಾಕೇಜ್‌ನ ಮೂರು ಪರ್ಯಾಯ ರೂಪಗಳನ್ನು ಪ್ರಸ್ತಾಪಿಸಿದ್ದಾರೆ

  • 10 ಕೋಟಿರೂ.ಗೂ ಹೆಚ್ಚಿನ ನಿವ್ವಳ ಮೌಲ್ಯವನ್ನು ಹೊಂದಿರುವ ವ್ಯಕ್ತಿಗಳಿಗೆ ಶೇ.2ರಷ್ಟು ವಾರ್ಷಿಕ ತೆರಿಗೆ ಮತ್ತು 10 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳ ಮೇಲೆ ಶೇ.33ರಷ್ಟು ಪಿತ್ರಾರ್ಜಿತ ತೆರಿಗೆಯನ್ನು ವಿಧಿಸುವುದನ್ನು ಪ್ರಸ್ತಾವಿಸಲಾಗಿದೆ. ನಮ್ಮ ಅಂದಾಜಿನಂತೆ ಇದೊಂದೇ ಜಿಡಿಪಿಯ ಶೇ.2.7ರಷ್ಟು ಆದಾಯವನ್ನು ಸೃಷ್ಟಿಸುತ್ತದೆ ಎಂದು ವರದಿಯು ಹೇಳಿದೆ.
  • 100 ಕೋಟಿ ರೂ.ಗೂ ಹೆಚ್ಚಿನ ನಿವ್ವಳ ಮೌಲ್ಯವನ್ನು ಹೊಂದಿರುವ ವ್ಯಕ್ತಿಗಳಿಗೆ ತೆರಿಗೆ ಶೇ.4ಕ್ಕೆ ಏರಿಕೆ ಮತ್ತು 10 ಕೋಟಿ ರೂ.ಗಳಿಂದ 100 ಕೋಟಿ ರೂ.ವರೆಗಿನ ಮೌಲ್ಯದ ಆಸ್ತಿಗಳ ಮೇಲೆ ಶೇ.33ರಷ್ಟು ಪಿತ್ರಾರ್ಜಿತ ತೆರಿಗೆಯನ್ನು ವಿಧಿಸುವುದು. 100 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳಿಗೆ ಪಿತ್ರಾರ್ಜಿತ ತೆರಿಗೆಯನ್ನು ಶೇ.45ಕ್ಕೆ ಹೆಚ್ಚಿಸುವುದು. ವರದಿಯ ಪ್ರಕಾರ ಈ ತೆರಿಗೆಯಿಂದ ಆದಾಯವು ಭಾರತದ ಜಿಡಿಪಿಯ ಶೇ.4.6ರಷ್ಟಾಗುತ್ತದೆ.
  • ಇಲ್ಲಿ ಸಂಪತ್ತಿನ ಮಿತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ, ಸಂಪತ್ತು ತೆರಿಗೆಯನ್ನು ಶೇ.3ರಿಂದ ಶೇ.5ರವರೆಗೆ ಮತ್ತು ಪಿತ್ರಾರ್ಜಿತ ತೆರಿಗೆಯನ್ನು ಶೇ.45ರಿಂದ ಶೇ.55ರವರೆಗೆ ಹೆಚ್ಚಿಸುವುದನ್ನು ಪ್ರಸ್ತಾಪಿಸಲಾಗಿದೆ. ಇದರಿಂದ ತೆರಿಗೆ ಆದಾಯವು ಜಿಡಿಪಿಯ ಶೇ.6.1ಕ್ಕೆ ಹೆಚ್ಚಬಹುದು ಎಂದು ಲೇಖಕರು ವರದಿಯಲ್ಲಿ ಹೇಳಿದ್ದಾರೆ.

ಹೀಗೆ, ಸಂಗ್ರಹವಾಗುವ ಆದಾಯವನ್ನು ಬಡವರಿಗೆ ನೇರ ನಗದು ವರ್ಗಾವಣೆ, ಆರೋಗ್ಯ, ಶಿಕ್ಷಣ ಮತ್ತು ಇತರ ಸಾಮಾಜಿಕ ಕ್ಷೇತ್ರಗಳಲ್ಲಿ “ಮರು-ವಿತರಣಾ ನೀತಿಗಳಲ್ಲಿ” ಹೂಡಿಕೆ ಮಾಡಬಹುದು.

ಸರ್ಕಾರಿ ವೆಚ್ಚಗಳ ಅಂದಾಜುಗಳೊಂದಿಗೆ ಸಂಭಾವ್ಯ ತೆರಿಗೆ ಆದಾಯದ ನಮ್ಮ ಅಂದಾಜುಗಳನ್ನು ಒಟ್ಟುಗೂಡಿಸಿ, ಇಲ್ಲಿ ಪ್ರಸ್ತಾಪಿಸಲಾದ ರೀತಿಯ ಸಂಪತ್ತು ತೆರಿಗೆ ಪ್ಯಾಕೇಜ್‌ಗಳು ಸಾಮಾಜಿಕ ವಲಯದ ವೆಚ್ಚವನ್ನು ವಿಸ್ತರಿಸಲು ಗಮನಾರ್ಹವಾದ ಹಣಕಾಸಿನ ಸ್ಥಳವನ್ನು ಸೃಷ್ಟಿಸುತ್ತವೆ ಎಂದು ನಾವು ಕಂಡುಕೊಂಡಿದ್ದೇವೆ ಎಂದು ವರದಿ ಹೇಳಿದೆ.

Courtesy: scroll.in

ಇದನ್ನೂ ಓದಿ : ಅದಾನಿ ಕಲ್ಲಿದ್ದಲು ವಿವಾದ: 21 ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಸಿಜೆಐ ಡಿವೈ ಚಂದ್ರಚೂಡ್‌ಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...