Homeಮುಖಪುಟಶೇ.0.04ರಷ್ಟಿರುವ ಕುಬೇರರಿಗೆ ಸಂಪತ್ತು ತೆರಿಗೆ ವಿಧಿಸುವ ಮೂಲಕ ಭಾರತದಲ್ಲಿ ಆರ್ಥಿಕ ಅಸಮಾನತೆ ನಿವಾರಿಸಬಹುದು: ವರದಿ

ಶೇ.0.04ರಷ್ಟಿರುವ ಕುಬೇರರಿಗೆ ಸಂಪತ್ತು ತೆರಿಗೆ ವಿಧಿಸುವ ಮೂಲಕ ಭಾರತದಲ್ಲಿ ಆರ್ಥಿಕ ಅಸಮಾನತೆ ನಿವಾರಿಸಬಹುದು: ವರದಿ

- Advertisement -
- Advertisement -

ಭಾರತದಲ್ಲಿ ಹೆಚ್ಚುತ್ತಿರುವ ಆದಾಯ ಮತ್ತು ಸಂಪತ್ತು ಅಸಮಾನತೆಯನ್ನು ಅತ್ಯಂತ ಶ್ರೀಮಂತರಿಗೆ ಸಮಗ್ರ ಮತ್ತು ಪ್ರಗತಿಪರ ಸಂಪತ್ತು ತೆರಿಗೆಯನ್ನು ವಿಧಿಸುವ ಮೂಲಕ ನಿವಾರಿಸಬಹುದು ಎಂದು ‘World Inequality Lab’ (ಡಬ್ಲ್ಯುಐಎಲ್) ಶುಕ್ರವಾರ ಪ್ರಕಟಿಸಿರುವ ವರದಿಯು ಸಲಹೆ ನೀಡಿದೆ.

ವರದಿಯು ಮಾ.19ರಂದು ಪ್ರಕಟಗೊಂಡಿದ್ದ ಡಬ್ಲ್ಯುಐಎಲ್‌ನ ‘ಭಾರತದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆ 1922-2023: ಬಿಲಿಯನೇರ್ ರಾಜ್‌ನ ಹೆಚ್ಚಳ’ ಅಧ್ಯಯನದ ಮುಂದುವರೆದ ಭಾಗವಾಗಿದೆ.
ಅರ್ಥಶಾಸ್ತ್ರಜ್ಞರಾದ ನಿತಿನ್ ಕುಮಾರ್ ಭಾರ್ತಿ,‌ ಲುಕಾಸ್ ಚಾನ್ಸೆಲ್, ಥಾಮಸ್ ಪಿಕೆಟಿ ಮತ್ತು ಅನ್ಮೋಲ್ ಸೋಮಾಂಚಿ ಅವರು ಬರೆದಿದ್ದ ಅಧ್ಯಯನ ವರದಿಯು ಭಾರತದ ಜನಸಂಖ್ಯೆಯ ಶೇ.1ರಷ್ಟು ಅತ್ಯಂತ ಶ್ರೀಮಂತರ ಆದಾಯ ಮತ್ತು ಸಂಪತ್ತಿನ ಪಾಲು ದೇಶದ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ ಎನ್ನುವುದನ್ನು ತೋರಿಸಿತ್ತು.

ಭಾರತದ ಜನಸಂಖ್ಯೆಯ ಶೇ. 1ರಷ್ಟಿರುವ ಅತೀ ಶ್ರೀಮಂತರು 2022-23ರಲ್ಲಿ ದೇಶದ ಆದಾಯದ ಶೇ. 22.6ರಷ್ಟು ಮತ್ತು ಸಂಪತ್ತಿನ ಶೇ. 40.1ರಷ್ಟು ಹೊಂದಿದ್ದಾರೆ ಎಂದಿದ್ದ ಅಧ್ಯಯನವು, 2014-15 ಮತ್ತು 2022-23ರ ನಡುವೆ ಉನ್ನತ ಮಟ್ಟದ ಅಸಮಾನತೆಯ ಏರಿಕೆಯು ಸಂಪತ್ತಿನ ಕೇಂದ್ರೀಕರಣದ ವಿಷಯದಲ್ಲಿ ಎದ್ದು ಕಾಣುತ್ತಿದೆ ಹೇಳಿದೆ.

ತಮ್ಮ ಅಧ್ಯಯನದಲ್ಲಿ ಕಂಡು ಕೊಂಡಿದ್ದ ಅಂಶಗಳನ್ನು ಆಧರಿಸಿ ಅದೇ ಲೇಖಕರು ಈಗ ತಮ್ಮ ನೂತನ ವರದಿಯಲ್ಲಿ ‘ಕೋಟ್ಯಧಿಪತಿ ತೆರಿಗೆ’ಯನ್ನು ಪ್ರಸ್ತಾಪಿಸಿದ್ದಾರೆ. 2022-23ರಲ್ಲಿ 10 ಕೋಟಿ ರೂ.ಗೂ ಹೆಚ್ಚಿನ ನಿವ್ವಳ ಸಂಪತ್ತನ್ನು ಹೊಂದಿದವರಿಗೆ ಮಾತ್ರ ಈ ತೆರಿಗೆಯನ್ನು ವಿಧಿಸುವಂತೆಯೂ ಅವರು ಪ್ರಸ್ತಾಪಿಸಿದ್ದಾರೆ.

“ನಮ್ಮ ಇತ್ತೀಚಿನ ಅಂದಾಜಿನ ಪ್ರಕಾರ, ದೇಶದ ಜನಸಂಖ್ಯೆ ಕೇವಲ 0.04 ಶೇ. ವಯಸ್ಕರು ಮಾತ್ರ ಈ ಮಿತಿಗಿಂತ ಮೇಲೆ ಇದ್ದಾರೆ” ಎಂದು ವರದಿ ಹೇಳಿದೆ.

ಲೇಖಕರು ತೆರಿಗೆ ಪ್ಯಾಕೇಜ್‌ನ ಮೂರು ಪರ್ಯಾಯ ರೂಪಗಳನ್ನು ಪ್ರಸ್ತಾಪಿಸಿದ್ದಾರೆ

  • 10 ಕೋಟಿರೂ.ಗೂ ಹೆಚ್ಚಿನ ನಿವ್ವಳ ಮೌಲ್ಯವನ್ನು ಹೊಂದಿರುವ ವ್ಯಕ್ತಿಗಳಿಗೆ ಶೇ.2ರಷ್ಟು ವಾರ್ಷಿಕ ತೆರಿಗೆ ಮತ್ತು 10 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳ ಮೇಲೆ ಶೇ.33ರಷ್ಟು ಪಿತ್ರಾರ್ಜಿತ ತೆರಿಗೆಯನ್ನು ವಿಧಿಸುವುದನ್ನು ಪ್ರಸ್ತಾವಿಸಲಾಗಿದೆ. ನಮ್ಮ ಅಂದಾಜಿನಂತೆ ಇದೊಂದೇ ಜಿಡಿಪಿಯ ಶೇ.2.7ರಷ್ಟು ಆದಾಯವನ್ನು ಸೃಷ್ಟಿಸುತ್ತದೆ ಎಂದು ವರದಿಯು ಹೇಳಿದೆ.
  • 100 ಕೋಟಿ ರೂ.ಗೂ ಹೆಚ್ಚಿನ ನಿವ್ವಳ ಮೌಲ್ಯವನ್ನು ಹೊಂದಿರುವ ವ್ಯಕ್ತಿಗಳಿಗೆ ತೆರಿಗೆ ಶೇ.4ಕ್ಕೆ ಏರಿಕೆ ಮತ್ತು 10 ಕೋಟಿ ರೂ.ಗಳಿಂದ 100 ಕೋಟಿ ರೂ.ವರೆಗಿನ ಮೌಲ್ಯದ ಆಸ್ತಿಗಳ ಮೇಲೆ ಶೇ.33ರಷ್ಟು ಪಿತ್ರಾರ್ಜಿತ ತೆರಿಗೆಯನ್ನು ವಿಧಿಸುವುದು. 100 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳಿಗೆ ಪಿತ್ರಾರ್ಜಿತ ತೆರಿಗೆಯನ್ನು ಶೇ.45ಕ್ಕೆ ಹೆಚ್ಚಿಸುವುದು. ವರದಿಯ ಪ್ರಕಾರ ಈ ತೆರಿಗೆಯಿಂದ ಆದಾಯವು ಭಾರತದ ಜಿಡಿಪಿಯ ಶೇ.4.6ರಷ್ಟಾಗುತ್ತದೆ.
  • ಇಲ್ಲಿ ಸಂಪತ್ತಿನ ಮಿತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ, ಸಂಪತ್ತು ತೆರಿಗೆಯನ್ನು ಶೇ.3ರಿಂದ ಶೇ.5ರವರೆಗೆ ಮತ್ತು ಪಿತ್ರಾರ್ಜಿತ ತೆರಿಗೆಯನ್ನು ಶೇ.45ರಿಂದ ಶೇ.55ರವರೆಗೆ ಹೆಚ್ಚಿಸುವುದನ್ನು ಪ್ರಸ್ತಾಪಿಸಲಾಗಿದೆ. ಇದರಿಂದ ತೆರಿಗೆ ಆದಾಯವು ಜಿಡಿಪಿಯ ಶೇ.6.1ಕ್ಕೆ ಹೆಚ್ಚಬಹುದು ಎಂದು ಲೇಖಕರು ವರದಿಯಲ್ಲಿ ಹೇಳಿದ್ದಾರೆ.

ಹೀಗೆ, ಸಂಗ್ರಹವಾಗುವ ಆದಾಯವನ್ನು ಬಡವರಿಗೆ ನೇರ ನಗದು ವರ್ಗಾವಣೆ, ಆರೋಗ್ಯ, ಶಿಕ್ಷಣ ಮತ್ತು ಇತರ ಸಾಮಾಜಿಕ ಕ್ಷೇತ್ರಗಳಲ್ಲಿ “ಮರು-ವಿತರಣಾ ನೀತಿಗಳಲ್ಲಿ” ಹೂಡಿಕೆ ಮಾಡಬಹುದು.

ಸರ್ಕಾರಿ ವೆಚ್ಚಗಳ ಅಂದಾಜುಗಳೊಂದಿಗೆ ಸಂಭಾವ್ಯ ತೆರಿಗೆ ಆದಾಯದ ನಮ್ಮ ಅಂದಾಜುಗಳನ್ನು ಒಟ್ಟುಗೂಡಿಸಿ, ಇಲ್ಲಿ ಪ್ರಸ್ತಾಪಿಸಲಾದ ರೀತಿಯ ಸಂಪತ್ತು ತೆರಿಗೆ ಪ್ಯಾಕೇಜ್‌ಗಳು ಸಾಮಾಜಿಕ ವಲಯದ ವೆಚ್ಚವನ್ನು ವಿಸ್ತರಿಸಲು ಗಮನಾರ್ಹವಾದ ಹಣಕಾಸಿನ ಸ್ಥಳವನ್ನು ಸೃಷ್ಟಿಸುತ್ತವೆ ಎಂದು ನಾವು ಕಂಡುಕೊಂಡಿದ್ದೇವೆ ಎಂದು ವರದಿ ಹೇಳಿದೆ.

Courtesy: scroll.in

ಇದನ್ನೂ ಓದಿ : ಅದಾನಿ ಕಲ್ಲಿದ್ದಲು ವಿವಾದ: 21 ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಸಿಜೆಐ ಡಿವೈ ಚಂದ್ರಚೂಡ್‌ಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...