Homeಮುಖಪುಟಆರ್ಥಿಕ ಅಪರಾಧಿಗಳಿಗೆ ಕೈಕೋಳ ತೊಡಿಸಬಾರದು: ಸಂಸದೀಯ ಸಮಿತಿ ಶಿಫಾರಸು

ಆರ್ಥಿಕ ಅಪರಾಧಿಗಳಿಗೆ ಕೈಕೋಳ ತೊಡಿಸಬಾರದು: ಸಂಸದೀಯ ಸಮಿತಿ ಶಿಫಾರಸು

- Advertisement -
- Advertisement -

ಆರ್ಥಿಕ ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳಿಗೆ ಕೈಕೋಳ ತೊಡಿಸಬಾರದು ಎಂದು ಸಂಸದೀಯ ಸಮಿತಿ ಶಿಫಾರಸು ಮಾಡಿದೆ.

ಅತ್ಯಾಚಾರ ಮತ್ತು ಕೊಲೆಯಂತಹ ಘೋರ ಅಪರಾಧಗಳಿಗಾಗಿ ಬಂಧಿಸಲ್ಪಟ್ಟವರೊಂದಿಗೆ ಅವರನ್ನು ಸೇರಿಸಬಾರದು ಎಂದು ಸಮಿತಿಯು ಹೇಳಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಗೆ ಬದಲಾವಣೆಗಳನ್ನು ಸಮಿತಿಯು ಶಿಫಾರಸು ಮಾಡಿದೆ.

ಆ.11ರಂದು ಲೋಕಸಭೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS-2023) ಮಸೂದೆಯನ್ನು ಭಾರತೀಯ ನ್ಯಾಯ ಸಂಹಿತಾ (BNS-2023) ಮತ್ತು ಭಾರತೀಯ ಸಾಕ್ಷಾ ಅಧಿನಿಯಮ (BSA-2023) ಮಸೂದೆಗಳೊಂದಿಗೆ ಪರಿಚಯಿಸಲಾಯಿತು. ಮೂರು ಪ್ರಸ್ತಾವಿತ ಕಾನೂನುಗಳು ಕ್ರಮವಾಗಿ ಕ್ರಿಮಿನಲ್ ಪ್ರೊಸೀಜರ್ ಆಕ್ಟ್ 1898, ಇಂಡಿಯನ್ ಪೀನಲ್ ಕೋಡ್ 1860 ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್ 1872ರಲ್ಲಿ ಬದಲಾವಣೆಯನ್ನು ಹೇಳುತ್ತದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ನಿಬಂಧನೆ 43(3)ರಲ್ಲಿ ವಿವರಿಸಿರುವಂತೆ ಆಯ್ದ ಘೋರ ಅಪರಾಧಗಳ ಆರೋಪಿಗಳು ಪರಾರಿಯಾಗುವುದನ್ನು ತಡೆಯಲು ಮತ್ತು ಬಂಧನಗಳ ಸಮಯ ಪೋಲಿಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸುರಕ್ಷತೆಯನ್ನು ಖಚಿತಪಡಿಸಲು ಕೈಕೋಳಗಳ ಬಳಕೆ ಸೂಕ್ತವಾಗಿದೆ. ಆದರೆ ಈ ವರ್ಗದಲ್ಲಿ ಆರ್ಥಿಕ ಅಪರಾಧಿಗಳನ್ನು ಸೇರಿಸಬಾರದು.

ಅರ್ಥಿಕ ಅಪರಾಧಗಳು ಪದವು ಸಣ್ಣ ಅರ್ಥದಿಂದ ಹಿಡಿದು ಗಂಭೀರ ಅಪರಾಧಗಳವರೆಗೆ ವ್ಯಾಪಕ ಶ್ರೇಣಿಯನ್ನು ಒಳಗೊಂಡಿರುತ್ತದೆ ಮತ್ತು ಈ ವರ್ಗದಲ್ಲಿಯ ಎಲ್ಲ ಅಪರಾಧಗಳಲ್ಲಿ ಕೈಕೋಳಗಳ ಬಳಕೆಯು ಸೂಕ್ತವಲ್ಲ. ಹೀಗಾಗಿ ಆರ್ಥಿಕ ಅಪರಾಧಗಳು ಪದವನ್ನು ಕೈಬಿಟ್ಟು ನಿಬಂಧನೆ 43 (3)ನ್ನು ಸೂಕ್ತವಾಗಿ ತಿದ್ದುಪಡಿಗೊಳಿಸಲು ಸಮಿತಿಯು ಶಿಫಾರಸು ಮಾಡಿದೆ.

ಕೈಕೋಳಗಳ ಬಳಕೆಯ ನಿಯಮಗಳನ್ನು BNSSನ ಷರತ್ತು 43 (3) ರಲ್ಲಿ ವಿವರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಅಪರಾಧದ ಸ್ವರೂಪ ಗಮನದಲ್ಲಿಟ್ಟುಕೊಂಡು, ಕಸ್ಟಡಿಯಿಂದ ತಪ್ಪಿಸಿಕೊಂಡ ಅಪರಾಧಿಗೆ, ಸಂಘಟಿತ ಕೃತ್ಯ ಎಸಗಿದ ಅಪರಾಧಿಗೆ, ಭಯೋತ್ಪಾದಕ ಕೃತ್ಯದ ಅಪರಾಧವನ್ನು ಮಾಡಿದ  ಅಪರಾಧಿಗೆ, ಮಾದಕವಸ್ತು ಸಂಬಂಧಿತ ಅಪರಾಧ, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಅಕ್ರಮವಾಗಿ ಹೊಂದಿರುವ ಅಪರಾಧ, ಕೊಲೆ, ಅತ್ಯಾಚಾರ, ಆಸಿಡ್ ದಾಳಿ, ನಾಣ್ಯಗಳು ಮತ್ತು ಕರೆನ್ಸಿ ನೋಟುಗಳ ನಕಲಿ, ಮಾನವ ಕಳ್ಳಸಾಗಣೆ, ಮಕ್ಕಳ ವಿರುದ್ಧ ಲೈಂಗಿಕ ಅಪರಾಧಗಳು, ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳಲ್ಲಿ ಕೈಕೋಳಗಳನ್ನು ತೊಡಿಸಬಹುದಾಗಿದೆ.

ಇದನ್ನು ಓದಿ: ವಯಸ್ಕ ಪೋಷಕರ ಆರೈಕೆ ಮಕ್ಕಳ ಹೊಣೆ: ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...