Homeಮುಖಪುಟಆರ್ಥಿಕ ಅಪರಾಧಿಗಳಿಗೆ ಕೈಕೋಳ ತೊಡಿಸಬಾರದು: ಸಂಸದೀಯ ಸಮಿತಿ ಶಿಫಾರಸು

ಆರ್ಥಿಕ ಅಪರಾಧಿಗಳಿಗೆ ಕೈಕೋಳ ತೊಡಿಸಬಾರದು: ಸಂಸದೀಯ ಸಮಿತಿ ಶಿಫಾರಸು

- Advertisement -
- Advertisement -

ಆರ್ಥಿಕ ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳಿಗೆ ಕೈಕೋಳ ತೊಡಿಸಬಾರದು ಎಂದು ಸಂಸದೀಯ ಸಮಿತಿ ಶಿಫಾರಸು ಮಾಡಿದೆ.

ಅತ್ಯಾಚಾರ ಮತ್ತು ಕೊಲೆಯಂತಹ ಘೋರ ಅಪರಾಧಗಳಿಗಾಗಿ ಬಂಧಿಸಲ್ಪಟ್ಟವರೊಂದಿಗೆ ಅವರನ್ನು ಸೇರಿಸಬಾರದು ಎಂದು ಸಮಿತಿಯು ಹೇಳಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಗೆ ಬದಲಾವಣೆಗಳನ್ನು ಸಮಿತಿಯು ಶಿಫಾರಸು ಮಾಡಿದೆ.

ಆ.11ರಂದು ಲೋಕಸಭೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS-2023) ಮಸೂದೆಯನ್ನು ಭಾರತೀಯ ನ್ಯಾಯ ಸಂಹಿತಾ (BNS-2023) ಮತ್ತು ಭಾರತೀಯ ಸಾಕ್ಷಾ ಅಧಿನಿಯಮ (BSA-2023) ಮಸೂದೆಗಳೊಂದಿಗೆ ಪರಿಚಯಿಸಲಾಯಿತು. ಮೂರು ಪ್ರಸ್ತಾವಿತ ಕಾನೂನುಗಳು ಕ್ರಮವಾಗಿ ಕ್ರಿಮಿನಲ್ ಪ್ರೊಸೀಜರ್ ಆಕ್ಟ್ 1898, ಇಂಡಿಯನ್ ಪೀನಲ್ ಕೋಡ್ 1860 ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್ 1872ರಲ್ಲಿ ಬದಲಾವಣೆಯನ್ನು ಹೇಳುತ್ತದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ನಿಬಂಧನೆ 43(3)ರಲ್ಲಿ ವಿವರಿಸಿರುವಂತೆ ಆಯ್ದ ಘೋರ ಅಪರಾಧಗಳ ಆರೋಪಿಗಳು ಪರಾರಿಯಾಗುವುದನ್ನು ತಡೆಯಲು ಮತ್ತು ಬಂಧನಗಳ ಸಮಯ ಪೋಲಿಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸುರಕ್ಷತೆಯನ್ನು ಖಚಿತಪಡಿಸಲು ಕೈಕೋಳಗಳ ಬಳಕೆ ಸೂಕ್ತವಾಗಿದೆ. ಆದರೆ ಈ ವರ್ಗದಲ್ಲಿ ಆರ್ಥಿಕ ಅಪರಾಧಿಗಳನ್ನು ಸೇರಿಸಬಾರದು.

ಅರ್ಥಿಕ ಅಪರಾಧಗಳು ಪದವು ಸಣ್ಣ ಅರ್ಥದಿಂದ ಹಿಡಿದು ಗಂಭೀರ ಅಪರಾಧಗಳವರೆಗೆ ವ್ಯಾಪಕ ಶ್ರೇಣಿಯನ್ನು ಒಳಗೊಂಡಿರುತ್ತದೆ ಮತ್ತು ಈ ವರ್ಗದಲ್ಲಿಯ ಎಲ್ಲ ಅಪರಾಧಗಳಲ್ಲಿ ಕೈಕೋಳಗಳ ಬಳಕೆಯು ಸೂಕ್ತವಲ್ಲ. ಹೀಗಾಗಿ ಆರ್ಥಿಕ ಅಪರಾಧಗಳು ಪದವನ್ನು ಕೈಬಿಟ್ಟು ನಿಬಂಧನೆ 43 (3)ನ್ನು ಸೂಕ್ತವಾಗಿ ತಿದ್ದುಪಡಿಗೊಳಿಸಲು ಸಮಿತಿಯು ಶಿಫಾರಸು ಮಾಡಿದೆ.

ಕೈಕೋಳಗಳ ಬಳಕೆಯ ನಿಯಮಗಳನ್ನು BNSSನ ಷರತ್ತು 43 (3) ರಲ್ಲಿ ವಿವರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಅಪರಾಧದ ಸ್ವರೂಪ ಗಮನದಲ್ಲಿಟ್ಟುಕೊಂಡು, ಕಸ್ಟಡಿಯಿಂದ ತಪ್ಪಿಸಿಕೊಂಡ ಅಪರಾಧಿಗೆ, ಸಂಘಟಿತ ಕೃತ್ಯ ಎಸಗಿದ ಅಪರಾಧಿಗೆ, ಭಯೋತ್ಪಾದಕ ಕೃತ್ಯದ ಅಪರಾಧವನ್ನು ಮಾಡಿದ  ಅಪರಾಧಿಗೆ, ಮಾದಕವಸ್ತು ಸಂಬಂಧಿತ ಅಪರಾಧ, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಅಕ್ರಮವಾಗಿ ಹೊಂದಿರುವ ಅಪರಾಧ, ಕೊಲೆ, ಅತ್ಯಾಚಾರ, ಆಸಿಡ್ ದಾಳಿ, ನಾಣ್ಯಗಳು ಮತ್ತು ಕರೆನ್ಸಿ ನೋಟುಗಳ ನಕಲಿ, ಮಾನವ ಕಳ್ಳಸಾಗಣೆ, ಮಕ್ಕಳ ವಿರುದ್ಧ ಲೈಂಗಿಕ ಅಪರಾಧಗಳು, ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳಲ್ಲಿ ಕೈಕೋಳಗಳನ್ನು ತೊಡಿಸಬಹುದಾಗಿದೆ.

ಇದನ್ನು ಓದಿ: ವಯಸ್ಕ ಪೋಷಕರ ಆರೈಕೆ ಮಕ್ಕಳ ಹೊಣೆ: ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....