Homeಮುಖಪುಟಆರ್ಥಿಕ ಅಪರಾಧಿಗಳಿಗೆ ಕೈಕೋಳ ತೊಡಿಸಬಾರದು: ಸಂಸದೀಯ ಸಮಿತಿ ಶಿಫಾರಸು

ಆರ್ಥಿಕ ಅಪರಾಧಿಗಳಿಗೆ ಕೈಕೋಳ ತೊಡಿಸಬಾರದು: ಸಂಸದೀಯ ಸಮಿತಿ ಶಿಫಾರಸು

- Advertisement -
- Advertisement -

ಆರ್ಥಿಕ ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳಿಗೆ ಕೈಕೋಳ ತೊಡಿಸಬಾರದು ಎಂದು ಸಂಸದೀಯ ಸಮಿತಿ ಶಿಫಾರಸು ಮಾಡಿದೆ.

ಅತ್ಯಾಚಾರ ಮತ್ತು ಕೊಲೆಯಂತಹ ಘೋರ ಅಪರಾಧಗಳಿಗಾಗಿ ಬಂಧಿಸಲ್ಪಟ್ಟವರೊಂದಿಗೆ ಅವರನ್ನು ಸೇರಿಸಬಾರದು ಎಂದು ಸಮಿತಿಯು ಹೇಳಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಗೆ ಬದಲಾವಣೆಗಳನ್ನು ಸಮಿತಿಯು ಶಿಫಾರಸು ಮಾಡಿದೆ.

ಆ.11ರಂದು ಲೋಕಸಭೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS-2023) ಮಸೂದೆಯನ್ನು ಭಾರತೀಯ ನ್ಯಾಯ ಸಂಹಿತಾ (BNS-2023) ಮತ್ತು ಭಾರತೀಯ ಸಾಕ್ಷಾ ಅಧಿನಿಯಮ (BSA-2023) ಮಸೂದೆಗಳೊಂದಿಗೆ ಪರಿಚಯಿಸಲಾಯಿತು. ಮೂರು ಪ್ರಸ್ತಾವಿತ ಕಾನೂನುಗಳು ಕ್ರಮವಾಗಿ ಕ್ರಿಮಿನಲ್ ಪ್ರೊಸೀಜರ್ ಆಕ್ಟ್ 1898, ಇಂಡಿಯನ್ ಪೀನಲ್ ಕೋಡ್ 1860 ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್ 1872ರಲ್ಲಿ ಬದಲಾವಣೆಯನ್ನು ಹೇಳುತ್ತದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ನಿಬಂಧನೆ 43(3)ರಲ್ಲಿ ವಿವರಿಸಿರುವಂತೆ ಆಯ್ದ ಘೋರ ಅಪರಾಧಗಳ ಆರೋಪಿಗಳು ಪರಾರಿಯಾಗುವುದನ್ನು ತಡೆಯಲು ಮತ್ತು ಬಂಧನಗಳ ಸಮಯ ಪೋಲಿಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸುರಕ್ಷತೆಯನ್ನು ಖಚಿತಪಡಿಸಲು ಕೈಕೋಳಗಳ ಬಳಕೆ ಸೂಕ್ತವಾಗಿದೆ. ಆದರೆ ಈ ವರ್ಗದಲ್ಲಿ ಆರ್ಥಿಕ ಅಪರಾಧಿಗಳನ್ನು ಸೇರಿಸಬಾರದು.

ಅರ್ಥಿಕ ಅಪರಾಧಗಳು ಪದವು ಸಣ್ಣ ಅರ್ಥದಿಂದ ಹಿಡಿದು ಗಂಭೀರ ಅಪರಾಧಗಳವರೆಗೆ ವ್ಯಾಪಕ ಶ್ರೇಣಿಯನ್ನು ಒಳಗೊಂಡಿರುತ್ತದೆ ಮತ್ತು ಈ ವರ್ಗದಲ್ಲಿಯ ಎಲ್ಲ ಅಪರಾಧಗಳಲ್ಲಿ ಕೈಕೋಳಗಳ ಬಳಕೆಯು ಸೂಕ್ತವಲ್ಲ. ಹೀಗಾಗಿ ಆರ್ಥಿಕ ಅಪರಾಧಗಳು ಪದವನ್ನು ಕೈಬಿಟ್ಟು ನಿಬಂಧನೆ 43 (3)ನ್ನು ಸೂಕ್ತವಾಗಿ ತಿದ್ದುಪಡಿಗೊಳಿಸಲು ಸಮಿತಿಯು ಶಿಫಾರಸು ಮಾಡಿದೆ.

ಕೈಕೋಳಗಳ ಬಳಕೆಯ ನಿಯಮಗಳನ್ನು BNSSನ ಷರತ್ತು 43 (3) ರಲ್ಲಿ ವಿವರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಅಪರಾಧದ ಸ್ವರೂಪ ಗಮನದಲ್ಲಿಟ್ಟುಕೊಂಡು, ಕಸ್ಟಡಿಯಿಂದ ತಪ್ಪಿಸಿಕೊಂಡ ಅಪರಾಧಿಗೆ, ಸಂಘಟಿತ ಕೃತ್ಯ ಎಸಗಿದ ಅಪರಾಧಿಗೆ, ಭಯೋತ್ಪಾದಕ ಕೃತ್ಯದ ಅಪರಾಧವನ್ನು ಮಾಡಿದ  ಅಪರಾಧಿಗೆ, ಮಾದಕವಸ್ತು ಸಂಬಂಧಿತ ಅಪರಾಧ, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಅಕ್ರಮವಾಗಿ ಹೊಂದಿರುವ ಅಪರಾಧ, ಕೊಲೆ, ಅತ್ಯಾಚಾರ, ಆಸಿಡ್ ದಾಳಿ, ನಾಣ್ಯಗಳು ಮತ್ತು ಕರೆನ್ಸಿ ನೋಟುಗಳ ನಕಲಿ, ಮಾನವ ಕಳ್ಳಸಾಗಣೆ, ಮಕ್ಕಳ ವಿರುದ್ಧ ಲೈಂಗಿಕ ಅಪರಾಧಗಳು, ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳಲ್ಲಿ ಕೈಕೋಳಗಳನ್ನು ತೊಡಿಸಬಹುದಾಗಿದೆ.

ಇದನ್ನು ಓದಿ: ವಯಸ್ಕ ಪೋಷಕರ ಆರೈಕೆ ಮಕ್ಕಳ ಹೊಣೆ: ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...