Homeಎಕಾನಮಿಜಿಡಿಪಿ ಕುಸಿತ: ಕೇಂದ್ರದ ನೀತಿಗಳ ವಿರುದ್ಧ ಎನ್‌ಡಿಎ ಮತ್ತು ಬಿಜೆಪಿಯಿಂದಲೇ ಭಾರೀ ವಿರೋಧ!

ಜಿಡಿಪಿ ಕುಸಿತ: ಕೇಂದ್ರದ ನೀತಿಗಳ ವಿರುದ್ಧ ಎನ್‌ಡಿಎ ಮತ್ತು ಬಿಜೆಪಿಯಿಂದಲೇ ಭಾರೀ ವಿರೋಧ!

ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನವೇ ಆರ್ಥಿಕ ಕುಸಿತಕ್ಕೆ ಕಾರಣ ಎಂದು ಹಲವಾರು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಭಾರತದ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯು ಆರು ವರ್ಷಗಳಲ್ಲಿಯೇ ಕನಿಷ್ಠ 4.5% ಕ್ಕೆ ಇಳಿದ ದಿನ, ಪ್ರತಿಪಕ್ಷದ ಸದಸ್ಯರು, ಆಡಳಿತ ಪಕ್ಷ ಮತ್ತು ಅದರ ಮಿತ್ರಪಕ್ಷಗಳು ಸಹ ಒಗ್ಗೂಡಿ ಆರ್ಥಿಕ ಕುಸಿತವನ್ನು ನಿಗ್ರಹಿಸಲು ವಿಫಲವಾದ ಕೇಂದ್ರದ ಅಸಮರ್ಥತೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಮಿತ್ರಪಕ್ಷಗಳೇ ಬಿಜೆಪಿಯನ್ನು ಪ್ರಶ್ನಿಸುತ್ತಿವೆ!

ಕೇಂದ್ರ ಸರ್ಕಾರವನ್ನು ಮೊದಲು ಪ್ರಶ್ನಿಸಿದವರು ಬಿಜೆಪಿಯ ಸ್ವಂತ ಮಿತ್ರರು. “ಆರ್ಥಿಕತೆಯ ಸ್ಥಿತಿ ಆತಂಕಕಾರಿಯಾಗಿದೆ, ಆರ್ಥಿಕ ಬೆಳವಣಿಗೆಯ ಕೊರತೆಯು ನಿರುದ್ಯೋಗಕ್ಕೆ ಕಾರಣವಾಗುತ್ತಿರುವುದರಿಂದ ನಾವೆಲ್ಲರೂ ಕಳವಳ ಹೊಂದಿದ್ದೇವೆ. ಜಿಡಿಪಿ ಕುಸಿತ ನಮಗೆ ದೊಡ್ಡ ಎಚ್ಚರಿಕೆಯಾಗಿದೆ ಎಂದು ಶಿರೋಮಣಿ ಅಕಾಲಿ ದಳದ ಮುಖಂಡ ನರೇಶ್ ಗುಜ್ರಾಲ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.]

ನರೇಶ್ ಗುಜ್ರಾಲ್‌

ಎನ್‌ಡಿಎ ಪಕ್ಷಗಳಲ್ಲಿಯೇ ಅಸಮಾಧಾನವಿದೆ ಮತ್ತು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಒಂದೇ ಒಂದು ಸಭೆ ಕರೆದಿಲ್ಲ ಎಂದು ಗುಜ್ರಾಲ್ ಹೇಳಿದ್ದಾರೆ. “ಮಿತ್ರಪಕ್ಷಗಳು ಸಾಕಷ್ಟು ಅತೃಪ್ತಿ ಹೊಂದಿದ್ದಾರೆ. ಹಳೆಯ ಮಿತ್ರಪಕ್ಷ ಶಿವಸೇನೆ ಈಗಾಗಲೇ ಎನ್‌ಡಿಎಯಿಂದ ಹೊರನಡೆದಿದೆ ಮತ್ತು ಇತರರು ನಿರ್ಗಮನಕ್ಕೆ ಕಾಯುತ್ತಿದ್ದಾರೆ. ಮಿತ್ರಪಕ್ಷಗಳು ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿಲ್ಲ, ಆದರೆ ಅವರೊಂದಿಗೆ ಕನಿಷ್ಠ ಸಮಾಲೋಚನೆ ನಡೆಸಬೇಕಾಗಿದೆ” ಎಂದು ಗುಜ್ರಾಲ್ ಹೇಳಿದ್ದಾರೆ.

ಇದೇ ರೀತಿಯ ಧಾಟಿಯಲ್ಲಿ, ಜನತಾದಳ (ಯುನೈಟೆಡ್) ನಾಯಕ ಕೆ.ಸಿ ತ್ಯಾಗಿ ಕೂಡ ಭಾರತದ ಸಾರ್ವಜನಿಕ ಕಂಪನಿಗಳನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಕ್ಕಾಗಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಕುಸಿಯುತ್ತಿರುವ ಬೆಳವಣಿಗೆಯ ದರ, ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣಗೊಳಿಸುವ ಕೇಂದ್ರದ ಯೋಜನೆ ಮತ್ತು ಎಲ್ಲೆಡೆ ವ್ಯಾಪಿಸಿರುವ ಕೃಷಿ ಬಿಕ್ಕಟ್ಟಿನ ಬಗ್ಗೆ ತಮ್ಮ ಪಕ್ಷವು ಚಿಂತಿತವಾಗಿದೆ ಎಂದು ಹಿರಿಯ ನಾಯಕ ಕೆ.ಸಿ ತ್ಯಾಗಿ ಹೇಳಿದ್ದಾರೆ.

“ಅರ್ಥಶಾಸ್ತ್ರಜ್ಞರು ಅಥವಾ ಮಾಜಿ ಆರ್‌ಬಿಐ ಗವರ್ನರ್‌ಗಳ ಎಚ್ಚರಿಕೆಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಅಥವಾ ಅಪಹಾಸ್ಯ ಮಾಡಬಾರದು. ಅವರೊಂದಿಗೆ ಸಂಪರ್ಕವಿರಬೇಕು. ರಾಜಕೀಯ ನಾಯಕರು ಮತ್ತು ಅರ್ಥಶಾಸ್ತ್ರಜ್ಞರ ಸಭೆ ನಡೆಯಬೇಕು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಂತಹ ತಜ್ಞರನ್ನು ಕರೆದು ಚರ್ಚಿಸಬೇಕು. ಏಕೆಂದರೆ ಇದು ಗುದ್ದಾಟದ ವಿಷಯವಲ್ಲ, ಇದು ಸಮಾಲೋಚನೆಯ ವಿಷಯವಾಗಿದೆ ”ಎಂದು ತ್ಯಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೆ.ಸಿ ತ್ಯಾಗಿ

“ಸಮಾಜವಾದಿ ಪಕ್ಷವಾಗಿರುವುದರಿಂದ, ಜೆಡಿಯು ಸಾರ್ವಜನಿಕ ಸ್ವತ್ತುಗಳನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡುವ ಕೇಂದ್ರದ ವೇಗದ ಬಗ್ಗೆ ಗಂಭೀರ ಕಳವಳವನ್ನು ಹೊಂದಿದೆ. ಆದಾಯ ಸಂಗ್ರಹಕ್ಕಾಗಿ ಸಾರ್ವಜನಿಕ ಸ್ವತ್ತುಗಳನ್ನು ಮಾರಾಟ ಮಾಡುವುದು ಆರ್ಥಿಕ ಬಿಕ್ಕಟ್ಟನ್ನು ಎದುರಿಸುವ ತಪ್ಪು ವಿಧಾನವೆಂದು ಈಗಾಗಲೇ ಸಾಬೀತಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರ ಸಮಯದಲ್ಲಿ, ಅದಕ್ಕಾಗಿ ಒಂದು ಸಚಿವಾಲಯವಿತ್ತು, ಆದರೆ ಅದು ಫಲಿತಾಂಶವನ್ನು ನೀಡಲಿಲ್ಲ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿಯೂ ಅದು ಸಂಭವಿಸಿದೆ ಆದರೆ ಯಾವುದೇ ಫಲಿತಾಂಶಗಳಿಲ್ಲ” ಅರ್ಥಶಾಸ್ತ್ರಜ್ಞರು ಮತ್ತು ಮಾಜಿ ಆರ್‌ಬಿಐ ಗವರ್ನರ್‌ಗಳ ಎಚ್ಚರಿಕೆಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಅಥವಾ ಅಪಹಾಸ್ಯ ಮಾಡಬಾರದು ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ, ನರೇಶ್ ಗುಜ್ರಾಲ್, ಮೋದಿಯವರ ಸಂಪುಟದಲ್ಲಿ “ಪ್ರತಿಭಾ ಕೊರತೆ” ಯನ್ನು ಗಮನಸೆಳೆದರು. “ಸಮರ್ಥ ಮಂತ್ರಿಗಳಿಂದ ನಿರ್ವಹಿಸಲ್ಪಡುವ” ಎಲ್ಲಾ ಸಚಿವಾಲಯಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ ಹೆಚ್ಚಿನ ಇಲಾಖೆಗಳು ಸಮರ್ಥ ಮಂತ್ರಿಗಳನ್ನು ಹೊಂದಿಲ್ಲ ಎಂದು ಅವರು ಹೇಳಿದರು. ಗುಜರಾಲ್ ಯಾವ ಮಂತ್ರಿಗಳನ್ನು ಗಮನದಲ್ಲಿಟ್ಟುಕೊಂಡು ಈ ಹೇಳಿಕೆ ನೀಡಿದ್ದಾರೆ ಎಂಬುದಿನ್ನು ಸ್ಪಷ್ಟವಾಗಿಲ್ಲ.

ಇನ್ನೊಬ್ಬ ಹಿರಿಯ ಬಿಜೆಪಿ ಸಂಸದರು, “ಈ ದಿನಗಳಲ್ಲಿ ಉದ್ಯಮ / ವ್ಯವಹಾರದಲ್ಲಿ ಕೊಳ್ಳುವ ಶಕ್ತಿ ತೀವ್ರ ಕಡಿಮೆಯಾಗಿದೆ. ಜಿಎಸ್ಟಿ ಸಂಗ್ರಹ ಕೂಡ ಕಡಿಮೆಯಾಗಿದೆ. ಇದು ಕಳವಳಕಾರಿ ವಿಷಯ. ನಾವು ಅದರ ಬಗ್ಗೆ ಮಾತನಾಡುತ್ತೇವೆ. ಆದರೆ ದಯವಿಟ್ಟು ಫೋನ್‌ನಲ್ಲಿ ಬೇಡ” ಎಂದಿದ್ದಾರೆ.

ಇದನ್ನೂ ಓದಿ: ಆರ್ಥಿಕ ಕುಸಿತದ ಸರಳ ಚಿತ್ರಣ: ಸಮಸ್ಯೆ ಹೂಡಿಕೆಯದ್ದಲ್ಲ, ಬೇಡಿಕೆಯದ್ದು

ಬಿಜೆಪಿ ಪಕ್ಷದ ಮತ್ತೊಬ್ಬರು ಆರ್ಥಿಕತೆಯು ಸರ್ಕಾರದ ಕೇಂದ್ರಬಿಂದುವಾಗಿರಬೇಕು. ಆದರೆ “ಪರಿಸ್ಥಿತಿ ಭರವಸೆಯಂತೆ ಕಾಣುವುದಿಲ್ಲ” ಎಂದು ಹೇಳಿದರು. ಹಣಕಾಸು ಸಚಿವರ ಬಜೆಟ್ ಪ್ರಕಟಣೆಗಳು ಆರ್ಥಿಕತೆಯ ಮೇಲೆ ಯಾವುದೇ ರೀತಿಯ ಸಕಾರಾತ್ಮಕ ಪರಿಣಾಮ ಬೀರಿಲ್ಲ ಎಂದು ಅವರ ಅಭಿಪ್ರಯಪಟ್ಟಿದ್ದಾರೆ.

ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನವೇ ಆರ್ಥಿಕ ಕುಸಿತಕ್ಕೆ ಕಾರಣ ಎಂದು ಹಲವಾರು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...